AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬರ್ ಸ್ಥಾನದಲ್ಲಿ ಕಣಕ್ಕಿಳಿದ, ಶತಕ ಸಿಡಿಸಿದ, ದಾಖಲೆ ಬರೆದ

Kamran Ghulam Records: ಕಳೆದ 18 ಇನಿಂಗ್ಸ್​ಗಳಲ್ಲಿ ಒಂದೇ ಒಂದು ಅರ್ಧಶತಕ ಬಾರಿಸಿದ ಬಾಬರ್ ಆಝಂ ಅವರನ್ನು ಪಾಕಿಸ್ತಾನ್ ಟೆಸ್ಟ್​​ ತಂಡದಿಂದ ಕೈ ಬಿಡಲಾಗಿದೆ. ಅವರ ಸ್ಥಾನದಲ್ಲಿ ಚೊಚ್ಚಲ ಅವಕಾಶ ಪಡೆದ ಕಮ್ರಾನ್ ಗುಲಾಮ್ ಇದೀಗ ಮೊದಲ ಪಂದ್ಯದಲ್ಲೇ ಶತಕ ಸಿಡಿಸಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 16, 2024 | 10:03 AM

Share
ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಸ್ಥಾನದಲ್ಲಿ ಅವಕಾಶ ಪಡೆದ ಕಮ್ರಾನ್ ಗುಲಾಮ್ ಚೊಚ್ಚಲ ಟೆಸ್ಟ್​ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಅದು ಸಹ ಬಲಿಷ್ಠ ಇಂಗ್ಲೆಂಡ್ ವೇಗಿಗಳನ್ನು ಎದುರಿಸುವ ಮೂಲಕ ಎಂಬುದು ವಿಶೇಷ. ಮುಲ್ತಾನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಪಾಕಿಸ್ತಾನ್ ತಂಡದ ಮಾಜಿ ನಾಯಕ ಬಾಬರ್ ಆಝಂ ಸ್ಥಾನದಲ್ಲಿ ಅವಕಾಶ ಪಡೆದ ಕಮ್ರಾನ್ ಗುಲಾಮ್ ಚೊಚ್ಚಲ ಟೆಸ್ಟ್​ ಪಂದ್ಯದಲ್ಲೇ ಶತಕ ಸಿಡಿಸಿ ದಾಖಲೆ ಬರೆದಿದ್ದಾರೆ. ಅದು ಸಹ ಬಲಿಷ್ಠ ಇಂಗ್ಲೆಂಡ್ ವೇಗಿಗಳನ್ನು ಎದುರಿಸುವ ಮೂಲಕ ಎಂಬುದು ವಿಶೇಷ. ಮುಲ್ತಾನ್​ನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ ಕೇವಲ 7 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾನ್ ಮಸೂದ್ 3 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಕಮ್ರಾನ್ ಗುಲಾಮ್ ಅತ್ಯುತ್ತಮ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಅಬ್ದುಲ್ಲಾ ಶಫೀಕ್ ಕೇವಲ 7 ರನ್​ಗಳಿಸಿ ಔಟಾದರೆ, ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಶಾನ್ ಮಸೂದ್ 3 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಕ್ರೀಸ್​ಗೆ ಆಗಮಿಸಿದ ಕಮ್ರಾನ್ ಗುಲಾಮ್ ಅತ್ಯುತ್ತಮ ಬ್ಯಾಟಿಂಗ್​ನೊಂದಿಗೆ ಗಮನ ಸೆಳೆದರು.

2 / 5
ಇಂಗ್ಲೆಂಡ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಕಮ್ರಾನ್ 192 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಪಾಕಿಸ್ತಾನ್ ಪರ ಚೊಚ್ಚಲ ಟೆಸ್ಟ್​ನಲ್ಲಿ ಶತಕ ಬಾರಿಸಿದ 13ನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಮೊದಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಬಾರಿಸಿದ ಪಾಕಿಸ್ತಾನದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಇಂಗ್ಲೆಂಡ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಕಮ್ರಾನ್ 192 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ಪಾಕಿಸ್ತಾನ್ ಪರ ಚೊಚ್ಚಲ ಟೆಸ್ಟ್​ನಲ್ಲಿ ಶತಕ ಬಾರಿಸಿದ 13ನೇ ಆಟಗಾರ ಎನಿಸಿಕೊಂಡರು. ಅಲ್ಲದೆ ಮೊದಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಬಾರಿಸಿದ ಪಾಕಿಸ್ತಾನದ 2ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

3 / 5
ಹಾಗೆಯೇ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಚೊಚ್ಚಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡರು. ಇದರ ಜೊತೆಗೆ ಮೊದಲ ಟೆಸ್ಟ್​ ಪಂದ್ಯದಲ್ಲೇ ಶತಕ ಬಾರಿಸಿದ ಪಾಕಿಸ್ತಾನದ ಎರಡನೇ ಹಿರಿಯ ಆಟಗಾರ ಎನಿಸಿಕೊಂಡರು. ತಮ್ಮ 29ನೇ ವಯಸ್ಸಿನಲ್ಲಿ ಟೆಸ್ಟ್​​ಗೆ ಪಾದಾರ್ಪಣೆ ಮಾಡುವ ಮೂಲಕ ಕಮ್ರಾನ್ ಗುಲಾಮ್ ಈ ಸಾಧನೆ ಮಾಡಿದ್ದಾರೆ.

ಹಾಗೆಯೇ ಟೆಸ್ಟ್ ಕ್ರಿಕೆಟ್​ ಇತಿಹಾಸದಲ್ಲೇ ಚೊಚ್ಚಲ ಪಂದ್ಯದಲ್ಲಿ ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಶತಕ ಸಿಡಿಸಿದ ವಿಶ್ವದ 6ನೇ ಬ್ಯಾಟರ್ ಎಂಬ ದಾಖಲೆಯನ್ನು ಸಹ ತಮ್ಮದಾಗಿಸಿಕೊಂಡರು. ಇದರ ಜೊತೆಗೆ ಮೊದಲ ಟೆಸ್ಟ್​ ಪಂದ್ಯದಲ್ಲೇ ಶತಕ ಬಾರಿಸಿದ ಪಾಕಿಸ್ತಾನದ ಎರಡನೇ ಹಿರಿಯ ಆಟಗಾರ ಎನಿಸಿಕೊಂಡರು. ತಮ್ಮ 29ನೇ ವಯಸ್ಸಿನಲ್ಲಿ ಟೆಸ್ಟ್​​ಗೆ ಪಾದಾರ್ಪಣೆ ಮಾಡುವ ಮೂಲಕ ಕಮ್ರಾನ್ ಗುಲಾಮ್ ಈ ಸಾಧನೆ ಮಾಡಿದ್ದಾರೆ.

4 / 5
ಇನ್ನು ಈ ಪಂದ್ಯದಲ್ಲಿ ಕಮ್ರಾನ್ ಗುಲಾಮ್ 224 ಎಸೆತಗಳನ್ನು ಎದುರಿ 11 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 118 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಪಾಕಿಸ್ತಾನ್ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 259 ರನ್ ಕಲೆಹಾಕಿದ್ದಾರೆ.

ಇನ್ನು ಈ ಪಂದ್ಯದಲ್ಲಿ ಕಮ್ರಾನ್ ಗುಲಾಮ್ 224 ಎಸೆತಗಳನ್ನು ಎದುರಿ 11 ಫೋರ್ ಹಾಗೂ 1 ಸಿಕ್ಸ್​ನೊಂದಿಗೆ 118 ರನ್ ಬಾರಿಸಿದರು. ಈ ಶತಕದ ನೆರವಿನಿಂದ ಪಾಕಿಸ್ತಾನ್ ತಂಡವು ಮೊದಲ ದಿನದಾಟದ ಮುಕ್ತಾಯದ ವೇಳೆಗೆ 5 ವಿಕೆಟ್ ಕಳೆದುಕೊಂಡು 259 ರನ್ ಕಲೆಹಾಕಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
4500 ಕೋಟಿ ರೂ. ವಂಚನೆ ಕೇಸ್: ಶಿವಂ ಅಸೋಸಿಯೇಟ್‌ ಮಾಲೀಕ ಅರೆಸ್ಟ್​​​
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಹೈದರಾಬಾದ್-ಜೈಪುರ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ ದುರಂತ
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಬೇರೆ ಕೇಸ್ ಆರೋಪಿಗಳಿಗೆ ಜಾಮೀನು ಸಿಕ್ಕರೂ ದರ್ಶನ್​ಗೆ ಸಿಗುತ್ತಿಲ್ಲ ಯಾಕೆ?
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಟ್ರ್ಯಾಕ್ಟರ್ ಬಿದ್ದು 6 ಜನ ದುರಂತ ಅಂತ್ಯ:ಘಟನೆ ಬಗ್ಗೆ ಐಜಿಪಿ ಹೇಳಿದ್ದಿಷ್ಟು
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ಆಕಾಶ್ ಸಿಂಗ್ ಪ್ರದರ್ಶಿಸಿದ ಚೀಟಿಯಲ್ಲಿ ಏನಿತ್ತು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ದರ್ಶನ್​ಗೆ ಇಲ್ಲ ಜಾಮೀನು; ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಡೆದಿದ್ದು ಏನು?
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಪ್ಲಾಸ್ಟಿಕ್ ಕವರ್ ಸಿಲುಕಿ ಕೋತಿ ಪರದಾಟ; ವಿಡಿಯೋ ವೈರಲ್​​
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಯುಎಇಯಲ್ಲಿ ಪ್ರಧಾನಿ ನರೇಂದ್ರ ಮೋದಿಗೆ ಅದ್ದೂರಿ ಸ್ವಾಗತ
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪವಿತ್ರಾ ಗೌಡಗೆ ಜಾಮೀನು ಸಿಗುವ ಸಾಧ್ಯತೆ ಹೆಚ್ಚು: ವಕೀಲ ಬಾಲನ್
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ
ಪ್ರಧಾನಿಯ ಬೆಂಗಾವಲು ಪಡೆ ಕಡಿಮೆ ಮಾಡುವುದು ಸರಿಯಲ್ಲ; ಮಾಜಿ ರಾ ಮುಖ್ಯಸ್ಥ