AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತ ಟಿ20 ತಂಡಕ್ಕೆ ಹೊಸ ವಿಕೆಟ್​ಕೀಪರ್ ಬ್ಯಾಟರ್ ಆಗಮನ; ನಾಲ್ವರು ಆಟಗಾರರಿಗೆ ಟೆನ್ಷನ್ ಶುರು..!

Jitesh Sharma: ಕೆಳಕ್ರಮಾಂಕದಲ್ಲಿ ನಿರ್ಭೀತಿಯ ಬ್ಯಾಟಿಂಗ್ ಮಾಡಿದ್ದ ಜಿತೇಶ್ ಅವರ ಇನ್ನಿಂಗ್ಸ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರನಿರ್ವಹಿಸಿತು. ಹೀಗಾಗಿ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ನಲ್ಲಿ ಜಿತೇಶ್​ಗೆ ತಂಡದಲ್ಲಿ ಅವಕಾಶ ನೀಡಬೇಕು ಎಂಬುದು ಅನುಭವಿಗಳ ಮಾತಾಗಿದೆ.

ಪೃಥ್ವಿಶಂಕರ
|

Updated on: Dec 04, 2023 | 12:36 PM

Share
ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡ ಟೀಂ ಇಂಡಿಯಾ ಇದೀಗ ಆಫ್ರಿಕಾ ಪ್ರವಾಸದತ್ತ ಗಮನ ಇರಿಸಿದೆ. ಭವಿಷ್ಯದ ಟಿ20 ತಂಡವನ್ನು ಕಟ್ಟುವ ಸಲುವಾಗಿ ಬಲಿಷ್ಠ ಕಾಂಗರೂಗಳ ವಿರುದ್ಧ ಯುವ ಪಡೆಯನ್ನು ಕಣಕ್ಕಿಳಿಸಿದ್ದ ಬಿಸಿಸಿಐ ಒಂದು ಹಂತಕ್ಕೆ ಮೇಲುಗೈ ಸಾಧಿಸಿದೆ.

ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯನ್ನು 4-1 ಅಂತರದಿಂದ ವಶಪಡಿಸಿಕೊಂಡ ಟೀಂ ಇಂಡಿಯಾ ಇದೀಗ ಆಫ್ರಿಕಾ ಪ್ರವಾಸದತ್ತ ಗಮನ ಇರಿಸಿದೆ. ಭವಿಷ್ಯದ ಟಿ20 ತಂಡವನ್ನು ಕಟ್ಟುವ ಸಲುವಾಗಿ ಬಲಿಷ್ಠ ಕಾಂಗರೂಗಳ ವಿರುದ್ಧ ಯುವ ಪಡೆಯನ್ನು ಕಣಕ್ಕಿಳಿಸಿದ್ದ ಬಿಸಿಸಿಐ ಒಂದು ಹಂತಕ್ಕೆ ಮೇಲುಗೈ ಸಾಧಿಸಿದೆ.

1 / 11
ಈ ಸರಣಿಯಲ್ಲಿ ಭಾರತ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಜಿತೇಶ್ ಶರ್ಮಾ, ತಿಲಕ್ ವರ್ಮಾ, ಮುಖೇಶ್ ಕುಮಾರ್ ಸೇರಿದಂತೆ ಹಲವು ಯುವ ಆಟಗಾರರಿಗೆ ಅವಕಾಶ ಮಾಡಿಕೊಟ್ಟಿತ್ತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಭಾಗಶಃ ಎಲ್ಲಾ ಆಟಗಾರರು ಯಶಸ್ವಿಯಾದರು.

ಈ ಸರಣಿಯಲ್ಲಿ ಭಾರತ ಯಶಸ್ವಿ ಜೈಸ್ವಾಲ್, ರಿಂಕು ಸಿಂಗ್, ಜಿತೇಶ್ ಶರ್ಮಾ, ತಿಲಕ್ ವರ್ಮಾ, ಮುಖೇಶ್ ಕುಮಾರ್ ಸೇರಿದಂತೆ ಹಲವು ಯುವ ಆಟಗಾರರಿಗೆ ಅವಕಾಶ ಮಾಡಿಕೊಟ್ಟಿತ್ತು. ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಭಾಗಶಃ ಎಲ್ಲಾ ಆಟಗಾರರು ಯಶಸ್ವಿಯಾದರು.

2 / 11
ಇದರೊಂದಿಗೆ ಭಾರತ ಟಿ20 ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಸೂಚನೆಯನ್ನು ನೀಡಿದರು. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಜಿತೇಶ್ ಶರ್ಮಾ, ತಮ್ಮ ಆಗಮನದಿಂದ ತಂಡದ ಉಳಿದ ನಾಲ್ವರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳ ಟೆನ್ಷನ್ ಹೆಚ್ಚಿಸಿದ್ದಾರೆ.

ಇದರೊಂದಿಗೆ ಭಾರತ ಟಿ20 ತಂಡದಲ್ಲಿ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಳ್ಳುವ ಸೂಚನೆಯನ್ನು ನೀಡಿದರು. ಅದರಲ್ಲೂ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಆಗಿ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ ಅದ್ಭುತ ಪ್ರದರ್ಶನ ನೀಡಿದ ಜಿತೇಶ್ ಶರ್ಮಾ, ತಮ್ಮ ಆಗಮನದಿಂದ ತಂಡದ ಉಳಿದ ನಾಲ್ವರು ವಿಕೆಟ್ ಕೀಪರ್ ಬ್ಯಾಟ್ಸ್‌ಮನ್​ಗಳ ಟೆನ್ಷನ್ ಹೆಚ್ಚಿಸಿದ್ದಾರೆ.

3 / 11
ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ಜಿತೇಶ್ ಶರ್ಮಾ, 4ನೇ ಟಿ20 ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 35 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಹಾಗೆಯೇ ಕೊನೆಯ ಟಿ20 ಪಂದ್ಯದಲ್ಲೂ 24 ರನ್​ಗಳ ಕೊಡುಗೆ ನೀಡಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಎರಡು ಟಿ20 ಪಂದ್ಯಗಳಲ್ಲಿ ಆಡುವ ಅವಕಾಶ ಪಡೆದಿದ್ದ ಜಿತೇಶ್ ಶರ್ಮಾ, 4ನೇ ಟಿ20 ಪಂದ್ಯದಲ್ಲಿ ಕೇವಲ 19 ಎಸೆತಗಳಲ್ಲಿ 1 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 35 ರನ್​ಗಳ ಸ್ಫೋಟಕ ಇನ್ನಿಂಗ್ಸ್ ಆಡಿದ್ದರು. ಹಾಗೆಯೇ ಕೊನೆಯ ಟಿ20 ಪಂದ್ಯದಲ್ಲೂ 24 ರನ್​ಗಳ ಕೊಡುಗೆ ನೀಡಿದ್ದರು.

4 / 11
ಕೆಳಕ್ರಮಾಂಕದಲ್ಲಿ ನಿರ್ಭೀತಿಯ ಬ್ಯಾಟಿಂಗ್ ಮಾಡಿದ್ದ ಜಿತೇಶ್ ಇನ್ನಿಂಗ್ಸ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರನಿರ್ವಹಿಸಿತು. ಹೀಗಾಗಿ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ನಲ್ಲಿ ಜಿತೇಶ್​ಗೆ ತಂಡದಲ್ಲಿ ಅವಕಾಶ ನೀಡಬೇಕು ಎಂಬುದು ಅನುಭವಿಗಳ ಮಾತಾಗಿದೆ.

ಕೆಳಕ್ರಮಾಂಕದಲ್ಲಿ ನಿರ್ಭೀತಿಯ ಬ್ಯಾಟಿಂಗ್ ಮಾಡಿದ್ದ ಜಿತೇಶ್ ಇನ್ನಿಂಗ್ಸ್ ಭಾರತದ ಗೆಲುವಿನಲ್ಲಿ ಪ್ರಮುಖ ಪಾತ್ರನಿರ್ವಹಿಸಿತು. ಹೀಗಾಗಿ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ನಲ್ಲಿ ಜಿತೇಶ್​ಗೆ ತಂಡದಲ್ಲಿ ಅವಕಾಶ ನೀಡಬೇಕು ಎಂಬುದು ಅನುಭವಿಗಳ ಮಾತಾಗಿದೆ.

5 / 11
ವಾಸ್ತವವಾಗಿ ಮೊದಲು 3 ಟಿ20 ಪಂದ್ಯಗಳಲ್ಲಿ ವಿಕೆಟ್​ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಕಿಶನ್ ಒಂದು ಪಂದ್ಯವನ್ನು ಬಿಟ್ಟರೆ ಉಳಿದೆರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರ ಬದಲು ಜಿತೇಶ್​ಗೆ ಅವಕಾಶ ನೀಡಲಾಗಿತ್ತು.

ವಾಸ್ತವವಾಗಿ ಮೊದಲು 3 ಟಿ20 ಪಂದ್ಯಗಳಲ್ಲಿ ವಿಕೆಟ್​ಕೀಪರ್ ಬ್ಯಾಟರ್ ಆಗಿ ಇಶಾನ್ ಕಿಶನ್ ಅವರನ್ನು ಕಣಕ್ಕಿಳಿಸಲಾಗಿತ್ತು. ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಕಿಶನ್ ಒಂದು ಪಂದ್ಯವನ್ನು ಬಿಟ್ಟರೆ ಉಳಿದೆರಡು ಪಂದ್ಯಗಳಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರ ಬದಲು ಜಿತೇಶ್​ಗೆ ಅವಕಾಶ ನೀಡಲಾಗಿತ್ತು.

6 / 11
ಇದೀಗ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ಜಿತೇಶ್, ತಮ್ಮ ಸ್ಫೋಟಕ ಆಟದೊಂದಿಗೆ ತಂಡದಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಳ್ಳುವ ಸೂಚನೆ ನೀಡಿದ್ದಾರೆ. ಅಲ್ಲದೆ ಟಿ20 ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಪ್ರಬಲ ಸ್ಪರ್ಧಿಗಳಾಗಿದ್ದ ಇಶಾನ್ ಕಿಶನ್,ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್​ಯನ್ನು ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದ್ದಾರೆ.

ಇದೀಗ ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡಿರುವ ಜಿತೇಶ್, ತಮ್ಮ ಸ್ಫೋಟಕ ಆಟದೊಂದಿಗೆ ತಂಡದಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಳ್ಳುವ ಸೂಚನೆ ನೀಡಿದ್ದಾರೆ. ಅಲ್ಲದೆ ಟಿ20 ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನಕ್ಕೆ ಪ್ರಬಲ ಸ್ಪರ್ಧಿಗಳಾಗಿದ್ದ ಇಶಾನ್ ಕಿಶನ್,ಕೆಎಲ್ ರಾಹುಲ್, ರಿಷಭ್ ಪಂತ್ ಹಾಗೂ ಸಂಜು ಸ್ಯಾಮ್ಸನ್​ಯನ್ನು ಹಾದಿಯನ್ನು ಮತ್ತಷ್ಟು ಕಠಿಣಗೊಳಿಸಿದ್ದಾರೆ.

7 / 11
ಈ ವರ್ಷದ ಆರಂಭದಲ್ಲಿ ಕಾರು ಆಪಘಾತಕ್ಕೀಡಾಗಿದ್ದ ರಿಷಭ್ ಪಂತ್ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ನೊಂದಿಗೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದ್ದರು. ಒಂದು ವೇಳೆ ಪಂತ್ ಟಿ20 ವಿಶ್ವಕಪ್​ಗೂ ಮುನ್ನ ತಂಡಕ್ಕೆ ಮರಳಿ ತಮ್ಮ ಫಾರ್ಮ್ ಕಂಡುಕೊಳ್ಳದಿದ್ದರೆ, ಅವರ ಸ್ಥಾನಕ್ಕೆ ಜಿತೇಶ್ ಬರುವ ಸಾಧ್ಯತೆಗಳಿವೆ.

ಈ ವರ್ಷದ ಆರಂಭದಲ್ಲಿ ಕಾರು ಆಪಘಾತಕ್ಕೀಡಾಗಿದ್ದ ರಿಷಭ್ ಪಂತ್ ಮುಂದಿನ ವರ್ಷ ನಡೆಯಲ್ಲಿರುವ ಟಿ20 ವಿಶ್ವಕಪ್​ನೊಂದಿಗೆ ಭಾರತ ತಂಡದಲ್ಲಿ ಕಾಣಿಸಿಕೊಳ್ಳುವ ಇರಾದೆಯಲ್ಲಿದ್ದರು. ಒಂದು ವೇಳೆ ಪಂತ್ ಟಿ20 ವಿಶ್ವಕಪ್​ಗೂ ಮುನ್ನ ತಂಡಕ್ಕೆ ಮರಳಿ ತಮ್ಮ ಫಾರ್ಮ್ ಕಂಡುಕೊಳ್ಳದಿದ್ದರೆ, ಅವರ ಸ್ಥಾನಕ್ಕೆ ಜಿತೇಶ್ ಬರುವ ಸಾಧ್ಯತೆಗಳಿವೆ.

8 / 11
ಇನ್ನು ಭಾರತ ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿರುವ ಕನ್ನಡಿಗ ಕೆಎಲ್ ರಾಹುಲ್​ಗೂ ಜಿತೇಶ್ ಆಗಮನ ಸಂಕಷ್ಟ ತಂದೊಡ್ಡಿದೆ. ಚುಟುಕು ಮಾದರಿಯಲ್ಲಿ ಹೆಚ್ಚಾಗಿ ಆರಂಭಿಕನಾಗಿ ಕಾಣಿಸಿಕೊಂಡಿರುವ ರಾಹುಲ್, ಕೆಳಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವುದು ಕಡಿಮೆ. ಇದು ಕೂಡ ಜಿತೇಶ್​ಗೆ ನೆರವಾಗಲಿದೆ.

ಇನ್ನು ಭಾರತ ಟೆಸ್ಟ್ ಹಾಗೂ ಏಕದಿನ ತಂಡದಲ್ಲಿ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿರುವ ಕನ್ನಡಿಗ ಕೆಎಲ್ ರಾಹುಲ್​ಗೂ ಜಿತೇಶ್ ಆಗಮನ ಸಂಕಷ್ಟ ತಂದೊಡ್ಡಿದೆ. ಚುಟುಕು ಮಾದರಿಯಲ್ಲಿ ಹೆಚ್ಚಾಗಿ ಆರಂಭಿಕನಾಗಿ ಕಾಣಿಸಿಕೊಂಡಿರುವ ರಾಹುಲ್, ಕೆಳಕ್ರಮಾಂಕದಲ್ಲಿ ಬ್ಯಾಟ್ ಬೀಸಿರುವುದು ಕಡಿಮೆ. ಇದು ಕೂಡ ಜಿತೇಶ್​ಗೆ ನೆರವಾಗಲಿದೆ.

9 / 11
ಸದ್ಯ ಜಿತೇಶ್ ಜೊತೆಗೆ ಟಿ20 ತಂಡದಲ್ಲಿ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿರುವ ಇಶಾನ್ ಕಿಶನ್ ಕೂಡ ಕೆಳಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅಷ್ಟು ಯಶಸ್ವಿಯಾಗಿಲ್ಲ. ಹೀಗಾಗಿ ಅವರನ್ನು ಟಾಪ್ 3 ಅಥವಾ ಆರಂಭಿಕನಾಗಿ ಕಣಕ್ಕಿಳಿಸಲಾಗುತ್ತಿದೆ. ಆದರೆ ಭಾರತದ ಟಾಪ್ ಆರ್ಡರ್ ಸ್ಥಾನಕ್ಕೆ ಸಾಕಷ್ಟು ಆಟಗಾರರು ಪೈಪೋಟಿಯಲ್ಲಿದ್ದಾರೆ. ಇದು ಕೂಡ ಕಿಶನ್​ಗೆ ಸಂಕಷ್ಟ ತಂದ್ದೊಡಿದೆ.

ಸದ್ಯ ಜಿತೇಶ್ ಜೊತೆಗೆ ಟಿ20 ತಂಡದಲ್ಲಿ ವಿಕೆಟ್‌ಕೀಪರ್ ಬ್ಯಾಟರ್ ಆಗಿ ಕಾಣಿಸಿಕೊಳ್ಳುತ್ತಿರುವ ಇಶಾನ್ ಕಿಶನ್ ಕೂಡ ಕೆಳಕ್ರಮಾಂಕದಲ್ಲಿ ಬ್ಯಾಟ್ ಬೀಸಿ ಅಷ್ಟು ಯಶಸ್ವಿಯಾಗಿಲ್ಲ. ಹೀಗಾಗಿ ಅವರನ್ನು ಟಾಪ್ 3 ಅಥವಾ ಆರಂಭಿಕನಾಗಿ ಕಣಕ್ಕಿಳಿಸಲಾಗುತ್ತಿದೆ. ಆದರೆ ಭಾರತದ ಟಾಪ್ ಆರ್ಡರ್ ಸ್ಥಾನಕ್ಕೆ ಸಾಕಷ್ಟು ಆಟಗಾರರು ಪೈಪೋಟಿಯಲ್ಲಿದ್ದಾರೆ. ಇದು ಕೂಡ ಕಿಶನ್​ಗೆ ಸಂಕಷ್ಟ ತಂದ್ದೊಡಿದೆ.

10 / 11
ಇನ್ನು ಸಾಕಷ್ಟು ಪ್ರತಿಭೆಯಿದ್ದರೂ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿರುವ ಸಂಜು ಸ್ಯಾಮ್ಸನ್​ಗೂ ಜಿತೇಶ್ ಆಗಮನ ಭಾರತ ಟಿ20 ತಂಡದ ಬಾಗಿಲು ಖಾಯಂ ಆಗಿ ಮುಚ್ಚುವ ಸುಳಿವು ನೀಡಿದೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಜಿತೇಶ್, ಈ ಸರಣಿಯಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದರೆ ಉಳಿದ ನಾಲ್ವರು ಆಟಗಾರರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ.

ಇನ್ನು ಸಾಕಷ್ಟು ಪ್ರತಿಭೆಯಿದ್ದರೂ ಟೀಂ ಇಂಡಿಯಾದಲ್ಲಿ ಖಾಯಂ ಸ್ಥಾನ ಗಿಟ್ಟಿಸಿಕೊಳ್ಳುವಲ್ಲಿ ವಿಫಲರಾಗಿರುವ ಸಂಜು ಸ್ಯಾಮ್ಸನ್​ಗೂ ಜಿತೇಶ್ ಆಗಮನ ಭಾರತ ಟಿ20 ತಂಡದ ಬಾಗಿಲು ಖಾಯಂ ಆಗಿ ಮುಚ್ಚುವ ಸುಳಿವು ನೀಡಿದೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ತಂಡದಲ್ಲಿ ಸ್ಥಾನ ಪಡೆದಿರುವ ಜಿತೇಶ್, ಈ ಸರಣಿಯಲ್ಲೂ ತಮ್ಮ ಅದ್ಭುತ ಫಾರ್ಮ್​ ಮುಂದುವರೆಸಿದರೆ ಉಳಿದ ನಾಲ್ವರು ಆಟಗಾರರಿಗೆ ಸಂಕಷ್ಟ ಕಟ್ಟಿಟ್ಟ ಬುತ್ತಿ.

11 / 11
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು