AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ದೆಹಲಿಯಲ್ಲಿ ದುರ್ವರ್ತನೆ ತೋರಿದ ವಿಂಡೀಸ್ ವೇಗಿಗೆ ಐಸಿಸಿಯಿಂದ ಡಬಲ್ ಶಿಕ್ಷೆ

ICC Penalizes Jayden Seales: ದೆಹಲಿ ಟೆಸ್ಟ್‌ನಲ್ಲಿ ಭಾರತ ವಿರುದ್ಧ ವೆಸ್ಟ್ ಇಂಡೀಸ್ ಕಳಪೆ ಪ್ರದರ್ಶನ ನೀಡಿದೆ. ಈ ನಡುವೆ ವೆಸ್ಟ್ ಇಂಡೀಸ್ ಬೌಲರ್ ಜೇಡನ್ ಸೀಲ್ಸ್‌ಗೆ ಐಸಿಸಿ ದಂಡ ವಿಧಿಸಿದೆ. ಯಶಸ್ವಿ ಜೈಸ್ವಾಲ್ ವಿರುದ್ಧ ಆಕ್ರಮಣಕಾರಿ ವರ್ತನೆ ತೋರಿದ ಹಿನ್ನೆಲೆಯಲ್ಲಿ ಸೀಲ್ಸ್‌ಗೆ ಪಂದ್ಯ ಶುಲ್ಕದ 25% ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ. ಇದು ಐಸಿಸಿ ನೀತಿ ಸಂಹಿತೆ ಉಲ್ಲಂಘನೆಯಾಗಿದೆ.

ಪೃಥ್ವಿಶಂಕರ
|

Updated on: Oct 12, 2025 | 10:01 PM

Share
ದೆಹಲಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲೂ ಇಡೀ ವೆಸ್ಟ್ ಇಂಡೀಸ್ ತಂಡ ಸಂಪೂರ್ಣವಾಗಿ ವಿಫಲವಾಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾದ 518 ರನ್‌ಗಳಿಗೆ ಉತ್ತರವಾಗಿ, ವಿಂಡೀಸ್ ಕೇವಲ 248 ರನ್‌ಗಳಿಗೆ ಆಲೌಟ್ ಆಯಿತು. ಇದರಿಂದ ಫಾಲೋ ಆನ್‌ ಪಡೆದ ವಿಂಡೀಸ್ ಪಡೆ 2ನೇ ಇನ್ನಿಂಗ್ಸ್​ನಲ್ಲಿ ಕೊಂಚ ಪ್ರತಿರೋಧ ತೋರುತ್ತಿದೆ.

Wi (2)

1 / 5
ಇದೀಗ ತಂಡದ ಕಳಪೆ ಪ್ರದರ್ಶನದ ನಡುವೆ ವೆಸ್ಟ್ ಇಂಡೀಸ್‌ನ ವೇಗದ ಬೌಲರ್ ಜೇಡನ್ ಸೀಲ್ಸ್​ಗೆ ಐಸಿಸಿಯಿಂದ ಎರಡೆರಡು ಶಿಕ್ಷೆ ವಿಧಿಸಲಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ಪಡೆಯದಿದ್ದರೂ, ಮೈದಾನದಲ್ಲಿ ಅವರು ತೋರಿದ ದುರ್ವರ್ತನೆಗೆ ಐಸಿಸಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

ಇದೀಗ ತಂಡದ ಕಳಪೆ ಪ್ರದರ್ಶನದ ನಡುವೆ ವೆಸ್ಟ್ ಇಂಡೀಸ್‌ನ ವೇಗದ ಬೌಲರ್ ಜೇಡನ್ ಸೀಲ್ಸ್​ಗೆ ಐಸಿಸಿಯಿಂದ ಎರಡೆರಡು ಶಿಕ್ಷೆ ವಿಧಿಸಲಾಗಿದೆ. ಮೊದಲ ಇನ್ನಿಂಗ್ಸ್‌ನಲ್ಲಿ ಯಾವುದೇ ವಿಕೆಟ್ ಪಡೆಯದಿದ್ದರೂ, ಮೈದಾನದಲ್ಲಿ ಅವರು ತೋರಿದ ದುರ್ವರ್ತನೆಗೆ ಐಸಿಸಿ ದಂಡ ವಿಧಿಸಿ ಆದೇಶ ಹೊರಡಿಸಿದೆ.

2 / 5
ಭಾರತ ಬ್ಯಾಟಿಂಗ್ ಮಾಡುವ ವೇಳೆ ಜೇಡನ್ ಸೀಲ್ಸ್ ತೋರಿದ ಆಕ್ರಮಣಕಾರಿ ವರ್ತನೆ ನಿಯಮಗಳಿಗೆ ವಿರುದ್ಧವಾಗಿದ್ದು, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಕಠಿಣ ದಂಡ ವಿಧಿಸಿದೆ. ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಸೀಲ್ಸ್​ಗೆ ಪಂದ್ಯ ಶುಲ್ಕದ 25% ದಂಡ ವಿಧಿಸಿದ್ದು, ಡಿಮೆರಿಟ್ ಪಾಯಿಂಟ್ ಅನ್ನು ನೀಡಿದೆ.

ಭಾರತ ಬ್ಯಾಟಿಂಗ್ ಮಾಡುವ ವೇಳೆ ಜೇಡನ್ ಸೀಲ್ಸ್ ತೋರಿದ ಆಕ್ರಮಣಕಾರಿ ವರ್ತನೆ ನಿಯಮಗಳಿಗೆ ವಿರುದ್ಧವಾಗಿದ್ದು, ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ ಕಠಿಣ ದಂಡ ವಿಧಿಸಿದೆ. ಐಸಿಸಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಸೀಲ್ಸ್​ಗೆ ಪಂದ್ಯ ಶುಲ್ಕದ 25% ದಂಡ ವಿಧಿಸಿದ್ದು, ಡಿಮೆರಿಟ್ ಪಾಯಿಂಟ್ ಅನ್ನು ನೀಡಿದೆ.

3 / 5
ದೆಹಲಿ ಟೆಸ್ಟ್ ಪಂದ್ಯದ ಮೊದಲ ದಿನದಂದು ವೆಸ್ಟ್ ಇಂಡೀಸ್ ತಂಡದ ಪರ ಜೇಡನ್ ಸೀಲ್ಸ್ 29 ನೇ ಓವರ್ ಎಸೆದರು. ಜೇಡನ್ ಸೀಲ್ಸ್ ಅವರ ಎಸೆತವನ್ನು ಎದುರಿಸಲು ಯಶಸ್ವಿ ಜೈಸ್ವಾಲ್ ಕ್ರೀಸ್‌ನಲ್ಲಿದ್ದರು. ಸೀಲ್ಸ್ ತಮ್ಮ ಫಾಲೋ-ಥ್ರೂನಲ್ಲಿ ಚೆಂಡನ್ನು ತೆಗೆದುಕೊಂಡು ನೇರವಾಗಿ ಜೈಸ್ವಾಲ್‌ಗೆ ಹೊಡೆದರು. ಯಶಸ್ವಿಯನ್ನು ರನ್ ಔಟ್ ಮಾಡಲು ಉದ್ದೇಶಿಸಿರುವುದಾಗಿ ಸೀಲ್ಸ್ ಹೇಳಿಕೊಂಡರು, ಆದರೆ ಅಂಪೈರ್ ಮತ್ತು ಮ್ಯಾಚ್ ರೆಫರಿ ರನ್ ಔಟ್ ಸಮರ್ಥನೀಯವಲ್ಲ ಎಂದು ನಿರ್ಧರಿಸಿ ಪೆನಾಲ್ಟಿ ನೀಡಿದರು.

ದೆಹಲಿ ಟೆಸ್ಟ್ ಪಂದ್ಯದ ಮೊದಲ ದಿನದಂದು ವೆಸ್ಟ್ ಇಂಡೀಸ್ ತಂಡದ ಪರ ಜೇಡನ್ ಸೀಲ್ಸ್ 29 ನೇ ಓವರ್ ಎಸೆದರು. ಜೇಡನ್ ಸೀಲ್ಸ್ ಅವರ ಎಸೆತವನ್ನು ಎದುರಿಸಲು ಯಶಸ್ವಿ ಜೈಸ್ವಾಲ್ ಕ್ರೀಸ್‌ನಲ್ಲಿದ್ದರು. ಸೀಲ್ಸ್ ತಮ್ಮ ಫಾಲೋ-ಥ್ರೂನಲ್ಲಿ ಚೆಂಡನ್ನು ತೆಗೆದುಕೊಂಡು ನೇರವಾಗಿ ಜೈಸ್ವಾಲ್‌ಗೆ ಹೊಡೆದರು. ಯಶಸ್ವಿಯನ್ನು ರನ್ ಔಟ್ ಮಾಡಲು ಉದ್ದೇಶಿಸಿರುವುದಾಗಿ ಸೀಲ್ಸ್ ಹೇಳಿಕೊಂಡರು, ಆದರೆ ಅಂಪೈರ್ ಮತ್ತು ಮ್ಯಾಚ್ ರೆಫರಿ ರನ್ ಔಟ್ ಸಮರ್ಥನೀಯವಲ್ಲ ಎಂದು ನಿರ್ಧರಿಸಿ ಪೆನಾಲ್ಟಿ ನೀಡಿದರು.

4 / 5
ಅಲ್ಲದೆ ಜೇಡನ್ ಸೀಲ್ಸ್ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.9 ಅನ್ನು ಸೀಲ್ಸ್ ಉಲ್ಲಂಘಿಸಿದ್ದು, ಅವರ ಅಶಿಸ್ತಿಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗಿದೆ. ಸೀಲ್ಸ್ ಈ ರೀತಿಯಾಗಿ ಡಿಮೆರಿಟ್ ಅಂಕ ಪಡೆಯುತ್ತಿರುವುದು ಇದೇ ಮೊದಲಲ್ಲ. ಡಿಸೆಂಬರ್ 2024 ರಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿಯೂ ಸೀಲ್ಸ್​ಗೆ ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

ಅಲ್ಲದೆ ಜೇಡನ್ ಸೀಲ್ಸ್ ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.9 ಅನ್ನು ಸೀಲ್ಸ್ ಉಲ್ಲಂಘಿಸಿದ್ದು, ಅವರ ಅಶಿಸ್ತಿಗೆ ಒಂದು ಡಿಮೆರಿಟ್ ಪಾಯಿಂಟ್ ಕೂಡ ನೀಡಲಾಗಿದೆ. ಸೀಲ್ಸ್ ಈ ರೀತಿಯಾಗಿ ಡಿಮೆರಿಟ್ ಅಂಕ ಪಡೆಯುತ್ತಿರುವುದು ಇದೇ ಮೊದಲಲ್ಲ. ಡಿಸೆಂಬರ್ 2024 ರಲ್ಲಿ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯದಲ್ಲಿಯೂ ಸೀಲ್ಸ್​ಗೆ ಡಿಮೆರಿಟ್ ಪಾಯಿಂಟ್ ನೀಡಲಾಗಿತ್ತು.

5 / 5
ಪೃಥ್ವಿಶಂಕರ
ಪೃಥ್ವಿಶಂಕರ

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
Follow Us
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಗೋಕರ್ಣದ ಮಹಾಬಲೇಶ್ವರ ದೇಗುಲದಲ್ಲಿ ಆತ್ಮಲಿಂಗವನ್ನೇ ಆವರಿಸಿದ ಕೊಳಚೆ ನೀರು
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಮೊಬೈಲ್ ನಂಬರ್​ನ ಕೊನೇ 2 ಸಂಖ್ಯೆ ಯಾವುದಿರಬೇಕು?
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ಇಂದು ಈ ರಾಶಿಯವರ ವಿವಾಹ ವಿಚಾರದಲ್ಲಿ ಪ್ರಗತಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ದೇಶಕ್ಕಾಗಿ ಪ್ರಾಣತೆತ್ತ ಮಗನ ನೆನೆದು ರಾಷ್ಟ್ರಪತಿ ಮುಂದೆ ಕಣ್ಣೀರಿಟ್ಟ ತಾಯಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಮೃತರ ಸಂಖ್ಯೆ 35ಕ್ಕೆ ಏರಿಕೆ: ಫಿಲಿಫೈನ್ ಭೂಕಂಪದ ಕರಾಳತೆ ಹೇಗಿತ್ತು ನೋಡಿ
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಜಗದೀಶ್ ಶೆಟ್ಟರ್ ನಿವಾಸಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಹೊಸ ಸಿಎಂ, ಹೊಸ ಸಂಪ್ರದಾಯ: ಈ ಭೇಟಿ ಬಗ್ಗೆ ಡಿಕೆ ಶಿವಕುಮಾರ್ ಹೇಳಿದ್ದೇನು?
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್
ಚುನಾವಣೆಯಲ್ಲಿ ನಿಲ್ಲದೇ ಸಿಎಂ ಆದ ಕಥೆ: ಇದು ‘ಕಾಮನ್ ಮ್ಯಾನ್’ ಸಸ್ಪೆನ್ಸ್