AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಟಿ20 ತಂಡದಿಂದ ಕನ್ನಡಿಗ ಕೆಎಲ್ ರಾಹುಲ್ ಔಟ್..!

KL Rahul: ಟೀಮ್ ಇಂಡಿಯಾ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 37.75ರ ಸರಾಸರಿಯಲ್ಲಿ 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ.

TV9 Web
| Edited By: |

Updated on: Jan 08, 2024 | 6:53 AM

Share
ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅಚ್ಚರಿ ಎಂದರೆ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕಾಣಿಸಿಕೊಂಡಿಲ್ಲ.

ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಘೋಷಿಸಲಾಗಿದೆ. 16 ಸದಸ್ಯರ ಈ ಬಳಗವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಅಚ್ಚರಿ ಎಂದರೆ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್ ಕಾಣಿಸಿಕೊಂಡಿಲ್ಲ.

1 / 7
ಅಂದರೆ ಕೆಎಲ್ ರಾಹುಲ್ ಅವರನ್ನು ಟೀಮ್ ಇಂಡಿಯಾ ಟಿ20 ತಂಡದಿಂದ ಕೈ ಬಿಡಲಾಗಿದೆ. ಈ ಹಿಂದೆ ಭಾರತ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ರಾಹುಲ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳುವುದು ಅನುಮಾನ.

ಅಂದರೆ ಕೆಎಲ್ ರಾಹುಲ್ ಅವರನ್ನು ಟೀಮ್ ಇಂಡಿಯಾ ಟಿ20 ತಂಡದಿಂದ ಕೈ ಬಿಡಲಾಗಿದೆ. ಈ ಹಿಂದೆ ಭಾರತ ಟಿ20 ತಂಡದ ನಾಯಕರಾಗಿ ಕಾಣಿಸಿಕೊಂಡಿದ್ದ ರಾಹುಲ್ ಅವರನ್ನು ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲೂ ಕಾಣಿಸಿಕೊಳ್ಳುವುದು ಅನುಮಾನ.

2 / 7
ಟೀಮ್ ಇಂಡಿಯಾ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 37.75ರ ಸರಾಸರಿಯಲ್ಲಿ 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪರ್ ಆಗಿಯೂ ರಾಹುಲ್ ಕಾಣಿಸಿಕೊಂಡಿದ್ದಾರೆ.

ಟೀಮ್ ಇಂಡಿಯಾ ಪರ 72 ಟಿ20 ಪಂದ್ಯಗಳನ್ನಾಡಿರುವ ಕೆಎಲ್ ರಾಹುಲ್ 37.75ರ ಸರಾಸರಿಯಲ್ಲಿ 2265 ರನ್ ಕಲೆಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಬಾರಿಸಿದ್ದಾರೆ. ಇದರ ಜೊತೆಗೆ ವಿಕೆಟ್ ಕೀಪರ್ ಆಗಿಯೂ ರಾಹುಲ್ ಕಾಣಿಸಿಕೊಂಡಿದ್ದಾರೆ.

3 / 7
ಆದರೆ ಈ ಬಾರಿ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಜಿತೇಶ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್​ ಆಯ್ಕೆಯಾಗಿದ್ದಾರೆ. ಅಂದರೆ ಈ ಇಬ್ಬರು ಆಟಗಾರರು ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ವಿಫಲರಾದರೆ ಮಾತ್ರ ರಾಹುಲ್ ಅವರಿಗೆ ವಿಶ್ವಕಪ್ ಬಾಗಿಲು ತೆರೆದುಕೊಳ್ಳಲಿದೆ.

ಆದರೆ ಈ ಬಾರಿ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟರ್​ಗಳಾಗಿ ಜಿತೇಶ್ ಶರ್ಮಾ ಹಾಗೂ ಸಂಜು ಸ್ಯಾಮ್ಸನ್​ ಆಯ್ಕೆಯಾಗಿದ್ದಾರೆ. ಅಂದರೆ ಈ ಇಬ್ಬರು ಆಟಗಾರರು ಅಫ್ಘಾನಿಸ್ತಾನ್ ವಿರುದ್ಧದ ಟಿ20 ಸರಣಿಯಲ್ಲಿ ವಿಫಲರಾದರೆ ಮಾತ್ರ ರಾಹುಲ್ ಅವರಿಗೆ ವಿಶ್ವಕಪ್ ಬಾಗಿಲು ತೆರೆದುಕೊಳ್ಳಲಿದೆ.

4 / 7
ಇನ್ನೊಂದೆಡೆ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ರಿಷಭ್ ಪಂತ್ ಕೂಡ ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಅಂದರೆ ಇಲ್ಲಿ ಕೆಎಲ್ ರಾಹುಲ್ ಮತ್ತೆ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನದಲ್ಲಿ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯಬೇಕಿದ್ದರೆ ಇಶಾನ್ ಕಿಶನ್ ಹಾಗೂ ರಿಷಭ್ ಪಂತ್ ಜೊತೆ ಪೈಪೋಟಿ ನಡೆಸಬೇಕಾದ ಅನಿವಾರ್ಯತೆ ಇದೆ.

ಇನ್ನೊಂದೆಡೆ ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಕೂಡ ತಂಡದಿಂದ ಹೊರಬಿದ್ದಿದ್ದಾರೆ. ಹಾಗೆಯೇ ರಿಷಭ್ ಪಂತ್ ಕೂಡ ಐಪಿಎಲ್​ ಮೂಲಕ ಕಂಬ್ಯಾಕ್ ಮಾಡಲು ಸಜ್ಜಾಗಿದ್ದಾರೆ. ಅಂದರೆ ಇಲ್ಲಿ ಕೆಎಲ್ ರಾಹುಲ್ ಮತ್ತೆ ವಿಕೆಟ್ ಕೀಪರ್ ಬ್ಯಾಟರ್ ಸ್ಥಾನದಲ್ಲಿ ಟೀಮ್ ಇಂಡಿಯಾದಲ್ಲಿ ಅವಕಾಶ ಪಡೆಯಬೇಕಿದ್ದರೆ ಇಶಾನ್ ಕಿಶನ್ ಹಾಗೂ ರಿಷಭ್ ಪಂತ್ ಜೊತೆ ಪೈಪೋಟಿ ನಡೆಸಬೇಕಾದ ಅನಿವಾರ್ಯತೆ ಇದೆ.

5 / 7
ಒಟ್ಟಿನಲ್ಲಿ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಉತ್ತಮ ಪ್ರದರ್ಶನ ನೀಡಿದ್ದ 31 ವರ್ಷದ ಕೆಎಲ್ ರಾಹುಲ್ ಇದೀಗ ಟಿ20 ತಂಡದಿಂದ ಹೊರಬಿದ್ದಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

ಒಟ್ಟಿನಲ್ಲಿ ಏಕದಿನ ವಿಶ್ವಕಪ್​ನಲ್ಲಿ ಟೀಮ್ ಇಂಡಿಯಾ ಪರ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಉತ್ತಮ ಪ್ರದರ್ಶನ ನೀಡಿದ್ದ 31 ವರ್ಷದ ಕೆಎಲ್ ರಾಹುಲ್ ಇದೀಗ ಟಿ20 ತಂಡದಿಂದ ಹೊರಬಿದ್ದಿದ್ದಾರೆ. ಇದಾಗ್ಯೂ ಅವರು ಐಪಿಎಲ್​ನಲ್ಲಿ ಭರ್ಜರಿ ಪ್ರದರ್ಶನ ನೀಡಿ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನಗಿಟ್ಟಿಸಿಕೊಳ್ಳಲಿದ್ದಾರಾ ಕಾದು ನೋಡಬೇಕಿದೆ.

6 / 7
ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರಿಂಕು ಸಿಂಗ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ವಾಷಿಂಗ್ಟನ್ ಸುಂದರ್, ಅಕ್ಷರ್ ಪಟೇಲ್, ರವಿ ಬಿಷ್ಣೋಯ್, ಕುಲ್ದೀಪ್ ಯಾದವ್, ಅರ್ಷದೀಪ್ ಸಿಂಗ್, ಅವೇಶ್ ಖಾನ್, ಮುಕೇಶ್ ಕುಮಾರ್.

7 / 7
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ