AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನಗೆ ಸಮಯವಿಲ್ಲ’; ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಬೇಡವೆಂದ ಮತ್ತೊಬ್ಬ ಅನುಭವಿ

Team India Head Coach: ಕುಮಾರ್ ಸಂಗಕ್ಕಾರ ಕೂಡ ಭಾರತ ತಂಡದ ಮುಖ್ಯ ಕೋಚ್ ರೇಸ್​ನಲ್ಲಿದ್ದಾರೆ ಎಂಬ ಊಹಾಪೋಹಗಳು ಇದ್ದವು. ಆದರೆ ಇದೀಗ ಸ್ವತಃ ಸಂಗಕ್ಕಾರ ಅವರೇ ಮುಂದೆ ಬಂದು ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಮುಖ್ಯ ಕೋಚ್ ಆಗಲು ಬಿಸಿಸಿಐ ನನ್ನನ್ನು ಸಂಪರ್ಕಿಸಿಲ್ಲ ಮತ್ತು ಅಂತಹ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲು ನನಗೆ ಸಮಯವಿಲ್ಲ ಎಂದಿದ್ದಾರೆ.

ಪೃಥ್ವಿಶಂಕರ
|

Updated on: May 25, 2024 | 5:35 PM

Share
ಭಾರತ ತಂಡಕ್ಕೆ ಹೊಸ ಮುಖ್ಯ ಕೋಚ್ ಹುಡುಕಾಟದಲ್ಲಿ ಬಿಸಿಸಿಐ ನಿರತವಾಗಿದೆ. ರಾಹುಲ್ ದ್ರಾವಿಡ್ ನಂತರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.

ಭಾರತ ತಂಡಕ್ಕೆ ಹೊಸ ಮುಖ್ಯ ಕೋಚ್ ಹುಡುಕಾಟದಲ್ಲಿ ಬಿಸಿಸಿಐ ನಿರತವಾಗಿದೆ. ರಾಹುಲ್ ದ್ರಾವಿಡ್ ನಂತರ ಟೀಂ ಇಂಡಿಯಾದ ಮುಂದಿನ ಮುಖ್ಯ ಕೋಚ್ ಯಾರು ಎಂಬುದು ದೊಡ್ಡ ಪ್ರಶ್ನೆಯಾಗಿಯೇ ಉಳಿದಿದೆ. ಇದಕ್ಕೆ ಅರ್ಜಿ ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.

1 / 6
ಭಾರತ ತಂಡದ ಪ್ರಸ್ತುತ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಅವರ ಅಧಿಕಾರಾವಧಿಯು ಟಿ20 ವಿಶ್ವಕಪ್ 2024 ರ ನಂತರ ಕೊನೆಗೊಳ್ಳಲಿದೆ. ಭಾರತ ತಂಡದ ಮುಂದಿನ ಮುಖ್ಯ ಕೋಚ್ ಯಾರೇ ಆಗಿರಲಿ ಅವರ ಅಧಿಕಾರಾವಧಿ ಜುಲೈ 1 ರಿಂದ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಹೇಳಿದೆ.

ಭಾರತ ತಂಡದ ಪ್ರಸ್ತುತ ಮುಖ್ಯ ಕೋಚ್ ರಾಹುಲ್ ದ್ರಾವಿಡ್, ಅವರ ಅಧಿಕಾರಾವಧಿಯು ಟಿ20 ವಿಶ್ವಕಪ್ 2024 ರ ನಂತರ ಕೊನೆಗೊಳ್ಳಲಿದೆ. ಭಾರತ ತಂಡದ ಮುಂದಿನ ಮುಖ್ಯ ಕೋಚ್ ಯಾರೇ ಆಗಿರಲಿ ಅವರ ಅಧಿಕಾರಾವಧಿ ಜುಲೈ 1 ರಿಂದ ಪ್ರಾರಂಭವಾಗಲಿದೆ ಎಂದು ಬಿಸಿಸಿಐ ಹೇಳಿದೆ.

2 / 6
ಈ ಸಂಚಿಕೆಯಲ್ಲಿ, ಮುಖ್ಯ ಕೋಚ್ ರೇಸ್‌ನಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆಟಗಾರ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈ ದಿಗ್ಗಜ ಆಟಗಾರ ಬೇರೆ ಯಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹಾಗೂ ಶ್ರೀಲಂಕಾದ ಮಾಜಿ ಆಟಗಾರ ಕುಮಾರ್ ಸಂಗಕ್ಕಾರ.

ಈ ಸಂಚಿಕೆಯಲ್ಲಿ, ಮುಖ್ಯ ಕೋಚ್ ರೇಸ್‌ನಲ್ಲಿ ಭಾಗಿಯಾಗಿರುವ ಮತ್ತೊಬ್ಬ ಆಟಗಾರ ಜವಾಬ್ದಾರಿಯನ್ನು ತೆಗೆದುಕೊಳ್ಳಲು ನಿರಾಕರಿಸಿದ್ದಾರೆ. ಈ ದಿಗ್ಗಜ ಆಟಗಾರ ಬೇರೆ ಯಾರೂ ಅಲ್ಲ, ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಹಾಗೂ ಶ್ರೀಲಂಕಾದ ಮಾಜಿ ಆಟಗಾರ ಕುಮಾರ್ ಸಂಗಕ್ಕಾರ.

3 / 6
ಕುಮಾರ್ ಸಂಗಕ್ಕಾರ ಕೂಡ ಭಾರತ ತಂಡದ ಮುಖ್ಯ ಕೋಚ್ ರೇಸ್​ನಲ್ಲಿದ್ದಾರೆ ಎಂಬ ಊಹಾಪೋಹಗಳು ಇದ್ದವು. ಆದರೆ ಇದೀಗ ಸ್ವತಃ ಸಂಗಕ್ಕಾರ ಅವರೇ ಮುಂದೆ ಬಂದು ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಮುಖ್ಯ ಕೋಚ್ ಆಗಲು ಬಿಸಿಸಿಐ ನನ್ನನ್ನು ಸಂಪರ್ಕಿಸಿಲ್ಲ ಮತ್ತು ಅಂತಹ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲು ನನಗೆ ಸಮಯವಿಲ್ಲ ಎಂದಿದ್ದಾರೆ.

ಕುಮಾರ್ ಸಂಗಕ್ಕಾರ ಕೂಡ ಭಾರತ ತಂಡದ ಮುಖ್ಯ ಕೋಚ್ ರೇಸ್​ನಲ್ಲಿದ್ದಾರೆ ಎಂಬ ಊಹಾಪೋಹಗಳು ಇದ್ದವು. ಆದರೆ ಇದೀಗ ಸ್ವತಃ ಸಂಗಕ್ಕಾರ ಅವರೇ ಮುಂದೆ ಬಂದು ಈ ಸುದ್ದಿಯನ್ನು ನಿರಾಕರಿಸಿದ್ದಾರೆ. ಮುಖ್ಯ ಕೋಚ್ ಆಗಲು ಬಿಸಿಸಿಐ ನನ್ನನ್ನು ಸಂಪರ್ಕಿಸಿಲ್ಲ ಮತ್ತು ಅಂತಹ ದೊಡ್ಡ ಜವಾಬ್ದಾರಿಯನ್ನು ನಿಭಾಯಿಸಲು ನನಗೆ ಸಮಯವಿಲ್ಲ ಎಂದಿದ್ದಾರೆ.

4 / 6
ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಲು ನನಗೆ ತುಂಬಾ ಸಂತೋಷವಾಗಿದೆ ಎಂದಿರುವ ಸಂಗಕ್ಕಾರ ನನಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಬೇಕಿಲ್ಲ ಎಂಬುದನ್ನು ಬಹಿರಂಗ ಪಡಿಸಿದ್ದಾರೆ. ಸಂಗಕ್ಕಾರಗೂ ಮೊದಲು, ಅನೇಕ ಅನುಭವಿ ಆಟಗಾರರು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲು ನಿರಾಕರಿಸಿದ್ದರು.

ಪ್ರಸ್ತುತ ರಾಜಸ್ಥಾನ್ ರಾಯಲ್ಸ್ ತಂಡದ ಮುಖ್ಯ ಕೋಚ್ ಆಗಲು ನನಗೆ ತುಂಬಾ ಸಂತೋಷವಾಗಿದೆ ಎಂದಿರುವ ಸಂಗಕ್ಕಾರ ನನಗೆ ಟೀಂ ಇಂಡಿಯಾದ ಮುಖ್ಯ ಕೋಚ್ ಹುದ್ದೆ ಬೇಕಿಲ್ಲ ಎಂಬುದನ್ನು ಬಹಿರಂಗ ಪಡಿಸಿದ್ದಾರೆ. ಸಂಗಕ್ಕಾರಗೂ ಮೊದಲು, ಅನೇಕ ಅನುಭವಿ ಆಟಗಾರರು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಲು ನಿರಾಕರಿಸಿದ್ದರು.

5 / 6
ಅವರಲ್ಲಿ ನ್ಯೂಜಿಲೆಂಡ್‌ನ ಮಾಜಿ ಅನುಭವಿ ಆಟಗಾರ ಸ್ಟೀಫನ್ ಫ್ಲೆಮಿಂಗ್, ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ಜಸ್ಟಿನ್ ಲ್ಯಾಂಗರ್ ಮತ್ತು ರಿಕಿ ಪಾಂಟಿಂಗ್ ಕೂಡ ಮುಖ್ಯ ಕೋಚ್ ಆಗಲು ನಿರಾಸಕ್ತಿ ತೋರಿದ್ದಾರೆ. ಹೀಗಾಗಿ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಟೀಂ ಇಂಡಿಯಾಗೆ ಯಾರು ಮುಖ್ಯ ಕೋಚ್ ಆಗುತ್ತಾರೆ ಎಂಬುದು ಭಾರಿ ಕುತೂಹಲ ಕೆರಳಿಸಿದೆ.

ಅವರಲ್ಲಿ ನ್ಯೂಜಿಲೆಂಡ್‌ನ ಮಾಜಿ ಅನುಭವಿ ಆಟಗಾರ ಸ್ಟೀಫನ್ ಫ್ಲೆಮಿಂಗ್, ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ಜಸ್ಟಿನ್ ಲ್ಯಾಂಗರ್ ಮತ್ತು ರಿಕಿ ಪಾಂಟಿಂಗ್ ಕೂಡ ಮುಖ್ಯ ಕೋಚ್ ಆಗಲು ನಿರಾಸಕ್ತಿ ತೋರಿದ್ದಾರೆ. ಹೀಗಾಗಿ ವಿಶ್ವದ ಬಲಿಷ್ಠ ತಂಡಗಳಲ್ಲಿ ಒಂದಾದ ಟೀಂ ಇಂಡಿಯಾಗೆ ಯಾರು ಮುಖ್ಯ ಕೋಚ್ ಆಗುತ್ತಾರೆ ಎಂಬುದು ಭಾರಿ ಕುತೂಹಲ ಕೆರಳಿಸಿದೆ.

6 / 6
Follow Us
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
ಐಪಿಎಲ್ ಟಿಕೆಟ್​ಗಾಗಿ ಕ್ಯೂನಿಂತ ಶಾಸಕರ ಪಿಎಗಳು
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
RCBಯ 5ನೇ ವಿದೇಶಿ ಆಟಗಾರ... ವಿರಾಟ್ ಕೊಹ್ಲಿಯ ಕಾಲೆಳೆದ ಮಿಸ್ಟರ್ ನಾಗ್ಸ್​!
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ಇಲೆಕ್ಷನ್ ಗೆಲ್ಲೋದು ಹೇಗೆ ಅಂತ AIನ ಕೇಳಿದ ಡಿಕೆಶಿ! AI ಹೇಳಿದ್ದೇನು ಗೊತ್ತಾ
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಮುಸ್ಲಿಮರನ್ನ ದೇಶ ಬಿಟ್ಟು ಓಡಿಸೋಕಾಗುತ್ತಾ? ಸಿಎಂ ಹೀಗೆಂದಿದ್ಯಾಕೆ ನೋಡಿ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಎಸ್ಕಾರ್ಟ್ ವಾಹ‌ನ ಅಪಘಾತ!
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಆಲೂಗಡ್ಡೆ ದರ ಪಾತಾಳಕ್ಕೆ ಕುಸಿತ, ಬೇಡಿಕೆಯೂ ಇಲ್ಲ! ರೈತರ ಗೋಳು ಕೇಳೋರಿಲ್ಲ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಪ್ರತಿ ಓವರ್​ಗೆ 14.23 ರನ್: ಪಿಎಸ್​ಎಲ್​ನಲ್ಲಿ ಹೊಸ ಇತಿಹಾಸ
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!
ಶಾಸಕನ ಮನೆಯಲ್ಲೇ ಕಾಫಿ ಕದಿಯುತ್ತಿದ್ದಿವನು ರೆಡ್ ಹ್ಯಾಂಡೆಡ್ ಆಗಿ ಸಿಕ್ಕಿದ!