AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

KL Rahul: ಭಾರತ ತಂಡದಲ್ಲಿ ಕೆಎಲ್ ರಾಹುಲ್​ಗೆ ಇಲ್ಲ ಚಾನ್ಸ್..!

Asia Cup 2025 KL Rahul: ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್-18 ರಲ್ಲಿ 1 ಶತಕ ಹಾಗೂ 3 ಅರ್ಧಶತಕಗಳೊಂದಿಗೆ 539 ರನ್ ಕಲೆಹಾಕಿದ್ದ ಕೆಎಲ್ ರಾಹುಲ್ ಅವರಿಗೆ ಈ ಬಾರಿಯ ಏಷ್ಯಾಕಪ್ ತಂಡದಲ್ಲಿ ಸ್ಥಾನ ಲಭಿಸಿಲ್ಲ. ಕಳೆದ ಬಾರಿ ಟಿ20 ವಿಶ್ವಕಪ್​ನಲ್ಲೂ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದ ರಾಹುಲ್ ಇದೀಗ ಮತ್ತೊಮ್ಮೆ ಅವಕಾಶ ವಂಚಿತರಾಗಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 19, 2025 | 3:00 PM

Share
ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2025) ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ.

ಏಷ್ಯನ್ ರಾಷ್ಟ್ರಗಳ ಕ್ರಿಕೆಟ್ ಕದನ ಏಷ್ಯಾಕಪ್ (Asia Cup 2025) ಸೆಪ್ಟೆಂಬರ್ 9 ರಿಂದ ಶುರುವಾಗಲಿದೆ. ಯುಎಇ ನಲ್ಲಿ ನಡೆಯಲಿರುವ ಈ ಟೂರ್ನಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಹದಿನೈದು ಸದಸ್ಯರುಗಳ ಈ ತಂಡದಲ್ಲಿ ಕನ್ನಡಿಗ ಕೆಎಲ್ ರಾಹುಲ್​ಗೆ (KL Rahul) ಸ್ಥಾನ ಲಭಿಸಿಲ್ಲ.

1 / 6
ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಹೀಗಾಗಿ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್​ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಬದಲಾಗಿ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

ಮುಂಬರುವ ಏಷ್ಯಾಕಪ್ ಟಿ20 ಸ್ವರೂಪದಲ್ಲಿ ನಡೆಯಲಿದ್ದು, ಹೀಗಾಗಿ ಯುವ ಆಟಗಾರರನ್ನು ಆಯ್ಕೆ ಮಾಡಲಾಗಿದೆ. ಇದೇ ಕಾರಣದಿಂದಾಗಿ ಕೆಎಲ್ ರಾಹುಲ್​ಗೆ ಸ್ಥಾನ ನೀಡಲಾಗಿಲ್ಲ ಎಂದು ತಿಳಿದು ಬಂದಿದೆ. ಬದಲಾಗಿ ವಿಕೆಟ್ ಕೀಪರ್​ಗಳಾಗಿ ಸಂಜು ಸ್ಯಾಮ್ಸನ್ ಹಾಗೂ ಜಿತೇಶ್ ಶರ್ಮಾ ಅವರನ್ನು ಆಯ್ಕೆ ಮಾಡಲಾಗಿದೆ.

2 / 6
ಇತ್ತ ಕೆಎಲ್ ರಾಹುಲ್ ಭಾರತದ ಪರ ಟಿ20 ಪಂದ್ಯವಾಡಿ ವರ್ಷ ಕಳೆದಿದೆ. ಅದರಲ್ಲೂ 2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆ ರಾಹುಲ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನು ಈ ವರ್ಷದ ಆರಂಭದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲೂ ಕೆಎಲ್ಆರ್​​ಗೆ ಚಾನ್ಸ್ ನೀಡಿರಲಿಲ್ಲ.

ಇತ್ತ ಕೆಎಲ್ ರಾಹುಲ್ ಭಾರತದ ಪರ ಟಿ20 ಪಂದ್ಯವಾಡಿ ವರ್ಷ ಕಳೆದಿದೆ. ಅದರಲ್ಲೂ 2024ರಲ್ಲಿ ನಡೆದ ಟಿ20 ವಿಶ್ವಕಪ್ ಗೆ ರಾಹುಲ್ ಅವರನ್ನು ಆಯ್ಕೆ ಮಾಡಿರಲಿಲ್ಲ. ಇನ್ನು ಈ ವರ್ಷದ ಆರಂಭದಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ 5 ಪಂದ್ಯಗಳ ಟಿ20 ಸರಣಿಯಲ್ಲೂ ಕೆಎಲ್ಆರ್​​ಗೆ ಚಾನ್ಸ್ ನೀಡಿರಲಿಲ್ಲ.

3 / 6
ಇದಾಗ್ಯೂ ಕಳೆದ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ 539 ರನ್ ಕಲೆಹಾಕಿ ಮಿಂಚಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಅವಕಾಶವನ್ನು ನಿರೀಕ್ಷಿಸಲಾಗಿತ್ತು. ಆದರೀಗ ಭಾರತ ಟಿ20 ತಂಡ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಆವರ ಹೆಸರು ಕಾಣಿಸಿಕೊಂಡಿಲ್ಲ. ಹೀಗಾಗಿ ಕೆಎಲ್ ರಾಹುಲ್ ಅವರ ಟಿ20 ಕೆರಿಯರ್ ಅಂತ್ಯ ಎಂದರೆ ತಪ್ಪಾಗಲಾರದು.

ಇದಾಗ್ಯೂ ಕಳೆದ ಬಾರಿಯ ಐಪಿಎಲ್​ನಲ್ಲಿ ಕೆಎಲ್ ರಾಹುಲ್ 539 ರನ್ ಕಲೆಹಾಕಿ ಮಿಂಚಿದ್ದರು. ಹೀಗಾಗಿ ಈ ಬಾರಿಯ ಏಷ್ಯಾಕಪ್​ ತಂಡದಲ್ಲಿ ಅವಕಾಶವನ್ನು ನಿರೀಕ್ಷಿಸಲಾಗಿತ್ತು. ಆದರೀಗ ಭಾರತ ಟಿ20 ತಂಡ ಪ್ರಕಟಗೊಂಡಿದ್ದು, ಈ ತಂಡದಲ್ಲಿ ಆವರ ಹೆಸರು ಕಾಣಿಸಿಕೊಂಡಿಲ್ಲ. ಹೀಗಾಗಿ ಕೆಎಲ್ ರಾಹುಲ್ ಅವರ ಟಿ20 ಕೆರಿಯರ್ ಅಂತ್ಯ ಎಂದರೆ ತಪ್ಪಾಗಲಾರದು.

4 / 6
ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಈವರೆಗೆ 72 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 68 ಇನಿಂಗ್ಸ್ ಆಡಿರುವ ಅವರು 2265 ರನ್ ಕಲೆ ಹಾಕಿದ್ದಾರೆ. ಇದರ ನಡುವೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

ಕೆಎಲ್ ರಾಹುಲ್ ಟೀಮ್ ಇಂಡಿಯಾ ಪರ ಈವರೆಗೆ 72 ಟಿ20 ಪಂದ್ಯಗಳನ್ನಾಡಿದ್ದಾರೆ. ಈ ವೇಳೆ 68 ಇನಿಂಗ್ಸ್ ಆಡಿರುವ ಅವರು 2265 ರನ್ ಕಲೆ ಹಾಕಿದ್ದಾರೆ. ಇದರ ನಡುವೆ 2 ಶತಕ ಹಾಗೂ 22 ಅರ್ಧಶತಕಗಳನ್ನು ಸಹ ಬಾರಿಸಿದ್ದಾರೆ. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್ ನಲ್ಲಿ ಅತ್ಯಧಿಕ ರನ್ ಕಲೆಹಾಕಿದ 4ನೇ ಬ್ಯಾಟರ್ ಎನಿಸಿಕೊಂಡಿದ್ದಾರೆ.

5 / 6
ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

ಏಷ್ಯಾ ಕಪ್​ಗೆ ಭಾರತ ತಂಡ: ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ),  ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಹರ್ಷಿತ್ ರಾಣಾ, ರಿಂಕು ಸಿಂಗ್.

6 / 6
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ