AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

21 ವಿಕೆಟ್ ಕಬಳಿಸಿ ಟೆಸ್ಟ್​ನಲ್ಲಿ ಹೊಸ ಇತಿಹಾಸ ಬರೆದ ಎಜಾಝ್-ಜಡೇಜಾ

India vs New Zealand: ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡ 25 ರನ್​ಗಳ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಆಲ್​ರೌಂಡರ್ ರವೀಂದ್ರ ಜಡೇಜಾ 10 ವಿಕೆಟ್ ಪಡೆದರೆ, ನ್ಯೂಝಿಲೆಂಡ್ ಸ್ಪಿನ್ನರ್ ಎಜಾಝ್ ಪಟೇಲ್ 11 ವಿಕೆಟ್ ಕಬಳಿಸಿದ್ದರು. ಈ ಮೂಲಕ 21 ವಿಕೆಟ್ ಉರುಳಿಸಿ ಎಜಾಝ್-ಜಡೇಜಾ ಜೋಡಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Nov 04, 2024 | 12:01 PM

Share
ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂವರು ಬೌಲರ್​ಗಳು ಒಂದೇ ಇನಿಂಗ್ಸ್​ನಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ಇನ್ನು ನೂರಕ್ಕೂ ಹೆಚ್ಚು ಬೌಲರ್​ಗಳು ಐದು ವಿಕೆಟ್​ ಪಡೆದಿದ್ದಾರೆ. ಆದರೆ ಟೆಸ್ಟ್​ ಪಂದ್ಯವೊಂದರ ನಾಲ್ಕು ಇನಿಂಗ್ಸ್​ಗಳಲ್ಲಿ ಐದೈದು ವಿಕೆಟ್​ ಕಬಳಿಸಿದ ಎಡಗೈ ಸ್ಪಿನ್ನರ್​ಗಳು ಕೇವಲ ಇಬ್ಬರು. ಅವರೇ ರವೀಂದ್ರ ಜಡೇಜಾ ಹಾಗೂ ಎಜಾಝ್ ಪಟೇಲ್.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಮೂವರು ಬೌಲರ್​ಗಳು ಒಂದೇ ಇನಿಂಗ್ಸ್​ನಲ್ಲಿ 10 ವಿಕೆಟ್ ಕಬಳಿಸಿದ್ದಾರೆ. ಇನ್ನು ನೂರಕ್ಕೂ ಹೆಚ್ಚು ಬೌಲರ್​ಗಳು ಐದು ವಿಕೆಟ್​ ಪಡೆದಿದ್ದಾರೆ. ಆದರೆ ಟೆಸ್ಟ್​ ಪಂದ್ಯವೊಂದರ ನಾಲ್ಕು ಇನಿಂಗ್ಸ್​ಗಳಲ್ಲಿ ಐದೈದು ವಿಕೆಟ್​ ಕಬಳಿಸಿದ ಎಡಗೈ ಸ್ಪಿನ್ನರ್​ಗಳು ಕೇವಲ ಇಬ್ಬರು. ಅವರೇ ರವೀಂದ್ರ ಜಡೇಜಾ ಹಾಗೂ ಎಜಾಝ್ ಪಟೇಲ್.

1 / 5
ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ 65 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ನ್ಯೂಝಿಲೆಂಡ್ ಎಡಗೈ ಸ್ಪಿನ್ನರ್ ಎಜಾಝ್ ಪಟೇಲ್ 103 ರನ್ ನೀಡಿ 5 ವಿಕೆಟ್ ಪಡೆದಿದ್ದರು.

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಟೀಮ್ ಇಂಡಿಯಾ ಎಡಗೈ ಸ್ಪಿನ್ನರ್ ರವೀಂದ್ರ ಜಡೇಜಾ 65 ರನ್ ನೀಡಿ 5 ವಿಕೆಟ್ ಕಬಳಿಸಿದರೆ, ನ್ಯೂಝಿಲೆಂಡ್ ಎಡಗೈ ಸ್ಪಿನ್ನರ್ ಎಜಾಝ್ ಪಟೇಲ್ 103 ರನ್ ನೀಡಿ 5 ವಿಕೆಟ್ ಪಡೆದಿದ್ದರು.

2 / 5
ಇನ್ನು ಎರಡನೇ ಇನಿಂಗ್ಸ್​ನಲ್ಲಿ ರವೀಂದ್ರ ಜಡೇಜಾ 55 ರನ್ ನೀಡಿ 5 ವಿಕೆಟ್ ಪಡೆದರೆ, ಎಜಾಝ್ ಪಟೇಲ್ 57 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಟೆಸ್ಟ್ ಪಂದ್ಯವೊಂದರ 4 ಇನಿಂಗ್ಸ್​ಗಳಲ್ಲಿ 5 ವಿಕೆಟ್​ ಪಡೆದ ಎಡಗೈ ಸ್ಪಿನ್ನರ್​ಗಳೆಂಬ ವಿಶೇಷ ದಾಖಲೆ ಎಜಾಝ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಪಾಲಾಯಿತು.

ಇನ್ನು ಎರಡನೇ ಇನಿಂಗ್ಸ್​ನಲ್ಲಿ ರವೀಂದ್ರ ಜಡೇಜಾ 55 ರನ್ ನೀಡಿ 5 ವಿಕೆಟ್ ಪಡೆದರೆ, ಎಜಾಝ್ ಪಟೇಲ್ 57 ರನ್ ನೀಡಿ 6 ವಿಕೆಟ್ ಕಬಳಿಸಿದ್ದರು. ಇದರೊಂದಿಗೆ ಟೆಸ್ಟ್ ಪಂದ್ಯವೊಂದರ 4 ಇನಿಂಗ್ಸ್​ಗಳಲ್ಲಿ 5 ವಿಕೆಟ್​ ಪಡೆದ ಎಡಗೈ ಸ್ಪಿನ್ನರ್​ಗಳೆಂಬ ವಿಶೇಷ ದಾಖಲೆ ಎಜಾಝ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಪಾಲಾಯಿತು.

3 / 5
ಇದಕ್ಕೂ ಮುನ್ನ ಯಾವುದೇ ಎಡಗೈ ಬೌಲರ್​ಗಳು ಒಂದೇ ಪಂದ್ಯದಲ್ಲಿ 4 ಐದು ವಿಕೆಟ್​ಗಳ ಸಾಧನೆ ಮಾಡಿರಲಿಲ್ಲ. ಇದೀಗ ಎಜಾಝ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಜೊತೆಗೂಡಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದಕ್ಕೂ ಮುನ್ನ ಯಾವುದೇ ಎಡಗೈ ಬೌಲರ್​ಗಳು ಒಂದೇ ಪಂದ್ಯದಲ್ಲಿ 4 ಐದು ವಿಕೆಟ್​ಗಳ ಸಾಧನೆ ಮಾಡಿರಲಿಲ್ಲ. ಇದೀಗ ಎಜಾಝ್ ಪಟೇಲ್ ಹಾಗೂ ರವೀಂದ್ರ ಜಡೇಜಾ ಜೊತೆಗೂಡಿ ಟೆಸ್ಟ್ ಕ್ರಿಕೆಟ್​ನಲ್ಲಿ ಹೊಸ ಇತಿಹಾಸ ನಿರ್ಮಿಸುವಲ್ಲಿ ಯಶಸ್ವಿಯಾಗಿದ್ದಾರೆ.

4 / 5
ಹಾಗೆಯೇ ಈ ಪಂದ್ಯದಲ್ಲಿ ಪಡೆದ 11 ವಿಕೆಟ್​ಗಳೊಂದಿಗೆ ಎಜಾಝ್ ಪಟೇಲ್ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ಟೆಸ್ಟ್ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ. ಎಜಾಝ್ ಪಟೇಲ್ ವಾಂಖೆಡೆ ಸ್ಟೇಡಿಯಂನಲ್ಲಿ 2 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 25 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದಾರೆ.

ಹಾಗೆಯೇ ಈ ಪಂದ್ಯದಲ್ಲಿ ಪಡೆದ 11 ವಿಕೆಟ್​ಗಳೊಂದಿಗೆ ಎಜಾಝ್ ಪಟೇಲ್ ಭಾರತದ ಪಿಚ್​ವೊಂದರಲ್ಲಿ ಅತ್ಯಧಿಕ ಟೆಸ್ಟ್ ವಿಕೆಟ್ ಪಡೆದ ವಿದೇಶಿ ಬೌಲರ್ ಎನಿಸಿಕೊಂಡಿದ್ದಾರೆ. ಎಜಾಝ್ ಪಟೇಲ್ ವಾಂಖೆಡೆ ಸ್ಟೇಡಿಯಂನಲ್ಲಿ 2 ಪಂದ್ಯಗಳನ್ನಾಡಿದ್ದು, ಈ ವೇಳೆ ಒಟ್ಟು 25 ವಿಕೆಟ್ ಕಬಳಿಸಿ ಈ ದಾಖಲೆ ಬರೆದಿದ್ದಾರೆ.

5 / 5
Zahir Yusuf
Zahir Yusuf

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ