AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಲಕ್ನೋ ನೀಡಿದ ಬೃಹತ್ ಮೊತ್ತದ ಆಫರ್​ ತಿರಸ್ಕರಿಸಿದ ರಾಹುಲ್..! ಆರ್​ಸಿಬಿ ಸೇರುವ ಕಾಲ ಸನಿಹ

KL Rahul: ಕೆಎಲ್ ರಾಹುಲ್ ಅವರು ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ತೊರೆಯಲು ನಿರ್ಧರಿಸಿದ್ದಾರೆ. ಅವರು 18 ಕೋಟಿ ರೂಪಾಯಿಗಳ ಒಪ್ಪಂದವನ್ನು ತಿರಸ್ಕರಿಸಿದ್ದಾರೆ. ರಾಹುಲ್ ಅವರ ನಿಧಾನ ಬ್ಯಾಟಿಂಗ್​ಗೆ ಬೆಸತ್ತ ಫ್ರಾಂಚೈಸಿ ಅವರನ್ನು ತಂಡದಿಂದ ಹೊರಗಿಡುತ್ತಿದೆ ಎಂದು ಹೇಳಲಾಗಿತ್ತು. ಆದರೆ, ವೈಯಕ್ತಿಕ ಕಾರಣ ನೀಡಿ ಸ್ವತಃ ರಾಹುಲ್ ಅವರೇ ಲಕ್ನೋ ನೀಡಿದ ಆಫರ್ ತಿರಸ್ಕರಿಸಿದ್ದಾರೆ ಎಂದು ವರದಿಯಾಗಿದೆ.

ಪೃಥ್ವಿಶಂಕರ
|

Updated on: Oct 30, 2024 | 4:05 PM

Share
ಐಪಿಎಲ್​ನ ಎಲ್ಲಾ 10 ಫ್ರಾಂಚೈಸಿಗಳು ನಾಳೆ ಅಂದರೆ ಅಕ್ಟೋಬರ್ 31 ರ 5 ಗಂಟೆಯೊಳಗೆ ತಾವು ತಂಡದಲ್ಲಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಬೇಕಿದೆ. ಆದರೆ 2025 ರ ಐಪಿಎಲ್ ಧಾರಣ ಪಟ್ಟಿ ಹೊರಬೀಳುವುದಕ್ಕೆ ಮುನ್ನವೇ ಕನ್ನಡಿಗ ಕೆಎಲ್ ರಾಹುಲ್ ಬಗ್ಗೆ ಸಾಕಷ್ಟು ಅಂತೆಕಂತೆಗಳು ಕೇಳಿಬರುತ್ತಿವೆ. ಅದರಂತೆ ಈ ಹಿಂದೆ ರಾಹುಲ್​ರನ್ನು ಲಕ್ನೋ ಫ್ರಾಂಚೈಸಿಯೇ ತಂಡದಿಂದ ಹೊರಹಾಕಿದೆ ಎಂದು ವರದಿಗಳಾಗಿದ್ದವು.

ಐಪಿಎಲ್​ನ ಎಲ್ಲಾ 10 ಫ್ರಾಂಚೈಸಿಗಳು ನಾಳೆ ಅಂದರೆ ಅಕ್ಟೋಬರ್ 31 ರ 5 ಗಂಟೆಯೊಳಗೆ ತಾವು ತಂಡದಲ್ಲಿ ಉಳಿಸಿಕೊಂಡಿರುವ ಆಟಗಾರರ ಪಟ್ಟಿಯನ್ನು ಬಿಸಿಸಿಐಗೆ ಸಲ್ಲಿಸಬೇಕಿದೆ. ಆದರೆ 2025 ರ ಐಪಿಎಲ್ ಧಾರಣ ಪಟ್ಟಿ ಹೊರಬೀಳುವುದಕ್ಕೆ ಮುನ್ನವೇ ಕನ್ನಡಿಗ ಕೆಎಲ್ ರಾಹುಲ್ ಬಗ್ಗೆ ಸಾಕಷ್ಟು ಅಂತೆಕಂತೆಗಳು ಕೇಳಿಬರುತ್ತಿವೆ. ಅದರಂತೆ ಈ ಹಿಂದೆ ರಾಹುಲ್​ರನ್ನು ಲಕ್ನೋ ಫ್ರಾಂಚೈಸಿಯೇ ತಂಡದಿಂದ ಹೊರಹಾಕಿದೆ ಎಂದು ವರದಿಗಳಾಗಿದ್ದವು.

1 / 7
ಆದರೀಗ ರಾಹುಲ್ ಬಗ್ಗೆ ದೊಡ್ಡ ಅಪ್ಡೇಟ್ ಹೊರಬಂದಿದ್ದು, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ರಾಹುಲ್​ರನ್ನು ತಂಡದಲ್ಲಿ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದೆ. ಆದರೆ ಸ್ವತಃ ರಾಹುಲ್ ಅವರೇ ಲಕ್ನೋ ತಂಡದಲ್ಲಿ ಆಡದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಲಕ್ನೋ ನೀಡಿದ್ದ ಬೃಹತ್ ಮೊತ್ತದ ಒಪ್ಪಂದವನ್ನೂ ರಾಹುಲ್ ತಿರಸ್ಕರಿಸಿದ್ದಾರೆ.

ಆದರೀಗ ರಾಹುಲ್ ಬಗ್ಗೆ ದೊಡ್ಡ ಅಪ್ಡೇಟ್ ಹೊರಬಂದಿದ್ದು, ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿ ರಾಹುಲ್​ರನ್ನು ತಂಡದಲ್ಲಿ ಉಳಿಸಿಕೊಳ್ಳಲು ಸಾಕಷ್ಟು ಪ್ರಯತ್ನ ಮಾಡಿದೆ. ಆದರೆ ಸ್ವತಃ ರಾಹುಲ್ ಅವರೇ ಲಕ್ನೋ ತಂಡದಲ್ಲಿ ಆಡದಿರಲು ನಿರ್ಧರಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ ಲಕ್ನೋ ನೀಡಿದ್ದ ಬೃಹತ್ ಮೊತ್ತದ ಒಪ್ಪಂದವನ್ನೂ ರಾಹುಲ್ ತಿರಸ್ಕರಿಸಿದ್ದಾರೆ.

2 / 7
ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ತಂಡದ ನಾಯಕತ್ವ ವಹಿಸಿದ್ದ ರಾಹುಲ್ ಅವರನ್ನು ಅತಿ ದೊಡ್ಡ ಮೊತ್ತವನ್ನು ಪಾವತಿಸುವ ಮೂಲಕ ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿತ್ತು.ಆದರೆ, ರಾಹುಲ್ ತಂಡ ತೊರೆಯಲು ನಿರ್ಧರಿಸಿದ್ದಾರೆ.‘ಟೈಮ್ಸ್ ಆಫ್ ಇಂಡಿಯಾ' ಸುದ್ದಿ ಪ್ರಕಾರ ಕೆಎಲ್ ರಾಹುಲ್, ಲಕ್ನೋ ತಂಡದಲ್ಲಿ ಆಡಲು ಉತ್ಸುಕತೆ ಹೊಂದಿಲ್ಲ. ಹೀಗಾಗಿ ಲಕ್ನೋ ತಂಡವನ್ನು ತೊರೆಯಲು ರಾಹುಲ್ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಕಳೆದ ಮೂರು ಸೀಸನ್​ಗಳಲ್ಲಿ ಲಕ್ನೋ ತಂಡದ ನಾಯಕತ್ವ ವಹಿಸಿದ್ದ ರಾಹುಲ್ ಅವರನ್ನು ಅತಿ ದೊಡ್ಡ ಮೊತ್ತವನ್ನು ಪಾವತಿಸುವ ಮೂಲಕ ತಂಡದಲ್ಲಿ ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿತ್ತು.ಆದರೆ, ರಾಹುಲ್ ತಂಡ ತೊರೆಯಲು ನಿರ್ಧರಿಸಿದ್ದಾರೆ.‘ಟೈಮ್ಸ್ ಆಫ್ ಇಂಡಿಯಾ' ಸುದ್ದಿ ಪ್ರಕಾರ ಕೆಎಲ್ ರಾಹುಲ್, ಲಕ್ನೋ ತಂಡದಲ್ಲಿ ಆಡಲು ಉತ್ಸುಕತೆ ಹೊಂದಿಲ್ಲ. ಹೀಗಾಗಿ ಲಕ್ನೋ ತಂಡವನ್ನು ತೊರೆಯಲು ರಾಹುಲ್ ತಮ್ಮದೇ ಆದ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ.

3 / 7
ರಾಹುಲ್ ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಲಕ್ನೋ ಫ್ರಾಂಚೈಸಿ ಅವರನ್ನು ಉಳಿಸಿಕೊಳ್ಳುವ ಮನಸ್ಥಿತಿಯಲ್ಲಿಲ್ಲ ಎಂದು ಈ ಹಿಂದೆ ವರದಿಗಳು ಕೇಳಿಬಂದಿದ್ದವು. ಆದರೆ ಇದೀಗ ಕೇಳಿಬಂದಿರುವ ಸುದ್ದಿಯ ಪ್ರಕಾರ, ತಂಡದಲ್ಲಿ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ರಾಹುಲ್ ಅಗ್ರಸ್ಥಾನದಲ್ಲಿದ್ದರು. ತಂಡವು ಅವರಿಗೆ 18 ಕೋಟಿ ರೂಪಾಯಿ ನೀಡಲು ಸಿದ್ಧವಾಗಿತ್ತು. ಆದಾಗ್ಯೂ, ವೈಯಕ್ತಿಕ ಮತ್ತು ವೃತ್ತಿಪರ ಕಾರಣಗಳನ್ನು ಉಲ್ಲೇಖಿಸಿ ರಾಹುಲ್ ಲಕ್ನೋದಿಂದ ದೂರವಾಗಲು ನಿರ್ಧರಿಸಿದ್ದಾರೆ ಎಂದು ವರದಿ ಮಾಡಿದೆ.

ರಾಹುಲ್ ಅವರ ನಿಧಾನಗತಿಯ ಬ್ಯಾಟಿಂಗ್‌ನಿಂದಾಗಿ ಲಕ್ನೋ ಫ್ರಾಂಚೈಸಿ ಅವರನ್ನು ಉಳಿಸಿಕೊಳ್ಳುವ ಮನಸ್ಥಿತಿಯಲ್ಲಿಲ್ಲ ಎಂದು ಈ ಹಿಂದೆ ವರದಿಗಳು ಕೇಳಿಬಂದಿದ್ದವು. ಆದರೆ ಇದೀಗ ಕೇಳಿಬಂದಿರುವ ಸುದ್ದಿಯ ಪ್ರಕಾರ, ತಂಡದಲ್ಲಿ ಉಳಿಸಿಕೊಳ್ಳುವ ಆಟಗಾರರ ಪಟ್ಟಿಯಲ್ಲಿ ರಾಹುಲ್ ಅಗ್ರಸ್ಥಾನದಲ್ಲಿದ್ದರು. ತಂಡವು ಅವರಿಗೆ 18 ಕೋಟಿ ರೂಪಾಯಿ ನೀಡಲು ಸಿದ್ಧವಾಗಿತ್ತು. ಆದಾಗ್ಯೂ, ವೈಯಕ್ತಿಕ ಮತ್ತು ವೃತ್ತಿಪರ ಕಾರಣಗಳನ್ನು ಉಲ್ಲೇಖಿಸಿ ರಾಹುಲ್ ಲಕ್ನೋದಿಂದ ದೂರವಾಗಲು ನಿರ್ಧರಿಸಿದ್ದಾರೆ ಎಂದು ವರದಿ ಮಾಡಿದೆ.

4 / 7
ವರದಿಯ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತೊರೆಯಲು ಸಿದ್ಧರಾಗಿರುವ ಕೆಎಲ್ ರಾಹುಲ್ ಅವರನ್ನು ಕೆಲವು ದೊಡ್ಡ ತಂಡಗಳು ಸಂಪರ್ಕಿಸಿವೆ. ಇದರಲ್ಲಿ ದೊಡ್ಡ ಹೆಸರುಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್. ರಾಹುಲ್ ಈ ಹಿಂದೆ ಆರ್‌ಸಿಬಿ ಪರ ಆಡಿದ್ದು, ಅವರ ಪ್ರದರ್ಶನ ಉತ್ತಮವಾಗಿತ್ತು. ಅದೇ ಸಮಯದಲ್ಲಿ, ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ಕೂಡ ರಾಹುಲ್​ರನ್ನು ಖರೀದಿಸಲು ಆಸಕ್ತಿ ತೋರಿಸಿದೆ.

ವರದಿಯ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತೊರೆಯಲು ಸಿದ್ಧರಾಗಿರುವ ಕೆಎಲ್ ರಾಹುಲ್ ಅವರನ್ನು ಕೆಲವು ದೊಡ್ಡ ತಂಡಗಳು ಸಂಪರ್ಕಿಸಿವೆ. ಇದರಲ್ಲಿ ದೊಡ್ಡ ಹೆಸರುಗಳೆಂದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್. ರಾಹುಲ್ ಈ ಹಿಂದೆ ಆರ್‌ಸಿಬಿ ಪರ ಆಡಿದ್ದು, ಅವರ ಪ್ರದರ್ಶನ ಉತ್ತಮವಾಗಿತ್ತು. ಅದೇ ಸಮಯದಲ್ಲಿ, ಐದು ಬಾರಿಯ ಚಾಂಪಿಯನ್ ಸಿಎಸ್‌ಕೆ ಕೂಡ ರಾಹುಲ್​ರನ್ನು ಖರೀದಿಸಲು ಆಸಕ್ತಿ ತೋರಿಸಿದೆ.

5 / 7
ಈ ಎರಡು ತಂಡಗಳಲ್ಲದೆ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಕೂಡ ರಾಹುಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸುತ್ತಿವೆ. ಆದರೆ ಅಂತಿಮವಾಗಿ ರಾಹುಲ್ ಲಕ್ನೋ ತಂಡದಿಂದ ಹೊರಬಂದರೆ, ಹರಾಜಿನಲ್ಲಿ ಅವರನ್ನು ಯಾವ ತಂಡ ಖರೀದಿಸಲಿ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ರಾಹುಲ್ ಹರಾಜಿಗೆ ಬಂದರೆ ಅವರ ಮೇಲೆ ಹಣದ ಮಳೆಯಾಗುವುದು ಖಚಿತ.

ಈ ಎರಡು ತಂಡಗಳಲ್ಲದೆ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಕೂಡ ರಾಹುಲ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲು ತೀವ್ರ ಪ್ರಯತ್ನ ನಡೆಸುತ್ತಿವೆ. ಆದರೆ ಅಂತಿಮವಾಗಿ ರಾಹುಲ್ ಲಕ್ನೋ ತಂಡದಿಂದ ಹೊರಬಂದರೆ, ಹರಾಜಿನಲ್ಲಿ ಅವರನ್ನು ಯಾವ ತಂಡ ಖರೀದಿಸಲಿ ಎಂಬುದನ್ನು ಕಾದು ನೋಡಬೇಕಿದೆ. ಒಂದು ವೇಳೆ ರಾಹುಲ್ ಹರಾಜಿಗೆ ಬಂದರೆ ಅವರ ಮೇಲೆ ಹಣದ ಮಳೆಯಾಗುವುದು ಖಚಿತ.

6 / 7
ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪ್ರದರ್ಶನ ವಿಶೇಷವೇನಾಗಿರಲಿಲ್ಲ. ರಾಹುಲ್ ನಾಯಕತ್ವದಲ್ಲಿ ತಂಡವು ಪ್ಲೇಆಫ್ ಟಿಕೆಟ್ ಪಡೆಯುವಲ್ಲಿ ವಿಫಲವಾಗಿತ್ತು. ಕಳೆದ ಸೀಸನ್​ನಲ್ಲಿ ಆಡಿದ 14 ಪಂದ್ಯಗಳಲ್ಲಿ, ಲಕ್ನೋ 7 ಪಂದ್ಯಗಲ್ಲಿ ಗೆದ್ದಿದ್ದರೆ, ತಂಡವು ಅದೇ ಸಂಖ್ಯೆಯ ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ತಂಡವು ಏಳನೇ ಸ್ಥಾನದೊಂದಿಗೆ ಪಂದ್ಯಾವಳಿಯನ್ನು ಕೊನೆಗೊಳಿಸಿತ್ತು.

ಐಪಿಎಲ್ 2024 ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪ್ರದರ್ಶನ ವಿಶೇಷವೇನಾಗಿರಲಿಲ್ಲ. ರಾಹುಲ್ ನಾಯಕತ್ವದಲ್ಲಿ ತಂಡವು ಪ್ಲೇಆಫ್ ಟಿಕೆಟ್ ಪಡೆಯುವಲ್ಲಿ ವಿಫಲವಾಗಿತ್ತು. ಕಳೆದ ಸೀಸನ್​ನಲ್ಲಿ ಆಡಿದ 14 ಪಂದ್ಯಗಳಲ್ಲಿ, ಲಕ್ನೋ 7 ಪಂದ್ಯಗಲ್ಲಿ ಗೆದ್ದಿದ್ದರೆ, ತಂಡವು ಅದೇ ಸಂಖ್ಯೆಯ ಪಂದ್ಯಗಳಲ್ಲಿ ಸೋಲನ್ನು ಎದುರಿಸಬೇಕಾಯಿತು. ಇದರೊಂದಿಗೆ ತಂಡವು ಏಳನೇ ಸ್ಥಾನದೊಂದಿಗೆ ಪಂದ್ಯಾವಳಿಯನ್ನು ಕೊನೆಗೊಳಿಸಿತ್ತು.

7 / 7
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್