- Kannada News Photo gallery Cricket photos Karnataka CM Basavaraja Bommai watches IND vs SL Test cricket in Bangalore with Kapil Dev
ಕ್ರಿಕೆಟ್ ಲೆಜೆಂಡ್ ಕಪಿಲ್ ದೇವ್ ಜೊತೆ ಭಾರತ- ಲಂಕಾ ಟೆಸ್ಟ್ ಪಂದ್ಯ ವೀಕ್ಷಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
IND vs SL: ಹೈವೋಲ್ಟೆಜ್ ಮ್ಯಾಚ್ ನೋಡಲು ಕನಾರ್ಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಅವರೊಂದಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಕಂಡುಬಂದರು.
Updated on: Mar 12, 2022 | 9:21 PM

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇಂದಿನಿಂದ ಪಿಂಕ್ ಬಾಲ್ ಟೆಸ್ಟ್ ಪ್ರಾರಂಭವಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಆಸನ ಸಾಮರ್ಥ್ಯವನ್ನು ಶೇ. 50 ರಿಂದ 100ರಷ್ಟು ವೀಕ್ಷಕರಿಗೆ ಅನುಮತಿ ನೀಡಿದೆ. ಹೀಗಾಗಿ ಹೌಸ್ಫುಲ್ ಕ್ರೀಡಾಂಗಣದಲ್ಲಿ ಹಗಲು- ರಾತ್ರಿ ಕದನ ನಡೆಯುತ್ತಿದೆ. ಈಗಾಗಲೇ ಮೊದಲ ಇನ್ನಿಂಗ್ಸ್ ಮುಗಿಸಿರುವ ಭಾರತ 252 ರನ್ಗಳಿಗೆ ಆಲ್ಔಟ್ ಆಯಿತು. ಈ ಹೈವೋಲ್ಟೆಜ್ ಮ್ಯಾಚ್ ನೋಡಲು ಕನಾರ್ಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಜರಿದ್ದರು. ಅವರೊಂದಿಗೆ ಟೀಂ ಇಂಡಿಯಾದ ಮಾಜಿ ಕ್ರಿಕೆಟ್ ದಂತಕಥೆ ಕಪಿಲ್ ದೇವ್ ಕೂಡ ಕಂಡುಬಂದರು.

ಮೊಹಾಲಿ ಟೆಸ್ಟ್ನಲ್ಲಿ ಅಶ್ವಿನ್ ಕಪಿಲ್ ದೇವ್ ದಾಖಲೆ ಮುರಿದಿದ್ದರು. ಕಪಿಲ್ ದೇವ್ ಟೆಸ್ಟ್ ಕ್ರಿಕೆಟ್ನಲ್ಲಿ 434 ವಿಕೆಟ್ ತೆಗೆದ ಸಾಧನೆ ಮಾಡಿದ್ದರು. ಅಶ್ವಿನ್ ಯಶಸ್ಸಿನಿಂದ ತುಂಬಾ ಸಂತೋಷಗೊಂಡಿದ್ದ ಕಪಿಲ್, ಅಶ್ವಿನ್ 500 ವಿಕೆಟ್ ಪಡೆಯುವ ಗುರಿಯನ್ನು ಹೊಂದಬೇಕೆಂದು ಹಾರೈಸಿದ್ದರು.

ಬೆಂಗಳೂರಿನಲ್ಲಿ 2 ವರ್ಷಗಳ ಬಳಿಕ ಅಂತರರಾಷ್ಟ್ರೀಯ ಪಂದ್ಯ ನಡೆಯುತ್ತಿದ್ದು, ಅದರಲ್ಲೂ 4 ವರ್ಷಗಳ ಬಳಿಕ ಟೆಸ್ಟ್ ಪಂದ್ಯದ ಆತಿಥ್ಯ ಲಭಿಸಿರುವುದರಿಂದ ಕ್ರಿಕೆಟ್ ಫ್ಯಾನ್ಸ್ ಫುಲ್ ಜೋಶ್ನಲ್ಲಿದ್ದಾರೆ. ಕೊರೊನಾ ಹಾವಳಿ ಹತೋಟಿಗೆ ಬಂದಿರುವುದರಿಂದ ಸ್ಟೇಡಿಯಂ ಪೂರ್ಣ ಪ್ರಮಾಣದಲ್ಲಿ ವೀಕ್ಷಕರಿಗೆ ತೆರೆಯಲ್ಪಡುವುದು ಈ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಹಿನ್ನೆಲೆ ಒಂದು ವಾರದಿಂದ ಭದ್ರತೆಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಮೈದಾನದ ಹಲವು ಕಡೆ ಗೋಪುರಗಳನ್ನು ನಿರ್ಮಿಸಲಾಗಿದೆ. ಪಂದ್ಯದ 5 ದಿನ ಭದ್ರತೆಗೆ 700 ಸಿಬ್ಬಂದಿಯನ್ನ ನಿಯೋಜಿಸಲಾಗಿದೆ,. ಅಹಿತಕರ ಘಟನೆ ನಡೆಯದಂತೆ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ

ಭಾರತ ಮತ್ತು ಶ್ರೀಲಂಕಾ ನಡುವಿನ 2ನೇ ಹಾಗೂ ಹಗಲು ರಾತ್ರಿ ಟೆಸ್ಟ್ ಪಂದ್ಯಕ್ಕೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಸಿದ್ದವಾಗಿದೆ. ಈ ಪಂದ್ಯ ಡೇ- ನೈಟ್ ಟೆಸ್ಟ್ ಪಂದ್ಯವಾಗಿದೆ. ಅಲ್ಲದೆ ಪಂದ್ಯ ಮುಗಿದ ನಂತರ ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಟ್ರಾಫಿಕ್ ಸಮಸ್ಯೆ ಉಂಟಾಗುವುದಂತ್ತೂ ಖಚಿತ. ಹೀಗಾಗಿ ಮುಂಜಾಗೃತ ಕ್ರಮವಾಗಿ ಕೆ.ಎಸ್.ಸಿ.ಎ. ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಿರ್ಬಂಧ ಹೆರಲಾಗಿದೆ. ಅದರಲ್ಲೂ ಕ್ವಿನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೂ ಹಾಗೂ ಎಂ.ಜಿ ರಸ್ತೆಯಲ್ಲಿ ಕ್ಲೀನ್ಸ್ ವೃತ್ತದಿಂದ ಕಾವೇರಿ ಎಂಪೋರಿಯಂ ಜಂಕ್ಷನ್ವರೆಗೂ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ. ಜೊತೆಗೆ ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ ಯಾವುದೇ ವಾಹನಗಳ ಓಡಾಟಕ್ಕೆ ಅನುಮತಿ ನಿರಾಕರಿಸಲಾಗಿದೆ. ಹೀಗಾಗಿ ಪಂದ್ಯ ನಡೆಯುವ 5 ದಿನಗಳವರೆಗೂ ವಾಹನ ಸಂಚಾರರು ಸ್ಟೇಡಿಯಂ ಸುತ್ತಮುತ್ತಲಿನ ರಸ್ತೆಗಳಲ್ಲಿ ಸಂಚಾರ ನಡೆಸದಿರುವುದೇ ಸೂಕ್ತವಾಗಿದೆ.









