AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್

Kane Williamson retirement: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್​​ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್​ನಲ್ಲಿ ಕಿವೀಸ್ ಪಡೆಯಲ್ಲಿ ಕೇನ್ ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on:Nov 02, 2025 | 8:25 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ (Kane Williamson) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ. 

ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ (Kane Williamson) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ. 

1 / 5
ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನಲ್ಲಿ ನ್ಯೂಝಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 

ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನಲ್ಲಿ ನ್ಯೂಝಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 

2 / 5
ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್​​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್​​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

3 / 5
ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಝಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್​​ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​​ನೆಸ್​ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಝಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್​​ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​​ನೆಸ್​ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

4 / 5
ಇನ್ನು ನ್ಯೂಝಿಲೆಂಡ್ ಪರ 93 ಟಿ20 ಪಂದ್ಯಗಳನ್ನಾಡಿರುವ ಕೇನ್ ವಿಲಿಯಮ್ಸನ್ 90 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 18 ಅರ್ಧಶತಕಗಳೊಂದಿಗೆ ಒಟ್ಟು 2575 ರನ್ ಕಲೆಹಾಕಿದ್ದಾರೆ. ಇದರ ನಡುವೆ ವಿಲಿಯಮ್ಸನ್ ಬ್ಯಾಟ್​ನಿಂದ 58 ಸಿಕ್ಸ್ ಹಾಗೂ 245 ಫೋರ್​ಗಳು ಮೂಡಿಬಂದಿದ್ದವು. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಇನ್ನು ನ್ಯೂಝಿಲೆಂಡ್ ಪರ 93 ಟಿ20 ಪಂದ್ಯಗಳನ್ನಾಡಿರುವ ಕೇನ್ ವಿಲಿಯಮ್ಸನ್ 90 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 18 ಅರ್ಧಶತಕಗಳೊಂದಿಗೆ ಒಟ್ಟು 2575 ರನ್ ಕಲೆಹಾಕಿದ್ದಾರೆ. ಇದರ ನಡುವೆ ವಿಲಿಯಮ್ಸನ್ ಬ್ಯಾಟ್​ನಿಂದ 58 ಸಿಕ್ಸ್ ಹಾಗೂ 245 ಫೋರ್​ಗಳು ಮೂಡಿಬಂದಿದ್ದವು. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

5 / 5

Published On - 8:23 am, Sun, 2 November 25

Follow Us
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ವಾರಾಣಸಿಯ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಪ್ರಧಾನಿ
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಡಿಕೆಶಿ ಬಣಕ್ಕೆ ಮೇ ಕ್ರಾಂತಿ ಕನಸು: ಸಿದ್ದರಾಮಯ್ಯ ಬಣ ಅಹಿಂದ ಕಾರ್ಡ್​ ಪ್ಲೇ!
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಹಾಸನ ಹಲವು ಅವಾಂತರ ಸೃಷ್ಟಿಸಿದ ಮಳೆ: ಧರೆಗುರುಳಿದ ವಿದ್ಯುತ್​ ಕಂಬ, ಮರಗಳು
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
ಐವಿ ಡ್ರಿಪ್​ ಹಾಕಿಸಿಕೊಂಡು ಕೆಲಸಕ್ಕೆ ಹಾಜರಾದ ಅಂಗನವಾಡಿ ಕಾರ್ಯಕರ್ತೆ
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
‘ಮಗನೇ ಈಗಲೂ ನನಗೆ ಸಿನಿಮಾ ಅರ್ಥ ಆಗಿಲ್ಲ ಅಂತಿದ್ರು’; ವಿನೋದ್
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ದೇವಾಲಯದಲ್ಲಿ ಪ್ರಸಾದ ಬೇಡ ಅನ್ನೋದು ಘೋರ ಪಾಪ! ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
ಇಂದು ಈ ರಾಶಿಯವರಿಗೆ ಪ್ರೇಮ ವ್ಯವಹಾರಗಳಿಗೆ ಮನ್ನಣೆ
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
‘ಯಾವುದೇ ಗಿಮಿಕ್ ಇಲ್ಲದೇ ಗೆದ್ದ ಸಿನಿಮಾ ನಮ್ಮದು’: ನಟ ವಿನೋದ್ ಪ್ರಭಾಕರ್
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕುಲ್ಗಾಮ್​ನಲ್ಲಿ ಭೀಕರ ಅಪಘಾತ; ಕಾರು ಗುದ್ದಿದ ರಭಸಕ್ಕೆ ವಿದ್ಯಾರ್ಥಿನಿ ಸಾವು
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ
ಕಾಶಿ-ಪುಣೆ ಅಮೃತ್ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ