AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಾಕ್ ಪಿಚ್‌ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಕೇಶವ್ ಮಹಾರಾಜ್

Pakistan vs South Africa: ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ. ಹೀಗೆ ಮೂರಂಕಿ ಮೊತ್ತಕ್ಕೆ ಪಾಕ್ ಪಡೆ ಆಲೌಟ್ ಆಗಲು ಮುಖ್ಯ ಕಾರಣ ಸೌತ್ ಆಫ್ರಿಕಾ ಸ್ಪಿನ್ನರ್ ಕೇಶವ್ ಮಹಾರಾಜ್.

ಝಾಹಿರ್ ಯೂಸುಫ್
|

Updated on: Oct 22, 2025 | 7:59 AM

Share
ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮಾಡುವ ಮೂಲಕ ಕೇಶವ್ ಮಹಾರಾಜ್ (Keshav Maharaj ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 7 ವಿಕೆಟ್​ಗಳೊಂದಿಗೆ. ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

ಪಾಕಿಸ್ತಾನ್ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಸ್ಪಿನ್ ಮೋಡಿ ಮಾಡುವ ಮೂಲಕ ಕೇಶವ್ ಮಹಾರಾಜ್ (Keshav Maharaj ಭರ್ಜರಿ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ 7 ವಿಕೆಟ್​ಗಳೊಂದಿಗೆ. ರಾವಲ್ಪಿಂಡಿಯಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಪಾಕ್ ತಂಡದ ನಾಯಕ ಶಾನ್ ಮಸೂದ್ ಬ್ಯಾಟಿಂಗ್ ಆಯ್ದುಕೊಂಡಿದ್ದರು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಬ್ಯಾಟರ್​ಗಳ ಪಾಲಿಗೆ ಕೇಶವ್ ಮಹಾರಾಜ್ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದಾರೆ. ಸೌತ್ ಆಫ್ರಿಕಾದ ಇತರೆ ಬೌಲರ್​ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ  ಪಾಕ್ ಬ್ಯಾಟರ್​ಗಳು ಕೇಶವ್ ಮಹಾರಾಜ್​ಗೆ ಮಾತ್ರ ವಿಕೆಟ್ ಒಪ್ಪಿಸುತ್ತಾ ಸಾಗಿದ್ದಾರೆ. ಪರಿಣಾಮ ಪಾಕ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ.

ಅದರಂತೆ ಮೊದಲು ಬ್ಯಾಟ್ ಮಾಡಿದ ಪಾಕ್ ಬ್ಯಾಟರ್​ಗಳ ಪಾಲಿಗೆ ಕೇಶವ್ ಮಹಾರಾಜ್ ಕಬ್ಬಿಣದ ಕಡಲೆಯಾಗಿ ಪರಿಣಮಿಸಿದ್ದಾರೆ. ಸೌತ್ ಆಫ್ರಿಕಾದ ಇತರೆ ಬೌಲರ್​ಗಳ ವಿರುದ್ಧ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದ  ಪಾಕ್ ಬ್ಯಾಟರ್​ಗಳು ಕೇಶವ್ ಮಹಾರಾಜ್​ಗೆ ಮಾತ್ರ ವಿಕೆಟ್ ಒಪ್ಪಿಸುತ್ತಾ ಸಾಗಿದ್ದಾರೆ. ಪರಿಣಾಮ ಪಾಕ್ ತಂಡವು ಮೊದಲ ಇನಿಂಗ್ಸ್​ನಲ್ಲಿ 333 ರನ್​ಗಳಿಗೆ ಆಲೌಟ್ ಆಗಿದೆ.

2 / 5
ಸೌತ್ ಆಫ್ರಿಕಾ ಪರ 42.4 ಓವರ್​ಗಳನ್ನು ಎಸೆದ ಕೇಶವ್ ಮಹಾರಾಜ್ 102 ರನ್ ನೀಡುವ ಮೂಲಕ 7 ವಿಕೆಟ್​ ಕಬಳಿಸಿದ್ದಾರೆ. ಈ ಮೂಲಕ ಪಾಕಿಸ್ತಾನ್ ಪಿಚ್​ನಲ್ಲಿ ಏಳು ವಿಕೆಟ್​ ಉರುಳಿಸಿದ ಸೌತ್ ಆಫ್ರಿಕಾದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಸೌತ್ ಆಫ್ರಿಕಾ ಪರ ಏಷ್ಯಾ ಪಿಚ್​ನಲ್ಲಿ ಎರಡು ಬಾರಿ 7 ವಿಕೆಟ್​ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

ಸೌತ್ ಆಫ್ರಿಕಾ ಪರ 42.4 ಓವರ್​ಗಳನ್ನು ಎಸೆದ ಕೇಶವ್ ಮಹಾರಾಜ್ 102 ರನ್ ನೀಡುವ ಮೂಲಕ 7 ವಿಕೆಟ್​ ಕಬಳಿಸಿದ್ದಾರೆ. ಈ ಮೂಲಕ ಪಾಕಿಸ್ತಾನ್ ಪಿಚ್​ನಲ್ಲಿ ಏಳು ವಿಕೆಟ್​ ಉರುಳಿಸಿದ ಸೌತ್ ಆಫ್ರಿಕಾದ 2ನೇ ಬೌಲರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಸೌತ್ ಆಫ್ರಿಕಾ ಪರ ಏಷ್ಯಾ ಪಿಚ್​ನಲ್ಲಿ ಎರಡು ಬಾರಿ 7 ವಿಕೆಟ್​ ಪಡೆದ ಮೊದಲ ಬೌಲರ್ ಎಂಬ ದಾಖಲೆ ನಿರ್ಮಿಸಿದ್ದಾರೆ.

3 / 5
ಇದಕ್ಕೂ ಮುನ್ನ ಕೇಶವ್ ಮಹಾರಾಜ್ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್​ನಲ್ಲಿ 129 ರನ್  ನೀಡಿ 9 ವಿಕೆಟ್ ಕಬಳಿಸಿದ್ದರು. ಇದೀಗ ಪಾಕಿಸ್ತಾನ್ ವಿರುದ್ಧ 102 ರನ್​ಗೆ 7 ವಿಕೆಟ್ ಉರುಳಿಸಿ, ಏಷ್ಯಾದಲ್ಲಿ ಎರಡು ಬಾರಿ 7 ವಿಕೆಟ್ ಪಡೆದ ಸೌತ್ ಆಫ್ರಿಕಾದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

ಇದಕ್ಕೂ ಮುನ್ನ ಕೇಶವ್ ಮಹಾರಾಜ್ ಕೊಲಂಬೊದಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಟೆಸ್ಟ್​ನಲ್ಲಿ 129 ರನ್  ನೀಡಿ 9 ವಿಕೆಟ್ ಕಬಳಿಸಿದ್ದರು. ಇದೀಗ ಪಾಕಿಸ್ತಾನ್ ವಿರುದ್ಧ 102 ರನ್​ಗೆ 7 ವಿಕೆಟ್ ಉರುಳಿಸಿ, ಏಷ್ಯಾದಲ್ಲಿ ಎರಡು ಬಾರಿ 7 ವಿಕೆಟ್ ಪಡೆದ ಸೌತ್ ಆಫ್ರಿಕಾದ ಏಕೈಕ ಬೌಲರ್ ಎನಿಸಿಕೊಂಡಿದ್ದಾರೆ.

4 / 5
ಅಷ್ಟೇ ಅಲ್ಲದೆ ಪಾಕಿಸ್ತಾನ್ ಪಿಚ್​ನಲ್ಲಿ ಅತೀ ಕಡಿಮೆ ರನ್ ನೀಡಿ 7 ವಿಕೆಟ್ ಕಬಳಿಸಿದ ಸೌತ್ ಆಫ್ರಿಕಾ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪೌಲ್ ಆ್ಯಡಂಸ್ ಹೆಸರಿನಲ್ಲಿತ್ತು. 2003 ರಲ್ಲಿ ಲಾಹೋರ್​ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಪೌಲ್ 128 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು. ಇದೀಗ 102 ರನ್​ಗಳಿಗೆ 7 ವಿಕೆಟ್ ಉರುಳಿಸಿ ಕೇಶವ್ ಮಹಾರಾಜ್ ಪಾಕ್ ಪಿಚ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅಷ್ಟೇ ಅಲ್ಲದೆ ಪಾಕಿಸ್ತಾನ್ ಪಿಚ್​ನಲ್ಲಿ ಅತೀ ಕಡಿಮೆ ರನ್ ನೀಡಿ 7 ವಿಕೆಟ್ ಕಬಳಿಸಿದ ಸೌತ್ ಆಫ್ರಿಕಾ ಬೌಲರ್ ಎಂಬ ಹೆಗ್ಗಳಿಕೆಗೂ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ಪೌಲ್ ಆ್ಯಡಂಸ್ ಹೆಸರಿನಲ್ಲಿತ್ತು. 2003 ರಲ್ಲಿ ಲಾಹೋರ್​ನಲ್ಲಿ ನಡೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಪೌಲ್ 128 ರನ್ ನೀಡಿ 7 ವಿಕೆಟ್ ಕಬಳಿಸಿದ್ದರು. ಇದೀಗ 102 ರನ್​ಗಳಿಗೆ 7 ವಿಕೆಟ್ ಉರುಳಿಸಿ ಕೇಶವ್ ಮಹಾರಾಜ್ ಪಾಕ್ ಪಿಚ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

5 / 5
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ