AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಸೆಂಚುರಿಯನ್​ನಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದ ಕೆಎಲ್ ರಾಹುಲ್

KL Rahul Record: ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿ ಆಲೌಟ್​ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 5 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 14 ರನ್​ ಕಲೆಹಾಕಿದೆ.

TV9 Web
| Updated By: ಝಾಹಿರ್ ಯೂಸುಫ್

Updated on:Dec 27, 2023 | 3:27 PM

ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಆಕರ್ಷಕ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

ಸೆಂಚುರಿಯನ್​ನ ಸೂಪರ್​ಸ್ಪೋರ್ಟ್ ಪಾರ್ಕ್​ ಮೈದಾನದಲ್ಲಿ ನಡೆಯುತ್ತಿರುವ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ (KL Rahul) ಆಕರ್ಷಕ ಶತಕ ಬಾರಿಸಿದ್ದಾರೆ. ಈ ಶತಕದೊಂದಿಗೆ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ.

1 / 7
ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 107 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಪಂದ್ಯದಲ್ಲಿ ಟಾಸ್ ಗೆದ್ದ ಸೌತ್ ಆಫ್ರಿಕಾ ತಂಡವು ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿತು. ಅದರಂತೆ ಇನಿಂಗ್ಸ್ ಆರಂಭಿಸಿದ ಭಾರತ ತಂಡವು 107 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

2 / 7
ಈ ಹಂತದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅತ್ಯುತ್ತಮ ಇನಿಂಗ್ಸ್​ ಆಡಿದರು. ಕೆಳ ಕ್ರಮಾಂಕದ ಬ್ಯಾಟರ್​ಗಳ ಜೊತೆಗೂಡಿ ಇನಿಂಗ್ಸ್​ ಕಟ್ಟಿದ ರಾಹುಲ್ ಮೊದಲ ದಿನದಾಟದ ಮುಕ್ತಾಯದ ವೇಳೆ 70 ರನ್​ಗಳಿಸಿ ಅಜೇಯರಾಗಿ ಉಳಿದರು.

ಈ ಹಂತದಲ್ಲಿ 6ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಕೆಎಲ್ ರಾಹುಲ್ ಅತ್ಯುತ್ತಮ ಇನಿಂಗ್ಸ್​ ಆಡಿದರು. ಕೆಳ ಕ್ರಮಾಂಕದ ಬ್ಯಾಟರ್​ಗಳ ಜೊತೆಗೂಡಿ ಇನಿಂಗ್ಸ್​ ಕಟ್ಟಿದ ರಾಹುಲ್ ಮೊದಲ ದಿನದಾಟದ ಮುಕ್ತಾಯದ ವೇಳೆ 70 ರನ್​ಗಳಿಸಿ ಅಜೇಯರಾಗಿ ಉಳಿದರು.

3 / 7
2ನೇ ದಿನದಾಟದಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೆಎಲ್ ರಾಹುಲ್ 133 ಎಸೆತಗಳಲ್ಲಿ 14 ಫೋರ್ ಹಾಗೂ 4 ಭರ್ಜರಿ ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು. ಈ ಮೂಲಕ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 245 ರನ್​ಗಳಿಗೆ ತಂದು ನಿಲ್ಲಿಸಿದರು.

2ನೇ ದಿನದಾಟದಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಕೆಎಲ್ ರಾಹುಲ್ 133 ಎಸೆತಗಳಲ್ಲಿ 14 ಫೋರ್ ಹಾಗೂ 4 ಭರ್ಜರಿ ಸಿಕ್ಸ್​ಗಳೊಂದಿಗೆ ಶತಕ ಪೂರೈಸಿದರು. ಈ ಮೂಲಕ ಮೊದಲ ಇನಿಂಗ್ಸ್​​ನಲ್ಲಿ ಟೀಮ್ ಇಂಡಿಯಾ ಮೊತ್ತವನ್ನು 245 ರನ್​ಗಳಿಗೆ ತಂದು ನಿಲ್ಲಿಸಿದರು.

4 / 7
ಈ ಭರ್ಜರಿ ಶತಕದೊಂದಿಗೆ ಸೆಂಚುರಿಯನ್ ಮೈದಾನದಲ್ಲಿ 2 ಸೆಂಚುರಿ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಕೆಎಲ್ ರಾಹುಲ್ ಪಾಲಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ರಾಹುಲ್ ಇದೇ ಮೈದಾನದಲ್ಲಿ ಶತಕ ಬಾರಿಸಿದ್ದರು.

ಈ ಭರ್ಜರಿ ಶತಕದೊಂದಿಗೆ ಸೆಂಚುರಿಯನ್ ಮೈದಾನದಲ್ಲಿ 2 ಸೆಂಚುರಿ ಸಿಡಿಸಿದ ಮೊದಲ ವಿದೇಶಿ ಬ್ಯಾಟರ್ ಎಂಬ ದಾಖಲೆ ಕೆಎಲ್ ರಾಹುಲ್ ಪಾಲಾಗಿದೆ. ಇದಕ್ಕೂ ಮುನ್ನ 2021 ರಲ್ಲಿ ರಾಹುಲ್ ಇದೇ ಮೈದಾನದಲ್ಲಿ ಶತಕ ಬಾರಿಸಿದ್ದರು.

5 / 7
ಇದೀಗ ಮತ್ತೊಮ್ಮೆ ಮೂರಂಕಿ ರನ್​ಗಳಿಸುವ ಮೂಲಕ ಸೆಂಚುರಿಯಲ್ಲಿ 2 ಸೆಂಚುರಿ ಸಿಡಿಸಿದ ಮೊದಲ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ SENA ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ 2ನೇ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

ಇದೀಗ ಮತ್ತೊಮ್ಮೆ ಮೂರಂಕಿ ರನ್​ಗಳಿಸುವ ಮೂಲಕ ಸೆಂಚುರಿಯಲ್ಲಿ 2 ಸೆಂಚುರಿ ಸಿಡಿಸಿದ ಮೊದಲ ವಿದೇಶಿ ಆಟಗಾರ ಎನಿಸಿಕೊಂಡಿದ್ದಾರೆ. ಹಾಗೆಯೇ SENA ದೇಶಗಳಲ್ಲಿ ಟೆಸ್ಟ್ ಶತಕ ಬಾರಿಸಿದ 2ನೇ ಭಾರತೀಯ ವಿಕೆಟ್ ಕೀಪರ್ ಎನಿಸಿಕೊಂಡಿದ್ದಾರೆ.

6 / 7
ಇನ್ನು ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿ ಆಲೌಟ್​ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 5 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 14 ರನ್​ ಕಲೆಹಾಕಿದೆ.

ಇನ್ನು ಕೆಎಲ್ ರಾಹುಲ್ (101) ಅವರ ಶತಕದ ನೆರವಿನಿಂದ ಟೀಮ್ ಇಂಡಿಯಾ ಮೊದಲ ಇನಿಂಗ್ಸ್​ನಲ್ಲಿ 245 ರನ್​ ಕಲೆಹಾಕಿ ಆಲೌಟ್​ ಆಗಿದೆ. ಇದರ ಬೆನ್ನಲ್ಲೇ ಇನಿಂಗ್ಸ್ ಆರಂಭಿಸಿರುವ ಸೌತ್ ಆಫ್ರಿಕಾ ತಂಡವು 5 ಓವರ್​ಗಳಲ್ಲಿ 1 ವಿಕೆಟ್ ಕಳೆದುಕೊಂಡು 14 ರನ್​ ಕಲೆಹಾಕಿದೆ.

7 / 7

Published On - 3:25 pm, Wed, 27 December 23

Follow us
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ತಮ್ಮ ಅಭಿಮಾನಿ ಕುಟುಂಬಕ್ಕೆ 5 ಲಕ್ಷ ರೂ. ಸಹಾಯ ಮಾಡಿದ ಸಚಿವ ಜಮೀರ್
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಸುದೀಪ್ ಕೈಗೆ ಗಾಯ, ಕಿಚ್ಚನ ಕೈಗೆ ಏನಾಯ್ತು? ಅಭಿಮಾನಿಗಳ ಪ್ರಶ್ನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಬೆಂಗಳೂರು-ಮಂಗಳೂರು ರಸ್ತೆಯಲ್ಲಿ ಟ್ರಾಫಿಕ್ ಜಾಮ್​: ಬದಲಿ ಮಾರ್ಗ ಸೂಚನೆ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಅಯೋಧ್ಯೆಯಲ್ಲಿ ಶ್ರೀರಾಮನ ದರ್ಶನ ಪಡೆದ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಚಿಕ್ಕಮಗಳೂರಿನಲ್ಲಿ ಮಳೆಗೆ ಸಾಲು ಸಾಲು ಅವಾಂತರ:ನದಿಗೆ ಬಿದ್ದ 2 ಕಾರುಗಳು
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಕೂದಲು ಹಿಡಿದು ತಾಯಿಯನ್ನು ಮನಬಂದಂತೆ ಥಳಿಸಿದ ಸಾಕು ಮಗ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಮಡೆನೂರು ಮನು ವಿವಾದದಲ್ಲಿ ಅಪ್ಪಣ್ಣ ಹೆಸರು ಕೇಳಿಬಂದಿದ್ದಕ್ಕೆ ನಟನ ಸ್ಪಷ್ಟನೆ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ಭಾರಿ ಮಳೆಯಿಂದ ಶಿರಾಡಿ ಘಾಟ್​​ ರಸ್ತೆಯಲ್ಲಿ ಭೂ ಕುಸಿತ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ರಶ್ಮಿಕಾಗೆ ಮೈಸೂರು ಸ್ಯಾಂಡಲ್​ ಅವಕಾಶ ಕೊಡಬಹುದಿತ್ತು: ಕುಮಾರ್ ಬಂಗಾರಪ್ಪ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ
ಭಾರತದ ನೆಲದಲ್ಲಿ ಭಯೋತ್ಪಾದಕರ ಅಂತ್ಯಕ್ರಿಯೆಗೆ ಅವಕಾಶವಿಲ್ಲ: ಇಲ್ಯಾಸಿ