ಒಂದೇ ಪಂದ್ಯದಲ್ಲಿ 2 ಭರ್ಜರಿ ದಾಖಲೆ ಬರೆದ ಜೋಸ್ ಬಟ್ಲರ್

India vs England, 2nd T20I: ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ಭಾರತ ತಂಡ ಜಯಭೇರಿ ಬಾರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಜೋಸ್ ಬಟ್ಲರ್ ಅವರ 45 ರನ್​ಗಳ ನೆರವಿನಿಂದ 165 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 19.2 ಓವರ್​ಗಳಲ್ಲಿ ಚೇಸ್ ಮಾಡಿ 2 ವಿಕೆಟ್​​ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Jan 26, 2025 | 7:53 AM

ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಇಂಗ್ಲೆಂಡ್ ಸೋಲನುಭವಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಇದಾಗ್ಯೂ ನಾಯಕ ಜೋಸ್ ಬಟ್ಲರ್ 30 ಎಸೆತಗಳಲ್ಲಿ 45 ರನ್ ಬಾರಿಸಿ ಮಿಂಚಿದ್ದರು.

ಟೀಮ್ ಇಂಡಿಯಾ ವಿರುದ್ಧದ 2ನೇ ಟಿ20 ಪಂದ್ಯದಲ್ಲೂ ಇಂಗ್ಲೆಂಡ್ ಸೋಲನುಭವಿಸಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶಿಸಿರಲಿಲ್ಲ. ಇದಾಗ್ಯೂ ನಾಯಕ ಜೋಸ್ ಬಟ್ಲರ್ 30 ಎಸೆತಗಳಲ್ಲಿ 45 ರನ್ ಬಾರಿಸಿ ಮಿಂಚಿದ್ದರು.

1 / 5
ಈ 45 ರನ್​ಗಳೊಂದಿಗೆ ಜೋಸ್ ಬಟ್ಲರ್ ಟೀಮ್ ಇಂಡಿಯಾ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ನಿಕೋಲಸ್ ಪೂರನ್ ಹೆಸರಿನಲ್ಲಿತ್ತು. ಪೂರನ್ ಭಾರತದ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 592 ರನ್ ಬಾರಿಸಿ ಅಗ್ರಸ್ಥಾನ ಅಲಂಕರಿಸಿದ್ದರು.

ಈ 45 ರನ್​ಗಳೊಂದಿಗೆ ಜೋಸ್ ಬಟ್ಲರ್ ಟೀಮ್ ಇಂಡಿಯಾ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್​ ಕಲೆಹಾಕಿದ ಬ್ಯಾಟರ್ ಎನಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ನಿಕೋಲಸ್ ಪೂರನ್ ಹೆಸರಿನಲ್ಲಿತ್ತು. ಪೂರನ್ ಭಾರತದ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 592 ರನ್ ಬಾರಿಸಿ ಅಗ್ರಸ್ಥಾನ ಅಲಂಕರಿಸಿದ್ದರು.

2 / 5
ಇದೀಗ ಜೋಸ್ ಬಟ್ಲರ್ ಈ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಈವರೆಗೆ 24 ಪಂದ್ಯಗಳನ್ನಾಡಿರುವ ಜೋಸ್ ಬಟ್ಲರ್ ಒಟ್ಟು 611 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 600+ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಇದೀಗ ಜೋಸ್ ಬಟ್ಲರ್ ಈ ದಾಖಲೆ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದ್ದಾರೆ. ಟೀಮ್ ಇಂಡಿಯಾ ವಿರುದ್ಧ ಈವರೆಗೆ 24 ಪಂದ್ಯಗಳನ್ನಾಡಿರುವ ಜೋಸ್ ಬಟ್ಲರ್ ಒಟ್ಟು 611 ರನ್ ಕಲೆಹಾಕಿದ್ದಾರೆ. ಈ ಮೂಲಕ ಭಾರತದ ವಿರುದ್ಧ ಟಿ20 ಕ್ರಿಕೆಟ್​ನಲ್ಲಿ 600+ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡಿದ್ದಾರೆ.

3 / 5
ಹಾಗೆಯೇ ಈ ಪಂದ್ಯದಲ್ಲಿ ಜೋಸ್ ಬಟ್ಲರ್ ಬ್ಯಾಟ್​ನಿಂದ 3 ಭರ್ಜರಿ ಸಿಕ್ಸ್​​ಗಳು ಮೂಡಿಬಂದಿದ್ದವು. ಈ ಸಿಕ್ಸ್​ಗಳೊಂದಿಗೆ ಇಂಗ್ಲೆಂಡ್ ನಾಯಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 150 ಸಿಕ್ಸ್​ಗಳ ಮೈಲುಗಲ್ಲು ಮುಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ಜೋಸ್ ಬಟ್ಲರ್ ಬ್ಯಾಟ್​ನಿಂದ 3 ಭರ್ಜರಿ ಸಿಕ್ಸ್​​ಗಳು ಮೂಡಿಬಂದಿದ್ದವು. ಈ ಸಿಕ್ಸ್​ಗಳೊಂದಿಗೆ ಇಂಗ್ಲೆಂಡ್ ನಾಯಕ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 150 ಸಿಕ್ಸ್​ಗಳ ಮೈಲುಗಲ್ಲು ಮುಟ್ಟಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಇಂಗ್ಲೆಂಡ್​ನ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ.

4 / 5
ಈ ಎರಡು ಭರ್ಜರಿ ದಾಖಲೆಗಳ ಹೊರತಾಗಿಯೂ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋಲನುಭವಿಸಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 19.2 ಓವರ್​​ಗಳಲ್ಲಿ 166 ರನ್ ಬಾರಿಸಿ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

ಈ ಎರಡು ಭರ್ಜರಿ ದಾಖಲೆಗಳ ಹೊರತಾಗಿಯೂ ಈ ಪಂದ್ಯದಲ್ಲಿ ಇಂಗ್ಲೆಂಡ್ ತಂಡ ಸೋಲನುಭವಿಸಿತು. ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 20 ಓವರ್​​ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್ ಕಲೆಹಾಕಿದರೆ, ಟೀಮ್ ಇಂಡಿಯಾ 19.2 ಓವರ್​​ಗಳಲ್ಲಿ 166 ರನ್ ಬಾರಿಸಿ 2 ವಿಕೆಟ್​ಗಳ ರೋಚಕ ಜಯ ಸಾಧಿಸಿತು. ಈ ಗೆಲುವಿನೊಂದಿಗೆ ಭಾರತ ತಂಡವು 5 ಪಂದ್ಯಗಳ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿದೆ.

5 / 5
Follow us
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ನಾವು ಜನರೊಂದಿಗೆ ಪುನಃ ಸಂಪರ್ಕ ಸಾಧಿಸಬೇಕಿದೆ, ಸವಾಲು ದೊಡ್ಡದು: ಪ್ರಿಯಾಂಕಾ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಸಂಭ್ರಮಾಚರಣೆಯಲ್ಲಿ ದಣಿಯದೆ ಕುಣಿದು ಕುಪ್ಪಳಿಸಿದ ಹಿರಿಯ ಕಾರ್ಯಕರ್ತ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಹಣ, ಅಧಿಕಾರ ಕೇಜ್ರಿವಾಲ್​ರನ್ನು ಬದಲಿಸಿತೇ? ಅಣ್ಣಾ ಹಜಾರೆ ಹೇಳಿದ್ದೇನು ನೋಡಿ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ