AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಣಿ ಗೆದ್ದ ಬಳಿಕ ಜೈ ಶ್ರೀರಾಮ್ ಎಂದ ಸೌತ್ ಆಫ್ರಿಕಾ ಆಟಗಾರ

South Africa vs Sri Lanka: ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಸೌತ್ ಆಫ್ರಿಕಾ ತಂಡ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಲಂಕಾ ಪಡೆಯನ್ನು 233 ರನ್​​ಗಳಿಂ ಬಗ್ಗು ಬಡಿದಿದ್ದ ಆಫ್ರಿಕನ್ನರು, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​ಗಳ ಜಯ ಸಾಧಿಸಿದೆ. ಈ ಮೂಲಕ 2-0 ಅಂತರದಿಂದ ಸರಣಿ ಗೆದ್ದುಕೊಂಡಿದೆ.

ಝಾಹಿರ್ ಯೂಸುಫ್
|

Updated on: Dec 11, 2024 | 8:30 AM

Share
ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 233 ರನ್​​ಗಳ ವಿಜಯ ಸಾಧಿಸಿದ್ದ ಸೌತ್ ಆಫ್ರಿಕಾ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​​ಗಳ ಜಯಭೇರಿ ಬಾರಿಸಿದೆ. ಈ ಸರಣಿ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

ಶ್ರೀಲಂಕಾ ವಿರುದ್ಧದ 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಸೌತ್ ಆಫ್ರಿಕಾ 2-0 ಅಂತರದಿಂದ ಗೆದ್ದುಕೊಂಡಿದೆ. ಈ ಸರಣಿಯ ಮೊದಲ ಪಂದ್ಯದಲ್ಲಿ 233 ರನ್​​ಗಳ ವಿಜಯ ಸಾಧಿಸಿದ್ದ ಸೌತ್ ಆಫ್ರಿಕಾ, ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 109 ರನ್​​ಗಳ ಜಯಭೇರಿ ಬಾರಿಸಿದೆ. ಈ ಸರಣಿ ಗೆಲುವಿನೊಂದಿಗೆ ಸೌತ್ ಆಫ್ರಿಕಾ ತಂಡವು ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.

1 / 6
ಇನ್ನು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದ ದ್ವಿತೀಯ ಟೆಸ್ಟ್ ಪಂದ್ಯದ ಗೆಲುವಿನ ರೂವಾರಿ ಕೇಶವ್ ಮಹಾರಾಜ್. ದ್ವಿತೀಯ ಇನಿಂಗ್ಸ್​​ನಲ್ಲಿ 347 ರನ್​​ಗಳ ಗುರಿ ಪಡೆದ ಶ್ರೀಲಂಕಾ ತಂಡವು 200 ರನ್​​ಗಳವರೆಗೆ ಕಳೆದುಕೊಂಡಿದ್ದು ಕೇವಲ 5 ವಿಕೆಟ್​ಗಳು ಮಾತ್ರ. ಹೀಗಾಗಿ ಲಂಕಾ ಪಡೆ ಈ ಪಂದ್ಯವನ್ನು ಗೆಲ್ಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು.

ಇನ್ನು ಸೌತ್ ಆಫ್ರಿಕಾ ಪಾಲಿಗೆ ನಿರ್ಣಾಯಕವಾಗಿದ್ದ ದ್ವಿತೀಯ ಟೆಸ್ಟ್ ಪಂದ್ಯದ ಗೆಲುವಿನ ರೂವಾರಿ ಕೇಶವ್ ಮಹಾರಾಜ್. ದ್ವಿತೀಯ ಇನಿಂಗ್ಸ್​​ನಲ್ಲಿ 347 ರನ್​​ಗಳ ಗುರಿ ಪಡೆದ ಶ್ರೀಲಂಕಾ ತಂಡವು 200 ರನ್​​ಗಳವರೆಗೆ ಕಳೆದುಕೊಂಡಿದ್ದು ಕೇವಲ 5 ವಿಕೆಟ್​ಗಳು ಮಾತ್ರ. ಹೀಗಾಗಿ ಲಂಕಾ ಪಡೆ ಈ ಪಂದ್ಯವನ್ನು ಗೆಲ್ಲಲಿದೆ ಎಂದೇ ಎಲ್ಲರೂ ಭಾವಿಸಿದ್ದರು.

2 / 6
ಆದರೆ ಸ್ಪಿನ್ ಮೋಡಿ ತೋರಿಸಿದ ಕೇಶವ್ ಮಹಾರಾಜ್ ಶ್ರೀಲಂಕಾ ಬ್ಯಾಟರ್​​ಗಳ ಪಾಲಿಗೆ ಮಾರಕವಾಗಿ ಪರಿಣಮಿಸಿದರು. ಅದರಲ್ಲೂ ಕೊನೆಯ ದಿನದಾಟದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಕೇಶವ್ 25 ಓವರ್​​ಗಳನ್ನು ಎಸೆದು 5 ವಿಕೆಟ್ ಕಬಳಿಸಿದರು. ಈ ಮೂಲಕ ಲಂಕಾ ತಂಡವನ್ನು 238 ರನ್​ಗಳಿಗೆ ಆಲೌಟ್ ಮಾಡಿ ಸೌತ್ ಆಫ್ರಿಕಾ ತಂಡಕ್ಕೆ ಭರ್ಜರಿ ಗೆಲುವು ತಂದು ಕೊಟ್ಟರು.

ಆದರೆ ಸ್ಪಿನ್ ಮೋಡಿ ತೋರಿಸಿದ ಕೇಶವ್ ಮಹಾರಾಜ್ ಶ್ರೀಲಂಕಾ ಬ್ಯಾಟರ್​​ಗಳ ಪಾಲಿಗೆ ಮಾರಕವಾಗಿ ಪರಿಣಮಿಸಿದರು. ಅದರಲ್ಲೂ ಕೊನೆಯ ದಿನದಾಟದಲ್ಲಿ ಅತ್ಯುತ್ತಮ ದಾಳಿ ಸಂಘಟಿಸಿದ ಕೇಶವ್ 25 ಓವರ್​​ಗಳನ್ನು ಎಸೆದು 5 ವಿಕೆಟ್ ಕಬಳಿಸಿದರು. ಈ ಮೂಲಕ ಲಂಕಾ ತಂಡವನ್ನು 238 ರನ್​ಗಳಿಗೆ ಆಲೌಟ್ ಮಾಡಿ ಸೌತ್ ಆಫ್ರಿಕಾ ತಂಡಕ್ಕೆ ಭರ್ಜರಿ ಗೆಲುವು ತಂದು ಕೊಟ್ಟರು.

3 / 6
ಈ ಅಮೋಘ ಗೆಲುವಿನ ಬಳಿಕ ಕೇಶವ್ ಮಹಾರಾಜ್ ದೇವರನ್ನು ಸ್ಮರಿಸಲು ಮರೆಯಲಿಲ್ಲ. 2-0 ಅಂತರದಿಂದ ಸರಣಿ ಗೆದ್ದ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೇಶವ್, ಜೈ ಶ್ರೀರಾಮ್, ಜೈ ಹನುಮಾನ್ ಹ್ಯಾಷ್ ಟ್ಯಾಗ್ ಬಳಸುವ ಮೂಲಕ ಧನ್ಯತೆಯನ್ನು ಅರ್ಪಿಸಿದರು.

ಈ ಅಮೋಘ ಗೆಲುವಿನ ಬಳಿಕ ಕೇಶವ್ ಮಹಾರಾಜ್ ದೇವರನ್ನು ಸ್ಮರಿಸಲು ಮರೆಯಲಿಲ್ಲ. 2-0 ಅಂತರದಿಂದ ಸರಣಿ ಗೆದ್ದ ಖುಷಿಯನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಕೇಶವ್, ಜೈ ಶ್ರೀರಾಮ್, ಜೈ ಹನುಮಾನ್ ಹ್ಯಾಷ್ ಟ್ಯಾಗ್ ಬಳಸುವ ಮೂಲಕ ಧನ್ಯತೆಯನ್ನು ಅರ್ಪಿಸಿದರು.

4 / 6
ಅಂದಹಾಗೆ ಕೇಶವ್ ಮಹಾರಾಜ್ ಭಗವಾನ್​ ಶ್ರೀರಾಮನನ್ನು ಸ್ಮರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪಣಾ ದಿನದಂದು ಕೇಶವ್ ಮಹಾರಾಜ್ ಶುಭ ಹಾರೈಸಿದ್ದರು. ಅಲ್ಲದೆ ಆ ಬಳಿಕ ಅಯೋಧ್ಯೆಗೆ ಭೇಟಿ ಸಹ ನೀಡಿದ್ದರು.

ಅಂದಹಾಗೆ ಕೇಶವ್ ಮಹಾರಾಜ್ ಭಗವಾನ್​ ಶ್ರೀರಾಮನನ್ನು ಸ್ಮರಿಸುತ್ತಿರುವುದು ಇದೇ ಮೊದಲೇನಲ್ಲ. ಈ ಹಿಂದೆ ಅಯೋಧ್ಯೆಯಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪಣಾ ದಿನದಂದು ಕೇಶವ್ ಮಹಾರಾಜ್ ಶುಭ ಹಾರೈಸಿದ್ದರು. ಅಲ್ಲದೆ ಆ ಬಳಿಕ ಅಯೋಧ್ಯೆಗೆ ಭೇಟಿ ಸಹ ನೀಡಿದ್ದರು.

5 / 6
ಮೂಲತಃ ಉತ್ತರ ಪ್ರದೇಶದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ಹಿಂದೂ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿದ್ದಾರೆ. ಇದಕ್ಕೆ ಸಾಕ್ಷಿ ಗೆಲುವಿನ ಸಂಭ್ರಮದ ನಡುವೆಯೂ ಸೌತ್ ಆಫ್ರಿಕಾ ಕ್ರಿಕೆಟಿಗ ದೇವರನ್ನು ಸ್ಮರಿಸಿರುವುದು.

ಮೂಲತಃ ಉತ್ತರ ಪ್ರದೇಶದವರಾಗಿರುವ ಕೇಶವ್ ಮಹಾರಾಜ್ ಪೂರ್ವಜರು ಕಳೆದ 1 ಶತಮಾನಗಳಿಂದ ಸೌತ್ ಆಫ್ರಿಕಾದಲ್ಲಿ ನೆಲೆಸಿದ್ದಾರೆ. ಇದಾಗ್ಯೂ ಕೇಶವ್ ಮಹಾರಾಜ್ ಕುಟಂಬಸ್ಥರು ಹಿಂದೂ ಸಂಪ್ರದಾಯಗಳನ್ನು ಹಾಗೆ ಮುಂದುವರೆಸಿದ್ದಾರೆ. ಇದಕ್ಕೆ ಸಾಕ್ಷಿ ಗೆಲುವಿನ ಸಂಭ್ರಮದ ನಡುವೆಯೂ ಸೌತ್ ಆಫ್ರಿಕಾ ಕ್ರಿಕೆಟಿಗ ದೇವರನ್ನು ಸ್ಮರಿಸಿರುವುದು.

6 / 6
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!