AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ವಿದಾಯದ ಸರಣಿಯ ಮೊದಲ ಪಂದ್ಯದಲ್ಲೇ ಎರಡೆರಡು ವಿಶ್ವ ದಾಖಲೆ ಮುರಿದ ಜೂಲನ್ ಗೋಸ್ವಾಮಿ..!

Jhulan Goswami: ಮಿಥಾಲಿ ರಾಜ್ ಇಲ್ಲದೆ ಜೂಲನ್ ಏಕದಿನ ಪಂದ್ಯವನ್ನಾಡುತ್ತಿರುವುದು ಇದೇ ಮೊದಲು. ಇದುವರೆಗೆ ಅವರು ಮಿಥಾಲಿಯೊಂದಿಗೆ ಪ್ರತಿ ಏಕದಿನ ಪಂದ್ಯವನ್ನು ಆಡಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on: Sep 19, 2022 | 3:09 PM

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿ ಜೂಲನ್ ಗೋಸ್ವಾಮಿ ಅವರ ವೃತ್ತಿಜೀವನದ ಕೊನೆಯ ಸರಣಿಯಾಗಿದ್ದು, ಈ ಸರಣಿಯ ನಂತರ ಅವರು ವೃತ್ತಿ ಜೀವನದಿಂದ ನಿವೃತ್ತಿಯಾಗಲಿದ್ದಾರೆ. ತನ್ನ 20 ವರ್ಷಗಳ ವೃತ್ತಿ ಜೀವನದಲ್ಲಿ ದೇಶದ ಪರವಾಗಿ ಹಲವು ದೊಡ್ಡ ದಾಖಲೆಗಳನ್ನು ಸೃಷ್ಟಿಸಿರುವ ಜೂಲನ್, ಈ ಸರಣಿಯಲ್ಲೂ ದಾಖಲೆಗಳನ್ನು ಮುರಿಯುವ ಸರದಿಯನ್ನು ಮುಂದುವರೆಸಿದ್ದಾರೆ.

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಏಕದಿನ ಸರಣಿ ಜೂಲನ್ ಗೋಸ್ವಾಮಿ ಅವರ ವೃತ್ತಿಜೀವನದ ಕೊನೆಯ ಸರಣಿಯಾಗಿದ್ದು, ಈ ಸರಣಿಯ ನಂತರ ಅವರು ವೃತ್ತಿ ಜೀವನದಿಂದ ನಿವೃತ್ತಿಯಾಗಲಿದ್ದಾರೆ. ತನ್ನ 20 ವರ್ಷಗಳ ವೃತ್ತಿ ಜೀವನದಲ್ಲಿ ದೇಶದ ಪರವಾಗಿ ಹಲವು ದೊಡ್ಡ ದಾಖಲೆಗಳನ್ನು ಸೃಷ್ಟಿಸಿರುವ ಜೂಲನ್, ಈ ಸರಣಿಯಲ್ಲೂ ದಾಖಲೆಗಳನ್ನು ಮುರಿಯುವ ಸರದಿಯನ್ನು ಮುಂದುವರೆಸಿದ್ದಾರೆ.

1 / 5
ಭಾರತದ 39 ವರ್ಷದ ಜೂಲನ್ ಸರಣಿಯ ಮೊದಲ ಪಂದ್ಯದಲ್ಲಿ 10 ಓವರ್‌ಗಳಲ್ಲಿ ಕೇವಲ 20 ರನ್ ನೀಡಿ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಈ ಸಮಯದಲ್ಲಿ 42 ಡಾಟ್ ಬಾಲ್‌ಗಳನ್ನು ಬೌಲ್ ಮಾಡಿದ ಜೂಲನ್, ಒಂದೇ ಒಂದು ಬೌಂಡರಿ ಅಥವಾ ಸಿಕ್ಸರ್ ಹೊಡೆಯುವ ಅವಕಾಶವನ್ನೇ ನೀಡಲಿಲ್ಲ. ಅಲ್ಲದೆ ಅನುಭವಿ ಆರಂಭಿಕ ಆಟಗಾರ್ತಿ ಟಾಮಿ ಬ್ಯೂಮಾಂಟ್ (07) ಅವರನ್ನು ಎಲ್ಬಿಡಬ್ಲ್ಯು ಬಲೆಗೆ ಬೀಳಿಸಿದರು.

ಭಾರತದ ಅನುಭವಿ ವೇಗಿ ಜೂಲನ್ ಗೋಸ್ವಾಮಿ ಬೌಲರ್‌ಗಳ ಪಟ್ಟಿಯಲ್ಲಿ ಸ್ಥಾನ ಕಳೆದುಕೊಂಡಿದ್ದಾರೆ. ಜೂಲನ್ ಈ ವರ್ಷ ಇದುವರೆಗೆ ಒಂಬತ್ತು ಏಕದಿನ ಪಂದ್ಯಗಳಲ್ಲಿ 12 ವಿಕೆಟ್ ಪಡೆದಿದ್ದಾರೆ.

2 / 5
ಈ ಮೂಲಕ ಜೂಲನ್ ತನ್ನ ವೃತ್ತಿಜೀವನದ ಕೊನೆಯ ODI ನಲ್ಲಿ ಕ್ಯಾಥರೀನ್ ಫಿಟ್ಜ್‌ಪ್ಯಾಟ್ರಿಕ್ ಅವರ ದಾಖಲೆಯನ್ನು ಮುರಿದರು. ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಆಸ್ಟ್ರೇಲಿಯಾದ ಆಟಗಾರ್ತಿ ಕ್ಯಾಥರೀನ್ ಹೆಸರಿನಲ್ಲಿತ್ತು. ಈಗ ಜೂಲನ್ 24 ವಿಕೆಟ್ ಪಡೆಯುವ ಮೂಲಕ 23 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದ ಕ್ಯಾಥರೀನ್ ದಾಖಲೆಯನ್ನು ನೆಲಸಮ ಮಾಡಿದ್ದಾರೆ.

ಈ ಮೂಲಕ ಜೂಲನ್ ತನ್ನ ವೃತ್ತಿಜೀವನದ ಕೊನೆಯ ODI ನಲ್ಲಿ ಕ್ಯಾಥರೀನ್ ಫಿಟ್ಜ್‌ಪ್ಯಾಟ್ರಿಕ್ ಅವರ ದಾಖಲೆಯನ್ನು ಮುರಿದರು. ಈ ಹಿಂದೆ ಇಂಗ್ಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ದಾಖಲೆ ಆಸ್ಟ್ರೇಲಿಯಾದ ಆಟಗಾರ್ತಿ ಕ್ಯಾಥರೀನ್ ಹೆಸರಿನಲ್ಲಿತ್ತು. ಈಗ ಜೂಲನ್ 24 ವಿಕೆಟ್ ಪಡೆಯುವ ಮೂಲಕ 23 ವಿಕೆಟ್ ಪಡೆದು ಮೊದಲ ಸ್ಥಾನದಲ್ಲಿದ್ದ ಕ್ಯಾಥರೀನ್ ದಾಖಲೆಯನ್ನು ನೆಲಸಮ ಮಾಡಿದ್ದಾರೆ.

3 / 5
ಅಲ್ಲದೆ ಈ ಸರಣಿಯಲ್ಲಿ ಜೂಲನ್ ಗೋಸ್ವಾಮಿ ODI ಪಂದ್ಯವನ್ನಾಡಿದ ಅತ್ಯಂತ ಹಿರಿಯ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೈದಾನಕ್ಕಿಳಿದಾಗ ಅವರಿಗೆ 39 ವರ್ಷ 297 ದಿನ ವಯಸ್ಸಾಗಿತ್ತು. ಇದಕ್ಕೂ ಮುನ್ನ ಮಿಥಾಲಿ ರಾಜ್ ತಮ್ಮ 39 ವರ್ಷ 114 ದಿನಗಳಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಈ ಪಟ್ಟಿಯಲ್ಲಿ ಡಯಾನಾ ಎಡುಲ್ಜಿ ಮೂರನೇ ಸ್ಥಾನದಲ್ಲಿದ್ದು, ಅವರು 1993 ರಲ್ಲಿ 37 ವರ್ಷ ಮತ್ತು 184 ದಿನಗಳ ವಯಸ್ಸಿನಲ್ಲಿ ODI ಪಂದ್ಯವನ್ನು ಆಡಿದರು.

ಅಲ್ಲದೆ ಈ ಸರಣಿಯಲ್ಲಿ ಜೂಲನ್ ಗೋಸ್ವಾಮಿ ODI ಪಂದ್ಯವನ್ನಾಡಿದ ಅತ್ಯಂತ ಹಿರಿಯ ಭಾರತೀಯ ಮಹಿಳಾ ಆಟಗಾರ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಮೈದಾನಕ್ಕಿಳಿದಾಗ ಅವರಿಗೆ 39 ವರ್ಷ 297 ದಿನ ವಯಸ್ಸಾಗಿತ್ತು. ಇದಕ್ಕೂ ಮುನ್ನ ಮಿಥಾಲಿ ರಾಜ್ ತಮ್ಮ 39 ವರ್ಷ 114 ದಿನಗಳಲ್ಲಿ ತಮ್ಮ ಕೊನೆಯ ಏಕದಿನ ಪಂದ್ಯವನ್ನು ಆಡಿದ್ದರು. ಈ ಪಟ್ಟಿಯಲ್ಲಿ ಡಯಾನಾ ಎಡುಲ್ಜಿ ಮೂರನೇ ಸ್ಥಾನದಲ್ಲಿದ್ದು, ಅವರು 1993 ರಲ್ಲಿ 37 ವರ್ಷ ಮತ್ತು 184 ದಿನಗಳ ವಯಸ್ಸಿನಲ್ಲಿ ODI ಪಂದ್ಯವನ್ನು ಆಡಿದರು.

4 / 5
ಮಿಥಾಲಿ ರಾಜ್ ಇಲ್ಲದೆ ಜೂಲನ್ ಏಕದಿನ ಪಂದ್ಯವನ್ನಾಡುತ್ತಿರುವುದು ಇದೇ ಮೊದಲು. ಇದುವರೆಗೆ ಅವರು ಮಿಥಾಲಿಯೊಂದಿಗೆ ಪ್ರತಿ ಏಕದಿನ ಪಂದ್ಯವನ್ನು ಆಡಿದ್ದಾರೆ. 2002 ರಿಂದ 2022 ರವರೆಗೆ, ಜೂಲನ್ 201 ODI ಪಂದ್ಯಗಳನ್ನು ಆಡಿದ್ದಾರೆ.

ಮಿಥಾಲಿ ರಾಜ್ ಇಲ್ಲದೆ ಜೂಲನ್ ಏಕದಿನ ಪಂದ್ಯವನ್ನಾಡುತ್ತಿರುವುದು ಇದೇ ಮೊದಲು. ಇದುವರೆಗೆ ಅವರು ಮಿಥಾಲಿಯೊಂದಿಗೆ ಪ್ರತಿ ಏಕದಿನ ಪಂದ್ಯವನ್ನು ಆಡಿದ್ದಾರೆ. 2002 ರಿಂದ 2022 ರವರೆಗೆ, ಜೂಲನ್ 201 ODI ಪಂದ್ಯಗಳನ್ನು ಆಡಿದ್ದಾರೆ.

5 / 5
Follow us
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಲಂಡನ್​ಗೆ ಹೊರಟಿದ್ದ ವಿಮಾನಕ್ಕೆ ಅದರ ಸಾಮರ್ಥ್ಯದಷ್ಟು ಇಂಧನ ತುಂಬಲಾಗಿತ್ತು
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
ಜಾತಿಗಣತಿ ಸಮೀಕ್ಷೆಗೆ ₹200 ಕೋಟಿ ಖರ್ಚಾಗಿದೆ ಎಂದರೆ ಸಚಿವನಲ್ಲಿ ಉತ್ತರವಿಲ್ಲ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
Ahmedabad Plane Crash: ಅಹಮದಾಬಾದ್​​ನಲ್ಲಿ ಏರ್​ ಇಂಡಿಯಾ ವಿಮಾನ ಪತನ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ಗೃಹ ಸಚಿವ ಕೇವಲ ತಮ್ಮ ಗೃಹಕ್ಕೆ ಮಾತ್ರ ಸಚಿವರು: ಆರ್ ಅಶೋಕ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಸರ್ಕಾರ ಸಮಗ್ರ ತನಿಖೆ ಮಾಡಿಸಿದೆ: ಗೃಹ ಸಚಿವ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ತುಂಬಿ ಹರಿಯುತ್ತಿರುವ ಗೊನ್ವಾರ ಗ್ರಾಮ ಹೊರವಲಯದಲ್ಲಿರುವ ಹೊಳೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ
ಹುಬ್ಬಳ್ಳಿ ಜನರ ಸಮಸ್ಯೆಗಳಿಗೆ ಜನಪ್ರತಿನಿಧಿಗಳಿಂದ ನೀರಸ ಪ್ರತಿಕ್ರಿಯೆ