AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2024: ಟಿ20 ವಿಶ್ವಕಪ್​ಗೂ ಮುನ್ನ ನ್ಯೂಝಿಲೆಂಡ್​ಗೆ ಆಘಾತ: ಸ್ಟಾರ್ ಆಟಗಾರ ಔಟ್..!

T20 World Cup 2024: ಈ ಬಾರಿಯ ಟಿ20 ವಿಶ್ವಕಪ್ ಜೂನ್ 1 ರಿಂದ ಶುರುವಾಗಲಿದೆ. ವೆಸ್ಟ್ ಇಂಡೀಸ್-ಯುಎಸ್​ಎ ಜಂಟಿಯಾಗಿ ಆಯೋಜಿಸಲಿರುವ ಟಿ20 ವಿಶ್ವಕಪ್​ನಿಂದ ನ್ಯೂಝಿಲೆಂಡ್ ತಂಡದ ಸ್ಟಾರ್ ಆಟಗಾರ ಹೊರಬಿದ್ದಿದ್ದಾರೆ. ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ವೇಳೆ ಗಾಯಗೊಂಡಿರು ಕಿವೀಸ್ ವೇಗಿ ಒಂದು ವರ್ಷಗಳ ಕಾಲ ಮೈದಾನದಿಂದ ಹೊರಗುಳಿಯುವ ಸಾಧ್ಯತೆಯಿದೆ.

TV9 Web
| Edited By: |

Updated on: Feb 17, 2024 | 11:58 AM

Share
ಟಿ20 ವಿಶ್ವಕಪ್​ ಆರಂಭಕ್ಕೆ ತಿಂಗಳುಗಳು ಮಾತ್ರ ಉಳಿದಿರುವಾಗ ನ್ಯೂಝಿಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

ಟಿ20 ವಿಶ್ವಕಪ್​ ಆರಂಭಕ್ಕೆ ತಿಂಗಳುಗಳು ಮಾತ್ರ ಉಳಿದಿರುವಾಗ ನ್ಯೂಝಿಲೆಂಡ್ ತಂಡಕ್ಕೆ ಆಘಾತ ಎದುರಾಗಿದೆ. ತಂಡದ ಪ್ರಮುಖ ವೇಗಿ ಕೈಲ್ ಜೇಮಿಸನ್ ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದಾರೆ. ಹೀಗಾಗಿ ಅವರು ಮುಂಬರುವ ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವುದಿಲ್ಲ ಎಂಬುದು ಬಹುತೇಕ ಖಚಿತವಾಗಿದೆ.

1 / 5
ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್​ ಕಬಳಿಸುವ ಮೂಲಕ ಕೈಲ್ ಜೇಮಿಸನ್ ಭರ್ಜರಿ ಪ್ರದರ್ಶನ ನೀಡಿದ್ದರು. ಆದರೆ ಆ ಪಂದ್ಯದ ಕೊನೆಯ ದಿನದಾಟದ ವೇಳೆ ಅವರು ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

ಸೌತ್ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ 6 ವಿಕೆಟ್​ ಕಬಳಿಸುವ ಮೂಲಕ ಕೈಲ್ ಜೇಮಿಸನ್ ಭರ್ಜರಿ ಪ್ರದರ್ಶನ ನೀಡಿದ್ದರು. ಆದರೆ ಆ ಪಂದ್ಯದ ಕೊನೆಯ ದಿನದಾಟದ ವೇಳೆ ಅವರು ಬೆನ್ನು ನೋವಿನ ಸಮಸ್ಯೆಗೆ ಸಿಲುಕಿದ್ದರು. ಹೀಗಾಗಿ 2ನೇ ಟೆಸ್ಟ್ ಪಂದ್ಯದಲ್ಲಿ ಕಣಕ್ಕಿಳಿದಿರಲಿಲ್ಲ.

2 / 5
ಇದೀಗ ವೈದ್ಯಕೀಯ ಪರೀಕ್ಷೆಗೆ ಒಳಗಾಗಿರುವ ಕೈಲ್ ಜೇಮಿಸನ್ ಅವರ ಬೆನ್ನು ನೋವಿನ ಸಮಸ್ಯೆಯು ಗಂಭೀರ ಎಂದು ತಿಳಿದು ಬಂದಿದೆ. ಸ್ಕ್ಯಾನಿಂಗ್ ವೇಳೆ ಅವರ ಬೆನ್ನಿನ ಮೂಳೆಯಲ್ಲಿ ಮುರಿತ ಕಂಡು ಬಂದಿದ್ದು, ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದಾರೆ. ಇನ್ನು ಸರ್ಜರಿ ಬಳಿಕ ಅವರು ಕನಿಷ್ಠ ಒಂದು ವರ್ಷದವರೆಗೆ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

ಇದೀಗ ವೈದ್ಯಕೀಯ ಪರೀಕ್ಷೆಗೆ ಒಳಗಾಗಿರುವ ಕೈಲ್ ಜೇಮಿಸನ್ ಅವರ ಬೆನ್ನು ನೋವಿನ ಸಮಸ್ಯೆಯು ಗಂಭೀರ ಎಂದು ತಿಳಿದು ಬಂದಿದೆ. ಸ್ಕ್ಯಾನಿಂಗ್ ವೇಳೆ ಅವರ ಬೆನ್ನಿನ ಮೂಳೆಯಲ್ಲಿ ಮುರಿತ ಕಂಡು ಬಂದಿದ್ದು, ಹೀಗಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗುವಂತೆ ವೈದ್ಯರು ಸೂಚಿಸಿದ್ದಾರೆ. ಇನ್ನು ಸರ್ಜರಿ ಬಳಿಕ ಅವರು ಕನಿಷ್ಠ ಒಂದು ವರ್ಷದವರೆಗೆ ವಿಶ್ರಾಂತಿ ಪಡೆಯುವ ಸಾಧ್ಯತೆಯಿದೆ.

3 / 5
ಏಕೆಂದರೆ ಕಳೆದ ವರ್ಷ ಕೂಡ ಇದೇ ಸಮಸ್ಯೆಯಿಂದಾಗಿ ಅವರು ಏಕದಿನ ವಿಶ್ವಕಪ್ ಹಾಗೂ ಹಲವು ಸರಣಿಗಳನ್ನು ತಪ್ಪಿಸಿಕೊಂಡಿದ್ದರು. ಇದೀಗ ಮತ್ತೆ ಬೆನ್ನು ನೋವಿನ ಸಮಸ್ಯೆ ಬಿಗಡಾಯಿಸಿದ್ದು, ಹೀಗಾಗಿ ಶಸ್ತ್ರಚಿಕಿತ್ಸೆಯ ಹೆಚ್ಚಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

ಏಕೆಂದರೆ ಕಳೆದ ವರ್ಷ ಕೂಡ ಇದೇ ಸಮಸ್ಯೆಯಿಂದಾಗಿ ಅವರು ಏಕದಿನ ವಿಶ್ವಕಪ್ ಹಾಗೂ ಹಲವು ಸರಣಿಗಳನ್ನು ತಪ್ಪಿಸಿಕೊಂಡಿದ್ದರು. ಇದೀಗ ಮತ್ತೆ ಬೆನ್ನು ನೋವಿನ ಸಮಸ್ಯೆ ಬಿಗಡಾಯಿಸಿದ್ದು, ಹೀಗಾಗಿ ಶಸ್ತ್ರಚಿಕಿತ್ಸೆಯ ಹೆಚ್ಚಿನ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ಮುಂಬರುವ ಟಿ20 ವಿಶ್ವಕಪ್​ನಲ್ಲಿ ಅವರು ಕಾಣಿಸಿಕೊಳ್ಳುವುದಿಲ್ಲ ಎಂದೇ ಹೇಳಬಹುದು.

4 / 5
ನ್ಯೂಝಿಲೆಂಡ್ ಪರ 13 ಟಿ20 ಪಂದ್ಯಗಳನ್ನಾಡಿರುವ ಕೈಲ್ ಜೇಮಿಸನ್ 10 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದರಲ್ಲೂ ಫಾಸ್ಟ್​ ಟ್ರ್ಯಾಕ್​ನಲ್ಲಿ ಜೇಮಿಸನ್ ಅತ್ಯುತ್ತಮ ದಾಳಿ ಸಂಘಟಿಸುವ ಸಾಮರ್ಥ್ಯ ಹೊಂದಿದ್ದರು. ಹೀಗಾಗಿ ವೆಸ್ಟ್ ಇಂಡೀಸ್-ಯುಎಸ್​ಎನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ಪಾಲಿಗೆ ಜೇಮಿಸನ್ ಟ್ರಂಪ್ ಕಾರ್ಡ್​ ಆಗಿದ್ದರು. ಆದರೀಗ ಕೈಲ್ ಜೇಮಿಸನ್ ಅವರ ಅಲಭ್ಯತೆಯು ಕಿವೀಸ್ ಪಡೆ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

ನ್ಯೂಝಿಲೆಂಡ್ ಪರ 13 ಟಿ20 ಪಂದ್ಯಗಳನ್ನಾಡಿರುವ ಕೈಲ್ ಜೇಮಿಸನ್ 10 ವಿಕೆಟ್​ಗಳನ್ನು ಕಬಳಿಸಿದ್ದಾರೆ. ಅದರಲ್ಲೂ ಫಾಸ್ಟ್​ ಟ್ರ್ಯಾಕ್​ನಲ್ಲಿ ಜೇಮಿಸನ್ ಅತ್ಯುತ್ತಮ ದಾಳಿ ಸಂಘಟಿಸುವ ಸಾಮರ್ಥ್ಯ ಹೊಂದಿದ್ದರು. ಹೀಗಾಗಿ ವೆಸ್ಟ್ ಇಂಡೀಸ್-ಯುಎಸ್​ಎನಲ್ಲಿ ನಡೆಯಲಿರುವ ಟಿ20 ವಿಶ್ವಕಪ್​ನಲ್ಲಿ ನ್ಯೂಝಿಲೆಂಡ್ ಪಾಲಿಗೆ ಜೇಮಿಸನ್ ಟ್ರಂಪ್ ಕಾರ್ಡ್​ ಆಗಿದ್ದರು. ಆದರೀಗ ಕೈಲ್ ಜೇಮಿಸನ್ ಅವರ ಅಲಭ್ಯತೆಯು ಕಿವೀಸ್ ಪಡೆ ಪಾಲಿಗೆ ಹಿನ್ನಡೆಯನ್ನುಂಟು ಮಾಡಲಿದೆ.

5 / 5
Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು