AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kohli vs BCCI: ಬಿಸಿಸಿಐ ಆಯ್ಕೆ ಸಮಿತಿಯವರು ವಿರಾಟ್ ಕೊಹ್ಲಿಯ ಅರ್ಧದಷ್ಟು ಪಂದ್ಯವನ್ನೂ ಆಡಿಲ್ಲ ಎಂದ ಕೀರ್ತಿ ಆಜಾದ್

Virat Kohli: ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರು ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ ಬಗ್ಗೆ ಅವರಿಗೆ ಕರೆ ಮಾಡಿ ತಿಳಿಸುವ ಮುನ್ನ ಅಧ್ಯಕ್ಷ ಸೌರವ್ ಗಂಗೂಲಿ ಬಳಿ ಅನುಮತಿ ಪಡೆಯಬೇಕಿತ್ತು. ಇದು ನಿಯಮ ಆಗಿದೆ ಎಂದು ಕೀರ್ತಿ ಆಜಾದ್ ಹೇಳಿದ್ದಾರೆ.

TV9 Web
| Updated By: Vinay Bhat|

Updated on: Dec 18, 2021 | 12:01 PM

Share
ಕಳೆದೊಂದು ವಾರದಿಂದ ಕ್ರಿಕೆಟ್ ಲೋಕದಲ್ಲಿ ಕೇವಲ ವಿರಾಟ್ ಕೊಹ್ಲಿ ಅವರದ್ದೇ ಸುದ್ದಿ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಆಡಿದ ಮಾತುಗಳ ಪೆಟ್ಟಿನ ಏಟಿನ ನೋವು ಇನ್ನೂ ಕಡಿಮೆಯಾಗಿಲ್ಲ. ಕೊಹ್ಲಿ ಅವರನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿದ ಕೂಡಲೇ ಹುಟ್ಟಿಕೊಂಡ ಸಾಕಷ್ಟು ಗಾಸಿಪ್​ಗಳು ಇನ್ನೂ ಮುಂದುವರೆಯುತ್ತಲೇ ಇದೆ. ಒಟ್ಟಾರೆಯಾಗಿ ಮೇಲ್ನೋಟಕ್ಕೆ ಬಿಸಿಸಿಐ ಕೊಹ್ಲಿಯನ್ನು ಏಕದಿನ ನಾಯಕತ್ವದಿಂದ ರೀತಿ ಪ್ರಕಾರ ಕೆಳಗಿಳಿಸಿಲ್ಲ ಎಂಬುದು ಗೊತ್ತಾಗಿದೆ.

ಕಳೆದೊಂದು ವಾರದಿಂದ ಕ್ರಿಕೆಟ್ ಲೋಕದಲ್ಲಿ ಕೇವಲ ವಿರಾಟ್ ಕೊಹ್ಲಿ ಅವರದ್ದೇ ಸುದ್ದಿ. ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ತೆರಳುವ ಮುನ್ನ ನಡೆಸಿದ ಸುದ್ದಿಗೋಷ್ಠಿಯಲ್ಲಿ ಅವರು ಆಡಿದ ಮಾತುಗಳ ಪೆಟ್ಟಿನ ಏಟಿನ ನೋವು ಇನ್ನೂ ಕಡಿಮೆಯಾಗಿಲ್ಲ. ಕೊಹ್ಲಿ ಅವರನ್ನು ಏಕದಿನ ನಾಯಕತ್ವದಿಂದ ಕೆಳಗಿಳಿಸಿದ ಕೂಡಲೇ ಹುಟ್ಟಿಕೊಂಡ ಸಾಕಷ್ಟು ಗಾಸಿಪ್​ಗಳು ಇನ್ನೂ ಮುಂದುವರೆಯುತ್ತಲೇ ಇದೆ. ಒಟ್ಟಾರೆಯಾಗಿ ಮೇಲ್ನೋಟಕ್ಕೆ ಬಿಸಿಸಿಐ ಕೊಹ್ಲಿಯನ್ನು ಏಕದಿನ ನಾಯಕತ್ವದಿಂದ ರೀತಿ ಪ್ರಕಾರ ಕೆಳಗಿಳಿಸಿಲ್ಲ ಎಂಬುದು ಗೊತ್ತಾಗಿದೆ.

1 / 7
ಈ ವಿವಾದ ಭಾರತೀಯ ಕ್ರಿಕೆಟ್​ನಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿಯುವುದು ಖಚಿತ. ಇದರ ನಡುವೆ ಅನೇಕ ಮಾಜಿ ಕ್ರಿಕೆಟಿಗರು ಈ ಬೆಳವಣಿಗೆಗಳ ಬಗ್ಗೆ ಸಾಕಷ್ಟು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಕೀರ್ತಿ ಆಜಾದ್ ಈ ವಿಚಾರವಾಗಿ ಮಾತನಾಡಿದ್ದು ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ್ದಾರೆ.

ಈ ವಿವಾದ ಭಾರತೀಯ ಕ್ರಿಕೆಟ್​ನಲ್ಲಿ ಒಂದು ಕಪ್ಪು ಚುಕ್ಕೆಯಾಗಿ ಉಳಿಯುವುದು ಖಚಿತ. ಇದರ ನಡುವೆ ಅನೇಕ ಮಾಜಿ ಕ್ರಿಕೆಟಿಗರು ಈ ಬೆಳವಣಿಗೆಗಳ ಬಗ್ಗೆ ಸಾಕಷ್ಟು ಅಭಿಪ್ರಾಯ ಹಂಚಿಕೊಳ್ಳುತ್ತಿದ್ದಾರೆ. ಸದ್ಯ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್ರೌಂಡರ್ ಕೀರ್ತಿ ಆಜಾದ್ ಈ ವಿಚಾರವಾಗಿ ಮಾತನಾಡಿದ್ದು ಬಿಸಿಸಿಐ ಆಯ್ಕೆ ಸಮಿತಿ ವಿರುದ್ಧ ಕಿಡಿಕಾರಿದ್ದಾರೆ.

2 / 7
ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರು ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ ಬಗ್ಗೆ ಅವರಿಗೆ ಕರೆ ಮಾಡಿ ತಿಳಿಸುವ ಮುನ್ನ ಅಧ್ಯಕ್ಷ ಸೌರವ್ ಗಂಗೂಲಿ ಬಳಿ ಅನುಮತಿ ಪಡೆಯಬೇಕಿತ್ತು. ಇದು ನಿಯಮ ಆಗಿದೆ. ಅಧ್ಯಕ್ಷರ ಅನುಮತಿ ಪಡೆಯದೆ ಈರೀತಿ ಮುಂದುವರೆಯುವ ಹಾಗಿಲ್ಲ ಎಂದು ಕೀರ್ತಿ ಆಜಾದ್ ಹೇಳಿದ್ದಾರೆ.

ಬಿಸಿಸಿಐ ಆಯ್ಕೆ ಸಮಿತಿ ಸದಸ್ಯರು ಏಕದಿನ ನಾಯಕತ್ವದಿಂದ ವಿರಾಟ್ ಕೊಹ್ಲಿಯನ್ನು ಕೆಳಗಿಳಿಸಿದ ಬಗ್ಗೆ ಅವರಿಗೆ ಕರೆ ಮಾಡಿ ತಿಳಿಸುವ ಮುನ್ನ ಅಧ್ಯಕ್ಷ ಸೌರವ್ ಗಂಗೂಲಿ ಬಳಿ ಅನುಮತಿ ಪಡೆಯಬೇಕಿತ್ತು. ಇದು ನಿಯಮ ಆಗಿದೆ. ಅಧ್ಯಕ್ಷರ ಅನುಮತಿ ಪಡೆಯದೆ ಈರೀತಿ ಮುಂದುವರೆಯುವ ಹಾಗಿಲ್ಲ ಎಂದು ಕೀರ್ತಿ ಆಜಾದ್ ಹೇಳಿದ್ದಾರೆ.

3 / 7
ಯಾವುದೇ ಮಾದರಿಯ ಕ್ರಿಕೆಟ್​ನಲ್ಲಿ ನಾಯಕನ ಬದಲಾವಣೆ ಆಗಬೇಕು ಎಂದಾದರೆ ಆ ವಿಚಾರವನ್ನು ಅಧ್ಯಕ್ಷರಿಗೆ ತಿಳಿಸಬೇಕು. ಅವರು ಸಹಿ ಮಾಡಿದ ನಂತರ ಮುಂದುವರೆಯಬೇಕು. ವಿರಾಟ್ ಅಸಮಾಧಾನಗೊಂಡಿರುವುದಿಲ್ಲ. ಬದಲಾಗಿ ಅವರು ತನ್ನನ್ನು ನಡೆಸಿಕೊಂಡ ರೀತಿಗೆ ನೋವು ಪಟ್ಟಿರುತ್ತಾರೆ. ಈ ವಿಚಾರ ತಿಳಿದ ಕೂಡಲೆ ಗಂಗೂಲಿ ಕೂಡ ಕೊಹ್ಲಿ ಜೊತೆ ಮಾತನಾಡಬಹುದಿತ್ತು ಎಂಬುದು ಕೀರ್ತಿ ಆಜಾದ್ ಅಭಿಪ್ರಾಯ.

ಯಾವುದೇ ಮಾದರಿಯ ಕ್ರಿಕೆಟ್​ನಲ್ಲಿ ನಾಯಕನ ಬದಲಾವಣೆ ಆಗಬೇಕು ಎಂದಾದರೆ ಆ ವಿಚಾರವನ್ನು ಅಧ್ಯಕ್ಷರಿಗೆ ತಿಳಿಸಬೇಕು. ಅವರು ಸಹಿ ಮಾಡಿದ ನಂತರ ಮುಂದುವರೆಯಬೇಕು. ವಿರಾಟ್ ಅಸಮಾಧಾನಗೊಂಡಿರುವುದಿಲ್ಲ. ಬದಲಾಗಿ ಅವರು ತನ್ನನ್ನು ನಡೆಸಿಕೊಂಡ ರೀತಿಗೆ ನೋವು ಪಟ್ಟಿರುತ್ತಾರೆ. ಈ ವಿಚಾರ ತಿಳಿದ ಕೂಡಲೆ ಗಂಗೂಲಿ ಕೂಡ ಕೊಹ್ಲಿ ಜೊತೆ ಮಾತನಾಡಬಹುದಿತ್ತು ಎಂಬುದು ಕೀರ್ತಿ ಆಜಾದ್ ಅಭಿಪ್ರಾಯ.

4 / 7
ಎಲ್ಲಾ ಆಯ್ಕೆದಾರರು ನಿಜವಾಗಿಯೂ ಉತ್ತಮ ವ್ಯಕ್ತಿಗಳು, ಆದರೆ ನೀವು ಅವರು ಆಡಿದ ಒಟ್ಟು ಪಂದ್ಯಗಳ ಲೆಕ್ಕ ಹಾಕಿದರೆ, ಅದು ವಿರಾಟ್ ಕೊಹ್ಲಿ ಆಡಿದ ಅರ್ಧ ಪಂದ್ಯಗಳ್ಳಷ್ಟೂ ಇರುವುದುಲ್ಲ ಎಂದು ಭಾರತದ ಮಾಜಿ ಆಲ್ ರೌಂಡರ್ ಖಡಕ್ ಆಗಿ ಹೇಳಿದ್ದಾರೆ.

ಎಲ್ಲಾ ಆಯ್ಕೆದಾರರು ನಿಜವಾಗಿಯೂ ಉತ್ತಮ ವ್ಯಕ್ತಿಗಳು, ಆದರೆ ನೀವು ಅವರು ಆಡಿದ ಒಟ್ಟು ಪಂದ್ಯಗಳ ಲೆಕ್ಕ ಹಾಕಿದರೆ, ಅದು ವಿರಾಟ್ ಕೊಹ್ಲಿ ಆಡಿದ ಅರ್ಧ ಪಂದ್ಯಗಳ್ಳಷ್ಟೂ ಇರುವುದುಲ್ಲ ಎಂದು ಭಾರತದ ಮಾಜಿ ಆಲ್ ರೌಂಡರ್ ಖಡಕ್ ಆಗಿ ಹೇಳಿದ್ದಾರೆ.

5 / 7
ಇನ್ನು ಸುನೀಲ್ ಗವಾಸ್ಕರ್ ಕೂಡ ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ. ವಿರಾಟ್ ತನ್ನ ವಿದಾಯ ಪತ್ರದಲ್ಲಿ ಬರೆದ ಸಾಲಿನಿಂದ ಬಿಸಿಸಿಐನ ಉನ್ನತ ಅಧಿಕಾರಿಗಳ ಭಾವನೆಗಳಿಗೆ ನೋವುಂಟು ಮಾಡಿರಬಹುದು ಎಂದಿದ್ದಾರೆ. ವಿದಾಯ ಪತ್ರದಲ್ಲಿ ವಿರಾಟ್, "ಇನ್ನು ಮುಂದೆ ನಾನು ಏಕದಿನ ಮತ್ತು ಟೆಸ್ಟ್ ತಂಡದ ನಾಯಕನಾಗಿ ಮುಂದುವರಿಯುತ್ತೇನೆ" ಎಂದು ಬರೆದುಕೊಂಡಿದ್ದರು. ಈ ಸಾಲುಗಳು ಅವರ ವಿರುದ್ಧ ಈ ಸಣ್ಣ ವಿರೋಧಿ ಭಾವನೆ ಇರಲು ಒಂದು ಕಾರಣವಾಗಿರಬಹುದು ಎಂಬುದು ಗವಾಸ್ಕರ್ ಅಭಿಪ್ರಾಯ.

ಇನ್ನು ಸುನೀಲ್ ಗವಾಸ್ಕರ್ ಕೂಡ ಕೊಹ್ಲಿ ಬಗ್ಗೆ ಮಾತನಾಡಿದ್ದಾರೆ. ವಿರಾಟ್ ತನ್ನ ವಿದಾಯ ಪತ್ರದಲ್ಲಿ ಬರೆದ ಸಾಲಿನಿಂದ ಬಿಸಿಸಿಐನ ಉನ್ನತ ಅಧಿಕಾರಿಗಳ ಭಾವನೆಗಳಿಗೆ ನೋವುಂಟು ಮಾಡಿರಬಹುದು ಎಂದಿದ್ದಾರೆ. ವಿದಾಯ ಪತ್ರದಲ್ಲಿ ವಿರಾಟ್, "ಇನ್ನು ಮುಂದೆ ನಾನು ಏಕದಿನ ಮತ್ತು ಟೆಸ್ಟ್ ತಂಡದ ನಾಯಕನಾಗಿ ಮುಂದುವರಿಯುತ್ತೇನೆ" ಎಂದು ಬರೆದುಕೊಂಡಿದ್ದರು. ಈ ಸಾಲುಗಳು ಅವರ ವಿರುದ್ಧ ಈ ಸಣ್ಣ ವಿರೋಧಿ ಭಾವನೆ ಇರಲು ಒಂದು ಕಾರಣವಾಗಿರಬಹುದು ಎಂಬುದು ಗವಾಸ್ಕರ್ ಅಭಿಪ್ರಾಯ.

6 / 7
ಈಗ ಏಕದಿನ ಮತ್ತು ಟಿ20 ನಾಯಕತ್ವದ ಹೊರೆ ಇಲ್ಲದ ಕಾರಣ ಟೆಸ್ಟ್ ಕ್ರಿಕೆಟ್​ನಲ್ಲಿ ಮಾತ್ರ ತಂಡವನ್ನು ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅವರನ್ನು ನಾವು ಎರಡು ವರ್ಷಗಳ ಹಿಂದಿನ ರೀತಿಯಲ್ಲಿ ನೋಡಬಹುದು, ಶತಕದ ಬೆನ್ನಲ್ಲೇ ಮತ್ತೊಂದು ಶತಕ ಸಿಡಿಸುವ ರೀತಿ ಎಂದು ಗವಾಸ್ಕರ್ ಹೇಳಿದ್ದಾರೆ.

ಈಗ ಏಕದಿನ ಮತ್ತು ಟಿ20 ನಾಯಕತ್ವದ ಹೊರೆ ಇಲ್ಲದ ಕಾರಣ ಟೆಸ್ಟ್ ಕ್ರಿಕೆಟ್​ನಲ್ಲಿ ಮಾತ್ರ ತಂಡವನ್ನು ಕೊಹ್ಲಿ ಮುನ್ನಡೆಸುತ್ತಿದ್ದಾರೆ. ಹೀಗಾಗಿ ಕೊಹ್ಲಿ ಅವರನ್ನು ನಾವು ಎರಡು ವರ್ಷಗಳ ಹಿಂದಿನ ರೀತಿಯಲ್ಲಿ ನೋಡಬಹುದು, ಶತಕದ ಬೆನ್ನಲ್ಲೇ ಮತ್ತೊಂದು ಶತಕ ಸಿಡಿಸುವ ರೀತಿ ಎಂದು ಗವಾಸ್ಕರ್ ಹೇಳಿದ್ದಾರೆ.

7 / 7
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ