AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್

Kane Williamson retirement: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್​​ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್​ನಲ್ಲಿ ಕಿವೀಸ್ ಪಡೆಯಲ್ಲಿ ಕೇನ್ ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on:Nov 02, 2025 | 8:25 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ (Kane Williamson) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ. 

ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ (Kane Williamson) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ. 

1 / 5
ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನಲ್ಲಿ ನ್ಯೂಝಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 

ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನಲ್ಲಿ ನ್ಯೂಝಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 

2 / 5
ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್​​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್​​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

3 / 5
ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಝಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್​​ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​​ನೆಸ್​ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಝಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್​​ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​​ನೆಸ್​ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

4 / 5
ಇನ್ನು ನ್ಯೂಝಿಲೆಂಡ್ ಪರ 93 ಟಿ20 ಪಂದ್ಯಗಳನ್ನಾಡಿರುವ ಕೇನ್ ವಿಲಿಯಮ್ಸನ್ 90 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 18 ಅರ್ಧಶತಕಗಳೊಂದಿಗೆ ಒಟ್ಟು 2575 ರನ್ ಕಲೆಹಾಕಿದ್ದಾರೆ. ಇದರ ನಡುವೆ ವಿಲಿಯಮ್ಸನ್ ಬ್ಯಾಟ್​ನಿಂದ 58 ಸಿಕ್ಸ್ ಹಾಗೂ 245 ಫೋರ್​ಗಳು ಮೂಡಿಬಂದಿದ್ದವು. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಇನ್ನು ನ್ಯೂಝಿಲೆಂಡ್ ಪರ 93 ಟಿ20 ಪಂದ್ಯಗಳನ್ನಾಡಿರುವ ಕೇನ್ ವಿಲಿಯಮ್ಸನ್ 90 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 18 ಅರ್ಧಶತಕಗಳೊಂದಿಗೆ ಒಟ್ಟು 2575 ರನ್ ಕಲೆಹಾಕಿದ್ದಾರೆ. ಇದರ ನಡುವೆ ವಿಲಿಯಮ್ಸನ್ ಬ್ಯಾಟ್​ನಿಂದ 58 ಸಿಕ್ಸ್ ಹಾಗೂ 245 ಫೋರ್​ಗಳು ಮೂಡಿಬಂದಿದ್ದವು. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

5 / 5

Published On - 8:23 am, Sun, 2 November 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ