AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಈ ಸಲ ವಿಶ್ವಕಪ್ ನಮ್ದೆ: ಜಯ್​ ಶಾ

T20 World Cup 2024: ವೆಸ್ಟ್ ಇಂಡೀಸ್-ಯುಎಸ್​ಎ ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಹಾಗೆಯೇ ಮುಂಬರುವ ಸರಣಿಗಳಲ್ಲೂ ಭಾರತ ತಂಡದ ನಾಯಕರಾಗಿ ರೋಹಿತ್ ಮುಂದುವರೆಯಲಿದ್ದಾರೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಹೇಳಿದ್ದಾರೆ.

TV9 Web
| Edited By: |

Updated on:Feb 15, 2024 | 7:59 AM

Share
ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸುವುದು ಖಚಿತವಾಗಿದೆ. ಅದರಂತೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಈ ಬಾರಿ ಭಾರತ ತಂಡವು ವಿಶ್ವಕಪ್ ಗೆಲ್ಲಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಂಬರುವ ಟಿ20 ವಿಶ್ವಕಪ್​ನಲ್ಲಿ (T20 World Cup 2024) ಟೀಮ್ ಇಂಡಿಯಾವನ್ನು ರೋಹಿತ್ ಶರ್ಮಾ (Rohit Sharma) ಮುನ್ನಡೆಸುವುದು ಖಚಿತವಾಗಿದೆ. ಅದರಂತೆ ಹಿಟ್​ಮ್ಯಾನ್ ನಾಯಕತ್ವದಲ್ಲಿ ಈ ಬಾರಿ ಭಾರತ ತಂಡವು ವಿಶ್ವಕಪ್ ಗೆಲ್ಲಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

1 / 5
ಏಕದಿನ ವಿಶ್ವಕಪ್​ ಫೈನಲ್ ಸೋಲಿನ ಬೆನ್ನಲ್ಲೇ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲೇ ಭಾರತ ತಂಡ ಕಣಕ್ಕಿಳಿಯಲಿದೆ ಎಂಬುದನ್ನು ಜಯ್​ ಶಾ ಸ್ಪಷ್ಟಪಡಿಸಿದ್ದಾರೆ.

ಏಕದಿನ ವಿಶ್ವಕಪ್​ ಫೈನಲ್ ಸೋಲಿನ ಬೆನ್ನಲ್ಲೇ ಟಿ20 ವಿಶ್ವಕಪ್​ನಲ್ಲಿ ಭಾರತ ತಂಡವನ್ನು ಹಾರ್ದಿಕ್ ಪಾಂಡ್ಯ ಮುನ್ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೀಗ ಟಿ20 ವಿಶ್ವಕಪ್​ನಲ್ಲೂ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲೇ ಭಾರತ ತಂಡ ಕಣಕ್ಕಿಳಿಯಲಿದೆ ಎಂಬುದನ್ನು ಜಯ್​ ಶಾ ಸ್ಪಷ್ಟಪಡಿಸಿದ್ದಾರೆ.

2 / 5
ಬುಧವಾರ ನಡೆದ ಎಸ್‌ಸಿಎ ಸ್ಟೇಡಿಯಂ ಮರುನಾಮಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಜಯ್ ಶಾ, ನಾವು 2023 ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿರಬಹುದು. ಆದರೆ ಸತತವಾಗಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ ನಾವು ಎಲ್ಲರ ಹೃದಯಗಳನ್ನು ಗೆದ್ದಿದ್ದೇವೆ. ಅದರಂತೆ ಬಾರ್ಬಡೋಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು ಟಿ20 ವಿಶ್ವಕಪ್ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಜಯ್ ಶಾ ಹೇಳಿದರು.

ಬುಧವಾರ ನಡೆದ ಎಸ್‌ಸಿಎ ಸ್ಟೇಡಿಯಂ ಮರುನಾಮಕರಣ ಕಾರ್ಯಕ್ರಮದಲ್ಲಿ ಮಾತನಾಡಿದ ಜಯ್ ಶಾ, ನಾವು 2023 ರ ಏಕದಿನ ವಿಶ್ವಕಪ್‌ನ ಫೈನಲ್‌ನಲ್ಲಿ ಸೋತಿರಬಹುದು. ಆದರೆ ಸತತವಾಗಿ 10 ಪಂದ್ಯಗಳನ್ನು ಗೆಲ್ಲುವ ಮೂಲಕ ನಾವು ಎಲ್ಲರ ಹೃದಯಗಳನ್ನು ಗೆದ್ದಿದ್ದೇವೆ. ಅದರಂತೆ ಬಾರ್ಬಡೋಸ್‌ನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತವು ಟಿ20 ವಿಶ್ವಕಪ್ ಎತ್ತಿ ಹಿಡಿಯುವ ವಿಶ್ವಾಸವಿದೆ ಎಂದು ಜಯ್ ಶಾ ಹೇಳಿದರು.

3 / 5
ಅಷ್ಟೇ ಅಲ್ಲದೆ ಮೂರು ಮಾದರಿಯಲ್ಲೂ ರೋಹಿತ್ ಶರ್ಮಾ ನಾಯಕರಾಗಿ ಉಳಿಯಲಿದ್ದಾರೆ ಎಂದು ತಿಳಿಸಿದ ಜಯ್ ಶಾ, ಸದ್ಯದ ಮಟ್ಟಿಗೆ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿಯುವುದನ್ನು ಖಚಿತಪಡಿಸಿದರು.

ಅಷ್ಟೇ ಅಲ್ಲದೆ ಮೂರು ಮಾದರಿಯಲ್ಲೂ ರೋಹಿತ್ ಶರ್ಮಾ ನಾಯಕರಾಗಿ ಉಳಿಯಲಿದ್ದಾರೆ ಎಂದು ತಿಳಿಸಿದ ಜಯ್ ಶಾ, ಸದ್ಯದ ಮಟ್ಟಿಗೆ ನಾಯಕತ್ವದ ಬದಲಾವಣೆ ಬಗ್ಗೆ ಚರ್ಚಿಸಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಟಿ20 ವಿಶ್ವಕಪ್​ನಲ್ಲಿ ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಕಣಕ್ಕಿಳಿಯುವುದನ್ನು ಖಚಿತಪಡಿಸಿದರು.

4 / 5
ಈ ಬಾರಿಯ ಟಿ20 ವಿಶ್ವಕಪ್​ ಜೂನ್ 1 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್​ಎನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕೆನಡಾ ಮತ್ತು ಯುಎಸ್​ಎ ಮುಖಾಮುಖಿಯಾಗಲಿದೆ. ಇನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಜೂನ್ 29 ರಂದು ಫೈನಲ್ ಪಂದ್ಯ ಜರುಗಲಿದೆ.

ಈ ಬಾರಿಯ ಟಿ20 ವಿಶ್ವಕಪ್​ ಜೂನ್ 1 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್ ಮತ್ತು ಯುಎಸ್​ಎನಲ್ಲಿ ನಡೆಯಲಿರುವ ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಕೆನಡಾ ಮತ್ತು ಯುಎಸ್​ಎ ಮುಖಾಮುಖಿಯಾಗಲಿದೆ. ಇನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಕಣಕ್ಕಿಳಿಯುವ ಮೂಲಕ ಟೀಮ್ ಇಂಡಿಯಾ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಜೂನ್ 29 ರಂದು ಫೈನಲ್ ಪಂದ್ಯ ಜರುಗಲಿದೆ.

5 / 5

Published On - 7:30 am, Thu, 15 February 24

ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ