AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಗೆದ್ದ ಬಳಿಕ ಜೈ ಶ್ರೀರಾಮ್ ಎಂದ ಸೌತ್ ಆಫ್ರಿಕಾ ಆಟಗಾರ

South Africa vs Sri Lanka: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಸೌತ್ ಆಫ್ರಿಕಾ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಲಂಕಾ ಪಡೆಯನ್ನು 233 ರನ್​​ಗಳಿಂ ಬಗ್ಗು ಬಡಿದಿದ್ದ ಆಫ್ರಿಕನ್ನರು, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​ಗಳ ಜಯ ಸಾಧಿಸಿದೆ. ಈ ಮೂಲಕ 2-0 ಅಂತರದಿಂದ ಸರಣಿ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 11, 2024 | 8:30 AM

Share
ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 233 ರನ್​​ಗಳ ವಿಜಯ ಸಾಧಿಸಿದ್ದ ಸೌತ್ ಆಫ್ರಿಕಾ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​​ಗಳ ಜಯಭೇರಿ ಬಾರಿಸಿದೆ. ಈ ಸರಣಿ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 233 ರನ್​​ಗಳ ವಿಜಯ ಸಾಧಿಸಿದ್ದ ಸೌತ್ ಆಫ್ರಿಕಾ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​​ಗಳ ಜಯಭೇರಿ ಬಾರಿಸಿದೆ. ಈ ಸರಣಿ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

1 / 6
ಇನ್ನು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದ ದ್ವಿತೀಯ ಟೆಸ್ಟ್ ಪಂದ್ಯದ ಗೆಲುವಿನ ರೂವಾರಿ ಕೇಶವ್ ಮಹಾರಾಜ್. ದ್ವಿತೀಯ ಇನಿಂಗ್ಸ್​​ನಲ್ಲಿ 347 ರನ್​​ಗಳ ಗುರಿ ಪಡೆದ ಶ್ರೀಲಂಕಾ ತಂಡವು 200 ರನ್​​ಗಳವರೆಗೆ ಕಳೆದುಕೊಂಡಿದ್ದು ಕೇವಲ 5 ವಿಕೆಟ್​ಗಳು ಮಾತ್ರ. ಹೀಗಾಗಿ ಲಂಕಾ ಪಡೆ ಈ ಪಂದ್ಯವನ್ನು ಗೆಲ್ಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು.

ಇನ್ನು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದ ದ್ವಿತೀಯ ಟೆಸ್ಟ್ ಪಂದ್ಯದ ಗೆಲುವಿನ ರೂವಾರಿ ಕೇಶವ್ ಮಹಾರಾಜ್. ದ್ವಿತೀಯ ಇನಿಂಗ್ಸ್​​ನಲ್ಲಿ 347 ರನ್​​ಗಳ ಗುರಿ ಪಡೆದ ಶ್ರೀಲಂಕಾ ತಂಡವು 200 ರನ್​​ಗಳವರೆಗೆ ಕಳೆದುಕೊಂಡಿದ್ದು ಕೇವಲ 5 ವಿಕೆಟ್​ಗಳು ಮಾತ್ರ. ಹೀಗಾಗಿ ಲಂಕಾ ಪಡೆ ಈ ಪಂದ್ಯವನ್ನು ಗೆಲ್ಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು.

2 / 6
ಆದರೆ ಸ್ಪಿನ್ ಮೋಡಿ ತೋರಿಸಿದ ಕೇಶವ್ ಮಹಾರಾಜ್ ಶ್ರೀಲಂಕಾ ಬ್ಯಾಟರ್​​ಗಳ ಪಾಲಿಗೆ ಮಾರಕವಾಗಿ ಪರಿಣಮಿಸಿದರು. ಅದರಲ್ಲೂ ಕೊನೆಯ ದಿನದಾಟದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಕೇಶವ್ 25 ಓವರ್​​ಗಳನ್ನು ಎಸೆದು 5 ವಿಕೆಟ್ ಕಬಳಿಸಿದರು. ಈ ಮೂಲಕ ಲಂಕಾ ತಂಡವನ್ನು 238 ರನ್​ಗಳಿಗೆ ಆಲೌಟ್ ಮಾಡಿ ಸೌತ್ ಆಫ್ರಿಕಾ ತಂಡಕ್ಕೆ ಭರ್ಜರಿ ಗೆಲುವು ತಂದು ಕೊಟ್ಟರು.

ಆದರೆ ಸ್ಪಿನ್ ಮೋಡಿ ತೋರಿಸಿದ ಕೇಶವ್ ಮಹಾರಾಜ್ ಶ್ರೀಲಂಕಾ ಬ್ಯಾಟರ್​​ಗಳ ಪಾಲಿಗೆ ಮಾರಕವಾಗಿ ಪರಿಣಮಿಸಿದರು. ಅದರಲ್ಲೂ ಕೊನೆಯ ದಿನದಾಟದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಕೇಶವ್ 25 ಓವರ್​​ಗಳನ್ನು ಎಸೆದು 5 ವಿಕೆಟ್ ಕಬಳಿಸಿದರು. ಈ ಮೂಲಕ ಲಂಕಾ ತಂಡವನ್ನು 238 ರನ್​ಗಳಿಗೆ ಆಲೌಟ್ ಮಾಡಿ ಸೌತ್ ಆಫ್ರಿಕಾ ತಂಡಕ್ಕೆ ಭರ್ಜರಿ ಗೆಲುವು ತಂದು ಕೊಟ್ಟರು.

3 / 6
ಈ ಅಮೋಘ ಗೆಲುವಿನ ಬಳಿಕ ಕೇಶವ್ ಮಹಾರಾಜ್ ದೇವರನ್ನು ಸ್ಮರಿಸಲು ಮರೆಯಲಿಲ್ಲ. 2-0 ಅಂತರದಿಂದ ಸರಣಿ ಗೆದ್ದ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೇಶವ್, ಜೈ ಶ್ರೀರಾಮ್, ಜೈ ಹನುಮಾನ್ ಹ್ಯಾಷ್ ಟ್ಯಾಗ್ ಬಳಸುವ ಮೂಲಕ ಧನ್ಯತೆಯನ್ನು ಅರ್ಪಿಸಿದರು.

ಈ ಅಮೋಘ ಗೆಲುವಿನ ಬಳಿಕ ಕೇಶವ್ ಮಹಾರಾಜ್ ದೇವರನ್ನು ಸ್ಮರಿಸಲು ಮರೆಯಲಿಲ್ಲ. 2-0 ಅಂತರದಿಂದ ಸರಣಿ ಗೆದ್ದ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೇಶವ್, ಜೈ ಶ್ರೀರಾಮ್, ಜೈ ಹನುಮಾನ್ ಹ್ಯಾಷ್ ಟ್ಯಾಗ್ ಬಳಸುವ ಮೂಲಕ ಧನ್ಯತೆಯನ್ನು ಅರ್ಪಿಸಿದರು.

4 / 6
ಅಂದಹಾಗೆ ಕೇಶವ್ ಮಹಾರಾಜ್ ಭಗವಾನ್​ ಶ್ರೀರಾಮನನ್ನು ಸ್ಮರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪಣಾ ದಿನದಂದು ಕೇಶವ್ ಮಹಾರಾಜ್ ಶುಭ ಹಾರೈಸಿದ್ದರು. ಅಲ್ಲದೆ ಆ ಬಳಿಕ ಅಯೋಧ್ಯೆಗೆ ಭೇಟಿ ಸಹ ನೀಡಿದ್ದರು.

ಅಂದಹಾಗೆ ಕೇಶವ್ ಮಹಾರಾಜ್ ಭಗವಾನ್​ ಶ್ರೀರಾಮನನ್ನು ಸ್ಮರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪಣಾ ದಿನದಂದು ಕೇಶವ್ ಮಹಾರಾಜ್ ಶುಭ ಹಾರೈಸಿದ್ದರು. ಅಲ್ಲದೆ ಆ ಬಳಿಕ ಅಯೋಧ್ಯೆಗೆ ಭೇಟಿ ಸಹ ನೀಡಿದ್ದರು.

5 / 6
ಮೂಲತಃ ಉತ್ತರ ಪ್ರದೇಶದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ಹಿಂದೂ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿದ್ದಾರೆ. ಇದಕ್ಕೆ ಸಾಕ್ಷಿ ಗೆಲುವಿನ ಸಂಭ್ರಮದ ನಡುವೆಯೂ ಸೌತ್ ಆಫ್ರಿಕಾ ಕ್ರಿಕೆಟಿಗ ದೇವರನ್ನು ಸ್ಮರಿಸಿರುವುದು.

ಮೂಲತಃ ಉತ್ತರ ಪ್ರದೇಶದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ಹಿಂದೂ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿದ್ದಾರೆ. ಇದಕ್ಕೆ ಸಾಕ್ಷಿ ಗೆಲುವಿನ ಸಂಭ್ರಮದ ನಡುವೆಯೂ ಸೌತ್ ಆಫ್ರಿಕಾ ಕ್ರಿಕೆಟಿಗ ದೇವರನ್ನು ಸ್ಮರಿಸಿರುವುದು.

6 / 6
Follow Us
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಚಿಕ್ಕಮಗಳೂರಲ್ಲಿ ಬಾಲಕಿ ನಾಪತ್ತೆ ಕೇಸ್​: 3 ದಿನ ಕಳೆದರೂ ಸಿಕ್ಕಿಲ್ಲ ಸುಳಿವು
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಫಾಸ್ಟ್‌ಟ್ಯಾಗಲ್ಲಿ ಹಣವಿಲ್ಲದ್ದಕ್ಕೆ ಹಿಗ್ಗಾಮುಗ್ಗಾ ಥಳಿತ! ವಿಡಿಯೋ ವೈರಲ್
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಬೆಂಗಳೂರು: ಹಾಡಹಗಲೇ ಸುಜುಕಿ ಆಕ್ಸೆಸ್ ಹೊತ್ತೊಯ್ದ ಖದೀಮ!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ಸಂಪರ್ಕ ಕ್ರಾಂತಿ ರೈಲಿನಲ್ಲಿ ಗಾಂಜಾ ಸೇವನೆ: ಯುವಕರ ದರ್ಬಾರ್ ವಿಡಿಯೋ ವೈರಲ್!
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ತವರಿನಿಂದ ಹೊರಗೆ RCBಗೆ ಮೊದಲ ಪಂದ್ಯ, ಹೇಗಿದೆ ಉಭಯ ತಂಡಗಳ ಬಲಾಬಲ?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?
ಕಾಲಾಷ್ಟಮಿಯನ್ನು ಯಾಕೆ ಆಚರಿಸಬೇಕು?