AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಪಂದ್ಯ ಮುಗಿದ ಬಳಿಕ ಕೊಹ್ಲಿ-ಕಿಶನ್ ಬಗ್ಗೆ ಕೆಎಲ್ ರಾಹುಲ್ ಆಡಿದ ಮಾತುಗಳೇನು ಕೇಳಿ

Ishan Kishan-Virat Kohli: ಇಶಾನ್ ಕಿಶನ್ ಅವರ ಅಮೋಘ ದ್ವಿಶತಕ ಹಾಗೂ ವಿರಾಟ್ ಕೊಹ್ಲಿ ಅವರ ಆಕರ್ಷಕ ಶತಕದ ನೆರವಿನಿಂದ ಟೀಮ್ ಇಂಡಿಯಾ 227 ರನ್​ಗಳ ದೊಡ್ಡ ಅಂತರದ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಕೆಎಲ್ ರಾಹುಲ್ ಏನು ಹೇಳಿದ್ದಾರೆ ಕೇಳಿ.

TV9 Web
| Updated By: Vinay Bhat

Updated on:Dec 11, 2022 | 9:43 AM

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಸೋತಿದ್ದರೂ ಅಭಿಮಾನಿಗಳು ಹೆಮ್ಮೆ ಪಡೆವಂತಹ ಅನೇಕ ಸನ್ನಿವೇಶವನ್ನು ಭಾರತ ಸೃಷ್ಟಿ ಮಾಡಿತು. ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಜುರಿ ಮಧ್ಯೆ ರೋಹಿತ್ ಶರ್ಮಾ ಕೊನೆಯಲ್ಲಿ ಬ್ಯಾಟಿಂಗ್​ಗೆ ಬಂದು ಗೆಲುವಿಗೆ ಹೋರಾಟ ನಡೆಸಿದರು. ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆದ ಅಂತಿಮ ತೃತೀಯ ಏಕದಿನದಲ್ಲೂ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರಿತು.

ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯನ್ನು ಸೋತಿದ್ದರೂ ಅಭಿಮಾನಿಗಳು ಹೆಮ್ಮೆ ಪಡೆವಂತಹ ಅನೇಕ ಸನ್ನಿವೇಶವನ್ನು ಭಾರತ ಸೃಷ್ಟಿ ಮಾಡಿತು. ದ್ವಿತೀಯ ಏಕದಿನ ಪಂದ್ಯದಲ್ಲಿ ಇಂಜುರಿ ಮಧ್ಯೆ ರೋಹಿತ್ ಶರ್ಮಾ ಕೊನೆಯಲ್ಲಿ ಬ್ಯಾಟಿಂಗ್​ಗೆ ಬಂದು ಗೆಲುವಿಗೆ ಹೋರಾಟ ನಡೆಸಿದರು. ಚಿತ್ತಗಾಂಗ್​ನ ಜಹುರ್ ಅಹ್ಮದ್ ಚೌಧರಿ ಮೈದಾನದಲ್ಲಿ ನಡೆದ ಅಂತಿಮ ತೃತೀಯ ಏಕದಿನದಲ್ಲೂ ಟೀಮ್ ಇಂಡಿಯಾ ಬೊಂಬಾಟ್ ಪ್ರದರ್ಶನ ತೋರಿತು.

1 / 8
ಇಶಾನ್ ಕಿಶನ್ ಅವರ ಅಮೋಘ ದ್ವಿಶತಕ ಹಾಗೂ ವಿರಾಟ್ ಕೊಹ್ಲಿ ಅವರ ಆಕರ್ಷಕ ಶತಕದ ನೆರವಿನಿಂದ 50 ಓವರ್​ಗಳಲ್ಲಿ  ಭಾರತ 409 ರನ್ ಕಲೆಹಾಕಿತು. ಬಾಂಗ್ಲಾದೇಶ ಕೇವಲ 182 ರನ್​ಗೆ ಆಲೌಟ್ ಆದ ಪರಿಣಾಮ ಟೀಮ್ ಇಂಡಿಯಾ 227 ರನ್​ಗಳ ದೊಡ್ಡ ಅಂತರದ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಕೆಎಲ್ ರಾಹುಲ್ ಏನು ಹೇಳಿದ್ದಾರೆ ಕೇಳಿ.

ಇಶಾನ್ ಕಿಶನ್ ಅವರ ಅಮೋಘ ದ್ವಿಶತಕ ಹಾಗೂ ವಿರಾಟ್ ಕೊಹ್ಲಿ ಅವರ ಆಕರ್ಷಕ ಶತಕದ ನೆರವಿನಿಂದ 50 ಓವರ್​ಗಳಲ್ಲಿ ಭಾರತ 409 ರನ್ ಕಲೆಹಾಕಿತು. ಬಾಂಗ್ಲಾದೇಶ ಕೇವಲ 182 ರನ್​ಗೆ ಆಲೌಟ್ ಆದ ಪರಿಣಾಮ ಟೀಮ್ ಇಂಡಿಯಾ 227 ರನ್​ಗಳ ದೊಡ್ಡ ಅಂತರದ ಜಯ ಸಾಧಿಸಿತು. ಪಂದ್ಯ ಮುಗಿದ ಬಳಿಕ ಮಾತನಾಡಿದ ನಾಯಕ ಕೆಎಲ್ ರಾಹುಲ್ ಏನು ಹೇಳಿದ್ದಾರೆ ಕೇಳಿ.

2 / 8
ನಮ್ಮ ತಂಡದಿಂದ ಈರೀತಿಯ ಆಟವನ್ನು ನಿರೀಕ್ಷೆ ಮಾಡಿದ್ದೆವು. ವಿರಾಟ್ ಕೊಹ್ಲಿ ಮತ್ತು ಇಶಾನ್ ಕಿಶನ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಆಟವನ್ನು ಪ್ರಾರಂಭಿಸಿದ ರೀತಿಯಲ್ಲಿ ಪಂದ್ಯದ ಕೊನೆ ಇರುವುದಿಲ್ಲ ಎಂಬುದಕ್ಕೆ ಇದವೇ ಸಾಕ್ಷಿ. ಇಶಾನ್ ಕಿಶನ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡರು. ಅವರ ಬ್ಯಾಟಿಂಗ್ ಅದ್ಭುತವಾಗಿತ್ತು ಎಂದು ರಾಹುಲ್ ಹೇಳಿದ್ದಾರೆ.

ನಮ್ಮ ತಂಡದಿಂದ ಈರೀತಿಯ ಆಟವನ್ನು ನಿರೀಕ್ಷೆ ಮಾಡಿದ್ದೆವು. ವಿರಾಟ್ ಕೊಹ್ಲಿ ಮತ್ತು ಇಶಾನ್ ಕಿಶನ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಆಟವನ್ನು ಪ್ರಾರಂಭಿಸಿದ ರೀತಿಯಲ್ಲಿ ಪಂದ್ಯದ ಕೊನೆ ಇರುವುದಿಲ್ಲ ಎಂಬುದಕ್ಕೆ ಇದವೇ ಸಾಕ್ಷಿ. ಇಶಾನ್ ಕಿಶನ್ ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಾಚಿಕೊಂಡರು. ಅವರ ಬ್ಯಾಟಿಂಗ್ ಅದ್ಭುತವಾಗಿತ್ತು ಎಂದು ರಾಹುಲ್ ಹೇಳಿದ್ದಾರೆ.

3 / 8
ವಿರಾಟ್ ಕೊಹ್ಲಿ ತಮ್ಮ ಅನುಭವವನ್ನು ಕಿಶನ್​ಗೆ ದಾರೆ ಎರೆದರು. ನಾವು ಕೆಲವು ನಿರ್ಧಾರಗಳನ್ನು ಧೈರ್ಯದಿಂದ ತೆಗೆದುಕೊಂಡೆವು. ನಮ್ಮ ತಂಡ ನೀಡಿದ ಪ್ರದರ್ಶನದ ಬಗ್ಗೆ ಸಂತಸವಿದೆ. ಇದರಿಂದ ಕಲಿತಿದ್ದೇವೆ ಕೂಡ, ಇನ್ನಷ್ಟು ಉತ್ತಮವಾಗಿ ಹೇಗೆ ಆಡಬಹುದು ಎಂಬ ಬಗ್ಗೆ ಪ್ರಯತ್ನಿಸುತ್ತೇವೆ. ಮೊದಲ ಎರಡು ಪಂದ್ಯಗಳಲ್ಲಿ ಫಲಿತಾಂಶ ನಮ್ಮ ಕಡೆ ಬರಲಿಲ್ಲ. ಆದರೆ, ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸ ನಮಗಿದೆ - ಕೆಎಲ್ ರಾಹುಲ್.

ವಿರಾಟ್ ಕೊಹ್ಲಿ ತಮ್ಮ ಅನುಭವವನ್ನು ಕಿಶನ್​ಗೆ ದಾರೆ ಎರೆದರು. ನಾವು ಕೆಲವು ನಿರ್ಧಾರಗಳನ್ನು ಧೈರ್ಯದಿಂದ ತೆಗೆದುಕೊಂಡೆವು. ನಮ್ಮ ತಂಡ ನೀಡಿದ ಪ್ರದರ್ಶನದ ಬಗ್ಗೆ ಸಂತಸವಿದೆ. ಇದರಿಂದ ಕಲಿತಿದ್ದೇವೆ ಕೂಡ, ಇನ್ನಷ್ಟು ಉತ್ತಮವಾಗಿ ಹೇಗೆ ಆಡಬಹುದು ಎಂಬ ಬಗ್ಗೆ ಪ್ರಯತ್ನಿಸುತ್ತೇವೆ. ಮೊದಲ ಎರಡು ಪಂದ್ಯಗಳಲ್ಲಿ ಫಲಿತಾಂಶ ನಮ್ಮ ಕಡೆ ಬರಲಿಲ್ಲ. ಆದರೆ, ಟೆಸ್ಟ್ ಸರಣಿ ಗೆಲ್ಲುವ ವಿಶ್ವಾಸ ನಮಗಿದೆ - ಕೆಎಲ್ ರಾಹುಲ್.

4 / 8
ಇದೇವೇಳೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಇಶಾನ್ ಕಿಶನ್ ಮಾತನಾಡಿ, ಇದು ನನಗೆ ಸಿಕ್ಕ ಸರಿಯಾದ ಅವಕಾಶ ಎಂದು ನಾನು ಭಾವಿಸುತ್ತೇನೆ. ಚೆಂಡನ್ನು ಸರಿಯಾಗಿ ಗಮನಿಸಿ ಬ್ಯಾಟ್ ಮಾಡುತ್ತಿದ್ದೆ. ಹಿರಿಯ ಅನುಭವಿ ಆಟಗಾರರು ತಂಡದಲ್ಲಿದ್ದಾಗ, ಅವರು ನೀಡುವ ಸಲಹೆ ಇಂತಹ ಸಂದರ್ಭದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಕಿಶನ್ ಹೇಳಿದ್ದಾರೆ.

ಇದೇವೇಳೆ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದುಕೊಂಡ ಇಶಾನ್ ಕಿಶನ್ ಮಾತನಾಡಿ, ಇದು ನನಗೆ ಸಿಕ್ಕ ಸರಿಯಾದ ಅವಕಾಶ ಎಂದು ನಾನು ಭಾವಿಸುತ್ತೇನೆ. ಚೆಂಡನ್ನು ಸರಿಯಾಗಿ ಗಮನಿಸಿ ಬ್ಯಾಟ್ ಮಾಡುತ್ತಿದ್ದೆ. ಹಿರಿಯ ಅನುಭವಿ ಆಟಗಾರರು ತಂಡದಲ್ಲಿದ್ದಾಗ, ಅವರು ನೀಡುವ ಸಲಹೆ ಇಂತಹ ಸಂದರ್ಭದಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಕಿಶನ್ ಹೇಳಿದ್ದಾರೆ.

5 / 8
ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಜೊತೆಯಾಟದಿಂದ ಭಾರತ ತಂಡ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಕಲೆ ಹಾಕಿತು.

ಬಾಂಗ್ಲಾದೇಶ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಇಶಾನ್ ಕಿಶಾನ್ ಹಾಗೂ ವಿರಾಟ್ ಕೊಹ್ಲಿ ಅವರ ಅಬ್ಬರದ ಜೊತೆಯಾಟದಿಂದ ಭಾರತ ತಂಡ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 409 ರನ್ ಕಲೆ ಹಾಕಿತು.

6 / 8
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ಇಶಾನ್ ಕಿಶಾನ್ 131 ಎಸೆತಗಳಲ್ಲಿ 210 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 113 ರನ್ ಗಳಿಸಿದರು. ಈ ಇಬ್ಬರು ಆಟಗಾರರು ಎರಡನೇ ವಿಕೆಟ್ ನಲ್ಲಿ 290 ರನ್ ಕಲೆಹಾಕಿದರು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ಪರ ಇಶಾನ್ ಕಿಶಾನ್ 131 ಎಸೆತಗಳಲ್ಲಿ 210 ರನ್ ಗಳಿಸಿದರೆ, ವಿರಾಟ್ ಕೊಹ್ಲಿ 91 ಎಸೆತಗಳಲ್ಲಿ 113 ರನ್ ಗಳಿಸಿದರು. ಈ ಇಬ್ಬರು ಆಟಗಾರರು ಎರಡನೇ ವಿಕೆಟ್ ನಲ್ಲಿ 290 ರನ್ ಕಲೆಹಾಕಿದರು.

7 / 8
ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ತಂಡದ ಪರ ಶಕಿಬ್ ಅಲ್ ಹಸನ್ 43 ರನ್ ಗಳಿಸಿದ್ದೇ ಹೆಚ್ಚು. 34 ಓವರ್​ಗಳಲ್ಲಿ 182 ರನ್​ಗೆ ಬಾಂಗ್ಲಾ ಆಲೌಟ್ ಆಯಿತು. ಭಾರತ ಪರ ಶಾರ್ದೂಲ್ 3, ಅಕ್ಷರ್ ಹಾಗೂ ಉಮ್ರಾನ್ 2, ಸಿರಾಜ್, ಕುಲ್ದೀಪ್, ಸುಂದರ್ ತಲಾ 2 ವಿಕೆಟ್ ಪಡೆದರು.

ಟಾರ್ಗೆಟ್ ಬೆನ್ನಟ್ಟಿದ ಬಾಂಗ್ಲಾದೇಶ ಬ್ಯಾಟಿಂಗ್ ವೈಫಲ್ಯ ಅನುಭವಿಸಿತು. ತಂಡದ ಪರ ಶಕಿಬ್ ಅಲ್ ಹಸನ್ 43 ರನ್ ಗಳಿಸಿದ್ದೇ ಹೆಚ್ಚು. 34 ಓವರ್​ಗಳಲ್ಲಿ 182 ರನ್​ಗೆ ಬಾಂಗ್ಲಾ ಆಲೌಟ್ ಆಯಿತು. ಭಾರತ ಪರ ಶಾರ್ದೂಲ್ 3, ಅಕ್ಷರ್ ಹಾಗೂ ಉಮ್ರಾನ್ 2, ಸಿರಾಜ್, ಕುಲ್ದೀಪ್, ಸುಂದರ್ ತಲಾ 2 ವಿಕೆಟ್ ಪಡೆದರು.

8 / 8

Published On - 9:42 am, Sun, 11 December 22

Follow us
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಮುಖಾಮುಖಿಯಾಗುವುದನ್ನು ತಪ್ಪಿಸಿದ ಪೊಲೀಸ್
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಿದ ಗೌತಮ್ ಅದಾನಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಂಬೇಡ್ಕರ್​ ಅವರನ್ನು ಕಾಂಗ್ರೆಸ್ ಯಾವತ್ತೂ ಗೌರವಿಸಲಿಲ್ಲ: ಸಿಟಿ ರವಿ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ವಿನಯ್ ರಾಜ್​ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ವಿಶ್ವಪ್ರಸಿದ್ಧ ಜಗನ್ನಾಥ ರಥಯಾತ್ರೆಯಲ್ಲಿ ಪತ್ನಿ ಪ್ರೀತಿ ಜೊತೆ ಗೌತಮ್ ಅದಾನಿ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ರಾಜ್ಯಾಧ್ಯಕ್ಷನ ಬದಲಾವಣೆ ಬಗ್ಗೆಯೂ ವರಿಷ್ಠರು ಚರ್ಚಿಸಿಲ್ಲ: ಅಶೋಕ
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು
ಆಟೋ ಚಾಲಕ 37-ವರ್ಷ ವಯಸ್ಸಿನ ಗೋವಿಂದ ಇಂದು ಬೆಳಗ್ಗೆ ಸಾವನ್ನಪ್ಪಿದವರು