AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಭಾರತ- ಲಂಕಾ ಟೆಸ್ಟ್ ಪಂದ್ಯ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

IND vs SL: ಹೈವೋಲ್ಟೆಜ್ ಮ್ಯಾಚ್ ನೋಡಲು ಕನಾರ್ಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಅವರೊಂದಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಕಂಡುಬಂದರು.

TV9 Web
| Edited By: |

Updated on: Mar 12, 2022 | 9:21 PM

Share
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ ಪ್ರಾರಂಭವಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್​ಫುಲ್ ಕ್ರೀಡಾಂಗಣದಲ್ಲಿ ಹಗಲು- ರಾತ್ರಿ ಕದನ ನಡೆಯುತ್ತಿದೆ. ಈಗಾಗಲೇ ಮೊದಲ ಇನ್ನಿಂಗ್ಸ್ ಮುಗಿಸಿರುವ ಭಾರತ 252 ರನ್​ಗಳಿಗೆ ಆಲ್​ಔಟ್ ಆಯಿತು. ಈ ಹೈವೋಲ್ಟೆಜ್ ಮ್ಯಾಚ್ ನೋಡಲು ಕನಾರ್ಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಅವರೊಂದಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಕಂಡುಬಂದರು.

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ ಪ್ರಾರಂಭವಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್​ಫುಲ್ ಕ್ರೀಡಾಂಗಣದಲ್ಲಿ ಹಗಲು- ರಾತ್ರಿ ಕದನ ನಡೆಯುತ್ತಿದೆ. ಈಗಾಗಲೇ ಮೊದಲ ಇನ್ನಿಂಗ್ಸ್ ಮುಗಿಸಿರುವ ಭಾರತ 252 ರನ್​ಗಳಿಗೆ ಆಲ್​ಔಟ್ ಆಯಿತು. ಈ ಹೈವೋಲ್ಟೆಜ್ ಮ್ಯಾಚ್ ನೋಡಲು ಕನಾರ್ಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಅವರೊಂದಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಕಂಡುಬಂದರು.

1 / 4
ಮೊಹಾಲಿ ಟೆಸ್ಟ್​ನಲ್ಲಿ ಅಶ್ವಿನ್ ಕಪಿಲ್ ದೇವ್ ದಾಖಲೆ ಮುರಿದಿದ್ದರು. ಕಪಿಲ್ ದೇವ್ ಟೆಸ್ಟ್​ ಕ್ರಿಕೆಟ್​ನಲ್ಲಿ 434 ವಿಕೆಟ್ ತೆಗೆದ ಸಾಧನೆ ಮಾಡಿದ್ದರು. ಅಶ್ವಿನ್ ಯಶಸ್ಸಿನಿಂದ ತುಂಬಾ ಸಂತೋಷಗೊಂಡಿದ್ದ ಕಪಿಲ್, ಅಶ್ವಿನ್ 500 ವಿಕೆಟ್ ಪಡೆಯುವ ಗುರಿಯನ್ನು ಹೊಂದಬೇಕೆಂದು ಹಾರೈಸಿದ್ದರು.

ಮೊಹಾಲಿ ಟೆಸ್ಟ್​ನಲ್ಲಿ ಅಶ್ವಿನ್ ಕಪಿಲ್ ದೇವ್ ದಾಖಲೆ ಮುರಿದಿದ್ದರು. ಕಪಿಲ್ ದೇವ್ ಟೆಸ್ಟ್​ ಕ್ರಿಕೆಟ್​ನಲ್ಲಿ 434 ವಿಕೆಟ್ ತೆಗೆದ ಸಾಧನೆ ಮಾಡಿದ್ದರು. ಅಶ್ವಿನ್ ಯಶಸ್ಸಿನಿಂದ ತುಂಬಾ ಸಂತೋಷಗೊಂಡಿದ್ದ ಕಪಿಲ್, ಅಶ್ವಿನ್ 500 ವಿಕೆಟ್ ಪಡೆಯುವ ಗುರಿಯನ್ನು ಹೊಂದಬೇಕೆಂದು ಹಾರೈಸಿದ್ದರು.

2 / 4
ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಭಾರತ- ಲಂಕಾ ಟೆಸ್ಟ್ ಪಂದ್ಯ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಅದರಲ್ಲೂ 4 ವರ್ಷಗಳ ಬಳಿಕ ಟೆಸ್ಟ್‌ ಪಂದ್ಯದ ಆತಿಥ್ಯ ಲಭಿಸಿರುವುದರಿಂದ ಕ್ರಿಕೆಟ್‌ ಫ್ಯಾನ್ಸ್‌ ಫುಲ್ ಜೋಶ್‌ನಲ್ಲಿದ್ದಾರೆ. ಕೊರೊನಾ ಹಾವಳಿ ಹತೋಟಿಗೆ ಬಂದಿರುವುದರಿಂದ ಸ್ಟೇಡಿಯಂ ಪೂರ್ಣ ಪ್ರಮಾಣದಲ್ಲಿ ವೀಕ್ಷಕರಿಗೆ ತೆರೆಯಲ್ಪಡುವುದು ಈ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಹಿನ್ನೆಲೆ ಒಂದು ವಾರದಿಂದ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೈದಾನದ ಹಲವು ಕಡೆ ಗೋಪುರಗಳನ್ನು ನಿರ್ಮಿಸಲಾಗಿದೆ. ಪಂದ್ಯದ 5 ದಿನ ಭದ್ರತೆಗೆ 700 ಸಿಬ್ಬಂದಿಯನ್ನ ನಿಯೋಜಿಸಲಾಗಿದೆ,. ಅಹಿತಕರ ಘಟನೆ ನಡೆಯದಂತೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

3 / 4
ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಭಾರತ- ಲಂಕಾ ಟೆಸ್ಟ್ ಪಂದ್ಯ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಹಾಗೂ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಿದ್ದವಾಗಿದೆ. ಈ ಪಂದ್ಯ ಡೇ- ನೈಟ್ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ ಪಂದ್ಯ ಮುಗಿದ ನಂತರ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುವುದಂತ್ತೂ ಖಚಿತ. ಹೀಗಾಗಿ ಮುಂಜಾಗೃತ ಕ್ರಮವಾಗಿ ಕೆ.ಎಸ್.ಸಿ.ಎ. ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೆರಲಾಗಿದೆ. ಅದರಲ್ಲೂ ಕ್ವಿನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೂ ಹಾಗೂ ಎಂ.ಜಿ ರಸ್ತೆಯಲ್ಲಿ ಕ್ಲೀನ್ಸ್ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್​ವರೆಗೂ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಪಂದ್ಯ ನಡೆಯುವ 5 ದಿನಗಳವರೆಗೂ ವಾಹನ ಸಂಚಾರರು ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಡೆಸದಿರುವುದೇ ಸೂಕ್ತವಾಗಿದೆ.

4 / 4
Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ