Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಭರ್ಜರಿ ಶತಕ ಬಾರಿಸಿದ ಕೆಎಲ್ ರಾಹುಲ್

KL Rahul Century: ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಕೆಎಲ್ ರಾಹುಲ್ ಅವರ ಭರ್ಜರಿ ಶತಕದ ನೆರವಿನಿಂದ 245 ರನ್​ ಕಲೆಹಾಕಿದೆ. ಸೌತ್ ಆಫ್ರಿಕಾ ಪರ ಕಗಿಸೊ ರಬಾಡ 5 ವಿಕೆಟ್ ಪಡೆದರೆ, ನಾಂಡ್ರೆ ಬರ್ಗರ್ 3 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on:Dec 27, 2023 | 3:14 PM

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಸೆಂಚುರಿಯನ್​ನಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಭರ್ಜರಿ ಶತಕ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

1 / 7
ಮೊದಲ ಇನಿಂಗ್ಸ್​ನ 5ನೇ ಓವರ್​ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್​ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.

ಮೊದಲ ಇನಿಂಗ್ಸ್​ನ 5ನೇ ಓವರ್​ನಲ್ಲೇ ರೋಹಿತ್ ಶರ್ಮಾ (5) ವಿಕೆಟ್ ಪಡೆಯುವ ಮೂಲಕ ಕಗಿಸೊ ರಬಾಡ ಮೊದಲ ಯಶಸ್ಸು ತಂದುಕೊಟ್ಟರು. ಇದರ ಬೆನ್ನಲ್ಲೇ ಯಶಸ್ವಿ ಜೈಸ್ವಾಲ್ (17) ಹಾಗೂ ಶುಭ್​ಮನ್ ಗಿಲ್ (2) ಗೆ ನಾಂಡ್ರೆ ಬರ್ಗರ್ ಪೆವಿಲಿಯನ್ ಹಾದಿ ತೋರಿಸಿದರು.

2 / 7
ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 68 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಮತ್ತೆ ದಾಳಿಗಿಳಿದ ರಬಾಡ ಶ್ರೇಯಸ್ ಅಯ್ಯರ್ (31) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (38) ಕೂಡ ರಬಾಡಗೆ ವಿಕೆಟ್ ಒಪ್ಪಿಸಿದರು. ಪರಿಣಾಮ ಟೀಮ್ ಇಂಡಿಯಾ 107 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು.

ಈ ಹಂತದಲ್ಲಿ ಜೊತೆಗೂಡಿದ ವಿರಾಟ್ ಕೊಹ್ಲಿ ಹಾಗೂ ಶ್ರೇಯಸ್ ಅಯ್ಯರ್ 68 ರನ್​ಗಳ ಜೊತೆಯಾಟವಾಡಿದರು. ಈ ವೇಳೆ ಮತ್ತೆ ದಾಳಿಗಿಳಿದ ರಬಾಡ ಶ್ರೇಯಸ್ ಅಯ್ಯರ್ (31) ಅವರನ್ನು ಕ್ಲೀನ್ ಬೌಲ್ಡ್ ಮಾಡಿದರು. ಇದರ ಬೆನ್ನಲ್ಲೇ ವಿರಾಟ್ ಕೊಹ್ಲಿ (38) ಕೂಡ ರಬಾಡಗೆ ವಿಕೆಟ್ ಒಪ್ಪಿಸಿದರು. ಪರಿಣಾಮ ಟೀಮ್ ಇಂಡಿಯಾ 107 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿತು.

3 / 7
ಈ ಹಂತದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಸೌತ್ ಆಫ್ರಿಕಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಕನ್ನಡಿಗ ರನ್​ಗಳಿಸುತ್ತಾ ಸಾಗಿದರು. ಅಲ್ಲದೆ ಮೊದಲ ದಿನದಾಟದಲ್ಲೇ ಅರ್ಧಶತಕ ಪೂರೈಸಿ ತಂಡಕ್ಕೆ ಆಸರೆಯಾಗಿ ನಿಂತರು.

ಈ ಹಂತದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಆಕರ್ಷಕ ಬ್ಯಾಟಿಂಗ್ ಪ್ರದರ್ಶಿಸಿದರು. ಸೌತ್ ಆಫ್ರಿಕಾ ವೇಗಿಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಕನ್ನಡಿಗ ರನ್​ಗಳಿಸುತ್ತಾ ಸಾಗಿದರು. ಅಲ್ಲದೆ ಮೊದಲ ದಿನದಾಟದಲ್ಲೇ ಅರ್ಧಶತಕ ಪೂರೈಸಿ ತಂಡಕ್ಕೆ ಆಸರೆಯಾಗಿ ನಿಂತರು.

4 / 7
ಅಲ್ಲದೆ ಮೊದಲ ದಿನದಾಟದಲ್ಲಿ ಅಜೇಯ 70 ರನ್​ ಬಾರಿಸಿ ಕೆಎಲ್ ರಾಹುಲ್ ತಂಡದ ಮೊತ್ತವನ್ನು 8 ವಿಕೆಟ್​ ನಷ್ಟಕ್ಕೆ 208 ಕ್ಕೆ ತಂದು ನಿಲ್ಲಿಸಿದರು. 2ನೇ ದಿನದಾಟದಲ್ಲಿ ಸಿರಾಜ್ ಜೊತೆ ಇನಿಂಗ್ಸ್ ಆರಂಭಿಸಿದ ರಾಹುಲ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

ಅಲ್ಲದೆ ಮೊದಲ ದಿನದಾಟದಲ್ಲಿ ಅಜೇಯ 70 ರನ್​ ಬಾರಿಸಿ ಕೆಎಲ್ ರಾಹುಲ್ ತಂಡದ ಮೊತ್ತವನ್ನು 8 ವಿಕೆಟ್​ ನಷ್ಟಕ್ಕೆ 208 ಕ್ಕೆ ತಂದು ನಿಲ್ಲಿಸಿದರು. 2ನೇ ದಿನದಾಟದಲ್ಲಿ ಸಿರಾಜ್ ಜೊತೆ ಇನಿಂಗ್ಸ್ ಆರಂಭಿಸಿದ ರಾಹುಲ್ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದರು.

5 / 7
ಇತ್ತ 9ನೇ ವಿಕೆಟ್​ ಆಗಿ ಸಿರಾಜ್ ಹೊರ ನಡೆಯುತ್ತಿದ್ದರೆ ಅತ್ತ ರಾಹುಲ್​ಗೆ ಶತಕ ಪೂರೈಸಲು 5 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಪ್ರಸಿದ್ಧ್ ಕೃಷ್ಣ ಸಿಂಗಲ್ ರನ್ ತೆಗೆದುಕೊಂಡರು. ಈ ವೇಳೆ ಸ್ಟ್ರೈಕ್​ಗೆ ಬಂದ ಕೆಎಲ್ ರಾಹುಲ್ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 133 ಎಸೆತಗಳಲ್ಲಿ ಶತಕ ಪೂರೈಸಿದರು.

ಇತ್ತ 9ನೇ ವಿಕೆಟ್​ ಆಗಿ ಸಿರಾಜ್ ಹೊರ ನಡೆಯುತ್ತಿದ್ದರೆ ಅತ್ತ ರಾಹುಲ್​ಗೆ ಶತಕ ಪೂರೈಸಲು 5 ರನ್​ಗಳ ಅವಶ್ಯಕತೆಯಿತ್ತು. ಈ ವೇಳೆ ಪ್ರಸಿದ್ಧ್ ಕೃಷ್ಣ ಸಿಂಗಲ್ ರನ್ ತೆಗೆದುಕೊಂಡರು. ಈ ವೇಳೆ ಸ್ಟ್ರೈಕ್​ಗೆ ಬಂದ ಕೆಎಲ್ ರಾಹುಲ್ ಭರ್ಜರಿ ಸಿಕ್ಸ್ ಸಿಡಿಸುವ ಮೂಲಕ 133 ಎಸೆತಗಳಲ್ಲಿ ಶತಕ ಪೂರೈಸಿದರು.

6 / 7
ಅಂತಿಮವಾಗಿ 137 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 101 ರನ್ ಬಾರಿಸಿ ಕೆಎಲ್ ರಾಹುಲ್ ಔಟಾದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ 245 ರನ್​ಗಳಿಸಿ ಆಲೌಟ್ ಆಗಿದೆ.

ಅಂತಿಮವಾಗಿ 137 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 14 ಫೋರ್​ಗಳೊಂದಿಗೆ 101 ರನ್ ಬಾರಿಸಿ ಕೆಎಲ್ ರಾಹುಲ್ ಔಟಾದರು. ಈ ಮೂಲಕ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ 245 ರನ್​ಗಳಿಸಿ ಆಲೌಟ್ ಆಗಿದೆ.

7 / 7

Published On - 2:31 pm, Wed, 27 December 23

Follow us
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್