AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರೀ ಎಡ್ಡೆ ಗೊಬ್ಬಿಯ…ಸೂರ್ಯನ ಸೆಂಚುರಿಗೆ ತುಳುವಿನಲ್ಲೇ ಕೆಎಲ್ ರಾಹುಲ್ ಬಹುಪರಾಕ್

Suryakumar yadav - KL Rahul: 45 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ವೇಗದ ಶತಕದ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು.

TV9 Web
| Edited By: |

Updated on: Jan 08, 2023 | 6:31 PM

Share
ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಶನಿವಾರ ಸಿಕ್ಸ್​ಗಳ ಸುರಿಮಳೆಯಾಗಿತ್ತು. ಹೀಗೆ ಸಿಕ್ಸ್​-ಫೋರ್​ಗಳ ಮೂಲಕ ಅಬ್ಬರಿಸಿದ್ದು ಮತ್ಯಾರೂ ಅಲ್ಲ, ಕ್ರಿಕೆಟ್​ ಅಂಗಳದ ಹೊಸ 360 ಡಿಗ್ರಿ ಸೂರ್ಯಕುಮಾರ್ ಯಾದವ್. 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸೂರ್ಯ ಅಕ್ಷರಶಃ ಅಬ್ಬರಿಸಿ ಶ್ರೀಲಂಕಾ ಬೌಲರ್​ಗಳ ಬೆಂಡೆತ್ತಿದ್ದರು.

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಶನಿವಾರ ಸಿಕ್ಸ್​ಗಳ ಸುರಿಮಳೆಯಾಗಿತ್ತು. ಹೀಗೆ ಸಿಕ್ಸ್​-ಫೋರ್​ಗಳ ಮೂಲಕ ಅಬ್ಬರಿಸಿದ್ದು ಮತ್ಯಾರೂ ಅಲ್ಲ, ಕ್ರಿಕೆಟ್​ ಅಂಗಳದ ಹೊಸ 360 ಡಿಗ್ರಿ ಸೂರ್ಯಕುಮಾರ್ ಯಾದವ್. 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸೂರ್ಯ ಅಕ್ಷರಶಃ ಅಬ್ಬರಿಸಿ ಶ್ರೀಲಂಕಾ ಬೌಲರ್​ಗಳ ಬೆಂಡೆತ್ತಿದ್ದರು.

1 / 5
ಪರಿಣಾಮ ಕೇವಲ 45 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು. ಈ ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಸೂರ್ಯಕುಮಾರ್ ಯಾದವ್ ಅಂತಿಮವಾಗಿ 51 ಎಸೆತಗಳಲ್ಲಿ 9 ಸಿಕ್ಸ್​ ಹಾಗೂ 7 ಫೋರ್​ನೊಂದಿಗೆ ಅಜೇಯ 112 ರನ್​ ಚಚ್ಚಿದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ವೇಗದ ಟಿ20 ಶತಕ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡರು. ಅದು ಕೂಡ ಕೆಎಲ್ ರಾಹುಲ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

ಪರಿಣಾಮ ಕೇವಲ 45 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು. ಈ ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಸೂರ್ಯಕುಮಾರ್ ಯಾದವ್ ಅಂತಿಮವಾಗಿ 51 ಎಸೆತಗಳಲ್ಲಿ 9 ಸಿಕ್ಸ್​ ಹಾಗೂ 7 ಫೋರ್​ನೊಂದಿಗೆ ಅಜೇಯ 112 ರನ್​ ಚಚ್ಚಿದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ವೇಗದ ಟಿ20 ಶತಕ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡರು. ಅದು ಕೂಡ ಕೆಎಲ್ ರಾಹುಲ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

2 / 5
ಕೆಎಲ್ ರಾಹುಲ್ ವೆಸ್ಟ್​ ಇಂಡೀಸ್ ವಿರುದ್ಧದ 46 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ 45 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ವೇಗದ ಶತಕದ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು. ಸೂರ್ಯನ ಈ ಸಿಡಿಲಬ್ಬರನ್ನು ಕೆಎಲ್ ರಾಹುಲ್ ಕೂಡ ಹೊಗಳಿರುವುದು ವಿಶೇಷ. ಅದು ಕೂಡ ಸ್ಥಳೀಯ ಭಾಷೆ ತುಳುವಿನಲ್ಲೇ ಶ್ಲಾಘಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಕೆಎಲ್ ರಾಹುಲ್ ವೆಸ್ಟ್​ ಇಂಡೀಸ್ ವಿರುದ್ಧದ 46 ಎಸೆತಗಳಲ್ಲಿ ಶತಕ ಬಾರಿಸಿದ್ದರು. ಇದೀಗ 45 ಎಸೆತಗಳಲ್ಲಿ ಸೆಂಚುರಿ ಸಿಡಿಸುವ ಮೂಲಕ ಸೂರ್ಯಕುಮಾರ್ ಯಾದವ್ ವೇಗದ ಶತಕದ ಸರದಾರರ ಪಟ್ಟಿಯಲ್ಲಿ 2ನೇ ಸ್ಥಾನಕ್ಕೇರಿದರು. ಸೂರ್ಯನ ಈ ಸಿಡಿಲಬ್ಬರನ್ನು ಕೆಎಲ್ ರಾಹುಲ್ ಕೂಡ ಹೊಗಳಿರುವುದು ವಿಶೇಷ. ಅದು ಕೂಡ ಸ್ಥಳೀಯ ಭಾಷೆ ತುಳುವಿನಲ್ಲೇ ಶ್ಲಾಘಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

3 / 5
ಅತ್ತ ಸೂರ್ಯಕುಮಾರ್ ಯಾದವ್ ಶತಕ ಸಿಡಿಸುತ್ತಿದ್ದಂತೆ ಇತ್ತ ಇನ್​ಸ್ಟಾಗ್ರಾಮ್​ನಲ್ಲಿ ಕೆಎಲ್ ರಾಹುಲ್ ಈ ಇನಿಂಗ್ಸ್​ನ ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಫೋಟೋಗೆ ತುಳುವಿನಲ್ಲಿ 'ಭಾರೀ ಎಡ್ಡೆ ಗೊಬ್ಬಿಯ' (ತುಂಬಾ ಚೆನ್ನಾಗಿ ಆಡಿದ್ದೀಯಾ) ಎಂದು ಬರೆದುಕೊಂಡಿದ್ದಾರೆ. ಇದೀಗ ಕಣ್ಣನೂರು ಲೋಕೇಶ್ ರಾಹುಲ್ ಅವರ ಇನ್​ಸ್ಟಾ ಪೋಸ್ಟ್ ಭಾರೀ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

ಅತ್ತ ಸೂರ್ಯಕುಮಾರ್ ಯಾದವ್ ಶತಕ ಸಿಡಿಸುತ್ತಿದ್ದಂತೆ ಇತ್ತ ಇನ್​ಸ್ಟಾಗ್ರಾಮ್​ನಲ್ಲಿ ಕೆಎಲ್ ರಾಹುಲ್ ಈ ಇನಿಂಗ್ಸ್​ನ ಫೋಟೋ ಹಂಚಿಕೊಂಡಿದ್ದಾರೆ. ಅಲ್ಲದೆ ಈ ಫೋಟೋಗೆ ತುಳುವಿನಲ್ಲಿ 'ಭಾರೀ ಎಡ್ಡೆ ಗೊಬ್ಬಿಯ' (ತುಂಬಾ ಚೆನ್ನಾಗಿ ಆಡಿದ್ದೀಯಾ) ಎಂದು ಬರೆದುಕೊಂಡಿದ್ದಾರೆ. ಇದೀಗ ಕಣ್ಣನೂರು ಲೋಕೇಶ್ ರಾಹುಲ್ ಅವರ ಇನ್​ಸ್ಟಾ ಪೋಸ್ಟ್ ಭಾರೀ ವೈರಲ್ ಆಗಿದ್ದು, ಭಾರೀ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ.

4 / 5
ಇನ್ನು ಸೂರ್ಯಕುಮಾರ್ ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 5 ವಿಕೆಟ್ ನಷ್ಟಕ್ಕೆ 228 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಶ್ರೀಲಂಕಾ ತಂಡವು 137 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 91 ರನ್​ಗಳ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು.

ಇನ್ನು ಸೂರ್ಯಕುಮಾರ್ ಅವರ ಈ ಶತಕದ ನೆರವಿನಿಂದ ಟೀಮ್ ಇಂಡಿಯಾ 5 ವಿಕೆಟ್ ನಷ್ಟಕ್ಕೆ 228 ರನ್ ಕಲೆಹಾಕಿತ್ತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಶ್ರೀಲಂಕಾ ತಂಡವು 137 ರನ್​ಗಳಿಗೆ ಆಲೌಟ್ ಆಯಿತು. ಇದರೊಂದಿಗೆ 91 ರನ್​ಗಳ ಭರ್ಜರಿ ಜಯ ಸಾಧಿಸಿದ ಟೀಮ್ ಇಂಡಿಯಾ 2-1 ಅಂತರದಿಂದ ಸರಣಿ ಗೆದ್ದುಕೊಂಡಿತು.

5 / 5
Follow Us
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ