AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೇಶೀಯ ಅಂಗಳದಲ್ಲಿ ಇತಿಹಾಸ ನಿರ್ಮಿಸಿದ ಕರುಣ್ ನಾಯರ್

Karun Nair Records: ವಿಜಯ ಹಝಾರೆ ಟೂರ್ನಿಯ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡವು 50 ಓವರ್​​ಗಳಲ್ಲಿ 6 ವಿಕೆಟ್ ಕಳೆದುಕೊಂಡು 348 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಕರುಣ್ ನಾಯರ್ ನೇತೃತ್ವದ ವಿದರ್ಭ ತಂಡವು 312 ರನ್​ಗಳಿಸಲಷ್ಟೇ ಶಕ್ತವಾಗಿದೆ. ಈ ಸೋಲಿನ ಹೊರತಾಗಿಯೂ ಕರುಣ್ ನಾಯರ್ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 19, 2025 | 9:24 AM

Share
ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟ್ರೋಫಿಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಮುಂದಾಳತ್ವದ ವಿದರ್ಭ ತಂಡವನ್ನು ಮಣಿಸಿ ಕರ್ನಾಟಕ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸೋಲಿನ ಹೊರತಾಗಿಯೂ ಇಡೀ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕರುಣ್ ನಾಯರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ದೇಶೀಯ ಅಂಗಳದ ಏಕದಿನ ಟೂರ್ನಿ ವಿಜಯ ಹಝಾರೆ ಟ್ರೋಫಿಗೆ ತೆರೆ ಬಿದ್ದಿದೆ. ಫೈನಲ್ ಪಂದ್ಯದಲ್ಲಿ ಕನ್ನಡಿಗ ಕರುಣ್ ನಾಯರ್ ಮುಂದಾಳತ್ವದ ವಿದರ್ಭ ತಂಡವನ್ನು ಮಣಿಸಿ ಕರ್ನಾಟಕ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಸೋಲಿನ ಹೊರತಾಗಿಯೂ ಇಡೀ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ ಕರುಣ್ ನಾಯರ್ ಸರಣಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

1 / 5
ವಿಶೇಷ ಎಂದರೆ ಈ ಭರ್ಜರಿ ಪ್ರದರ್ಶನದೊಂದಿಗೆ ಕರುಣ್ ನಾಯರ್ ದೇಶೀಯ ಅಂಗಳದಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ ನಾಯಕನಾಗಿ ಬರೋಬ್ಬರಿ 779 ರನ್​ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ವಿಜಯ ಹಝಾರೆ ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ದಾಖಲೆ ಇದೀಗ ಕರುಣ್ ಪಾಲಾಗಿದೆ.

ವಿಶೇಷ ಎಂದರೆ ಈ ಭರ್ಜರಿ ಪ್ರದರ್ಶನದೊಂದಿಗೆ ಕರುಣ್ ನಾಯರ್ ದೇಶೀಯ ಅಂಗಳದಲ್ಲಿ ಹೊಸ ಇತಿಹಾಸವನ್ನು ಸಹ ನಿರ್ಮಿಸಿದ್ದಾರೆ. ಅದು ಕೂಡ ನಾಯಕನಾಗಿ ಬರೋಬ್ಬರಿ 779 ರನ್​ಗಳನ್ನು ಕಲೆಹಾಕುವ ಮೂಲಕ ಎಂಬುದು ವಿಶೇಷ. ಅಂದರೆ ವಿಜಯ ಹಝಾರೆ ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ದಾಖಲೆ ಇದೀಗ ಕರುಣ್ ಪಾಲಾಗಿದೆ.

2 / 5
ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಮಹಾರಾಷ್ಟ್ರ ತಂಡದ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. 2022ರ ಸೀಸನ್​ನಲ್ಲಿ ರುತುರಾಜ್ 5 ಪಂದ್ಯಗಳಲ್ಲಿ 4 ಶತಕ ಸಿಡಿಸಿ ಒಟ್ಟು 660	 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಕರುಣ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಇಂತಹದೊಂದು ವಿಶೇಷ ದಾಖಲೆ ಮಹಾರಾಷ್ಟ್ರ ತಂಡದ ಕ್ಯಾಪ್ಟನ್ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. 2022ರ ಸೀಸನ್​ನಲ್ಲಿ ರುತುರಾಜ್ 5 ಪಂದ್ಯಗಳಲ್ಲಿ 4 ಶತಕ ಸಿಡಿಸಿ ಒಟ್ಟು 660 ರನ್ ಕಲೆಹಾಕಿ ಈ ದಾಖಲೆ ನಿರ್ಮಿಸಿದ್ದರು. ಇದೀಗ ಈ ದಾಖಲೆಯನ್ನು ಕರುಣ್ ಅಳಿಸಿ ಹಾಕಿದ್ದಾರೆ.

3 / 5
ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡದ ನಾಯಕರಾಗಿ ಕಾಣಿಸಿಕೊಂಡ ಕರುಣ್ ನಾಯರ್ 8 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 5 ಶತಕ ಸಿಡಿಸುವ ಮೂಲಕ ಒಟ್ಟು 779 ರನ್ ಕಲೆಹಾಕಿದ್ದಾರೆ. ಈ ರನ್​ ರಾಶಿಯೊಂದಿಗೆ ವಿಜಯ ಹಝಾರೆ ಟೂರ್ನಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ವಿದರ್ಭ ತಂಡದ ನಾಯಕರಾಗಿ ಕಾಣಿಸಿಕೊಂಡ ಕರುಣ್ ನಾಯರ್ 8 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 5 ಶತಕ ಸಿಡಿಸುವ ಮೂಲಕ ಒಟ್ಟು 779 ರನ್ ಕಲೆಹಾಕಿದ್ದಾರೆ. ಈ ರನ್​ ರಾಶಿಯೊಂದಿಗೆ ವಿಜಯ ಹಝಾರೆ ಟೂರ್ನಿಯ ಆವೃತ್ತಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ನಾಯಕ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

4 / 5
ಇಂತಹದೊಂದು ಅಮೋಘ ಪ್ರದರ್ಶನದೊಂದಿಗೆ ಕರುಣ್ ನಾಯರ್ ವಿದರ್ಭ ತಂಡವನ್ನು ಫೈನಲ್​ಗೇರಿಸಿದ್ದರು. ಆದರೆ ಅಂತಿಮ ಪಂದ್ಯದಲ್ಲಿ ಕರುಣ್ ಕೇವಲ 27 ರನ್​ಗಳಿಸಿ ಔಟಾಗಿದ್ದು ವಿದರ್ಭ ಪಾಲಿಗೆ ಮುಳುವಾಯಿತು. ಇದರ ಸಂಪೂರ್ಣ ಲಾಭ ಪಡೆದ ಕರ್ನಾಟಕ ತಂಡವು 36 ರನ್​ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಇಂತಹದೊಂದು ಅಮೋಘ ಪ್ರದರ್ಶನದೊಂದಿಗೆ ಕರುಣ್ ನಾಯರ್ ವಿದರ್ಭ ತಂಡವನ್ನು ಫೈನಲ್​ಗೇರಿಸಿದ್ದರು. ಆದರೆ ಅಂತಿಮ ಪಂದ್ಯದಲ್ಲಿ ಕರುಣ್ ಕೇವಲ 27 ರನ್​ಗಳಿಸಿ ಔಟಾಗಿದ್ದು ವಿದರ್ಭ ಪಾಲಿಗೆ ಮುಳುವಾಯಿತು. ಇದರ ಸಂಪೂರ್ಣ ಲಾಭ ಪಡೆದ ಕರ್ನಾಟಕ ತಂಡವು 36 ರನ್​ಗಳ ಜಯ ಸಾಧಿಸಿ ಚಾಂಪಿಯನ್ ಪಟ್ಟ ಅಲಂಕರಿಸಿದೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!