AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: KKR ತಂಡಕ್ಕೆ ಕೈ ಕೊಟ್ಟ ಸ್ಟಾರ್ ಆಲ್​ರೌಂಡರ್..!

IPL 2023 Kannada: ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ: ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್.

TV9 Web
| Updated By: ಝಾಹಿರ್ ಯೂಸುಫ್|

Updated on: Apr 04, 2023 | 3:58 PM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 16 ರಿಂದ ಮತ್ತೋರ್ವ ಆಟಗಾರ ಹೊರಗುಳಿದಿದ್ದಾರೆ. ಈ ಬಾರಿ ಐಪಿಎಲ್​ನಿಂದ ಹೊರಗುಳಿದಿರುವುದು ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಎಂಬುದು ವಿಶೇಷ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್​ 16 ರಿಂದ ಮತ್ತೋರ್ವ ಆಟಗಾರ ಹೊರಗುಳಿದಿದ್ದಾರೆ. ಈ ಬಾರಿ ಐಪಿಎಲ್​ನಿಂದ ಹೊರಗುಳಿದಿರುವುದು ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದ ಸ್ಟಾರ್ ಆಲ್​ರೌಂಡರ್ ಎಂಬುದು ವಿಶೇಷ.

1 / 7
ಹೌದು, ಈ ಬಾರಿಯ ಹರಾಜಿನಲ್ಲಿ 1.5 ಕೋಟಿಗೆ ಕೆಕೆಆರ್​ ತಂಡ ಖರೀದಿಸಿದ್ದ ಬಾಂಗ್ಲಾದೇಶ್ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಶಕೀಬ್ ಸದ್ಯ ಐರ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ ಆಡುತ್ತಿದ್ದಾರೆ. ಇದಾಗ್ಯೂ ಅವರು ಏಪ್ರಿಲ್ 8 ರ ಬಳಿಕ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

ಹೌದು, ಈ ಬಾರಿಯ ಹರಾಜಿನಲ್ಲಿ 1.5 ಕೋಟಿಗೆ ಕೆಕೆಆರ್​ ತಂಡ ಖರೀದಿಸಿದ್ದ ಬಾಂಗ್ಲಾದೇಶ್ ಆಲ್​ರೌಂಡರ್ ಶಕೀಬ್ ಅಲ್ ಹಸನ್ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಶಕೀಬ್ ಸದ್ಯ ಐರ್ಲೆಂಡ್ ವಿರುದ್ಧ ಟೆಸ್ಟ್​ ಸರಣಿ ಆಡುತ್ತಿದ್ದಾರೆ. ಇದಾಗ್ಯೂ ಅವರು ಏಪ್ರಿಲ್ 8 ರ ಬಳಿಕ ತಂಡವನ್ನು ಕೂಡಿಕೊಳ್ಳಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು.

2 / 7
ಆದರೀಗ ರಾಷ್ಟ್ರೀಯ ತಂಡದ ಪರ ಆಡುವ ಸಲುವಾಗಿ ಹಾಗೂ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹಿಂದೆ ಸರಿಯುತ್ತಿರುವುದಾಗಿ ಶಕೀಬ್ ಅಲ್ ಹಸನ್ ತಿಳಿಸಿದ್ದಾರೆ. ಹೀಗಾಗಿ ಕೆಕೆಆರ್ ತಂಡವು ಹೊಸ ವಿದೇಶಿ ಆಲ್​ರೌಂಡರ್​ನ ಆಯ್ಕೆಗೆ ಮುಂದಾಗಲಿದೆ.

ಆದರೀಗ ರಾಷ್ಟ್ರೀಯ ತಂಡದ ಪರ ಆಡುವ ಸಲುವಾಗಿ ಹಾಗೂ ವೈಯುಕ್ತಿಕ ಕಾರಣಗಳಿಂದಾಗಿ ಐಪಿಎಲ್​ನಿಂದ ಹಿಂದೆ ಸರಿಯುತ್ತಿರುವುದಾಗಿ ಶಕೀಬ್ ಅಲ್ ಹಸನ್ ತಿಳಿಸಿದ್ದಾರೆ. ಹೀಗಾಗಿ ಕೆಕೆಆರ್ ತಂಡವು ಹೊಸ ವಿದೇಶಿ ಆಲ್​ರೌಂಡರ್​ನ ಆಯ್ಕೆಗೆ ಮುಂದಾಗಲಿದೆ.

3 / 7
ಇನ್ನು ಕೆಕೆಆರ್ ತಂಡದಲ್ಲಿರುವ ಮತ್ತೋರ್ವ ಆಟಗಾರ ಲಿಟ್ಟನ್ ದಾಸ್ ಈ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟತೆ ಇಲ್ಲ. ಏಕೆಂದರೆ ಮೇ 2 ರಿಂದ ಬಾಂಗ್ಲಾದೇಶ್ ಐರ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಲಿದೆ. ಹೀಗಾಗಿ ಲಿಟ್ಟನ್ ದಾಸ್ ಕೂಡ ಐಪಿಎಲ್​ನಿಂದ ಹಿಂದೆ ಸರಿದರೂ ಅಚ್ಚರಿಪಡಬೇಕಿಲ್ಲ.

ಇನ್ನು ಕೆಕೆಆರ್ ತಂಡದಲ್ಲಿರುವ ಮತ್ತೋರ್ವ ಆಟಗಾರ ಲಿಟ್ಟನ್ ದಾಸ್ ಈ ಬಾರಿ ಐಪಿಎಲ್​ನಲ್ಲಿ ಕಾಣಿಸಿಕೊಳ್ಳಲಿದ್ದಾರಾ ಎಂಬುದರ ಬಗ್ಗೆ ಕೂಡ ಸ್ಪಷ್ಟತೆ ಇಲ್ಲ. ಏಕೆಂದರೆ ಮೇ 2 ರಿಂದ ಬಾಂಗ್ಲಾದೇಶ್ ಐರ್ಲೆಂಡ್ ವಿರುದ್ಧ ಏಕದಿನ ಸರಣಿ ಆಡಲಿದೆ. ಹೀಗಾಗಿ ಲಿಟ್ಟನ್ ದಾಸ್ ಕೂಡ ಐಪಿಎಲ್​ನಿಂದ ಹಿಂದೆ ಸರಿದರೂ ಅಚ್ಚರಿಪಡಬೇಕಿಲ್ಲ.

4 / 7
ಇದಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಯ ಕಾರಣ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ನಿತೀಶ್ ರಾಣಾ ಅವರನ್ನು ಕೆಕೆಆರ್ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದೆ.

ಇದಕ್ಕೂ ಮುನ್ನ ಬೆನ್ನು ನೋವಿನ ಸಮಸ್ಯೆಯ ಕಾರಣ ಕೊಲ್ಕತ್ತಾ ನೈಟ್​ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಐಪಿಎಲ್​ನಿಂದ ಹೊರಗುಳಿದಿದ್ದರು. ಅವರ ಬದಲಿಗೆ ನಿತೀಶ್ ರಾಣಾ ಅವರನ್ನು ಕೆಕೆಆರ್ ತಂಡದ ನಾಯಕನಾಗಿ ಆಯ್ಕೆ ಮಾಡಲಾಗಿದೆ.

5 / 7
ಆದರೆ ನಿತೀಶ್ ರಾಣಾ ನಾಯಕನಾಗಿ ಪಾದರ್ಪಣೆ ಮಾಡಿದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್​ ವಿರುದ್ಧ 7 ರನ್​ಗಳಿಂದ ಸೋಲನುಭವಿಸಿದೆ. ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿರುವ ಕೆಕೆಆರ್ ಏಪ್ರಿಲ್ 6 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

ಆದರೆ ನಿತೀಶ್ ರಾಣಾ ನಾಯಕನಾಗಿ ಪಾದರ್ಪಣೆ ಮಾಡಿದ ಪಂದ್ಯದಲ್ಲೇ ಪಂಜಾಬ್ ಕಿಂಗ್ಸ್​ ವಿರುದ್ಧ 7 ರನ್​ಗಳಿಂದ ಸೋಲನುಭವಿಸಿದೆ. ಇದೀಗ 2ನೇ ಪಂದ್ಯಕ್ಕೆ ಸಜ್ಜಾಗಿರುವ ಕೆಕೆಆರ್ ಏಪ್ರಿಲ್ 6 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ.

6 / 7
ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ: ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಡೇವಿಡ್ ವೀಝ, ಸುಯಶ್ ಶರ್ಮಾ, ವೈಭವ್ ಅರೋರಾ, ಎನ್. ಜಗದೀಸನ್,

ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ಹೀಗಿದೆ: ನಿತೀಶ್ ರಾಣಾ (ನಾಯಕ), ರಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗುಸನ್, ಉಮೇಶ್ ಯಾದವ್, ಟಿಮ್ ಸೌಥಿ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಮನ್ದೀಪ್ ಸಿಂಗ್, ಲಿಟ್ಟನ್ ದಾಸ್, ಕುಲ್ವಂತ್ ಖೆಜ್ರೋಲಿಯಾ, ಡೇವಿಡ್ ವೀಝ, ಸುಯಶ್ ಶರ್ಮಾ, ವೈಭವ್ ಅರೋರಾ, ಎನ್. ಜಗದೀಸನ್,

7 / 7
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ