AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KS Bharat: ಕೇವಲ 20ರ ಸರಾಸರಿ: ಆದರೂ ಭಾರತ ತಂಡಕ್ಕೆ ಆಯ್ಕೆ..!

India vs England Test: ಇಂಗ್ಲೆಂಡ್ ವಿರುದ್ಧದ ಉಳಿದ ಟೆಸ್ಟ್​ ಪಂದ್ಯಗಳಿಗೆ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಲಾಗಿದೆ. ಈ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್​ಗೆ ಮಣೆಹಾಕಲಾಗಿದೆ. ಅತ್ತ ಸತತ ಕಳಪೆ ಪ್ರದರ್ಶನ ನೀಡಿದ್ದರೂ ಭರತ್​ಗೆ ಮತ್ತೊಮ್ಮೆ ಅವಕಾಶ ನೀಡಿರುವುದು ಇದೀಗ ಅಚ್ಚರಿಗೆ ಕಾರಣವಾಗಿದೆ.

TV9 Web
| Edited By: |

Updated on: Feb 10, 2024 | 2:05 PM

Share
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. 17 ಸದಸ್ಯರ ಈ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ಮತ್ತೆ ಆಯ್ಕೆಯಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಭರತ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಕೊನೆಯ ಮೂರು ಪಂದ್ಯಗಳಿಗೆ ಭಾರತ ತಂಡವನ್ನು ಆಯ್ಕೆ ಮಾಡಲಾಗಿದೆ. 17 ಸದಸ್ಯರ ಈ ತಂಡದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ಮತ್ತೆ ಆಯ್ಕೆಯಾಗಿದ್ದಾರೆ. ಇದಕ್ಕೂ ಮುನ್ನ ಇಂಗ್ಲೆಂಡ್ ವಿರುದ್ಧದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಭರತ್ ಕಾಣಿಸಿಕೊಂಡಿದ್ದರು. ಇದಾಗ್ಯೂ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿಬಂದಿರಲಿಲ್ಲ.

1 / 7
ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 28 ರನ್ ಬಾರಿಸಿದ್ದ ಭರತ್, 2ನೇ ಇನಿಂಗ್ಸ್​ನಲ್ಲಿ 41 ರನ್​ಗಳಿಸಿದ್ದರು. ಇನ್ನು ದ್ವಿತೀಯ ಟೆಸ್ಟ್​ನ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 6 ರನ್​ಗೆ ಆಲೌಟ್ ಆಗಿದ್ದರು. ಹಾಗೆಯೇ 2ನೇ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 17 ರನ್ ಮಾತ್ರ. ಅಂದರೆ  4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದರೂ ಕಲೆಹಾಕಿರುವ ಒಟ್ಟು ಸ್ಕೋರ್ 92 ರನ್​ಗಳು ಮಾತ್ರ.

ಹೈದರಾಬಾದ್​ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 28 ರನ್ ಬಾರಿಸಿದ್ದ ಭರತ್, 2ನೇ ಇನಿಂಗ್ಸ್​ನಲ್ಲಿ 41 ರನ್​ಗಳಿಸಿದ್ದರು. ಇನ್ನು ದ್ವಿತೀಯ ಟೆಸ್ಟ್​ನ ಪ್ರಥಮ ಇನಿಂಗ್ಸ್​ನಲ್ಲಿ ಕೇವಲ 6 ರನ್​ಗೆ ಆಲೌಟ್ ಆಗಿದ್ದರು. ಹಾಗೆಯೇ 2ನೇ ಇನಿಂಗ್ಸ್​ನಲ್ಲಿ ಕಲೆಹಾಕಿದ್ದು ಕೇವಲ 17 ರನ್ ಮಾತ್ರ. ಅಂದರೆ 4 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದರೂ ಕಲೆಹಾಕಿರುವ ಒಟ್ಟು ಸ್ಕೋರ್ 92 ರನ್​ಗಳು ಮಾತ್ರ.

2 / 7
ಇದಾಗ್ಯೂ ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಮುಖ್ಯ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇತ್ತ ಬಿಸಿಸಿಐಯ ಈ ನಡೆಗೆ ಇದೀಗ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಸೇರಿದಂತೆ ಕೆಲವರು ಆಕ್ರೋಶ ಹೊರಹಾಕಿದ್ದಾರೆ.

ಇದಾಗ್ಯೂ ಇಂಗ್ಲೆಂಡ್ ವಿರುದ್ಧದ ಉಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಮುಖ್ಯ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಆಗಿ ಕೆಎಸ್ ಭರತ್ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಇತ್ತ ಬಿಸಿಸಿಐಯ ಈ ನಡೆಗೆ ಇದೀಗ ಮಾಜಿ ಕ್ರಿಕೆಟಿಗ ಸಂಜಯ್ ಮಂಜ್ರೇಕರ್ ಸೇರಿದಂತೆ ಕೆಲವರು ಆಕ್ರೋಶ ಹೊರಹಾಕಿದ್ದಾರೆ.

3 / 7
ಏಕೆಂದರೆ ಕೆಎಸ್ ಭರತ್ ಭಾರತದ ಪರ ಇದುವರೆಗೆ 12 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಇನ್ನು ಕಲೆಹಾಕಿರುವುದು ಕೇವಲ 221 ರನ್​ಗಳು ಮಾತ್ರ. ಅಂದರೆ 20.09 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.

ಏಕೆಂದರೆ ಕೆಎಸ್ ಭರತ್ ಭಾರತದ ಪರ ಇದುವರೆಗೆ 12 ಇನಿಂಗ್ಸ್ ಆಡಿದ್ದಾರೆ. ಈ ವೇಳೆ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಇನ್ನು ಕಲೆಹಾಕಿರುವುದು ಕೇವಲ 221 ರನ್​ಗಳು ಮಾತ್ರ. ಅಂದರೆ 20.09 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕಿದ್ದಾರೆ.

4 / 7
ಈ ಅಂಕಿ ಅಂಶಗಳ ಪ್ರಕಾರ ಕೆಎಸ್ ಭರತ್ ಟೀಮ್ ಇಂಡಿಯಾ ಪರ ಅಟ್ಟರ್ ಫ್ಲಾಪ್ ಆಟಗಾರ. ಇದಾಗ್ಯೂ ಆತನಿಗೆ ಸತತ ಅವಕಾಶ ನೀಡುತ್ತಿರುವುದೇಕೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಅಲ್ಲದೆ ಭರತ್ ಭಾರತ ತಂಡದ ಆಯ್ಕೆಗೆ ಅರ್ಹರೇ ಎಂಬ ಪ್ರಶ್ನೆಗಳನ್ನೂ ಕೂಡ ಮುಂದಿಡಲಾಗುತ್ತಿದೆ.

ಈ ಅಂಕಿ ಅಂಶಗಳ ಪ್ರಕಾರ ಕೆಎಸ್ ಭರತ್ ಟೀಮ್ ಇಂಡಿಯಾ ಪರ ಅಟ್ಟರ್ ಫ್ಲಾಪ್ ಆಟಗಾರ. ಇದಾಗ್ಯೂ ಆತನಿಗೆ ಸತತ ಅವಕಾಶ ನೀಡುತ್ತಿರುವುದೇಕೆ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ. ಅಲ್ಲದೆ ಭರತ್ ಭಾರತ ತಂಡದ ಆಯ್ಕೆಗೆ ಅರ್ಹರೇ ಎಂಬ ಪ್ರಶ್ನೆಗಳನ್ನೂ ಕೂಡ ಮುಂದಿಡಲಾಗುತ್ತಿದೆ.

5 / 7
ಭರತ್ ಅರ್ಹತೆ ಬಗ್ಗೆ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಅವರ ಪ್ರಥಮ ದರ್ಜೆ ಪ್ರದರ್ಶನದ ಅಂಕಿ ಅಂಶಗಳು. ಫಸ್ಟ್​ ಕ್ಲಾಸ್​ನಲ್ಲಿ ಇದುವರೆಗೆ 152 ಇನಿಂಗ್ಸ್ ಆಡಿರುವ ಕೆಎಸ್ ಭರತ್ ಕಲೆಹಾಕಿರುವುದು 5101 ರನ್​ಗಳು ಮಾತ್ರ. ಅಂದರೆ 36.69 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

ಭರತ್ ಅರ್ಹತೆ ಬಗ್ಗೆ ಪ್ರಶ್ನೆ ಹುಟ್ಟಿಕೊಳ್ಳಲು ಮುಖ್ಯ ಕಾರಣ ಅವರ ಪ್ರಥಮ ದರ್ಜೆ ಪ್ರದರ್ಶನದ ಅಂಕಿ ಅಂಶಗಳು. ಫಸ್ಟ್​ ಕ್ಲಾಸ್​ನಲ್ಲಿ ಇದುವರೆಗೆ 152 ಇನಿಂಗ್ಸ್ ಆಡಿರುವ ಕೆಎಸ್ ಭರತ್ ಕಲೆಹಾಕಿರುವುದು 5101 ರನ್​ಗಳು ಮಾತ್ರ. ಅಂದರೆ 36.69 ಸರಾಸರಿಯಲ್ಲಿ ಮಾತ್ರ ರನ್ ಕಲೆಹಾಕುವಲ್ಲಿ ಯಶಸ್ವಿಯಾಗಿದ್ದಾರೆ.

6 / 7
ಇತ್ತ ಟೀಮ್ ಇಂಡಿಯಾ ಪರ ಕೂಡ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ ಕಳೆದ ಕೆಲ ಸರಣಿಗಳಿಂದ ಅವರನ್ನೇ ವಿಕೆಟ್​ ಕೀಪರ್ ಬ್ಯಾಟ್ಸ್​ಮನ್ ಆಗಿ ಆಯ್ಕೆ ಮಾಡಲಾಗಿದೆ. ಹೀಗೆ ಸಿಕ್ಕ ಅವಕಾಶಗಳಲ್ಲಿ ಭರತ್ ಬ್ಯಾಟ್​ನಿಂದ ಒಂದೇ ಒಂದು ದೊಡ್ಡ ಇನಿಂಗ್ಸ್ ಮೂಡಿಬಂದಿಲ್ಲ. ಇದಾಗ್ಯೂ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳಿಗೆ ಮತ್ತೆ ಅವರನ್ನೇ ಆಯ್ಕೆ ಮಾಡಿರುವುದು ದೊಡ್ಡ ಅಚ್ಚರಿ.

ಇತ್ತ ಟೀಮ್ ಇಂಡಿಯಾ ಪರ ಕೂಡ ನಿರೀಕ್ಷಿತ ಪ್ರದರ್ಶನ ನೀಡದಿದ್ದರೂ ಕಳೆದ ಕೆಲ ಸರಣಿಗಳಿಂದ ಅವರನ್ನೇ ವಿಕೆಟ್​ ಕೀಪರ್ ಬ್ಯಾಟ್ಸ್​ಮನ್ ಆಗಿ ಆಯ್ಕೆ ಮಾಡಲಾಗಿದೆ. ಹೀಗೆ ಸಿಕ್ಕ ಅವಕಾಶಗಳಲ್ಲಿ ಭರತ್ ಬ್ಯಾಟ್​ನಿಂದ ಒಂದೇ ಒಂದು ದೊಡ್ಡ ಇನಿಂಗ್ಸ್ ಮೂಡಿಬಂದಿಲ್ಲ. ಇದಾಗ್ಯೂ ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳಿಗೆ ಮತ್ತೆ ಅವರನ್ನೇ ಆಯ್ಕೆ ಮಾಡಿರುವುದು ದೊಡ್ಡ ಅಚ್ಚರಿ.

7 / 7
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ