ದೇಶೀಯ ಅಂಗಳದಲ್ಲಿ ಇತಿಹಾಸ ನಿರ್ಮಿಸಿದ ಕರುಣ್ ನಾಯರ್

Karun Nair Records: ವಿಜಯ ಹಝಾರೆ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು 50 ಓವರ್​​ಗಳಲ್ಲಿ 6 ವಿಕೆಟ್ ಕಳೆದುಕೊಂಡು 348 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕರುಣ್ ನಾಯರ್ ನೇತೃತ್ವದ ವಿದರ್ಭ ತಂಡವು 312 ರನ್​ಗಳಿಸಲಷ್ಟೇ ಶಕ್ತವಾಗಿದೆ. ಈ ಸೋಲಿನ ಹೊರತಾಗಿಯೂ ಕರುಣ್ ನಾಯರ್ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 19, 2025 | 9:24 AM

ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟ್ರೋಫಿಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಮುಂದಾಳತ್ವದ ವಿದರ್ಭ ತಂಡವನ್ನು ಮಣಿಸಿ ಕರ್ನಾಟಕ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸೋಲಿನ ಹೊರತಾಗಿಯೂ ಇಡೀ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕರುಣ್ ನಾಯರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟ್ರೋಫಿಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಮುಂದಾಳತ್ವದ ವಿದರ್ಭ ತಂಡವನ್ನು ಮಣಿಸಿ ಕರ್ನಾಟಕ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸೋಲಿನ ಹೊರತಾಗಿಯೂ ಇಡೀ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕರುಣ್ ನಾಯರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

1 / 5
ವಿಶೇಷ ಎಂದರೆ ಈ ಭರ್ಜರಿ ಪ್ರದರ್ಶನದೊಂದಿಗೆ ಕರುಣ್ ನಾಯರ್ ದೇಶೀಯ ಅಂಗಳದಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ ನಾಯಕನಾಗಿ ಬರೋಬ್ಬರಿ 779 ರನ್​ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ವಿಜಯ ಹಝಾರೆ ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ದಾಖಲೆ ಇದೀಗ ಕರುಣ್ ಪಾಲಾಗಿದೆ.

ವಿಶೇಷ ಎಂದರೆ ಈ ಭರ್ಜರಿ ಪ್ರದರ್ಶನದೊಂದಿಗೆ ಕರುಣ್ ನಾಯರ್ ದೇಶೀಯ ಅಂಗಳದಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ ನಾಯಕನಾಗಿ ಬರೋಬ್ಬರಿ 779 ರನ್​ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ವಿಜಯ ಹಝಾರೆ ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ದಾಖಲೆ ಇದೀಗ ಕರುಣ್ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಮಹಾರಾಷ್ಟ್ರ ತಂಡದ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. 2022ರ ಸೀಸನ್​ನಲ್ಲಿ ರುತುರಾಜ್ 5 ಪಂದ್ಯಗಳಲ್ಲಿ 4 ಶತಕ ಸಿಡಿಸಿ ಒಟ್ಟು 660	 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಕರುಣ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಮಹಾರಾಷ್ಟ್ರ ತಂಡದ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. 2022ರ ಸೀಸನ್​ನಲ್ಲಿ ರುತುರಾಜ್ 5 ಪಂದ್ಯಗಳಲ್ಲಿ 4 ಶತಕ ಸಿಡಿಸಿ ಒಟ್ಟು 660 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಕರುಣ್ ಅಳಿಸಿ ಹಾಕಿದ್ದಾರೆ.

3 / 5
ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡದ ನಾಯಕರಾಗಿ ಕಾಣಿಸಿಕೊಂಡ ಕರುಣ್ ನಾಯರ್ 8 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 5 ಶತಕ ಸಿಡಿಸುವ ಮೂಲಕ ಒಟ್ಟು 779 ರನ್ ಕಲೆಹಾಕಿದ್ದಾರೆ. ಈ ರನ್​ ರಾಶಿಯೊಂದಿಗೆ ವಿಜಯ ಹಝಾರೆ ಟೂರ್ನಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡದ ನಾಯಕರಾಗಿ ಕಾಣಿಸಿಕೊಂಡ ಕರುಣ್ ನಾಯರ್ 8 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 5 ಶತಕ ಸಿಡಿಸುವ ಮೂಲಕ ಒಟ್ಟು 779 ರನ್ ಕಲೆಹಾಕಿದ್ದಾರೆ. ಈ ರನ್​ ರಾಶಿಯೊಂದಿಗೆ ವಿಜಯ ಹಝಾರೆ ಟೂರ್ನಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 5
ಇಂತಹದೊಂದು ಅಮೋಘ ಪ್ರದರ್ಶನದೊಂದಿಗೆ ಕರುಣ್ ನಾಯರ್ ವಿದರ್ಭ ತಂಡವನ್ನು ಫೈನಲ್​ಗೇರಿಸಿದ್ದರು. ಆದರೆ ಅಂತಿಮ ಪಂದ್ಯದಲ್ಲಿ ಕರುಣ್ ಕೇವಲ 27 ರನ್​ಗಳಿಸಿ ಔಟಾಗಿದ್ದು ವಿದರ್ಭ ಪಾಲಿಗೆ ಮುಳುವಾಯಿತು. ಇದರ ಸಂಪೂರ್ಣ ಲಾಭ ಪಡೆದ ಕರ್ನಾಟಕ ತಂಡವು 36 ರನ್​ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇಂತಹದೊಂದು ಅಮೋಘ ಪ್ರದರ್ಶನದೊಂದಿಗೆ ಕರುಣ್ ನಾಯರ್ ವಿದರ್ಭ ತಂಡವನ್ನು ಫೈನಲ್​ಗೇರಿಸಿದ್ದರು. ಆದರೆ ಅಂತಿಮ ಪಂದ್ಯದಲ್ಲಿ ಕರುಣ್ ಕೇವಲ 27 ರನ್​ಗಳಿಸಿ ಔಟಾಗಿದ್ದು ವಿದರ್ಭ ಪಾಲಿಗೆ ಮುಳುವಾಯಿತು. ಇದರ ಸಂಪೂರ್ಣ ಲಾಭ ಪಡೆದ ಕರ್ನಾಟಕ ತಂಡವು 36 ರನ್​ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

5 / 5
Follow us
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ಯಾದಗಿರಿಯಲ್ಲಿ ಸಾರಿಗೆ ಬಸ್​ ಪಲ್ಟಿ: 15 ಮಂದಿಗೆ ಗಾಯ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ದೆಹಲಿ ಚುನಾವಣಾ ಫಲಿತಾಂಶ ಬೇರೆ ರಾಜ್ಯಗಳ ಮೇಲೆ ಪರಿಣಾಮ ಬೀರಲ್ಲ; ಸಚಿವ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಧಾರವಾಡ: ಶ್ರಮಿಕರ, ಕಾರ್ಮಿಕರ ಬಡಾವಣೆಗಳಲ್ಲಿ ಪೇಜಾವರ ಶ್ರೀಗಳ ಪಾದಯಾತ್ರೆ
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿ 50 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದರೂ ಅತಿಶಿ ಆಶಾಭಾವನೆ!
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಬಿಜೆಪಿಗೆ ಮುನ್ನಡೆ, ದೆಹಲಿಯಲ್ಲಿ ಕಾರ್ಯಕರ್ತರಿಂದ ಸಂಭ್ರಮಾಚರಣ
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಯಾವ ಕಾರಣಕ್ಕೂ ಪ್ರತಿಮೆಯನ್ನು ತೆರವುಗೊಳಿಸಲ್ಲ ಎಂದ ಸ್ಥಳೀಯರು
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
ಮೈಸೂರು: ತ್ರಿವೇಣಿ ಸಂಗಮದಲ್ಲಿ ಫೆಬ್ರವರಿ 10ರಿಂದ ಮೂರು ದಿನ ಕುಂಭಮೇಳ
‘ಇದೊಂದು ಬಾರಿ ಕ್ಷಮಿಸಿಬಿಡಿ’; ಅಭಿಮಾನಿಗಳಿಗೆ ದರ್ಶನ್ ವಿಡಿಯೋ ಸಂದೇಶ
‘ಇದೊಂದು ಬಾರಿ ಕ್ಷಮಿಸಿಬಿಡಿ’; ಅಭಿಮಾನಿಗಳಿಗೆ ದರ್ಶನ್ ವಿಡಿಯೋ ಸಂದೇಶ
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
ಚಾಂಪಿಯನ್ಸ್ ಟ್ರೋಫಿ ಜೆರ್ಸಿ ಅನಾವರಣಗೊಳಿಸಿದ ಪಾಕಿಸ್ತಾನ್
Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ
Delhi Result Live: ದೆಹಲಿ ವಿಧಾನಸಭಾ ಚುನಾವಣೆ ಫಲಿತಾಂಶ ನೇರ ಪ್ರಸಾರ