AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ನಿವೃತ್ತಿಯ ಸುಳಿವು? ಬೆಂಗಳೂರು ಪಿಚ್​ಗೆ ವಂದಿಸಿ ತೆರಳಿದ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ಈ ವರ್ಷ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. 2024 ರಲ್ಲಿ ಐದು ಟೆಸ್ಟ್ ಪಂದ್ಯಗಳನ್ನಾಡಿರುವ ರಾಹುಲ್ 8, 86, 22, 16, 22*, 68, 0, 12 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಭಾರೀ ನಿರಾಸೆ ಮೂಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 21, 2024 | 9:30 AM

Share
ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಕೆಎಲ್ ರಾಹುಲ್ ಪಿಚ್​ಗೆ ತೆರಳಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಕನ್ನಡಿಗ ಈ ನಡೆಯು ಇದೀಗ ಹಲವು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಕೆಎಲ್ ರಾಹುಲ್ ಪಿಚ್​ಗೆ ತೆರಳಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಕನ್ನಡಿಗ ಈ ನಡೆಯು ಇದೀಗ ಹಲವು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

1 / 5
ಅದರಲ್ಲೂ ಬೆಂಗಳೂರು ಟೆಸ್ಟ್​ನಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಭಾರತ ತಂಡವು 36 ವರ್ಷಗಳ ಬಳಿಕ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ರಾಹುಲ್​ ಪಿಚ್​ಗೆ ವಂದಿಸಿ ತೆರಳಿದ್ದಾರೆ.

ಅದರಲ್ಲೂ ಬೆಂಗಳೂರು ಟೆಸ್ಟ್​ನಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಭಾರತ ತಂಡವು 36 ವರ್ಷಗಳ ಬಳಿಕ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ರಾಹುಲ್​ ಪಿಚ್​ಗೆ ವಂದಿಸಿ ತೆರಳಿದ್ದಾರೆ.

2 / 5
ಕೆಎಲ್ ರಾಹುಲ್ ಅವರ ಈ ನಡೆಯ ಬೆನ್ನಲ್ಲೇ, ಇದು ಬೆಂಗಳೂರಿನಲ್ಲಿ ಕನ್ನಡಿಗನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಐತಿಹಾಸಿಕ ಗೆಲುವು ಹಾಗೂ ವಿದಾಯ ಪಂದ್ಯದ ವೇಳೆ ಪಿಚ್​ಗೆ ಗೌರವ ಸಲ್ಲಿಸುವುದು ಸಾಮಾನ್ಯ. ಆದರೆ ಕೆಎಲ್ ರಾಹುಲ್ ಹೀನಾಯ ಸೋಲಿನ ನಂತರ ಪಿಚ್​ಗೆ ವಂದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೆಎಲ್ ರಾಹುಲ್ ಅವರ ಈ ನಡೆಯ ಬೆನ್ನಲ್ಲೇ, ಇದು ಬೆಂಗಳೂರಿನಲ್ಲಿ ಕನ್ನಡಿಗನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಐತಿಹಾಸಿಕ ಗೆಲುವು ಹಾಗೂ ವಿದಾಯ ಪಂದ್ಯದ ವೇಳೆ ಪಿಚ್​ಗೆ ಗೌರವ ಸಲ್ಲಿಸುವುದು ಸಾಮಾನ್ಯ. ಆದರೆ ಕೆಎಲ್ ರಾಹುಲ್ ಹೀನಾಯ ಸೋಲಿನ ನಂತರ ಪಿಚ್​ಗೆ ವಂದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

3 / 5
ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ರಾಹುಲ್ ನಿರ್ಣಾಯಕವಾಗಿದ್ದ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 12 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿ ಪುಣೆಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ರಾಹುಲ್ ನಿರ್ಣಾಯಕವಾಗಿದ್ದ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 12 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿ ಪುಣೆಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

4 / 5
ಹೀಗಾಗಿಯೇ ಬೆಂಗಳೂರು ಟೆಸ್ಟ್ ಪಂದ್ಯವು ಕೆಎಲ್ ರಾಹುಲ್ ಪಾಲಿನ ಕೊನೆಯ ಟೆಸ್ಟ್​ ಮ್ಯಾಚ್ ಆಗುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರ ನಡುವೆ ಪಿಚ್​ಗೂ ವಂದಿಸಿ ತೆರಳಿರುವುದಿಂದ ಅವರು ನಿವೃತ್ತಿ ಘೋಷಿಸಲಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ ಅನುಮಾನಗಳಿಗೆ ಖುದ್ದು ಕೆಎಲ್ ರಾಹುಲ್ ಅವರೇ ಉತ್ತರ ನೀಡಲಿದ್ದಾರೆ. ಆ ಉತ್ತರಕ್ಕಾಗಿ ಒಂದಷ್ಟು ದಿನಗಳವರೆಗೆ ಕಾಯಬೇಕಾಗಿ ಬರಬಹುದು.

ಹೀಗಾಗಿಯೇ ಬೆಂಗಳೂರು ಟೆಸ್ಟ್ ಪಂದ್ಯವು ಕೆಎಲ್ ರಾಹುಲ್ ಪಾಲಿನ ಕೊನೆಯ ಟೆಸ್ಟ್​ ಮ್ಯಾಚ್ ಆಗುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರ ನಡುವೆ ಪಿಚ್​ಗೂ ವಂದಿಸಿ ತೆರಳಿರುವುದಿಂದ ಅವರು ನಿವೃತ್ತಿ ಘೋಷಿಸಲಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ ಅನುಮಾನಗಳಿಗೆ ಖುದ್ದು ಕೆಎಲ್ ರಾಹುಲ್ ಅವರೇ ಉತ್ತರ ನೀಡಲಿದ್ದಾರೆ. ಆ ಉತ್ತರಕ್ಕಾಗಿ ಒಂದಷ್ಟು ದಿನಗಳವರೆಗೆ ಕಾಯಬೇಕಾಗಿ ಬರಬಹುದು.

5 / 5
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ