Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ENG: ಅತಿ ಹೆಚ್ಚು ಬಾರಿ ಔಟ್; ಜಡೇಜಾ ಮುಂದೆ ರೂಟ್ ಆಟ ನಡೆಯಲ್ಲ

Ravindra Jadeja: ನಾಗ್ಪುರದಲ್ಲಿ ನಡೆದ ಭಾರತ-ಇಂಗ್ಲೆಂಡ್ ಏಕದಿನ ಪಂದ್ಯದಲ್ಲಿ ರವೀಂದ್ರ ಜಡೇಜಾ ಅವರ ಅದ್ಭುತ ಪ್ರದರ್ಶನ ಕಂಡುಬಂದಿದೆ. ಜಡೇಜಾ 12ನೇ ಬಾರಿಗೆ ಜೋ ರೂಟ್ ಅವರನ್ನು ಔಟ್ ಮಾಡಿ ದಾಖಲೆ ಬರೆದರು. ರೂಟ್ ಕೇವಲ 19 ರನ್ ಗಳಿಸಿ ಔಟ್ ಆದರು. ಜಡೇಜಾ ಈ ಪಂದ್ಯದಲ್ಲಿ 3 ವಿಕೆಟ್ ಪಡೆದು ತಮ್ಮ ಅಂತರರಾಷ್ಟ್ರೀಯ ವಿಕೆಟ್‌ಗಳ ಸಂಖ್ಯೆಯನ್ನು 600ಕ್ಕೆ ಏರಿಸಿದರು.

ಪೃಥ್ವಿಶಂಕರ
|

Updated on: Feb 06, 2025 | 6:04 PM

ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ, ಇಂಗ್ಲೆಂಡ್‌ನ ಅನುಭವಿ ಬ್ಯಾಟ್ಸ್‌ಮನ್ ಜೋ ರೂಟ್ ಕೂಡ ಸುಮಾರು 15 ತಿಂಗಳ ನಂತರ ಏಕದಿನ ಪಂದ್ಯವನ್ನು ಆಡಿದರು. ಆದರೆ ಬಹಳ ದಿನಗಳ ಬಳಿಕ ಈ ಮಾದರಿಯಲ್ಲಿ ಬ್ಯಾಟ್ ಬೀಸಿದ ರೂಟ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಮೊದಲ ಪಂದ್ಯ ನಾಗ್ಪುರದಲ್ಲಿ ನಡೆಯುತ್ತಿದೆ. ಈ ಪಂದ್ಯದೊಂದಿಗೆ, ಇಂಗ್ಲೆಂಡ್‌ನ ಅನುಭವಿ ಬ್ಯಾಟ್ಸ್‌ಮನ್ ಜೋ ರೂಟ್ ಕೂಡ ಸುಮಾರು 15 ತಿಂಗಳ ನಂತರ ಏಕದಿನ ಪಂದ್ಯವನ್ನು ಆಡಿದರು. ಆದರೆ ಬಹಳ ದಿನಗಳ ಬಳಿಕ ಈ ಮಾದರಿಯಲ್ಲಿ ಬ್ಯಾಟ್ ಬೀಸಿದ ರೂಟ್​ಗೆ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ.

1 / 6
ಅನುಭವಿ ಜೋ ರೂಟ್​ರನ್ನು ಪೆವಿಲಿಯನ್​ಗಟ್ಟುವಲ್ಲಿ ರವೀಂದ್ರ ಜಡೇಜಾ ಯಶಸ್ವಿಯಾದರು. ಈ ಪಂದ್ಯದಲ್ಲಿ ರೂಟ್ 31 ಎಸೆತಗಳಲ್ಲಿ ಕೇವಲ 19 ರನ್ ಕಲೆಹಾಕಿ ಜಡೇಜಾಗೆ ಬಲಿಯಾದರು. ಇತ್ತ ರೂಟ್​ ಅವರ ವಿಕೆಟ್ ಪಡೆಯುವ ಮೂಲಕ ಜಡೇಜಾ ದಾಖಲೆಯನ್ನು ಸೃಷ್ಟಿಸಿದರು. ವಾಸ್ತವವಾಗಿ, ಜೋ ರೂಟ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಡೇಜಾ ವಿರುದ್ಧ ಅತಿ ಹೆಚ್ಚು ಬಾರಿ ಔಟಾದ ಬ್ಯಾಟ್ಸ್‌ಮನ್ ಆಗಿದ್ದಾರೆ. ಜಡೇಜಾ ಅವರನ್ನು 12ನೇ ಬಾರಿಗೆ ಬೇಟೆಯಾಡಿದ್ದಾರೆ.

ಅನುಭವಿ ಜೋ ರೂಟ್​ರನ್ನು ಪೆವಿಲಿಯನ್​ಗಟ್ಟುವಲ್ಲಿ ರವೀಂದ್ರ ಜಡೇಜಾ ಯಶಸ್ವಿಯಾದರು. ಈ ಪಂದ್ಯದಲ್ಲಿ ರೂಟ್ 31 ಎಸೆತಗಳಲ್ಲಿ ಕೇವಲ 19 ರನ್ ಕಲೆಹಾಕಿ ಜಡೇಜಾಗೆ ಬಲಿಯಾದರು. ಇತ್ತ ರೂಟ್​ ಅವರ ವಿಕೆಟ್ ಪಡೆಯುವ ಮೂಲಕ ಜಡೇಜಾ ದಾಖಲೆಯನ್ನು ಸೃಷ್ಟಿಸಿದರು. ವಾಸ್ತವವಾಗಿ, ಜೋ ರೂಟ್ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಜಡೇಜಾ ವಿರುದ್ಧ ಅತಿ ಹೆಚ್ಚು ಬಾರಿ ಔಟಾದ ಬ್ಯಾಟ್ಸ್‌ಮನ್ ಆಗಿದ್ದಾರೆ. ಜಡೇಜಾ ಅವರನ್ನು 12ನೇ ಬಾರಿಗೆ ಬೇಟೆಯಾಡಿದ್ದಾರೆ.

2 / 6
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ತನ್ನ ಸಿದ್ಧತೆಗಳನ್ನು ಬಲಪಡಿಸಲು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಇಂದಿನ ಪಂದ್ಯದಲ್ಲಿ ಇಂಗ್ಲಿಷ್ ತಂಡದ ಆರಂಭಿಕರು ವೇಗದ ಆರಂಭ ನೀಡಿದ್ದರು. ಆದರೆ ಬೆನ್ ಡಕೆಟ್ ಮತ್ತು ಫಿಲ್ ಸಾಲ್ಟ್ ಔಟಾದ ನಂತರ ತಂಡವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳಲು ಪ್ರಾರಂಭಿಸಿತು. ಇತ್ತ ಇಂಗ್ಲೆಂಡ್ ಬ್ಯಾಟಿಂಗ್ ಲೈನ್ ಅಪ್​ನ ಬೆನ್ನೆಲುಬು ಎಂದು ಪರಿಗಣಿಸಲ್ಪಟ್ಟ ಜೋ ರೂಟ್ ಕೂಡ ತಂಡದ ಕೈಹಿಡಿಯಲಿಲ್ಲ.

ಚಾಂಪಿಯನ್ಸ್ ಟ್ರೋಫಿಗೂ ಮುನ್ನ ತನ್ನ ಸಿದ್ಧತೆಗಳನ್ನು ಬಲಪಡಿಸಲು ಇಂಗ್ಲೆಂಡ್ ತಂಡ ಭಾರತದ ವಿರುದ್ಧ ಏಕದಿನ ಸರಣಿಯನ್ನು ಆಡುತ್ತಿದೆ. ಇಂದಿನ ಪಂದ್ಯದಲ್ಲಿ ಇಂಗ್ಲಿಷ್ ತಂಡದ ಆರಂಭಿಕರು ವೇಗದ ಆರಂಭ ನೀಡಿದ್ದರು. ಆದರೆ ಬೆನ್ ಡಕೆಟ್ ಮತ್ತು ಫಿಲ್ ಸಾಲ್ಟ್ ಔಟಾದ ನಂತರ ತಂಡವು ನಿರಂತರವಾಗಿ ವಿಕೆಟ್ ಕಳೆದುಕೊಳ್ಳಲು ಪ್ರಾರಂಭಿಸಿತು. ಇತ್ತ ಇಂಗ್ಲೆಂಡ್ ಬ್ಯಾಟಿಂಗ್ ಲೈನ್ ಅಪ್​ನ ಬೆನ್ನೆಲುಬು ಎಂದು ಪರಿಗಣಿಸಲ್ಪಟ್ಟ ಜೋ ರೂಟ್ ಕೂಡ ತಂಡದ ಕೈಹಿಡಿಯಲಿಲ್ಲ.

3 / 6
19 ರನ್ ಬಾರಿಸಿ ಔಟಾದ ರೂಟ್ ಈ ಮೂಲಕ ಏಕದಿನ ಮಾದರಿಯಲ್ಲಿ ನಾಲ್ಕನೇ ಬಾರಿಗೆ, ಒಟ್ಟಾರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 12 ನೇ ಬಾರಿಗೆ ಜಡೇಜಾಗೆ ಬಲಿಯಾದರು. ಈ ಮೂಲಕ ಜಡೇಜಾ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೂಟ್​ರನ್ನು ಅತಿ ಹೆಚ್ಚು ಬಾರಿ ಔಟ್ ಮಾಡಿದ ದಾಖಲೆಯನ್ನು ನಿರ್ಮಿಸಿದರು.

19 ರನ್ ಬಾರಿಸಿ ಔಟಾದ ರೂಟ್ ಈ ಮೂಲಕ ಏಕದಿನ ಮಾದರಿಯಲ್ಲಿ ನಾಲ್ಕನೇ ಬಾರಿಗೆ, ಒಟ್ಟಾರೆ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 12 ನೇ ಬಾರಿಗೆ ಜಡೇಜಾಗೆ ಬಲಿಯಾದರು. ಈ ಮೂಲಕ ಜಡೇಜಾ ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ರೂಟ್​ರನ್ನು ಅತಿ ಹೆಚ್ಚು ಬಾರಿ ಔಟ್ ಮಾಡಿದ ದಾಖಲೆಯನ್ನು ನಿರ್ಮಿಸಿದರು.

4 / 6
ಪಂದ್ಯದುದ್ದಕ್ಕೂ ಅದ್ಭುತ ಬೌಲಿಂಗ್ ಮಾಡಿದ ರವೀಂದ್ರ ಜಡೇಜಾ ನಾಗ್ಪುರ ಏಕದಿನ ಪಂದ್ಯದಲ್ಲಿ 9 ಓವರ್ ಬೌಲಿಂಗ್ ಮಾಡಿ 2.9 ರ ಎಕಾನಮಿಯಲ್ಲಿ ಕೇವಲ 26 ರನ್‌ ನೀಡಿ 3 ವಿಕೆಟ್‌ಗಳನ್ನು ಪಡೆದರು. ಇದರಲ್ಲಿ ಮೇಡನ್ ಓವರ್ ಕೂಡ ಸೇರಿತ್ತು.

ಪಂದ್ಯದುದ್ದಕ್ಕೂ ಅದ್ಭುತ ಬೌಲಿಂಗ್ ಮಾಡಿದ ರವೀಂದ್ರ ಜಡೇಜಾ ನಾಗ್ಪುರ ಏಕದಿನ ಪಂದ್ಯದಲ್ಲಿ 9 ಓವರ್ ಬೌಲಿಂಗ್ ಮಾಡಿ 2.9 ರ ಎಕಾನಮಿಯಲ್ಲಿ ಕೇವಲ 26 ರನ್‌ ನೀಡಿ 3 ವಿಕೆಟ್‌ಗಳನ್ನು ಪಡೆದರು. ಇದರಲ್ಲಿ ಮೇಡನ್ ಓವರ್ ಕೂಡ ಸೇರಿತ್ತು.

5 / 6
ಇದು ಮಾತ್ರವಲ್ಲದೆ ಈ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿದ ಜಡೇಜಾ, ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳನ್ನು ಪೂರ್ಣಗೊಳಿಸಿದ ಸಾಧನೆಯನ್ನು ಮಾಡಿದರು. ಇದರೊಂದಿಗೆ ಈ ದಾಖಲೆ ಮಾಡಿದ 5 ನೇ ಭಾರತೀಯ ಬೌಲರ್ ಎನಿಸಿಕೊಂಡರು.

ಇದು ಮಾತ್ರವಲ್ಲದೆ ಈ ಪಂದ್ಯದಲ್ಲಿ ಮೂರು ವಿಕೆಟ್ ಕಬಳಿಸಿದ ಜಡೇಜಾ, ಈ ಮೂಲಕ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ 600 ವಿಕೆಟ್‌ಗಳನ್ನು ಪೂರ್ಣಗೊಳಿಸಿದ ಸಾಧನೆಯನ್ನು ಮಾಡಿದರು. ಇದರೊಂದಿಗೆ ಈ ದಾಖಲೆ ಮಾಡಿದ 5 ನೇ ಭಾರತೀಯ ಬೌಲರ್ ಎನಿಸಿಕೊಂಡರು.

6 / 6
Follow us
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
‘ಅಪ್ಪು ಹವಾ’: ಸ್ಟಾರ್ ನಟರ ಹೊಸ ಸಿನಿಮಾಕ್ಕೂ ಸಿಗಲ್ಲ ಇಂಥಾ ಸ್ವಾಗತ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಅಧ್ಯಕ್ಷರು ಊಟಕ್ಕೆ ಕರೆದರೆ ಹೋಗದಿರಲಾಗುತ್ತದೆಯೇ? ಸತೀಶ್ ಜಾರಕಿಹೊಳಿ
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಬೆಂಗಳೂರಿನ ರೈಲಿನೊಳಗೆ ಯುವಕನಿಂದ ಮೂತ್ರ ವಿಸರ್ಜನೆ; ವಿಡಿಯೋ ವೈರಲ್
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಪ್ರತಿದಿನ ಮಾಧ್ಯಮಗಳೊಂದಿಗೆ ಮಾತಾಡುವ ರೇಣುಕಾಚಾರ್ಯಗೆ ವಿಷಯಗಳು ಸಿಗುತ್ತಿಲ್ಲ
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!
ಮಟ ಮಟ ಮಧ್ಯಾಹ್ನ ಫುಲ್ ಟೈಟ್​ ಆಗಿ ಬಂದು ಬಸ್ ಕೆಳಗೆ ಮಲಗಿದ ಕುಡುಕ!