AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್ ನಿವೃತ್ತಿ ಘೋಷಿಸಿದ ಕೇನ್ ವಿಲಿಯಮ್ಸನ್

Kane Williamson retirement: ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ 2026ರ ಟಿ20 ವಿಶ್ವಕಪ್​​ ಆರಂಭಕ್ಕೂ ಮುನ್ನವೇ ನ್ಯೂಝಿಲೆಂಡ್ ತಂಡದ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ನಿವೃತ್ತಿ ಘೋಷಿಸಿದ್ದಾರೆ. ಹೀಗಾಗಿ ಫೆಬ್ರವರಿಯಲ್ಲಿ ನಡೆಯಲಿರುವ ಚುಟುಕು ವಿಶ್ವಕಪ್​ನಲ್ಲಿ ಕಿವೀಸ್ ಪಡೆಯಲ್ಲಿ ಕೇನ್ ಕಾಣಿಸಿಕೊಳ್ಳುವುದಿಲ್ಲ.

ಝಾಹಿರ್ ಯೂಸುಫ್
|

Updated on:Nov 02, 2025 | 8:25 AM

Share
ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ (Kane Williamson) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ. 

ನ್ಯೂಝಿಲೆಂಡ್ ತಂಡದ ಸ್ಟಾರ್ ಬ್ಯಾಟರ್ ಕೇನ್ ವಿಲಿಯಮ್ಸನ್ (Kane Williamson) ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​​ಗೆ ವಿದಾಯ ಹೇಳಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿ ಮುಕ್ತಾಯದ ಬೆನ್ನಲ್ಲೇ ವಿಲಿಯಮ್ಸನ್ ತನ್ನ ನಿವೃತ್ತಿಯನ್ನು ಘೋಷಿಸಿಕೊಂಡಿದ್ದಾರೆ. 

1 / 5
ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನಲ್ಲಿ ನ್ಯೂಝಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 

ಹೀಗಾಗಿ ಫೆಬ್ರವರಿಯಲ್ಲಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿರುವ ಟಿ20 ವಿಶ್ವಕಪ್​​ನಲ್ಲಿ ನ್ಯೂಝಿಲೆಂಡ್ ಪರ ಕೇನ್ ವಿಲಿಯಮ್ಸನ್ ಕಾಣಿಸಿಕೊಳ್ಳುವುದಿಲ್ಲ. ಇದಾಗ್ಯೂ ಅವರು ಏಕದಿನ ಹಾಗೂ ಟೆಸ್ಟ್ ಕ್ರಿಕೆಟ್​ನಲ್ಲಿ ಮುಂದುವರೆಯುವುದಾಗಿ ತಿಳಿಸಿದ್ದಾರೆ. 

2 / 5
ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್​​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

ಕಳೆದ 15 ವರ್ಷಗಳಿಂದ ನ್ಯೂಝಿಲೆಂಡ್ ಪರ ಕಣಕ್ಕಿಳಿಯುತ್ತಿದ್ದೇನೆ. ಇನ್ನು ಕುಟುಂಬದೊಂದಿಗೆ ಸ್ವಲ್ಪ ಸಮಯ ಕಳೆಯಬೇಕಿದೆ. ಹೀಗಾಗಿ ಟಿ20 ಕ್ರಿಕೆಟ್​​ನಿಂದ ನಿವೃತ್ತನಾಗಲು ನಿರ್ಧರಿಸಿದ್ದೇನೆ. ಅಲ್ಲದೆ ಟೆಸ್ಟ್​ ಕ್ರಿಕೆಟ್​ನಲ್ಲಿ ಒಂದಷ್ಟು ಕಾಲ ಮುಂದುವರೆಯುವ ಇರಾದೆಯಲ್ಲಿರುವುದಾಗಿ ಕೇನ್ ವಿಲಿಯಮ್ಸನ್ ತಿಳಿಸಿದ್ದಾರೆ.

3 / 5
ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಝಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್​​ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​​ನೆಸ್​ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

ಕೇನ್ ವಿಲಿಯಮ್ಸನ್ ಕೊನೆಯ ಬಾರಿಗೆ ನ್ಯೂಝಿಲೆಂಡ್ ಪರ ಟಿ20 ಪಂದ್ಯವಾಡಿದ್ದು 2024ರ ಟಿ20 ವಿಶ್ವಕಪ್​​ನಲ್ಲಿ. ಆ ಬಳಿಕ ಗಾಯಗೊಂಡಿದ್ದ ಅವರು ಯಾವುದೇ ಸರಣಿಯಲ್ಲಿ ಕಾಣಿಸಿಕೊಂಡಿರಲಿಲ್ಲ. ಇದೀಗ ಸಂಪೂರ್ಣ ಫಿಟ್​​ನೆಸ್​ನೊಂದಿಗೆ ತಂಡಕ್ಕೆ ಮರಳಿರುವ ಅವರು ದಿಢೀರ್ ನಿವೃತ್ತಿ ಘೋಷಿಸಿ ಅಚ್ಚರಿ ಮೂಡಿಸಿದ್ದಾರೆ.

4 / 5
ಇನ್ನು ನ್ಯೂಝಿಲೆಂಡ್ ಪರ 93 ಟಿ20 ಪಂದ್ಯಗಳನ್ನಾಡಿರುವ ಕೇನ್ ವಿಲಿಯಮ್ಸನ್ 90 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 18 ಅರ್ಧಶತಕಗಳೊಂದಿಗೆ ಒಟ್ಟು 2575 ರನ್ ಕಲೆಹಾಕಿದ್ದಾರೆ. ಇದರ ನಡುವೆ ವಿಲಿಯಮ್ಸನ್ ಬ್ಯಾಟ್​ನಿಂದ 58 ಸಿಕ್ಸ್ ಹಾಗೂ 245 ಫೋರ್​ಗಳು ಮೂಡಿಬಂದಿದ್ದವು. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

ಇನ್ನು ನ್ಯೂಝಿಲೆಂಡ್ ಪರ 93 ಟಿ20 ಪಂದ್ಯಗಳನ್ನಾಡಿರುವ ಕೇನ್ ವಿಲಿಯಮ್ಸನ್ 90 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 18 ಅರ್ಧಶತಕಗಳೊಂದಿಗೆ ಒಟ್ಟು 2575 ರನ್ ಕಲೆಹಾಕಿದ್ದಾರೆ. ಇದರ ನಡುವೆ ವಿಲಿಯಮ್ಸನ್ ಬ್ಯಾಟ್​ನಿಂದ 58 ಸಿಕ್ಸ್ ಹಾಗೂ 245 ಫೋರ್​ಗಳು ಮೂಡಿಬಂದಿದ್ದವು. ಇದೀಗ ತಮ್ಮ 35ನೇ ವಯಸ್ಸಿನಲ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಗುಡ್ ಬೈ ಹೇಳಿದ್ದಾರೆ.

5 / 5

Published On - 8:23 am, Sun, 2 November 25

Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?