AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

12 ಫೋರ್ ಹಾಗೂ 2 ಭರ್ಜರಿ ಸಿಕ್ಸ್: ಸ್ಫೋಟಕ ಸೆಂಚುರಿ ಸಿಡಿಸಿದ ಕರುಣ್ ನಾಯರ್

Karun Nair Century: ಗೋವಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಸ್​ಸಿಎ ಸೆಕ್ರೆಟರಿ ಇಲೆವೆನ್ ತಂಡ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನ ರೂವಾರಿ ಹಿರಿಯ ಆಟಗಾರ ಕರುಣ್ ನಾಯರ್. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಗೋವಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 338 ರನ್ ಕಲೆಹಾಕಿದ್ದರು. ಇದಕ್ಕುತ್ತರವಾಗಿ ಕೆಎಸ್​ಸಿಎ ಸೆಕ್ರೆಟರಿ ಇಲೆವೆನ್ 276 ರನ್​ಗಳಿಸಿದ್ದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಗೋವಾ ತಂಡವನ್ನು 202 ರನ್​ಗಳಿಗೆ ಆಲೌಟ್ ಮಾಡಿದ ಕೆಎಸ್​ಸಿಎ ಸೆಕ್ರೆಟರಿ ಇಲೆವೆನ್, ಅಂತಿಮ ಇನಿಂಗ್ಸ್​ನಲ್ಲಿ 266 ರನ್​ ಬಾರಿಸಿ 6 ವಿಕೆಟ್​ಗಳ ಜಯ ಸಾಧಿಸಿದೆ.

ಝಾಹಿರ್ ಯೂಸುಫ್
|

Updated on: Sep 25, 2025 | 8:23 AM

Share
ಟೀಮ್ ಇಂಡಿಯಾ ಆಟಗಾರ ಕರುಣ್ ನಾಯರ್ (Karun Nair)  ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಬೆಂಗಳೂರಿನ ಆಲೂರಿನಲ್ಲಿ ನಡೆದ ಕೆ. ತಿಮ್ಮಪ್ಪ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರುಣ್ ಆಜೇಯ ಶತಕ ಬಾರಿಸಿ ಮಿಂಚಿದ್ದಾರೆ.

ಟೀಮ್ ಇಂಡಿಯಾ ಆಟಗಾರ ಕರುಣ್ ನಾಯರ್ (Karun Nair)  ಮತ್ತೆ ಫಾರ್ಮ್​ಗೆ ಮರಳಿದ್ದಾರೆ. ಅದು ಸಹ ಭರ್ಜರಿ ಸೆಂಚುರಿ ಸಿಡಿಸುವ ಮೂಲಕ. ಬೆಂಗಳೂರಿನ ಆಲೂರಿನಲ್ಲಿ ನಡೆದ ಕೆ. ತಿಮ್ಮಪ್ಪ ಸ್ಮಾರಕ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರುಣ್ ಆಜೇಯ ಶತಕ ಬಾರಿಸಿ ಮಿಂಚಿದ್ದಾರೆ.

1 / 5
ಗೋವಾ ತಂಡದ ವಿರುದ್ಧದ ಈ ಪಂದ್ಯದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸೆಕ್ರೆಟರಿ ಇಲೆವೆನ್ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಶತಕವನ್ನು ಸಹ ಪೂರೈಸಿದರು.

ಗೋವಾ ತಂಡದ ವಿರುದ್ಧದ ಈ ಪಂದ್ಯದಲ್ಲಿ ಕರ್ನಾಟಕ ಸ್ಟೇಟ್ ಕ್ರಿಕೆಟ್ ಅಸೋಸಿಯೇಷನ್ ಸೆಕ್ರೆಟರಿ ಇಲೆವೆನ್ ಪರ 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕರುಣ್ ನಾಯರ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಈ ಭರ್ಜರಿ ಬ್ಯಾಟಿಂಗ್​ನೊಂದಿಗೆ ಶತಕವನ್ನು ಸಹ ಪೂರೈಸಿದರು.

2 / 5
ಅಲ್ಲದೆ ಈ ಪಂದ್ಯದಲ್ಲಿ 169 ಎಸೆತಗಳನ್ನು ಎದುರಿಸಿದ ಕರುಣ್ 12 ಫೋರ್ ಹಾಗೂ 2 ಸಿಕ್ಸ್​ಗಳೊಂದಿಗೆ ಅಜೇಯ 151 ರನ್ ಬಾರಿಸಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಮುನ್ನ ತಮ್ಮ ಫಾರ್ಮ್ ಅನ್ನು ತೆರೆದಿಟ್ಟಿದ್ದಾರೆ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇದೇ ವಾರ ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ.

ಅಲ್ಲದೆ ಈ ಪಂದ್ಯದಲ್ಲಿ 169 ಎಸೆತಗಳನ್ನು ಎದುರಿಸಿದ ಕರುಣ್ 12 ಫೋರ್ ಹಾಗೂ 2 ಸಿಕ್ಸ್​ಗಳೊಂದಿಗೆ ಅಜೇಯ 151 ರನ್ ಬಾರಿಸಿದ್ದಾರೆ. ಈ ಮೂಲಕ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೂ ಮುನ್ನ ತಮ್ಮ ಫಾರ್ಮ್ ಅನ್ನು ತೆರೆದಿಟ್ಟಿದ್ದಾರೆ. ಅಂದರೆ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಇದೇ ವಾರ ಟೀಮ್ ಇಂಡಿಯಾವನ್ನು ಘೋಷಿಸಲಾಗುತ್ತದೆ.

3 / 5
ಭಾರತ ಟೆಸ್ಟ್ ತಂಡದ ಘೋಷಣೆಗೂ ಮುನ್ನ 151 ರನ್​ಗಳ ಭರ್ಜರಿ ಇನಿಂಗ್ಸ್ ಆಡುವ ಮೂಲಕ ಕರುಣ್ ನಾಯರ್ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ನಡೆದ ಸರಣಿಯಲ್ಲಿ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್​ಗಳು ಮಾತ್ರ. ಹೀಗಾಗಿಯೇ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕನ್ನಡಿಗನನ್ನು ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿತ್ತು.

ಭಾರತ ಟೆಸ್ಟ್ ತಂಡದ ಘೋಷಣೆಗೂ ಮುನ್ನ 151 ರನ್​ಗಳ ಭರ್ಜರಿ ಇನಿಂಗ್ಸ್ ಆಡುವ ಮೂಲಕ ಕರುಣ್ ನಾಯರ್ ಆಯ್ಕೆಗಾರರ ಗಮನ ಸೆಳೆದಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ನಡೆದ ಸರಣಿಯಲ್ಲಿ 8 ಇನಿಂಗ್ಸ್ ಆಡಿದ್ದ ಕರುಣ್ ಕಲೆಹಾಕಿದ್ದು ಕೇವಲ 205 ರನ್​ಗಳು ಮಾತ್ರ. ಹೀಗಾಗಿಯೇ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಯಿಂದ ಕನ್ನಡಿಗನನ್ನು ಕೈ ಬಿಡಲು ಬಿಸಿಸಿಐ ಆಯ್ಕೆ ಸಮಿತಿ ನಿರ್ಧರಿಸಿದೆ ಎಂದು ವರದಿಯಾಗಿತ್ತು.

4 / 5
ಇದೀಗ ಭರ್ಜರಿ ಶತಕದೊಂದಿಗೆ ಕರುಣ್ ನಾಯರ್ ಮತ್ತೆ ಮಿಂಚಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡದ ಆಯ್ಕೆಗೂ ಮುನ್ನ. ಈ ಭರ್ಜರಿ ಪ್ರದರ್ಶನದ ಫಲವಾಗಿ ವಿಂಡೀಸ್​​ ವಿರುದ್ಧದ ಸರಣಿಯಲ್ಲಿ 33 ವರ್ಷದ ಕರುಣ್ ನಾಯರ್​ಗೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.  

ಇದೀಗ ಭರ್ಜರಿ ಶತಕದೊಂದಿಗೆ ಕರುಣ್ ನಾಯರ್ ಮತ್ತೆ ಮಿಂಚಿದ್ದಾರೆ. ಅದು ಸಹ ವೆಸ್ಟ್ ಇಂಡೀಸ್ ವಿರುದ್ಧದ ಸರಣಿಗೆ ಭಾರತ ತಂಡದ ಆಯ್ಕೆಗೂ ಮುನ್ನ. ಈ ಭರ್ಜರಿ ಪ್ರದರ್ಶನದ ಫಲವಾಗಿ ವಿಂಡೀಸ್​​ ವಿರುದ್ಧದ ಸರಣಿಯಲ್ಲಿ 33 ವರ್ಷದ ಕರುಣ್ ನಾಯರ್​ಗೆ ಚಾನ್ಸ್ ಸಿಗಲಿದೆಯಾ ಕಾದು ನೋಡಬೇಕಿದೆ.  

5 / 5
Follow Us
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ಡಾ. ರಾಜ್ ಸಮಾಧಿ ವಿವಾದ: ನಾನು ಹೇಳಿದ ವಿಚಾರ ಸುಳ್ಳಲ್ಲ ಎಂದ ಚೇತನ್ ಅಹಿಂಸಾ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ರೈಲು ಹತ್ತಲು ಹೋಗಿ ಕಾಲು ಜಾರಿ ಬಿದ್ದು ಪ್ರಾಣ ಕಳೆದುಕೊಂಡ ಮಹಿಳೆ
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಮೇ 15ಕ್ಕೆ ಗುಡ್ ನ್ಯೂಸ್ ಸಿಗತ್ತಾ? ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಡಿಕೆಶಿ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬರಿದಾದ ಜಲಾಶಯವೇ ಮಕ್ಕಳಿಗೀಗ ಕ್ರಿಕೆಟ್​​ ಮೈದಾನ!
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಬೀದಿ ನಾಯಿಯ ಮೇಲೆ ಮಚ್ಚಿನಿಂದ ಹಲ್ಲೆ! ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ನಡುರಸ್ತೆಯಲ್ಲಿ ಒಂಟಿ‌ ಕೋರೆ‌ ಸಲಗದ ಬಿಂದಾಸ್ ವಾಕ್!
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಅಕ್ರಮ ಗೋ ಸಾಗಾಟ ವಾಹನ ತಡೆದು 23 ಗೋವುಗಳನ್ನು ರಕ್ಷಿಸಿದ BJP ಶಾಸಕ
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್?
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ವೈಟ್​ಹೌಸ್​ನಲ್ಲಿ ಗುಂಡಿನ ದಾಳಿ ನಡೆಸಿದ ವ್ಯಕ್ತಿಯ ಫೋಟೊ ಬಿಡುಗಡೆ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ
ಅವಧಿಗೂ ಮೊದಲೇ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪೂರ್ಣ