AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kuldeep Yadav: ಟೆಸ್ಟ್ ಕ್ರಿಕೆಟ್​ನಲ್ಲಿ ಶತಮಾನದ ದಾಖಲೆ ಬರೆದ ಕುಲ್ದೀಪ್ ಯಾದವ್

Kuldeep Yadav Records: ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ 5 ವಿಕೆಟ್ ಕಬಳಿಸುವ ಮೂಲಕ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಐತಿಹಾಸಿಕ ದಾಖಲೆ ಬರೆದಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳಲ್ಲಿ 50 ವಿಕೆಟ್​ಗಳನ್ನು ಕಬಳಿಸುವ ಮೂಲಕ ಎಂಬುದು ವಿಶೇಷ. ಹಾಗಿದ್ರೆ ಕುಲ್ದೀಪ್ ಯಾದವ್ ಬರೆದಿರುವ ಈ ವಿಶೇಷ ದಾಖಲೆ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ...

TV9 Web
| Edited By: |

Updated on: Mar 09, 2024 | 8:58 AM

Share
ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಕಮಾಲ್ ಮಾಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 15 ಓವರ್ ಬೌಲಿಂಗ್ ಮಾಡಿದ್ದ ಕುಲ್ದೀಪ್ 72 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು.

ಧರ್ಮಶಾಲಾದ ಹೆಚ್​ಪಿಸಿಎ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ 5ನೇ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಪಿನ್ನರ್ ಕುಲ್ದೀಪ್ ಯಾದವ್ ಕಮಾಲ್ ಮಾಡಿದ್ದರು. ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ 15 ಓವರ್ ಬೌಲಿಂಗ್ ಮಾಡಿದ್ದ ಕುಲ್ದೀಪ್ 72 ರನ್ ನೀಡಿ 5 ವಿಕೆಟ್ ಕಬಳಿಸಿದ್ದರು.

1 / 6
ಈ ಐದು ವಿಕೆಟ್​ಗಳೊಂದಿಗೆ ಕುಲ್ದೀಪ್ ಯಾದವ್ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಪೂರೈಸಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಎಸೆತಗಳನ್ನು ಎಸೆದು 50 ವಿಕೆಟ್​ಗಳನ್ನು ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಯಾದವ್ ಪಾತ್ರರಾಗಿದ್ದಾರೆ.

ಈ ಐದು ವಿಕೆಟ್​ಗಳೊಂದಿಗೆ ಕುಲ್ದೀಪ್ ಯಾದವ್ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್​ಗಳನ್ನು ಪೂರೈಸಿದ್ದಾರೆ. ಅದು ಕೂಡ ಅತೀ ಕಡಿಮೆ ಎಸೆತಗಳ ಮೂಲಕ ಎಂಬುದು ವಿಶೇಷ. ಅಂದರೆ ಟೆಸ್ಟ್ ಕ್ರಿಕೆಟ್​ನಲ್ಲಿ ಭಾರತದ ಪರ ಅತೀ ಕಡಿಮೆ ಎಸೆತಗಳನ್ನು ಎಸೆದು 50 ವಿಕೆಟ್​ಗಳನ್ನು ಕಬಳಿಸಿದ ಬೌಲರ್ ಎಂಬ ಹೆಗ್ಗಳಿಕೆಗೆ ಕುಲ್ದೀಪ್ ಯಾದವ್ ಪಾತ್ರರಾಗಿದ್ದಾರೆ.

2 / 6
ಇದಕ್ಕೂ ಮುನ್ನ ಈ ದಾಖಲೆ ಅಕ್ಷರ್ ಪಟೇಲ್ ಹೆಸರಿನಲ್ಲಿತ್ತು. ಎಡಗೈ ಸ್ಪಿನ್ನರ್ ಅಕ್ಷರ್ 2205 ಎಸೆತಗಳ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್ ಕಬಳಿಸಿ ಇತಿಹಾಸ ಬರೆದಿದ್ದರು. ಇದೀಗ ಈ ದಾಖಲೆಯನ್ನು ಕುಲ್ದೀಪ್ ಯಾದವ್ ಅಳಿಸಿ ಹಾಕಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಅಕ್ಷರ್ ಪಟೇಲ್ ಹೆಸರಿನಲ್ಲಿತ್ತು. ಎಡಗೈ ಸ್ಪಿನ್ನರ್ ಅಕ್ಷರ್ 2205 ಎಸೆತಗಳ ಮೂಲಕ ಟೆಸ್ಟ್ ಕ್ರಿಕೆಟ್​ನಲ್ಲಿ 50 ವಿಕೆಟ್ ಕಬಳಿಸಿ ಇತಿಹಾಸ ಬರೆದಿದ್ದರು. ಇದೀಗ ಈ ದಾಖಲೆಯನ್ನು ಕುಲ್ದೀಪ್ ಯಾದವ್ ಅಳಿಸಿ ಹಾಕಿದ್ದಾರೆ.

3 / 6
ಕೇವಲ 1871 ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿರುವ ಕುಲ್ದೀಪ್ ಯಾದವ್ ಇದೀಗ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕೇವಲ ಇಬ್ಬರು ಸ್ಪಿನ್ನರ್ ಮಾತ್ರ ಕಡಿಮೆ ಎಸೆತಗಳಲ್ಲಿ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

ಕೇವಲ 1871 ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿರುವ ಕುಲ್ದೀಪ್ ಯಾದವ್ ಇದೀಗ ಹೊಸ ಇತಿಹಾಸವನ್ನೇ ನಿರ್ಮಿಸಿದ್ದಾರೆ. ಅಂದರೆ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕೇವಲ ಇಬ್ಬರು ಸ್ಪಿನ್ನರ್ ಮಾತ್ರ ಕಡಿಮೆ ಎಸೆತಗಳಲ್ಲಿ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ.

4 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಮಾಜಿ ಸ್ಪಿನ್ನರ್ ಜಾನಿ ಬ್ರಿಗ್ಸ್​. 1879-90 ರ ನಡುವೆ ಇಂಗ್ಲೆಂಡ್ ಪರ ಆಡಿದ್ದ ಬ್ರಿಗ್ಸ್ 1512 ಎಸೆತಗಳಲ್ಲಿ 50 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಇಂಗ್ಲೆಂಡ್​ನ ಮಾಜಿ ಸ್ಪಿನ್ನರ್ ಜಾನಿ ಬ್ರಿಗ್ಸ್​. 1879-90 ರ ನಡುವೆ ಇಂಗ್ಲೆಂಡ್ ಪರ ಆಡಿದ್ದ ಬ್ರಿಗ್ಸ್ 1512 ಎಸೆತಗಳಲ್ಲಿ 50 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ್ದರು.

5 / 6
ಇದೀಗ 1871 ಎಸೆತಗಳ ಮೂಲಕ ಕುಲ್ದೀಪ್ ಯಾದವ್ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಶತಮಾನದಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ಕುಲ್ದೀಪ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ 1871 ಎಸೆತಗಳ ಮೂಲಕ ಕುಲ್ದೀಪ್ ಯಾದವ್ 50 ವಿಕೆಟ್​ಗಳ ಸಾಧನೆ ಮಾಡಿದ್ದಾರೆ. ಈ ಮೂಲಕ ಈ ಶತಮಾನದಲ್ಲಿ ಅತೀ ಕಡಿಮೆ ಎಸೆತಗಳ ಮೂಲಕ 50 ವಿಕೆಟ್ ಕಬಳಿಸಿದ ವಿಶ್ವ ದಾಖಲೆಯನ್ನು ಕುಲ್ದೀಪ್ ಯಾದವ್ ತಮ್ಮದಾಗಿಸಿಕೊಂಡಿದ್ದಾರೆ.

6 / 6
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ