Sign In

By signing in or creating an account, you agree with Associated Broadcasting Company's Terms & Conditions and Privacy Policy.

Kagiso Rabada: ರೋಹಿತ್ ಶರ್ಮಾರನ್ನು ಔಟ್ ಮಾಡಿಯೇ ದಾಖಲೆ ಬರೆದ ಕಗಿಸೊ ರಬಾಡ

Kagiso Rabada Record: 2015 ರಲ್ಲಿ ಸೌತ್ ಆಫ್ರಿಕಾ ಪರ ಪಾದಾರ್ಪಣೆ ಮಾಡಿದ್ದ ರಬಾಡ 61 ಟೆಸ್ಟ್ ಪಂದ್ಯಗಳಿಂದ 285 ವಿಕೆಟ್​ ಕಬಳಿಸಿದ್ದಾರೆ. ಹಾಗೆಯೇ 101 ಏಕದಿನ ಪಂದ್ಯಗಳಿಂದ 157 ವಿಕೆಟ್​, 56 ಟಿ20 ಪಂದ್ಯಗಳಿಂದ 58 ವಿಕೆಟ್ ಕಬಳಿಸಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500+ ವಿಕೆಟ್​ ಪಡೆದಿರುವ ಬೌಲರ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Dec 27, 2023 | 1:18 PM

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೇವಲ 5 ರನ್​ಗಳಿಸಿ ಔಟಾಗಿದ್ದರು. ಕಗಿಸೊ ರಬಾಡ ಎಸೆದ 5ನೇ ಓವರ್​ನಲ್ಲಿ ಲೆಗ್ ಸೈಡ್​ನತ್ತ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದ್ದರು.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್​ ಪಂದ್ಯದ ಪ್ರಥಮ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೇವಲ 5 ರನ್​ಗಳಿಸಿ ಔಟಾಗಿದ್ದರು. ಕಗಿಸೊ ರಬಾಡ ಎಸೆದ 5ನೇ ಓವರ್​ನಲ್ಲಿ ಲೆಗ್ ಸೈಡ್​ನತ್ತ ಭರ್ಜರಿ ಹೊಡೆತಕ್ಕೆ ಯತ್ನಿಸಿ ಕ್ಯಾಚ್ ನೀಡಿ ವಿಕೆಟ್ ಒಪ್ಪಿಸಿದ್ದರು.

1 / 7
ಈ ವಿಕೆಟ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ಹೆಗ್ಗಳಿಕೆಗೆ ಕಗಿಸೊ ರಬಾಡ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟಿಮ್ ಸೌಥಿ ಹೆಸರಿನಲ್ಲಿತ್ತು.

ಈ ವಿಕೆಟ್​ನೊಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ರೋಹಿತ್ ಶರ್ಮಾರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ಹೆಗ್ಗಳಿಕೆಗೆ ಕಗಿಸೊ ರಬಾಡ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಟಿಮ್ ಸೌಥಿ ಹೆಸರಿನಲ್ಲಿತ್ತು.

2 / 7
ನ್ಯೂಝಿಲೆಂಡ್ ತಂಡದ ವೇಗಿ ಟಿಮ್ ಸೌಥಿ ರೋಹಿತ್ ಶರ್ಮಾ ಅವರನ್ನು ಒಟ್ಟು 12 ಬಾರಿ ಔಟ್ ಮಾಡಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಕಗಿಸೊ ರಬಾಡ ಅಗ್ರಸ್ಥಾನಕ್ಕೇರಿದ್ದಾರೆ.

ನ್ಯೂಝಿಲೆಂಡ್ ತಂಡದ ವೇಗಿ ಟಿಮ್ ಸೌಥಿ ರೋಹಿತ್ ಶರ್ಮಾ ಅವರನ್ನು ಒಟ್ಟು 12 ಬಾರಿ ಔಟ್ ಮಾಡಿ ಈ ದಾಖಲೆ ಬರೆದಿದ್ದರು. ಇದೀಗ ಈ ದಾಖಲೆಯನ್ನು ಮುರಿದು ಕಗಿಸೊ ರಬಾಡ ಅಗ್ರಸ್ಥಾನಕ್ಕೇರಿದ್ದಾರೆ.

3 / 7
ಕಗಿಸೊ ರಬಾಡ ಇದುವರೆಗೆ ರೋಹಿತ್ ಶರ್ಮಾ ಅವರನ್ನು ಒಟ್ಟು 13 ಬಾರಿ ಔಟ್ ಮಾಡಿದ್ದಾರೆ. ಈ ಮೂಲಕ ಹಿಟ್​ಮ್ಯಾನ್​ರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆಯನ್ನು ಕಗಿಸೊ ರಬಾಡ ತಮ್ಮದಾಗಿಸಿಕೊಂಡಿದ್ದಾರೆ.

ಕಗಿಸೊ ರಬಾಡ ಇದುವರೆಗೆ ರೋಹಿತ್ ಶರ್ಮಾ ಅವರನ್ನು ಒಟ್ಟು 13 ಬಾರಿ ಔಟ್ ಮಾಡಿದ್ದಾರೆ. ಈ ಮೂಲಕ ಹಿಟ್​ಮ್ಯಾನ್​ರನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ಬೌಲರ್ ಎಂಬ ದಾಖಲೆಯನ್ನು ಕಗಿಸೊ ರಬಾಡ ತಮ್ಮದಾಗಿಸಿಕೊಂಡಿದ್ದಾರೆ.

4 / 7
ಇನ್ನು ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ದಾಖಲೆ ಜೇಮ್ಸ್ ಅ್ಯಂಡರ್ಸನ್, ಮೊಯೀನ್ ಅಲಿ ಹಾಗೂ ಟಿಮ್ ಸೌಥಿ ಹೆಸರಿನಲ್ಲಿದೆ. ಈ ಮೂವರು ಬೌಲರ್​ಗಳು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯನ್ನು 10 ಬಾರಿ ಔಟ್ ಮಾಡಿದ್ದಾರೆ.

ಇನ್ನು ವಿರಾಟ್ ಕೊಹ್ಲಿಯನ್ನು ಅತೀ ಹೆಚ್ಚು ಬಾರಿ ಔಟ್ ಮಾಡಿದ ದಾಖಲೆ ಜೇಮ್ಸ್ ಅ್ಯಂಡರ್ಸನ್, ಮೊಯೀನ್ ಅಲಿ ಹಾಗೂ ಟಿಮ್ ಸೌಥಿ ಹೆಸರಿನಲ್ಲಿದೆ. ಈ ಮೂವರು ಬೌಲರ್​ಗಳು ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ವಿರಾಟ್ ಕೊಹ್ಲಿಯನ್ನು 10 ಬಾರಿ ಔಟ್ ಮಾಡಿದ್ದಾರೆ.

5 / 7
ಈ ಪಂದ್ಯದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ರಬಾಡ ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಯನ್ನು ಪೆವಿಲಿಯನ್​ಗಟ್ಟಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಈ ಪಂದ್ಯದಲ್ಲಿ ಅದ್ಭುತವಾಗಿ ಬೌಲಿಂಗ್ ಮಾಡಿದ್ದ ರಬಾಡ ಭಾರತ ತಂಡದ ಅಗ್ರ ಕ್ರಮಾಂಕದ ಬ್ಯಾಟರ್​ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಯನ್ನು ಪೆವಿಲಿಯನ್​ಗಟ್ಟಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ 5 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

6 / 7
ಭಾರತದ ವಿರುದ್ಧ ಕೇವಲ 44 ರನ್ ನೀಡಿ 5 ವಿಕೆಟ್​ ಕಬಳಿಸುವುದರೊಂದಿಗೆ ಕಗಿಸೊ ರಬಾಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

ಭಾರತದ ವಿರುದ್ಧ ಕೇವಲ 44 ರನ್ ನೀಡಿ 5 ವಿಕೆಟ್​ ಕಬಳಿಸುವುದರೊಂದಿಗೆ ಕಗಿಸೊ ರಬಾಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

7 / 7

Published On - 1:17 pm, Wed, 27 December 23

Follow us
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪುನೀತ್ ರಾಜ್​ಕುಮಾರ್ ನಿಧನರಾದ ವಿಷಯ ಸೋದರತ್ತೆಗೆ ಇನ್ನೂ ತಿಳಿದಿಲ್ಲ ಯಾಕೆ?
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಪೊಲೀಸ್ ಕಸ್ಟಡಿಗೆ ತೆರಳುವಾಗ ಮಂಕಾಗಿ ಕುಳಿತ ರಜತ್ ಕಿಶನ್, ವಿನಯ್ ಗೌಡ
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಹಳೆಯ ಸಂಪ್ರದಾಯ ಮುಂದುವರೆಸಿದ ಸಂಜು
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಯತ್ನಾಳ್ ಉಚ್ಛಾಟನೆ: ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಳಿ ಪೂಜೆ
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
‘ಅವಕಾಶ ಕೊಡಿ, ನಾನು ಕೆಟ್ಟ ನಟ ಅಲ್ಲ’ ಹೀಗೆಂದರ್ಯಾಕೆ ಮೋಹನ್​ಲಾಲ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!