AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kagiso Rabada: ಬರೋಬ್ಬರಿ 500 ವಿಕೆಟ್​: ದಾಖಲೆ ಬರೆದ ರಬಾಡ

Kagiso Rabada Record: ರಬಾಡ ಅವರ ಮಿಂಚಿನ ದಾಳಿಯಿಂದಾಗಿ ಟೀಮ್ ಇಂಡಿಯಾದ ಅಗ್ರಗಣ್ಯ ಬ್ಯಾಟರ್​ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಬೇಗನೆ ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ 5 ವಿಕೆಟ್​ಗಳ ಸಾಧನೆ ಮಾಡಿದರು.

TV9 Web
| Edited By: |

Updated on: Dec 27, 2023 | 7:24 AM

Share
ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ (Kagiso Rabada) 5 ವಿಕೆಟ್ ಕಬಳಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಸೌತ್ ಆಫ್ರಿಕಾ ಪರ ರಬಾಡ ಕರಾರುವಾಕ್ ದಾಳಿ ಸಂಘಟಿಸಿದ್ದರು.

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಟೀಮ್ ಇಂಡಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸೌತ್ ಆಫ್ರಿಕಾ ವೇಗಿ ಕಗಿಸೊ ರಬಾಡ (Kagiso Rabada) 5 ವಿಕೆಟ್ ಕಬಳಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಬೌಲಿಂಗ್ ಮಾಡಿದ ಸೌತ್ ಆಫ್ರಿಕಾ ಪರ ರಬಾಡ ಕರಾರುವಾಕ್ ದಾಳಿ ಸಂಘಟಿಸಿದ್ದರು.

1 / 6
ರಬಾಡ ಅವರ ಮಿಂಚಿನ ದಾಳಿಯಿಂದಾಗಿ ಟೀಮ್ ಇಂಡಿಯಾದ ಅಗ್ರಗಣ್ಯ ಬ್ಯಾಟರ್​ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಬೇಗನೆ ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ ರಬಾಡ 5 ವಿಕೆಟ್​ಗಳ ಸಾಧನೆ ಮಾಡಿದರು.

ರಬಾಡ ಅವರ ಮಿಂಚಿನ ದಾಳಿಯಿಂದಾಗಿ ಟೀಮ್ ಇಂಡಿಯಾದ ಅಗ್ರಗಣ್ಯ ಬ್ಯಾಟರ್​ಗಳಾದ ರೋಹಿತ್ ಶರ್ಮಾ (5), ಶ್ರೇಯಸ್ ಅಯ್ಯರ್ (31), ವಿರಾಟ್ ಕೊಹ್ಲಿ (38) ಬೇಗನೆ ಪೆವಿಲಿಯನ್ ಸೇರಿದ್ದರು. ಇದಾದ ಬಳಿಕ ಅಶ್ವಿನ್ (8) ಹಾಗೂ ಶಾರ್ದೂಲ್ ಠಾಕೂರ್ (24) ವಿಕೆಟ್ ಪಡೆಯುವ ಮೂಲಕ ರಬಾಡ 5 ವಿಕೆಟ್​ಗಳ ಸಾಧನೆ ಮಾಡಿದರು.

2 / 6
ಕೇವಲ 44 ರನ್ ನೀಡಿ 5 ವಿಕೆಟ್​ ಕಬಳಿಸುವುದರೊಂದಿಗೆ ಕಗಿಸೊ ರಬಾಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

ಕೇವಲ 44 ರನ್ ನೀಡಿ 5 ವಿಕೆಟ್​ ಕಬಳಿಸುವುದರೊಂದಿಗೆ ಕಗಿಸೊ ರಬಾಡ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500 ವಿಕೆಟ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ಸೌತ್ ಆಫ್ರಿಕಾದ 7ನೇ ಬೌಲರ್ ಎನಿಸಿಕೊಂಡಿದ್ದಾರೆ.

3 / 6
ಇದಕ್ಕೂ ಮುನ್ನ ಶಾನ್ ಪೊಲ್ಲಾಕ್ (823), ಡೇಲ್ ಸ್ಟೇನ್ (697), ಮಖಾಯಾ ಎನ್ಟಿನಿ (661), ಅಲನ್ ಡೊನಾಲ್ಡ್ (602), ಜಾಕ್ವೆಸ್ ಕಾಲಿಸ್ (572), ಮತ್ತು ಮೊರ್ನೆ ಮೊರ್ಕೆಲ್ (535) ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ 28 ವರ್ಷದ ಕಗಿಸೊ ರಬಾಡ.

ಇದಕ್ಕೂ ಮುನ್ನ ಶಾನ್ ಪೊಲ್ಲಾಕ್ (823), ಡೇಲ್ ಸ್ಟೇನ್ (697), ಮಖಾಯಾ ಎನ್ಟಿನಿ (661), ಅಲನ್ ಡೊನಾಲ್ಡ್ (602), ಜಾಕ್ವೆಸ್ ಕಾಲಿಸ್ (572), ಮತ್ತು ಮೊರ್ನೆ ಮೊರ್ಕೆಲ್ (535) ಈ ಸಾಧನೆ ಮಾಡಿದ್ದರು. ಇದೀಗ ಈ ಪಟ್ಟಿಗೆ ಹೊಸ ಸೇರ್ಪಡೆ 28 ವರ್ಷದ ಕಗಿಸೊ ರಬಾಡ.

4 / 6
2015 ರಲ್ಲಿ ಸೌತ್ ಆಫ್ರಿಕಾ ಪರ ಪಾದಾರ್ಪಣೆ ಮಾಡಿದ್ದ ರಬಾಡ 61 ಟೆಸ್ಟ್ ಪಂದ್ಯಗಳಿಂದ 285 ವಿಕೆಟ್​ ಕಬಳಿಸಿದ್ದಾರೆ. ಹಾಗೆಯೇ 101 ಏಕದಿನ ಪಂದ್ಯಗಳಿಂದ 157 ವಿಕೆಟ್​, 56 ಟಿ20 ಪಂದ್ಯಗಳಿಂದ 58 ವಿಕೆಟ್ ಕಬಳಿಸಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500+ ವಿಕೆಟ್​ ಪಡೆದಿರುವ ಬೌಲರ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

2015 ರಲ್ಲಿ ಸೌತ್ ಆಫ್ರಿಕಾ ಪರ ಪಾದಾರ್ಪಣೆ ಮಾಡಿದ್ದ ರಬಾಡ 61 ಟೆಸ್ಟ್ ಪಂದ್ಯಗಳಿಂದ 285 ವಿಕೆಟ್​ ಕಬಳಿಸಿದ್ದಾರೆ. ಹಾಗೆಯೇ 101 ಏಕದಿನ ಪಂದ್ಯಗಳಿಂದ 157 ವಿಕೆಟ್​, 56 ಟಿ20 ಪಂದ್ಯಗಳಿಂದ 58 ವಿಕೆಟ್ ಕಬಳಿಸಿ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 500+ ವಿಕೆಟ್​ ಪಡೆದಿರುವ ಬೌಲರ್​ಗಳ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

5 / 6
ಇನ್ನು ಕಗಿಸೊ ರಬಾಡ ಅವರ ಈ ಮಿಂಚಿನ ದಾಳಿಯ ಪರಿಣಾಮ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ 8 ವಿಕೆಟ್ ಕಳೆದುಕೊಂಡು 208 ರನ್​ಗಳಿಸಲಷ್ಟೇ ಶಕ್ತವಾಗಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇನ್ನು ಕಗಿಸೊ ರಬಾಡ ಅವರ ಈ ಮಿಂಚಿನ ದಾಳಿಯ ಪರಿಣಾಮ ಟೀಮ್ ಇಂಡಿಯಾ ಮೊದಲ ದಿನದಾಟದಲ್ಲಿ 8 ವಿಕೆಟ್ ಕಳೆದುಕೊಂಡು 208 ರನ್​ಗಳಿಸಲಷ್ಟೇ ಶಕ್ತವಾಗಿದೆ. ಸದ್ಯ ಕ್ರೀಸ್​ನಲ್ಲಿ ಕೆಎಲ್ ರಾಹುಲ್ (70) ಹಾಗೂ ಮೊಹಮ್ಮದ್ ಸಿರಾಜ್ (0) ಇದ್ದು, 2ನೇ ದಿನದಾಟಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

6 / 6
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ