ಭೀಕರ ಕಾರು ಅಪಘಾತಕ್ಕೀಡಾಗಿ ಕೂದಲೆಳೆ ಅಂತರದಲ್ಲಿ ಬದುಕುಳಿದ ಭಾರತದ ಕ್ರಿಕೆಟಿಗರಿವರು

Accident: ಕಾರು ಅಪಘಾತದಲ್ಲಿ ಗಾಯಗೊಂಡ ಟೀಂ ಇಂಡಿಯಾ ಆಟಗಾರರಲ್ಲಿ ಮುಶೀರ್ ಖಾನ್ ಮೊದಲಿಗರಲ್ಲ. ಅವರಿಗೂ ಮುನ್ನ ತಂಡದ ಸ್ಟಾರ್ ಕ್ರಿಕೆಟಿಗರು ಭೀಕರ ಕಾರು ಅಪಘಾತಕ್ಕೆ ತುತ್ತಾಗಿದ್ದಾರೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಲಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಹಾಗಿದ್ದರೆ ಮುಶೀರ್​ಗೂ ಮುನ್ನ ಅಪಘಾತಕ್ಕೀಡಾದ ಆಟಗಾರರು ಯಾರು ಎಂಬುದನ್ನು ನೋಡುವುದಾದರೆ..

|

Updated on: Sep 28, 2024 | 4:46 PM

ಭಾರತದ ಯುವ ಬ್ಯಾಟ್ಸ್‌ಮನ್ ಮುಶೀರ್ ಖಾನ್‌ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಮುಶೀರ್​ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಶೀರ್ ತನ್ನ ತಂದೆ ನೌಶಾದ್ ಖಾನ್ ಅವರೊಂದಿಗೆ ಇರಾನಿ ಕಪ್ ಪಂದ್ಯಕ್ಕಾಗಿ ಕಾನ್ಪುರದಿಂದ ಲಖನೌಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಭಾರತದ ಯುವ ಬ್ಯಾಟ್ಸ್‌ಮನ್ ಮುಶೀರ್ ಖಾನ್‌ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಈ ಘಟನೆಯಲ್ಲಿ ಮುಶೀರ್​ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಶೀರ್ ತನ್ನ ತಂದೆ ನೌಶಾದ್ ಖಾನ್ ಅವರೊಂದಿಗೆ ಇರಾನಿ ಕಪ್ ಪಂದ್ಯಕ್ಕಾಗಿ ಕಾನ್ಪುರದಿಂದ ಲಖನೌಗೆ ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

1 / 8
ಮುಶೀರ್ ಖಾನ್ ಟೀಂ ಇಂಡಿಯಾ ಆಟಗಾರ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರನಾಗಿದ್ದು, ಅವರು ಮುಂಬೈ ತಂಡದ ಪರ ಇರಾನಿ ಕಪ್ ಪಂದ್ಯವನ್ನು ಆಡಬೇಕಾಗಿತ್ತು. ಆದರೆ ಇದೀಗ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಮುಶೀರ್, ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರು ಚೇತರಿಸಿಕೊಳ್ಳಲು ಕನಿಷ್ಟ ಪಕ್ಷ 16 ವಾರಗಳು ಬೇಕು ಎಂದು ಹೇಳಲಾಗುತ್ತಿದೆ.

ಮುಶೀರ್ ಖಾನ್ ಟೀಂ ಇಂಡಿಯಾ ಆಟಗಾರ ಸರ್ಫರಾಜ್ ಖಾನ್ ಅವರ ಕಿರಿಯ ಸಹೋದರನಾಗಿದ್ದು, ಅವರು ಮುಂಬೈ ತಂಡದ ಪರ ಇರಾನಿ ಕಪ್ ಪಂದ್ಯವನ್ನು ಆಡಬೇಕಾಗಿತ್ತು. ಆದರೆ ಇದೀಗ ಕಾರು ಅಪಘಾತದಲ್ಲಿ ಗಾಯಗೊಂಡಿರುವ ಮುಶೀರ್, ಪಂದ್ಯಕ್ಕೆ ಅಲಭ್ಯರಾಗಿದ್ದು, ಅವರು ಚೇತರಿಸಿಕೊಳ್ಳಲು ಕನಿಷ್ಟ ಪಕ್ಷ 16 ವಾರಗಳು ಬೇಕು ಎಂದು ಹೇಳಲಾಗುತ್ತಿದೆ.

2 / 8
ಅಷ್ಟಕ್ಕೂ ಹೀಗೆ ಕಾರು ಅಪಘಾತದಲ್ಲಿ ಗಾಯಗೊಂಡ ಟೀಂ ಇಂಡಿಯಾ ಆಟಗಾರರಲ್ಲಿ ಮುಶೀರ್ ಖಾನ್ ಮೊದಲಿಗರಲ್ಲ. ಅವರಿಗೂ ಮುನ್ನ ತಂಡದ ಸ್ಟಾರ್ ಕ್ರಿಕೆಟಿಗರು ಭೀಕರ ಕಾರು ಅಪಘಾತಕ್ಕೆ ತುತ್ತಾಗಿದ್ದಾರೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಲಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಹಾಗಿದ್ದರೆ ಮುಶೀರ್​ಗೂ ಮುನ್ನ ಅಪಘಾತಕ್ಕೀಡಾದ ಆಟಗಾರರು ಯಾರು ಎಂಬುದನ್ನು ನೋಡುವುದಾದರೆ..

ಅಷ್ಟಕ್ಕೂ ಹೀಗೆ ಕಾರು ಅಪಘಾತದಲ್ಲಿ ಗಾಯಗೊಂಡ ಟೀಂ ಇಂಡಿಯಾ ಆಟಗಾರರಲ್ಲಿ ಮುಶೀರ್ ಖಾನ್ ಮೊದಲಿಗರಲ್ಲ. ಅವರಿಗೂ ಮುನ್ನ ತಂಡದ ಸ್ಟಾರ್ ಕ್ರಿಕೆಟಿಗರು ಭೀಕರ ಕಾರು ಅಪಘಾತಕ್ಕೆ ತುತ್ತಾಗಿದ್ದಾರೆ. ಆದರೆ ಅದೃಷ್ಟವಶಾತ್ ಯಾರಿಗೂ ಪ್ರಾಣ ಹಾನಿಯಾಗಲಿಲ್ಲ ಎಂಬುದು ಸಮಾಧಾನಕರ ಸಂಗತಿಯಾಗಿದೆ. ಹಾಗಿದ್ದರೆ ಮುಶೀರ್​ಗೂ ಮುನ್ನ ಅಪಘಾತಕ್ಕೀಡಾದ ಆಟಗಾರರು ಯಾರು ಎಂಬುದನ್ನು ನೋಡುವುದಾದರೆ..

3 / 8
ಟೀಂ ಇಂಡಿಯಾದ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ಕೂಡ ತಮ್ಮ 20ನೇ ವಯಸ್ಸಿನಲ್ಲಿ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಅವರ ಬಲಗಣ್ಣಿಗೆ ಹಾನಿಯಾಗಿತ್ತು. ಆದರೆ, ಮನ್ಸೂರ್ ತಮ್ಮ ಗಾಯವನ್ನು ದೌರ್ಬಲ್ಯ ಎಂದು ಪರಿಗಣಿಸದೆ ಭಾರತ ಕ್ರಿಕೆಟ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

ಟೀಂ ಇಂಡಿಯಾದ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ಕೂಡ ತಮ್ಮ 20ನೇ ವಯಸ್ಸಿನಲ್ಲಿ ಭೀಕರ ಅಪಘಾತಕ್ಕೀಡಾಗಿದ್ದರು. ಈ ಅಪಘಾತದಲ್ಲಿ ಅವರ ಬಲಗಣ್ಣಿಗೆ ಹಾನಿಯಾಗಿತ್ತು. ಆದರೆ, ಮನ್ಸೂರ್ ತಮ್ಮ ಗಾಯವನ್ನು ದೌರ್ಬಲ್ಯ ಎಂದು ಪರಿಗಣಿಸದೆ ಭಾರತ ಕ್ರಿಕೆಟ್​ನಲ್ಲಿ ತಮ್ಮದೇ ಛಾಪು ಮೂಡಿಸಿದ್ದರು.

4 / 8
ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಮತ್ತೊಬ್ಬ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ 2014ರಲ್ಲಿ ಕಾರು ಅಪಘಾತಕ್ಕೆ ತುತ್ತಾಗಿದ್ದರು. ಗವಾಸ್ಕರ್ ಅವರು ಲಂಡನ್‌ಗೆ ಹೋಗುತ್ತಿದ್ದಾಗ ಮ್ಯಾಂಚೆಸ್ಟರ್‌ನಲ್ಲಿ ಅಪಘಾತ ಸಂಭವಿಸಿತ್ತು. ಆದರೆ, ಈ ಅಪಘಾತದಲ್ಲಿ ಗವಾಸ್ಕರ್‌ಗೆ ಗಂಭೀರ ಗಾಯಗಳಾಗಿರಲಿಲ್ಲ.

ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಮತ್ತೊಬ್ಬ ಮಾಜಿ ನಾಯಕ ಸುನಿಲ್ ಗವಾಸ್ಕರ್ ಕೂಡ 2014ರಲ್ಲಿ ಕಾರು ಅಪಘಾತಕ್ಕೆ ತುತ್ತಾಗಿದ್ದರು. ಗವಾಸ್ಕರ್ ಅವರು ಲಂಡನ್‌ಗೆ ಹೋಗುತ್ತಿದ್ದಾಗ ಮ್ಯಾಂಚೆಸ್ಟರ್‌ನಲ್ಲಿ ಅಪಘಾತ ಸಂಭವಿಸಿತ್ತು. ಆದರೆ, ಈ ಅಪಘಾತದಲ್ಲಿ ಗವಾಸ್ಕರ್‌ಗೆ ಗಂಭೀರ ಗಾಯಗಳಾಗಿರಲಿಲ್ಲ.

5 / 8
ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕೂಡ 2020 ರಲ್ಲಿ ಕಾರು ಅಪಘಾತಕ್ಕೀಡಾಗಿದ್ದರು. ರಾಜಸ್ಥಾನದ ಸೂರ್ವಾಲ್‌ನ ಕೋಟಾ ಮೆಗಾ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಿಂದ ಅಜರುದ್ದೀನ್ ಸ್ವಲ್ಪದರಲ್ಲೇ ಪಾರಾಗಿದ್ದರು. ಈ ಭೀಕರ ಅಪಘಾತದಲ್ಲಿ ಅವರು ಕಾರು ಪಲ್ಟಿಯಾಗಿತ್ತು. ಈ ವೇಳೆ ಅಜರುದ್ದೀನ್ ಮತ್ತು ಅವರ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದವು.

ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕೂಡ 2020 ರಲ್ಲಿ ಕಾರು ಅಪಘಾತಕ್ಕೀಡಾಗಿದ್ದರು. ರಾಜಸ್ಥಾನದ ಸೂರ್ವಾಲ್‌ನ ಕೋಟಾ ಮೆಗಾ ಹೆದ್ದಾರಿಯಲ್ಲಿ ಸಂಭವಿಸಿದ ಈ ಅಪಘಾತದಿಂದ ಅಜರುದ್ದೀನ್ ಸ್ವಲ್ಪದರಲ್ಲೇ ಪಾರಾಗಿದ್ದರು. ಈ ಭೀಕರ ಅಪಘಾತದಲ್ಲಿ ಅವರು ಕಾರು ಪಲ್ಟಿಯಾಗಿತ್ತು. ಈ ವೇಳೆ ಅಜರುದ್ದೀನ್ ಮತ್ತು ಅವರ ಕುಟುಂಬಕ್ಕೆ ಸಣ್ಣಪುಟ್ಟ ಗಾಯಗಳಾಗಿದ್ದವು.

6 / 8
2023ರ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಪ್ರದರ್ಶನದಿಂದ ಸಂಚಲನ ಮೂಡಿಸಿದ್ದ ಮೊಹಮ್ಮದ್ ಶಮಿ 2018ರಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದರು. ಶಮಿ ಡೆಹ್ರಾಡೂನ್‌ನಿಂದ ದೆಹಲಿಗೆ ಬರುತ್ತಿದ್ದ ವೇಳೆ ನಡೆದಿದ್ದ ಈ ಅಪಘಾತದಲ್ಲಿ ಶಮಿ ಅವರ ಬಲಗಣ್ಣಿನ ಮೇಲೆ ಪೆಟ್ಟು ಬಿದ್ದಿತ್ತು.

2023ರ ಏಕದಿನ ವಿಶ್ವಕಪ್‌ನಲ್ಲಿ ತಮ್ಮ ಪ್ರದರ್ಶನದಿಂದ ಸಂಚಲನ ಮೂಡಿಸಿದ್ದ ಮೊಹಮ್ಮದ್ ಶಮಿ 2018ರಲ್ಲಿ ರಸ್ತೆ ಅಪಘಾತಕ್ಕೀಡಾಗಿದ್ದರು. ಶಮಿ ಡೆಹ್ರಾಡೂನ್‌ನಿಂದ ದೆಹಲಿಗೆ ಬರುತ್ತಿದ್ದ ವೇಳೆ ನಡೆದಿದ್ದ ಈ ಅಪಘಾತದಲ್ಲಿ ಶಮಿ ಅವರ ಬಲಗಣ್ಣಿನ ಮೇಲೆ ಪೆಟ್ಟು ಬಿದ್ದಿತ್ತು.

7 / 8
2022 ರ ಡಿಸೆಂಬರ್ 30 ರಂದು, ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದರು. ಪಂತ್, ದೆಹಲಿಯಿಂದ ಉತ್ತರಾಖಂಡದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ವೇಳೆ ನಡೆದ ಈ ಅವಘಡದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಸುಮಾರು 14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಪಂತ್, ಆ ನಂತರ ಚೇತರಿಸಿಕೊಂಡು ಇದೀಗ ಮತ್ತೊಮ್ಮೆ ಕ್ರಿಕೆಟ್​ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

2022 ರ ಡಿಸೆಂಬರ್ 30 ರಂದು, ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ರಿಷಬ್ ಪಂತ್ ಭೀಕರ ರಸ್ತೆ ಅಪಘಾತಕ್ಕೆ ತುತ್ತಾಗಿದ್ದರು. ಪಂತ್, ದೆಹಲಿಯಿಂದ ಉತ್ತರಾಖಂಡದಲ್ಲಿರುವ ತಮ್ಮ ಮನೆಗೆ ಹೋಗುತ್ತಿದ್ದ ವೇಳೆ ನಡೆದ ಈ ಅವಘಡದಲ್ಲಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಹೀಗಾಗಿ ಸುಮಾರು 14 ತಿಂಗಳ ಕಾಲ ಕ್ರಿಕೆಟ್‌ನಿಂದ ದೂರ ಉಳಿದಿದ್ದ ಪಂತ್, ಆ ನಂತರ ಚೇತರಿಸಿಕೊಂಡು ಇದೀಗ ಮತ್ತೊಮ್ಮೆ ಕ್ರಿಕೆಟ್​ ಮೈದಾನದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

8 / 8
Follow us