AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

3211 ದಿನಗಳನ್ನು ತೆಗೆದುಕೊಂಡು ವಿಶ್ವ ದಾಖಲೆ ಬರೆದ ಕೆಎಲ್ ರಾಹುಲ್

India vs West Indies: ಅಹಮದಾಬಾದ್​ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ವೆಸ್ಟ್ ಇಂಡೀಸ್ ತಂಡವು 162 ರನ್​ಗಳಿಗೆ ಆಲೌಟ್ ಆಗಿದೆ. ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಪರ ಕೆಎಲ್ ರಾಹುಲ್ (100), ಧ್ರುವ್ ಜುರೆಲ್ (125) ಹಾಗೂ ರವೀಂದ್ರ ಜಡೇಜಾ (104) ಶತಕ ಸಿಡಿಸಿದ್ದಾರೆ. ಈ ಶತಕಗಳ ನೆರವಿನೊಂದಿಗೆ ಭಾರತ ತಂಡವು ಎರಡನೇ ದಿನದಾಟದ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 448 ರನ್ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Oct 04, 2025 | 8:19 AM

Share
ಬರೋಬ್ಬರಿ 3211 ದಿನಗಳ ದಿನಗಳ ಬಳಿಕ ಕೆಎಲ್ ರಾಹುಲ್ (KL Rahul) ಬ್ಯಾಟ್​ನಿಂದ ತವರಿನಲ್ಲಿ ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕನ್ನಡಿಗ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ. ಅದು ಕೂಡ 3211 ದಿನಗಳ ಕಾಯುವಿಕೆಯೊಂದಿಗೆ ಎಂಬುದೇ ವಿಶೇಷ.

ಬರೋಬ್ಬರಿ 3211 ದಿನಗಳ ದಿನಗಳ ಬಳಿಕ ಕೆಎಲ್ ರಾಹುಲ್ (KL Rahul) ಬ್ಯಾಟ್​ನಿಂದ ತವರಿನಲ್ಲಿ ಶತಕ ಮೂಡಿಬಂದಿದೆ. ಈ ಶತಕದೊಂದಿಗೆ ಕನ್ನಡಿಗ ವಿಶೇಷ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದೆ. ಅದು ಕೂಡ 3211 ದಿನಗಳ ಕಾಯುವಿಕೆಯೊಂದಿಗೆ ಎಂಬುದೇ ವಿಶೇಷ.

1 / 6
ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಲ್ ರಾಹುಲ್ 197 ಎಸೆತಗಳಲ್ಲಿ 12 ಫೋರ್​ಗಳೊಂದಿಗೆ 100 ರನ್ ಬಾರಿಸಿದ್ದಾರೆ.

ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಕೆಲ್ ರಾಹುಲ್ 197 ಎಸೆತಗಳಲ್ಲಿ 12 ಫೋರ್​ಗಳೊಂದಿಗೆ 100 ರನ್ ಬಾರಿಸಿದ್ದಾರೆ.

2 / 6
ಈ ಮೂಲಕ ಕೆಎಲ್ ರಾಹುಲ್ 9 ವರ್ಷಗಳ ಟೆಸ್ಟ್ ಶತಕದ ಬರ ನೀಗಿಸಿದ್ದಾರೆ. ಅಂದರೆ ತವರಿನಲ್ಲಿ ಕೆಎಲ್​ಆರ್​​ ಕೊನೆಯ ಟೆಸ್ಟ್ ಶತಕ ಸಿಡಿಸಿದ್ದು 2016 ರಲ್ಲಿ. ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 199 ರನ್ ಬಾರಿಸಿದ್ದರು. ಇದಾದ ಬಳಿಕ ಭಾರತದ ಪಿಚ್​ನಲ್ಲಿ ರಾಹುಲ್ ಬ್ಯಾಟ್​ನಿಂದ ಒಂದೇ ಒಂದು ಶತಕ ಮೂಡಿ ಬಂದಿರಲಿಲ್ಲ.

ಈ ಮೂಲಕ ಕೆಎಲ್ ರಾಹುಲ್ 9 ವರ್ಷಗಳ ಟೆಸ್ಟ್ ಶತಕದ ಬರ ನೀಗಿಸಿದ್ದಾರೆ. ಅಂದರೆ ತವರಿನಲ್ಲಿ ಕೆಎಲ್​ಆರ್​​ ಕೊನೆಯ ಟೆಸ್ಟ್ ಶತಕ ಸಿಡಿಸಿದ್ದು 2016 ರಲ್ಲಿ. ಚೆನ್ನೈನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ 199 ರನ್ ಬಾರಿಸಿದ್ದರು. ಇದಾದ ಬಳಿಕ ಭಾರತದ ಪಿಚ್​ನಲ್ಲಿ ರಾಹುಲ್ ಬ್ಯಾಟ್​ನಿಂದ ಒಂದೇ ಒಂದು ಶತಕ ಮೂಡಿಬಂದಿರಲಿಲ್ಲ.

3 / 6
ಇದೀಗ ಬರೋಬ್ಬರಿ 3211 ದಿನಗಳ ಕಾಯುವಿಕೆ ಅಂತ್ಯಗೊಳಿಸಿ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅಂದರೆ ಟೆಸ್ಟ್ ಇತಿಹಾಸದಲ್ಲಿ ಬ್ಯಾಟ್ಸ್​ಮನ್​ವೊಬ್ಬರು ತವರಿನಲ್ಲಿ ಎರಡು ಶತಕಗಳನ್ನು ಬಾರಿಸಲು ತೆಗೆದುಕೊಂಡ ದೀರ್ಘಾವಧಿ ಸಮಯ ಇದಾಗಿದೆ.

ಇದೀಗ ಬರೋಬ್ಬರಿ 3211 ದಿನಗಳ ಕಾಯುವಿಕೆ ಅಂತ್ಯಗೊಳಿಸಿ ಕೆಎಲ್ ರಾಹುಲ್ ವಿಶೇಷ ದಾಖಲೆ ಬರೆದಿದ್ದಾರೆ. ಅಂದರೆ ಟೆಸ್ಟ್ ಇತಿಹಾಸದಲ್ಲಿ ಬ್ಯಾಟ್ಸ್​ಮನ್​ವೊಬ್ಬರು ತವರಿನಲ್ಲಿ ಎರಡು ಶತಕಗಳನ್ನು ಬಾರಿಸಲು ತೆಗೆದುಕೊಂಡ ದೀರ್ಘಾವಧಿ ಸಮಯ ಇದಾಗಿದೆ.

4 / 6
ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ರವಿಚಂದ್ರನ್ ಅಶ್ವಿನ್ ಅವರ ಹೆಸರಿನಲ್ಲಿತ್ತು. ಅಶ್ವಿನ್ ತವರಿನಲ್ಲಿ ಬಾರಿಸಿದ ಎರಡು ಶತಕಗಳ ನಡುವೆ 2655 ದಿನಗಳ ಅಂತರವಿತ್ತು. ಈ ಮೂಲಕ ಹೋಮ್ ಮ್ಯಾಚ್​ನಲ್ಲಿ ಎರಡು ಶತಕ ಬಾರಿಸಲು ದೀರ್ಘಾವಧಿಯ ಸಮಯ ತೆಗೆದುಕೊಂಡ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಟೀಮ್ ಇಂಡಿಯಾದ ರವಿಚಂದ್ರನ್ ಅಶ್ವಿನ್ ಅವರ ಹೆಸರಿನಲ್ಲಿತ್ತು. ಅಶ್ವಿನ್ ತವರಿನಲ್ಲಿ ಬಾರಿಸಿದ ಎರಡು ಶತಕಗಳ ನಡುವೆ 2655 ದಿನಗಳ ಅಂತರವಿತ್ತು. ಈ ಮೂಲಕ ಹೋಮ್ ಮ್ಯಾಚ್​ನಲ್ಲಿ ಎರಡು ಶತಕ ಬಾರಿಸಲು ದೀರ್ಘಾವಧಿಯ ಸಮಯ ತೆಗೆದುಕೊಂಡ ಬ್ಯಾಟರ್ ಎನಿಸಿಕೊಂಡಿದ್ದರು.

5 / 6
ಇದೀಗ 3211 ದಿನಗಳ ಅಂತರದೊಂದಿಗೆ ಈ ದಾಖಲೆಯನ್ನು ಕೆಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 9 ವರ್ಷಗಳ ಬಳಿಕ ತವರಿನಲ್ಲಿನ ಶತಕದ ಬರ ನೀಗಿಸಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಅತ್ಯಧಿಕ ಟೆಸ್ಟ್ ಶತಕ ಬಾರಿಸಿದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇದೀಗ 3211 ದಿನಗಳ ಅಂತರದೊಂದಿಗೆ ಈ ದಾಖಲೆಯನ್ನು ಕೆಲ್ ರಾಹುಲ್ ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ 9 ವರ್ಷಗಳ ಬಳಿಕ ತವರಿನಲ್ಲಿನ ಶತಕದ ಬರ ನೀಗಿಸಿದ್ದಾರೆ. ಅಲ್ಲದೆ ಟೀಮ್ ಇಂಡಿಯಾ ಪರ ಆರಂಭಿಕನಾಗಿ ಅತ್ಯಧಿಕ ಟೆಸ್ಟ್ ಶತಕ ಬಾರಿಸಿದ 4ನೇ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

6 / 6
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ