AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಕೆಎಲ್ ರಾಹುಲ್ ಹೊಸ ತಂಡದ ನಾಯಕನಾಗುವುದು ಬಹುತೇಕ ಖಚಿತ

IPL 2022 KL Rahul: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್​ 15 (IPL 2022) ಸಿದ್ದತೆಗಳು ಶುರುವಾಗಿದೆ. ಈಗಾಗಲೇ ಎಲ್ಲಾ ಫ್ರಾಂಚೈಸಿಗಳು ಮುಂದಿನ ಸೀಸನ್​​ಗಾಗಿ ನಡೆಯಲಿರುವ ಮೆಗಾ ಹರಾಜಿಗಾಗಿ ರೂಪುರೇಷೆಗಳನ್ನು ಸಿದ್ದಪಡಿಸುತ್ತಿದೆ. ಅದರಂತೆ ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು.

TV9 Web
| Edited By: |

Updated on: Nov 25, 2021 | 8:13 PM

Share

ಐಪಿಎಲ್​  ಸೀಸನ್​​ 15 ಮೆಗಾ ಹರಾಜಿಗಾಗಿ ಬಿಸಿಸಿಐ (BCCI) ಈಗಾಗಲೇ ರೂಪುರೇಷೆಗಳನ್ನು ಸಿದ್ದಪಡಿಸಿದೆ. ಅದರಂತೆ  ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.

ಐಪಿಎಲ್​ ಸೀಸನ್​​ 15 ಮೆಗಾ ಹರಾಜಿಗಾಗಿ ಬಿಸಿಸಿಐ (BCCI) ಈಗಾಗಲೇ ರೂಪುರೇಷೆಗಳನ್ನು ಸಿದ್ದಪಡಿಸಿದೆ. ಅದರಂತೆ ಮುಂದಿನ ಸೀಸನ್​ ಮೆಗಾ ಹರಾಜಿಗೂ ಮುನ್ನ ಹಳೆಯ 8 ಫ್ರಾಂಚೈಸಿಗಳು 4 ಆಟಗಾರರನ್ನು ಉಳಿಸಿಕೊಳ್ಳಬಹುದು. ಇನ್ನು ಹೊಸ 2 ಫ್ರಾಂಚೈಸಿಗೆ 3 ಆಟಗಾರರನ್ನು ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.

1 / 5
 ಇದೇ ನಿಯಮ ಇದೀಗ ಹೊಸ ಫ್ರಾಂಚೈಸಿಗಳಿಗೆ ವರದಾನವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್​ ತಂಡದಿಂದ ಕೆಎಲ್ ರಾಹುಲ್, ಡೆಲ್ಲಿ ಕ್ಯಾಪಿಟಲ್ಸ್​ ತಂಡದಿಂದ ಶ್ರೇಯಸ್ ಅಯ್ಯರ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡದಿಂದ ಡೇವಿಡ್ ವಾರ್ನರ್ ಹೊರಬರುವುದು ಖಚಿತವಾಗಿದೆ. ಹೀಗಾಗಿ ಈ ಮೂವರನ್ನು ಹೊಸ ಫ್ರಾಂಚೈಸಿ ಟಾರ್ಗೆಟ್ ಮಾಡಲಿದೆ.

ಇದೇ ನಿಯಮ ಇದೀಗ ಹೊಸ ಫ್ರಾಂಚೈಸಿಗಳಿಗೆ ವರದಾನವಾಗಿದೆ. ಏಕೆಂದರೆ ಪಂಜಾಬ್ ಕಿಂಗ್ಸ್​ ತಂಡದಿಂದ ಕೆಎಲ್ ರಾಹುಲ್, ಡೆಲ್ಲಿ ಕ್ಯಾಪಿಟಲ್ಸ್​ ತಂಡದಿಂದ ಶ್ರೇಯಸ್ ಅಯ್ಯರ್ ಹಾಗೂ ಸನ್​ರೈಸರ್ಸ್​ ಹೈದರಾಬಾದ್ ತಂಡದಿಂದ ಡೇವಿಡ್ ವಾರ್ನರ್ ಹೊರಬರುವುದು ಖಚಿತವಾಗಿದೆ. ಹೀಗಾಗಿ ಈ ಮೂವರನ್ನು ಹೊಸ ಫ್ರಾಂಚೈಸಿ ಟಾರ್ಗೆಟ್ ಮಾಡಲಿದೆ.

2 / 5
ಅದರಂತೆ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕೆಎಲ್ ರಾಹುಲ್ ರಿಟೈನ್ ಆಗುವುದಿಲ್ಲ. ಈ ಸುದ್ದಿ ಬೆನ್ನಲ್ಲೇ ರಾಹುಲ್ ಅವರನ್ನು ಲಕ್ನೋ ಫ್ರಾಂಚೈಸಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ ಈಗಾಗಲೇ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಅದರಂತೆ ಮುಂದಿನ ಸೀಸನ್​ನಲ್ಲಿ ಕೆಎಲ್ ರಾಹುಲ್ ಲಕ್ನೋ ಫ್ರಾಂಚೈಸಿ ಪರ ಆಡುವುದು ಬಹುತೇಕ ಖಚಿತ.

ಅದರಂತೆ ಪಂಜಾಬ್ ಕಿಂಗ್ಸ್ ತಂಡದಲ್ಲಿ ಕೆಎಲ್ ರಾಹುಲ್ ರಿಟೈನ್ ಆಗುವುದಿಲ್ಲ. ಈ ಸುದ್ದಿ ಬೆನ್ನಲ್ಲೇ ರಾಹುಲ್ ಅವರನ್ನು ಲಕ್ನೋ ಫ್ರಾಂಚೈಸಿ ತಮ್ಮ ತೆಕ್ಕೆಗೆ ತೆಗೆದುಕೊಂಡಿದೆ ಎಂಬ ಸುದ್ದಿ ಹೊರಬಿದ್ದಿದೆ. ವರದಿಗಳ ಪ್ರಕಾರ ಈಗಾಗಲೇ ರಾಹುಲ್ ಜೊತೆ ಮಾತುಕತೆ ಮುಗಿದಿದ್ದು, ಅದರಂತೆ ಮುಂದಿನ ಸೀಸನ್​ನಲ್ಲಿ ಕೆಎಲ್ ರಾಹುಲ್ ಲಕ್ನೋ ಫ್ರಾಂಚೈಸಿ ಪರ ಆಡುವುದು ಬಹುತೇಕ ಖಚಿತ.

3 / 5
ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಕೋಟಿಗೆ ಆಡಿದ್ದ ಕೆಎಲ್ ರಾಹುಲ್ ಅವರಿಗೆ ಲಕ್ನೋ ಫ್ರಾಂಚೈಸಿ 15 ಕೋಟಿ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಹೊಸ ತಂಡದ ನಾಯಕತ್ವವನ್ನೂ ಕೂಡ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಹೊಸ ತಂಡವನ್ನು ಮುನ್ನಡೆಸಲಿರುವುದು ಬಹುತೇಕ ಖಚಿತವಾಗಿದೆ.

ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ 11 ಕೋಟಿಗೆ ಆಡಿದ್ದ ಕೆಎಲ್ ರಾಹುಲ್ ಅವರಿಗೆ ಲಕ್ನೋ ಫ್ರಾಂಚೈಸಿ 15 ಕೋಟಿ ನೀಡಲು ಮುಂದಾಗಿದೆ. ಅಷ್ಟೇ ಅಲ್ಲದೆ ಹೊಸ ತಂಡದ ನಾಯಕತ್ವವನ್ನೂ ಕೂಡ ನೀಡಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಹೀಗಾಗಿ ಕೆಎಲ್ ರಾಹುಲ್ ಮುಂದಿನ ಸೀಸನ್​ನಲ್ಲಿ ಹೊಸ ತಂಡವನ್ನು ಮುನ್ನಡೆಸಲಿರುವುದು ಬಹುತೇಕ ಖಚಿತವಾಗಿದೆ.

4 / 5
ಈ ಹಿಂದೆ ಕೆಎಲ್ ರಾಹುಲ್ ಆರ್​ಸಿಬಿ ಪರ ಆಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಹೊಸ ಫ್ರಾಂಚೈಸಿಗಳಿಗೆ ನೀಡಲಾಗುವ ವಿಶೇಷ ಆಯ್ಕೆಯ ಮೂಲಕ ಮೆಗಾ ಹರಾಜಿಗೂ ಮುನ್ನ ಲಕ್ನೋ ಫ್ರಾಂಚೈಸಿ ರಾಹುಲ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್​ ಸೀಸನ್​ 15 ನಲ್ಲಿ ಕೆಎಲ್ ರಾಹುಲ್ ಹೊಸ ಜೆರ್ಸಿ-ಹೊಸ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ.

ಈ ಹಿಂದೆ ಕೆಎಲ್ ರಾಹುಲ್ ಆರ್​ಸಿಬಿ ಪರ ಆಡಲಿದ್ದಾರೆ ಎಂಬ ಸುದ್ದಿಗಳು ಹರಿದಾಡಿದ್ದವು. ಆದರೀಗ ಹೊಸ ಫ್ರಾಂಚೈಸಿಗಳಿಗೆ ನೀಡಲಾಗುವ ವಿಶೇಷ ಆಯ್ಕೆಯ ಮೂಲಕ ಮೆಗಾ ಹರಾಜಿಗೂ ಮುನ್ನ ಲಕ್ನೋ ಫ್ರಾಂಚೈಸಿ ರಾಹುಲ್ ಅವರನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ ಎಂದು ವರದಿಯಾಗಿದೆ. ಹೀಗಾಗಿ ಐಪಿಎಲ್​ ಸೀಸನ್​ 15 ನಲ್ಲಿ ಕೆಎಲ್ ರಾಹುಲ್ ಹೊಸ ಜೆರ್ಸಿ-ಹೊಸ ತಂಡದಲ್ಲಿ ಕಾಣಿಸಿಕೊಳ್ಳುವುದು ಬಹುತೇಕ ಖಚಿತ.

5 / 5
Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ