AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karun Nair: ಕರುಣ್ ನಾಯರ್ ಮೇಲೆ ಕರುಣೆ ತೋರದ ಬಿಸಿಸಿಐ

Karun Nair: ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಅತ್ಯಧಿಕ ರನ್ ಪೇರಿಸಿದ ಬ್ಯಾಟರ್​​ಗಳ ಪಟ್ಟಿಯಲ್ಲಿ ಕರುಣ್ ನಾಯರ್ ಅಗ್ರಸ್ಥಾನದಲ್ಲಿದ್ದಾರೆ. 7 ಪಂದ್ಯಗಳ ಮುಕ್ತಾಯದ ವೇಳೆಗೆ 6 ಇನಿಂಗ್ಸ್ ಆಡಿರುವ ಕರುಣ್ ನಾಯರ್ 5 ಭರ್ಜರಿ ಶತಕ ಹಾಗೂ 1 ಅರ್ಧಶತಕ ಸಿಡಿಸುವ ಮೂಲಕ ಒಟ್ಟು 752 ರನ್ ಕಲೆಹಾಕಿದ್ದಾರೆ.

ಝಾಹಿರ್ ಯೂಸುಫ್
|

Updated on:Jan 18, 2025 | 3:12 PM

Share
7 ಇನಿಂಗ್ಸ್​... 5 ಶತಕ, 1 ಅರ್ಧಶತಕ... 752	 ರನ್​​ಗಳು. ಇದು ಈ ಬಾರಿಯ ವಿಜಯ ಹಝಾರೆ ಏಕದಿನ ಟೂರ್ನಿಯಲ್ಲಿ ಕರುಣ್ ನಾಯರ್ ಕಲೆಹಾಕಿದ ಸ್ಕೋರ್. ಇದಾಗ್ಯೂ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಕರುಣ್ ನಾಯರ್​ಗೆ ಅವಕಾಶ ಸಿಕ್ಕಿಲ್ಲ.

7 ಇನಿಂಗ್ಸ್​... 5 ಶತಕ, 1 ಅರ್ಧಶತಕ... 752 ರನ್​​ಗಳು. ಇದು ಈ ಬಾರಿಯ ವಿಜಯ ಹಝಾರೆ ಏಕದಿನ ಟೂರ್ನಿಯಲ್ಲಿ ಕರುಣ್ ನಾಯರ್ ಕಲೆಹಾಕಿದ ಸ್ಕೋರ್. ಇದಾಗ್ಯೂ ಚಾಂಪಿಯನ್ಸ್ ಟ್ರೋಫಿಗಾಗಿ ಆಯ್ಕೆ ಮಾಡಲಾದ ಭಾರತ ತಂಡದಲ್ಲಿ ಕರುಣ್ ನಾಯರ್​ಗೆ ಅವಕಾಶ ಸಿಕ್ಕಿಲ್ಲ.

1 / 6
ಇದರೊಂದಿಗೆ 8 ವರ್ಷಗಳ ಬಳಿಕ ಕಂಬ್ಯಾಕ್ ಮಾಡುವ ಕರುಣ್ ನಾಯರ್ ಅವರ ಕನಸು ಕೂಡ ಕಮರಿದೆ. 2016 ರಲ್ಲಿ ಕರುಣ್ ನಾಯರ್ ಕೊನೆಯ ಬಾರಿ ಭಾರತ ಏಕದಿನ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದೇ ಅಚ್ಚರಿ.

ಇದರೊಂದಿಗೆ 8 ವರ್ಷಗಳ ಬಳಿಕ ಕಂಬ್ಯಾಕ್ ಮಾಡುವ ಕರುಣ್ ನಾಯರ್ ಅವರ ಕನಸು ಕೂಡ ಕಮರಿದೆ. 2016 ರಲ್ಲಿ ಕರುಣ್ ನಾಯರ್ ಕೊನೆಯ ಬಾರಿ ಭಾರತ ಏಕದಿನ ತಂಡವನ್ನು ಪ್ರತಿನಿಧಿಸಿದ್ದರು. ಇದೀಗ ಅದ್ಭುತ ಪ್ರದರ್ಶನ ನೀಡಿದ ಹೊರತಾಗಿಯೂ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ ಎಂಬುದೇ ಅಚ್ಚರಿ.

2 / 6
ಇದಕ್ಕೂ ಮುನ್ನ ಕರುಣ್ ನಾಯರ್ ಟೀಮ್ ಇಂಡಿಯಾ ಪರ 6 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ 7 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ತ್ರಿಶತಕ ಸಿಡಿಸುವ ಮೂಲಕ ಮಿಂಚಿದ್ದರು. ಆದರೆ ಈ ತ್ರಿಪಲ್ ಸೆಂಚುರಿ ಬಳಿಕ ವಿಫಲರಾದ ಕಾರಣ ಅವರನ್ನು ಆ ಬಳಿಕ ಭಾರತ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

ಇದಕ್ಕೂ ಮುನ್ನ ಕರುಣ್ ನಾಯರ್ ಟೀಮ್ ಇಂಡಿಯಾ ಪರ 6 ಟೆಸ್ಟ್ ಪಂದ್ಯಗಳನ್ನಾಡಿದ್ದರು. ಈ ವೇಳೆ 7 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದ ಅವರು ತ್ರಿಶತಕ ಸಿಡಿಸುವ ಮೂಲಕ ಮಿಂಚಿದ್ದರು. ಆದರೆ ಈ ತ್ರಿಪಲ್ ಸೆಂಚುರಿ ಬಳಿಕ ವಿಫಲರಾದ ಕಾರಣ ಅವರನ್ನು ಆ ಬಳಿಕ ಭಾರತ ತಂಡಕ್ಕೆ ಆಯ್ಕೆ ಮಾಡಿರಲಿಲ್ಲ.

3 / 6
ಇನ್ನು 2 ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಕರುಣ್ ನಾಯರ್ 46 ರನ್ ಬಾರಿಸಿದ್ದರು. ಅಲ್ಲದೆ 2017 ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರುಣ್​ಗೆ ಅ ಬಳಿಕ ಒಮ್ಮೆಯೂ ಟೀಮ್ ಇಂಡಿಯಾದ ಬಾಗಿ ತೆರೆದಿರಲಿಲ್ಲ.

ಇನ್ನು 2 ಏಕದಿನ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದ ಕರುಣ್ ನಾಯರ್ 46 ರನ್ ಬಾರಿಸಿದ್ದರು. ಅಲ್ಲದೆ 2017 ರಲ್ಲಿ ಕೊನೆಯ ಬಾರಿ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದ ಕರುಣ್​ಗೆ ಅ ಬಳಿಕ ಒಮ್ಮೆಯೂ ಟೀಮ್ ಇಂಡಿಯಾದ ಬಾಗಿ ತೆರೆದಿರಲಿಲ್ಲ.

4 / 6
ಆದರೆ ಕಳೆದೊಂದು ವರ್ಷದಿಂದ ಕೌಂಟಿ ಕ್ರಿಕೆಟ್ ಹಾಗೂ ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕರುಣ್ ನಾಯರ್ ಕಂಬ್ಯಾಕ್ ಸೂಚನೆ ನೀಡಿದ್ದರು. ಅದರಲ್ಲೂ ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಸತತ ಶತಕಗಳ ಮೂಲಕ ಅಬ್ಬರಿಸಿ ಟೀಮ್ ಇಂಡಿಯಾಗೆ ಪುನರಾಗಮನದ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಈ ಬಾರಿ ಕೂಡ ಕರುಣ್ ನಾಯರ್ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕರುಣೆ ತೋರಿಲ್ಲ ಎಂಬುದೇ ಸತ್ಯ.

ಆದರೆ ಕಳೆದೊಂದು ವರ್ಷದಿಂದ ಕೌಂಟಿ ಕ್ರಿಕೆಟ್ ಹಾಗೂ ದೇಶೀಯ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡುವ ಮೂಲಕ ಕರುಣ್ ನಾಯರ್ ಕಂಬ್ಯಾಕ್ ಸೂಚನೆ ನೀಡಿದ್ದರು. ಅದರಲ್ಲೂ ಈ ಬಾರಿಯ ವಿಜಯ ಹಝಾರೆ ಟೂರ್ನಿಯಲ್ಲಿ ಸತತ ಶತಕಗಳ ಮೂಲಕ ಅಬ್ಬರಿಸಿ ಟೀಮ್ ಇಂಡಿಯಾಗೆ ಪುನರಾಗಮನದ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಈ ಬಾರಿ ಕೂಡ ಕರುಣ್ ನಾಯರ್ ಮೇಲೆ ಬಿಸಿಸಿಐ ಆಯ್ಕೆ ಸಮಿತಿ ಕರುಣೆ ತೋರಿಲ್ಲ ಎಂಬುದೇ ಸತ್ಯ.

5 / 6
2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

2025ರ ಚಾಂಪಿಯನ್ಸ್ ಟ್ರೋಫಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಅರ್ಷದೀಪ್ ಸಿಂಗ್, ಯಶಸ್ವಿ ಜೈಸ್ವಾಲ್, ರಿಷಭ್​ ಪಂತ್, ರವೀಂದ್ರ ಜಡೇಜಾ.

6 / 6

Published On - 3:03 pm, Sat, 18 January 25

ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ಉತ್ತರ ಪ್ರದೇಶದ ಕಲ್ಲು ಗಣಿಗಾರಿಕೆ ವೇಳೆ ಭೂಕುಸಿತವಾಗಿ ಓರ್ವ ಸಾವು
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ನಾಯಕತ್ವ ಬದಲಾವಣೆ ಬಗ್ಗೆ ನಂಗೇನೂ ಗೊತ್ತಿಲ್ಲ, ಸಿಎಂ ಹತ್ರನೇ ಕೇಳಿ; ಡಿಕೆಶಿ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
ರಾಹುಲ್ ಗಾಂಧಿಗೆ ಧೈರ್ಯ ತುಂಬಿದ್ದೇನೆ; ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
‘ಗತವೈಭವ’ಕ್ಕಾಗಿ ಒಂದು ಕೋಟಿ ಮೌಲ್ಯದ ಆಭರಣ ಧರಿಸಿದ್ದ ಆಶಿಕಾ: ವಿಡಿಯೋ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಸುದೀಪ್​ ಅವರನ್ನೇ ಮ್ಯಾನ್ಯುಪಲೇಷನ್ ಮಾಡಲು ಹೋದ ಜಾನ್ವಿ
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಬೆಳಗಾವಿ: 28 ಕೃಷ್ಣಮೃಗಗಳ ಸಾವು; ತನಿಖೆ ಬಗ್ಗೆ ಸಚಿವ ಈಶ್ವರ್ ಖಂಡ್ರೆ ಮಾತು
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
ಗುಜರಾತ್​​ನಲ್ಲಿ ಮೋದಿ ರೋಡ್ ಶೋ; ಸಾಂಪ್ರದಾಯಿಕ ನೃತ್ಯದ ಮೂಲಕ ಸ್ವಾಗತ
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
Cabinet Reshuffle: ಸಂಪುಟ ಪುನಾರಚನೆಗೆ ಹೈಕಮಾಂಡ್​ ಗ್ರೀನ್ ​ಸಿಗ್ನಲ್
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ನೆತ್ತಿಗೇರಿತು ಕಿಚ್ಚನ ಸಿಟ್ಟು, ರಕ್ಷಿತಾ-ಗಿಲ್ಲಿಗೆ ಕಾದಿದೆ ಹಬ್ಬ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ
ರಾಹುಲ್ ಗಾಂಧಿಯದು ಐರನ್ ಲೆಗ್ ಎಂಬುದು ಮತ್ತೆ ಸಾಬೀತಾಗಿದೆ; ಬಿವೈ ವಿಜಯೇಂದ್ರ