AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ನಿವೃತ್ತಿಯ ಸುಳಿವು? ಬೆಂಗಳೂರು ಪಿಚ್​ಗೆ ವಂದಿಸಿ ತೆರಳಿದ ಕೆಎಲ್ ರಾಹುಲ್

KL Rahul: ಕೆಎಲ್ ರಾಹುಲ್ ಈ ವರ್ಷ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. 2024 ರಲ್ಲಿ ಐದು ಟೆಸ್ಟ್ ಪಂದ್ಯಗಳನ್ನಾಡಿರುವ ರಾಹುಲ್ 8, 86, 22, 16, 22*, 68, 0, 12 ರನ್ ಮಾತ್ರ ಕಲೆಹಾಕಿದ್ದಾರೆ. ಅದರಲ್ಲೂ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅತ್ಯಂತ ಕಳಪೆ ಪ್ರದರ್ಶನ ನೀಡಿ ಭಾರೀ ನಿರಾಸೆ ಮೂಡಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Oct 21, 2024 | 9:30 AM

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಕೆಎಲ್ ರಾಹುಲ್ ಪಿಚ್​ಗೆ ತೆರಳಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಕನ್ನಡಿಗ ಈ ನಡೆಯು ಇದೀಗ ಹಲವು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 8 ವಿಕೆಟ್​ಗಳಿಂದ ಸೋಲನುಭವಿಸಿದೆ. ಈ ಹೀನಾಯ ಸೋಲಿನ ಬೆನ್ನಲ್ಲೇ ಕೆಎಲ್ ರಾಹುಲ್ ಪಿಚ್​ಗೆ ತೆರಳಿ ವಿಶೇಷ ಗೌರವ ಸಲ್ಲಿಸಿದ್ದಾರೆ. ಕನ್ನಡಿಗ ಈ ನಡೆಯು ಇದೀಗ ಹಲವು ಹೊಸ ಚರ್ಚೆಯನ್ನು ಹುಟ್ಟುಹಾಕಿದೆ.

1 / 5
ಅದರಲ್ಲೂ ಬೆಂಗಳೂರು ಟೆಸ್ಟ್​ನಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಭಾರತ ತಂಡವು 36 ವರ್ಷಗಳ ಬಳಿಕ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ರಾಹುಲ್​ ಪಿಚ್​ಗೆ ವಂದಿಸಿ ತೆರಳಿದ್ದಾರೆ.

ಅದರಲ್ಲೂ ಬೆಂಗಳೂರು ಟೆಸ್ಟ್​ನಲ್ಲಿ ವಿಫಲರಾಗಿರುವ ಕೆಎಲ್ ರಾಹುಲ್ ನಿವೃತ್ತಿ ಘೋಷಿಸಲಿದ್ದಾರೆ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಭಾರತ ತಂಡವು 36 ವರ್ಷಗಳ ಬಳಿಕ ನ್ಯೂಝಿಲೆಂಡ್ ವಿರುದ್ಧ ತವರಿನಲ್ಲಿ ಸೋಲನುಭವಿಸಿದೆ. ಈ ಸೋಲಿನ ಬೆನ್ನಲ್ಲೇ ರಾಹುಲ್​ ಪಿಚ್​ಗೆ ವಂದಿಸಿ ತೆರಳಿದ್ದಾರೆ.

2 / 5
ಕೆಎಲ್ ರಾಹುಲ್ ಅವರ ಈ ನಡೆಯ ಬೆನ್ನಲ್ಲೇ, ಇದು ಬೆಂಗಳೂರಿನಲ್ಲಿ ಕನ್ನಡಿಗನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಐತಿಹಾಸಿಕ ಗೆಲುವು ಹಾಗೂ ವಿದಾಯ ಪಂದ್ಯದ ವೇಳೆ ಪಿಚ್​ಗೆ ಗೌರವ ಸಲ್ಲಿಸುವುದು ಸಾಮಾನ್ಯ. ಆದರೆ ಕೆಎಲ್ ರಾಹುಲ್ ಹೀನಾಯ ಸೋಲಿನ ನಂತರ ಪಿಚ್​ಗೆ ವಂದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಕೆಎಲ್ ರಾಹುಲ್ ಅವರ ಈ ನಡೆಯ ಬೆನ್ನಲ್ಲೇ, ಇದು ಬೆಂಗಳೂರಿನಲ್ಲಿ ಕನ್ನಡಿಗನ ಕೊನೆಯ ಅಂತಾರಾಷ್ಟ್ರೀಯ ಪಂದ್ಯವಾ ಎಂಬ ಪ್ರಶ್ನೆಯನ್ನು ಹುಟ್ಟುಹಾಕಿದೆ. ಏಕೆಂದರೆ ಐತಿಹಾಸಿಕ ಗೆಲುವು ಹಾಗೂ ವಿದಾಯ ಪಂದ್ಯದ ವೇಳೆ ಪಿಚ್​ಗೆ ಗೌರವ ಸಲ್ಲಿಸುವುದು ಸಾಮಾನ್ಯ. ಆದರೆ ಕೆಎಲ್ ರಾಹುಲ್ ಹೀನಾಯ ಸೋಲಿನ ನಂತರ ಪಿಚ್​ಗೆ ವಂದಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

3 / 5
ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ರಾಹುಲ್ ನಿರ್ಣಾಯಕವಾಗಿದ್ದ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 12 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿ ಪುಣೆಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

ಇನ್ನು ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಶೂನ್ಯಕ್ಕೆ ಔಟಾಗಿದ್ದ ರಾಹುಲ್ ನಿರ್ಣಾಯಕವಾಗಿದ್ದ ದ್ವಿತೀಯ ಇನಿಂಗ್ಸ್​ನಲ್ಲಿ ಕೇವಲ 12 ರನ್ ಮಾತ್ರ ಕಲೆಹಾಕಿದ್ದರು. ಹೀಗಾಗಿ ಪುಣೆಯಲ್ಲಿ ನಡೆಯಲಿರುವ 2ನೇ ಟೆಸ್ಟ್ ಪಂದ್ಯದಿಂದ ರಾಹುಲ್ ಅವರನ್ನು ಕೈ ಬಿಡುವ ಸಾಧ್ಯತೆ ಹೆಚ್ಚಿದೆ.

4 / 5
ಹೀಗಾಗಿಯೇ ಬೆಂಗಳೂರು ಟೆಸ್ಟ್ ಪಂದ್ಯವು ಕೆಎಲ್ ರಾಹುಲ್ ಪಾಲಿನ ಕೊನೆಯ ಟೆಸ್ಟ್​ ಮ್ಯಾಚ್ ಆಗುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರ ನಡುವೆ ಪಿಚ್​ಗೂ ವಂದಿಸಿ ತೆರಳಿರುವುದಿಂದ ಅವರು ನಿವೃತ್ತಿ ಘೋಷಿಸಲಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ ಅನುಮಾನಗಳಿಗೆ ಖುದ್ದು ಕೆಎಲ್ ರಾಹುಲ್ ಅವರೇ ಉತ್ತರ ನೀಡಲಿದ್ದಾರೆ. ಆ ಉತ್ತರಕ್ಕಾಗಿ ಒಂದಷ್ಟು ದಿನಗಳವರೆಗೆ ಕಾಯಬೇಕಾಗಿ ಬರಬಹುದು.

ಹೀಗಾಗಿಯೇ ಬೆಂಗಳೂರು ಟೆಸ್ಟ್ ಪಂದ್ಯವು ಕೆಎಲ್ ರಾಹುಲ್ ಪಾಲಿನ ಕೊನೆಯ ಟೆಸ್ಟ್​ ಮ್ಯಾಚ್ ಆಗುವ ಸಾಧ್ಯತೆಗಳಿವೆ ಎಂದು ವಿಶ್ಲೇಷಿಸಲಾಗುತ್ತಿದೆ. ಇದರ ನಡುವೆ ಪಿಚ್​ಗೂ ವಂದಿಸಿ ತೆರಳಿರುವುದಿಂದ ಅವರು ನಿವೃತ್ತಿ ಘೋಷಿಸಲಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ ಅನುಮಾನಗಳಿಗೆ ಖುದ್ದು ಕೆಎಲ್ ರಾಹುಲ್ ಅವರೇ ಉತ್ತರ ನೀಡಲಿದ್ದಾರೆ. ಆ ಉತ್ತರಕ್ಕಾಗಿ ಒಂದಷ್ಟು ದಿನಗಳವರೆಗೆ ಕಾಯಬೇಕಾಗಿ ಬರಬಹುದು.

5 / 5
Follow us
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?