AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಬರೋಬ್ಬರಿ 46 ವರ್ಷಗಳ ಬಳಿಕ ಹೊಸ ಇತಿಹಾಸ ನಿರ್ಮಿಸಿದ ಕೆಎಲ್ ರಾಹುಲ್

India vs England: ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಪ್ರಥಮ ಇನಿಂಗ್ಸ್​ನಲ್ಲಿ 358 ರನ್ ಕಲೆಹಾಕಿದರೆ, ಇಂಗ್ಲೆಂಡ್ ಮೊದಲ ಇನಿಂಗ್ಸ್​ನಲ್ಲಿ 669 ರನ್​ಗಳಿಸಿತು. ಇದೀಗ ದ್ವಿತೀಯ ಇನಿಂಗ್ಸ್ ಆಡುತ್ತಿರುವ ಟೀಮ್ ಇಂಡಿಯಾ 4ನೇ ದಿನದಾಟದ ಅಂತ್ಯಕ್ಕೆ 2 ವಿಕೆಟ್ ಕಳೆದುಕೊಂಡು 174 ರನ್​ಗಳಿಸಿದೆ.

ಝಾಹಿರ್ ಯೂಸುಫ್
|

Updated on:Jul 27, 2025 | 11:36 AM

Share
ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 46 ರನ್ ಬಾರಿಸಿದ್ದ ಕೆಎಲ್​ಆರ್​ ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 87 ರನ್​ಗಳಿಸಿದ್ದಾರೆ. ಈ ಎಂಬತ್ತೇಳು ರನ್​ಗಳೊಂದಿಗೆ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 508* ರನ್ ಕಲೆಹಾಕಿದ್ದಾರೆ.

ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕನ್ನಡಿಗ ಕೆಎಲ್ ರಾಹುಲ್ (KL Rahul) ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ. ಮ್ಯಾಂಚೆಸ್ಟರ್​ನಲ್ಲಿ ನಡೆಯುತ್ತಿರುವ 4ನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 46 ರನ್ ಬಾರಿಸಿದ್ದ ಕೆಎಲ್​ಆರ್​ ಇದೀಗ ದ್ವಿತೀಯ ಇನಿಂಗ್ಸ್​ನಲ್ಲಿ ಅಜೇಯ 87 ರನ್​ಗಳಿಸಿದ್ದಾರೆ. ಈ ಎಂಬತ್ತೇಳು ರನ್​ಗಳೊಂದಿಗೆ ರಾಹುಲ್ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಒಟ್ಟು 508* ರನ್ ಕಲೆಹಾಕಿದ್ದಾರೆ.

1 / 5
ಇದರೊಂದಿಗೆ ವಿದೇಶಿ ಟೆಸ್ಟ್ ಸರಣಿಯಲ್ಲಿ 500+ ರನ್​ ಕಲೆಹಾಕಿದ ಭಾರತದ 2ನೇ ಆರಂಭಿಕ ದಾಂಡಿಗ ಎಂಬ ಹೆಗ್ಗಳಿಕೆ ಕೆಎಲ್ ರಾಹುಲ್ ಪಾಲಾಗಿದೆ. ಈ ಮೂಲಕ ಕಳೆದ 4 ದಶಕಗಳಲ್ಲಿ ಟೀಮ್ ಇಂಡಿಯಾದ ಯಾವುದೇ ಓಪನರ್​ಗೆ ಸಾಧ್ಯವಾಗದೇ ಇರುವುದನ್ನು ಕನ್ನಡಿಗ ಮಾಡಿ ತೋರಿಸಿದ್ದಾರೆ.

ಇದರೊಂದಿಗೆ ವಿದೇಶಿ ಟೆಸ್ಟ್ ಸರಣಿಯಲ್ಲಿ 500+ ರನ್​ ಕಲೆಹಾಕಿದ ಭಾರತದ 2ನೇ ಆರಂಭಿಕ ದಾಂಡಿಗ ಎಂಬ ಹೆಗ್ಗಳಿಕೆ ಕೆಎಲ್ ರಾಹುಲ್ ಪಾಲಾಗಿದೆ. ಈ ಮೂಲಕ ಕಳೆದ 4 ದಶಕಗಳಲ್ಲಿ ಟೀಮ್ ಇಂಡಿಯಾದ ಯಾವುದೇ ಓಪನರ್​ಗೆ ಸಾಧ್ಯವಾಗದೇ ಇರುವುದನ್ನು ಕನ್ನಡಿಗ ಮಾಡಿ ತೋರಿಸಿದ್ದಾರೆ.

2 / 5
ಅಂದರೆ ಭಾರತದ ಪರ ವಿದೇಶಿ ಟೆಸ್ಟ್ ಸರಣಿವೊಂದರಲ್ಲಿ 500+ ರನ್ ಕಲೆಹಾಕಿರುವುದು ಸುನಿಲ್ ಗವಾಸ್ಕರ್ ಮಾತ್ರ. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 774 ರನ್​ ಕಲೆಹಾಕಿ ಗವಾಸ್ಕರ್ ಐತಿಹಾಸಿಕ ಸಾಧನೆ ಮಾಡಿದ್ದರು. ಇನ್ನು 1979 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 542 ರನ್​ಗಳಿಸಿ ಮಿಂಚಿದ್ದರು. ಇದಾದ ಬಳಿಕ ಭಾರತದ ಯಾವುದೇ ಬ್ಯಾಟರ್ ವಿದೇಶಿ ಸರಣಿಯೊಂದರಲ್ಲಿ 500 ರನ್​ಗಳ ಮೈಲುಗಲ್ಲು ಮುಟ್ಟಿರಲಿಲ್ಲ.

ಅಂದರೆ ಭಾರತದ ಪರ ವಿದೇಶಿ ಟೆಸ್ಟ್ ಸರಣಿವೊಂದರಲ್ಲಿ 500+ ರನ್ ಕಲೆಹಾಕಿರುವುದು ಸುನಿಲ್ ಗವಾಸ್ಕರ್ ಮಾತ್ರ. 1971 ರಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 774 ರನ್​ ಕಲೆಹಾಕಿ ಗವಾಸ್ಕರ್ ಐತಿಹಾಸಿಕ ಸಾಧನೆ ಮಾಡಿದ್ದರು. ಇನ್ನು 1979 ರಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ 542 ರನ್​ಗಳಿಸಿ ಮಿಂಚಿದ್ದರು. ಇದಾದ ಬಳಿಕ ಭಾರತದ ಯಾವುದೇ ಬ್ಯಾಟರ್ ವಿದೇಶಿ ಸರಣಿಯೊಂದರಲ್ಲಿ 500 ರನ್​ಗಳ ಮೈಲುಗಲ್ಲು ಮುಟ್ಟಿರಲಿಲ್ಲ.

3 / 5
ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೆಎಲ್ ರಾಹುಲ್ 508* ರನ್ ಕಲೆಹಾಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ 46 ವರ್ಷಗಳಿಂದ ಭಾರತದ ಯಾವುದೇ ಓಪನರ್​ಗಳಿಗೆ ಸಾಧ್ಯವಾಗದ ಮೈಲಿಗಲ್ಲೊಂದನ್ನು ದಾಟಲು ಕನ್ನಡಿಗ ಯಶಸ್ವಿಯಾಗಿದ್ದಾರೆ. ಈ ಯಶಸ್ಸಿನೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಓಪನರ್ ಎಂಬ ದಾಖಲೆ ಬರೆಯುವ ನಿರೀಕ್ಷೆಯಿದೆ.

ಇದೀಗ ಇಂಗ್ಲೆಂಡ್ ವಿರುದ್ಧದ ಸರಣಿಯಲ್ಲಿ ಕೆಎಲ್ ರಾಹುಲ್ 508* ರನ್ ಕಲೆಹಾಕುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ. ಈ ಮೂಲಕ 46 ವರ್ಷಗಳಿಂದ ಭಾರತದ ಯಾವುದೇ ಓಪನರ್​ಗಳಿಗೆ ಸಾಧ್ಯವಾಗದ ಮೈಲಿಗಲ್ಲೊಂದನ್ನು ದಾಟಲು ಕನ್ನಡಿಗ ಯಶಸ್ವಿಯಾಗಿದ್ದಾರೆ. ಈ ಯಶಸ್ಸಿನೊಂದಿಗೆ ಕೆಎಲ್ ರಾಹುಲ್ ಇಂಗ್ಲೆಂಡ್ ವಿರುದ್ಧ ಸರಣಿಯೊಂದರಲ್ಲಿ ಅತ್ಯಧಿಕ ರನ್ ಕಲೆಹಾಕಿದ ಭಾರತೀಯ ಓಪನರ್ ಎಂಬ ದಾಖಲೆ ಬರೆಯುವ ನಿರೀಕ್ಷೆಯಿದೆ.

4 / 5
ಈ ದಾಖಲೆ ಬರೆಯಲು ಕೆಎಲ್ ರಾಹುಲ್​ಗೆ ಇನ್ನು ಬೇಕಿರುವುದು ಕೇವಲ 45 ರನ್​ಗಳು ಮಾತ್ರ. ಐದನೇ ದಿನದಾಟದಲ್ಲಿ ಕೆಎಲ್​ಆರ್​ ನಲ್ವತ್ತೈದು ರನ್​ಗಳಿಸಿದರೆ 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಸುನಿಲ್ ಗವಾಸ್ಕರ್ ಬರೆದಿದ್ದ 542 ರನ್​ಗಳ ದಾಖಲೆಯನ್ನು ಅಳಿಸಿ ಹಾಕಿ ಕೆಎಲ್ ರಾಹುಲ್ ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆಯಲಿದ್ದಾರೆ. 

ಈ ದಾಖಲೆ ಬರೆಯಲು ಕೆಎಲ್ ರಾಹುಲ್​ಗೆ ಇನ್ನು ಬೇಕಿರುವುದು ಕೇವಲ 45 ರನ್​ಗಳು ಮಾತ್ರ. ಐದನೇ ದಿನದಾಟದಲ್ಲಿ ಕೆಎಲ್​ಆರ್​ ನಲ್ವತ್ತೈದು ರನ್​ಗಳಿಸಿದರೆ 1979 ರಲ್ಲಿ ಇಂಗ್ಲೆಂಡ್ ವಿರುದ್ಧ ಸುನಿಲ್ ಗವಾಸ್ಕರ್ ಬರೆದಿದ್ದ 542 ರನ್​ಗಳ ದಾಖಲೆಯನ್ನು ಅಳಿಸಿ ಹಾಕಿ ಕೆಎಲ್ ರಾಹುಲ್ ಆಂಗ್ಲರ ನಾಡಿನಲ್ಲಿ ಹೊಸ ಇತಿಹಾಸ ಬರೆಯಲಿದ್ದಾರೆ. 

5 / 5

Published On - 8:25 am, Sun, 27 July 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ