AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಇಂದು RCB vs PBKS ಪಂದ್ಯ: ಫಾಫ್ ಪಡೆಯಲ್ಲಿ 2 ಬದಲಾವಣೆ ಖಚಿತ, ಪ್ಲೇಯಿಂಗ್ XI ನೋಡಿ

RCB Playing XI vs PBKS, IPL 2024: ಆರ್‌ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಸಿಎಸ್​ಕೆ ವಿರುದ್ಧ ಆರು ವಿಕೆಟ್‌ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯ ಸಾಧಿಸಿತು. ಇದೀಗ ಇಂದು ಐಪಿಎಲ್ 2024 ರಲ್ಲಿ ಈ ಎರಡು ತಂಡಗಳು ಮುಖಾಮುಖಿ ಆಗಲಿದೆ. ಇಲ್ಲಿದೆ ನೋಡಿ ಪಂಜಾಬ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ ಇಲೆವೆನ್.

Vinay Bhat
|

Updated on: Mar 25, 2024 | 7:03 AM

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕಿಕ್ ಹೆಚ್ಚಿಸುತ್ತಿದೆ. ಎರಡು ಡಬಲ್ ಹೆಡರ್​ಗಳ ಬಳಿಕ ಇಂದು ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2024 ರ ಆರನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಅವರ ಆರ್‌ಸಿಬಿ ತಂಡ ಶಿಖರ್ ಧವನ್ ಅವರ ಪಂಜಾಬ್ ಕಿಂಗ್ಸ್​ಗೆ ಅನ್ನು ಆತಿಥ್ಯ ವಹಿಸಲಿದೆ.

17ನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಕಿಕ್ ಹೆಚ್ಚಿಸುತ್ತಿದೆ. ಎರಡು ಡಬಲ್ ಹೆಡರ್​ಗಳ ಬಳಿಕ ಇಂದು ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ 2024 ರ ಆರನೇ ಪಂದ್ಯದಲ್ಲಿ ಫಾಫ್ ಡುಪ್ಲೆಸಿಸ್ ಅವರ ಆರ್‌ಸಿಬಿ ತಂಡ ಶಿಖರ್ ಧವನ್ ಅವರ ಪಂಜಾಬ್ ಕಿಂಗ್ಸ್​ಗೆ ಅನ್ನು ಆತಿಥ್ಯ ವಹಿಸಲಿದೆ.

1 / 6
ಆರ್‌ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ವಿಕೆಟ್‌ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯ ಸಾಧಿಸಿತು. ಸದ್ಯ ಪಾಯಿಂಟ್ಸ್ ಟೇಬಲ್​ನಲ್ಲಿ ಬೆಂಗಳೂರು 9ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಮೂರನೇ ಸ್ಥಾನದಲ್ಲಿದೆ.

ಆರ್‌ಸಿಬಿ ತನ್ನ ಆರಂಭಿಕ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಆರು ವಿಕೆಟ್‌ಗಳಿಂದ ಸೋತರೆ, ಪಂಜಾಬ್ ಕಿಂಗ್ಸ್ ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಾಲ್ಕು ವಿಕೆಟ್‌ಗಳಿಂದ ಜಯ ಸಾಧಿಸಿತು. ಸದ್ಯ ಪಾಯಿಂಟ್ಸ್ ಟೇಬಲ್​ನಲ್ಲಿ ಬೆಂಗಳೂರು 9ನೇ ಸ್ಥಾನದಲ್ಲಿದ್ದರೆ, ಪಂಜಾಬ್ ಮೂರನೇ ಸ್ಥಾನದಲ್ಲಿದೆ.

2 / 6
ಸಿಎಸ್​ಕೆ ವಿರುದ್ಧ ಚೆನ್ನೈನಲ್ಲಿ ಆರ್​ಸಿಬಿ ನೀಡಿದ ಪ್ರದರ್ಶನ ಬೌಲಿಂಗ್​ನಲ್ಲಿ ತೀರಾ ಕಳಪೆಯಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡುವುದು ಖಚಿತ. ಬೆಂಗಳೂರಿನಲ್ಲಿರುವ ಬ್ಯಾಟಿಂಗ್ ಸ್ನೇಹಿ ಪಿಚ್‌ಗಳ ಸ್ವರೂಪವನ್ನು ಗಮನಿಸಿದರೆ, ಆರ್​ಸಿಬಿ ತಂಡಕ್ಕೆ ಬಲಿಷ್ಠ ಅನುಭವಿ ಬೌಲರ್ ಬೇಕೇಬೇಕು.

ಸಿಎಸ್​ಕೆ ವಿರುದ್ಧ ಚೆನ್ನೈನಲ್ಲಿ ಆರ್​ಸಿಬಿ ನೀಡಿದ ಪ್ರದರ್ಶನ ಬೌಲಿಂಗ್​ನಲ್ಲಿ ತೀರಾ ಕಳಪೆಯಾಗಿತ್ತು. ಹೀಗಾಗಿ ಇಂದಿನ ಪಂದ್ಯಕ್ಕೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಬದಲಾವಣೆ ಮಾಡುವುದು ಖಚಿತ. ಬೆಂಗಳೂರಿನಲ್ಲಿರುವ ಬ್ಯಾಟಿಂಗ್ ಸ್ನೇಹಿ ಪಿಚ್‌ಗಳ ಸ್ವರೂಪವನ್ನು ಗಮನಿಸಿದರೆ, ಆರ್​ಸಿಬಿ ತಂಡಕ್ಕೆ ಬಲಿಷ್ಠ ಅನುಭವಿ ಬೌಲರ್ ಬೇಕೇಬೇಕು.

3 / 6
ಚೆನ್ನೈನಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೀಮರ್ ಅಲ್ಜಾರಿ ಜೋಸೆಫ್ 3.4 ಓವರ್‌ಗಳಲ್ಲಿ 38 ರನ್‌ ನೀಡಿ ದುಬಾರಿಯಾದರು. ಜೋಸೆಫ್‌ರ ನೀರಸ ಪ್ರದರ್ಶನದಿಂದ ಇವರು ಪ್ಲೇಯಿಂಗ್ XI ನಿಂದ ಔಟ್ ಆಗುವ ಸಾಧ್ಯತೆ ಇದೆ. ಇವರ ಸ್ಥಾನಕ್ಕೆ ಸ್ಟಾರ್ ವೇಗಿ ಲಾಕಿ ಫರ್ಗುಸನ್ ಬರುವುದು ಬಹುತೇಕ ಖಚಿತ.

ಚೆನ್ನೈನಲ್ಲಿ ನಡೆದ ಸಿಎಸ್‌ಕೆ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಸೀಮರ್ ಅಲ್ಜಾರಿ ಜೋಸೆಫ್ 3.4 ಓವರ್‌ಗಳಲ್ಲಿ 38 ರನ್‌ ನೀಡಿ ದುಬಾರಿಯಾದರು. ಜೋಸೆಫ್‌ರ ನೀರಸ ಪ್ರದರ್ಶನದಿಂದ ಇವರು ಪ್ಲೇಯಿಂಗ್ XI ನಿಂದ ಔಟ್ ಆಗುವ ಸಾಧ್ಯತೆ ಇದೆ. ಇವರ ಸ್ಥಾನಕ್ಕೆ ಸ್ಟಾರ್ ವೇಗಿ ಲಾಕಿ ಫರ್ಗುಸನ್ ಬರುವುದು ಬಹುತೇಕ ಖಚಿತ.

4 / 6
ಹಾಗೆಯೆ ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲೂ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದಲೂ ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ರಜತ್ ಪಾಟಿದರ್​ಗೆ ಇಂದು ಅವಕಾಶ ಸಿಗುವುದು ಅನುಮಾನ. ಇವರ ಜಾಗಕ್ಕೆ ಸುಯೇಶ್ ಪ್ರಭುದೇಸಾಯಿ ಅಥವಾ ಮಹಿಪಾಲ್ ಲುಮ್ರೂರ್ ಬರುವ ಸಾಧ್ಯತೆ ಇದೆ.

ಹಾಗೆಯೆ ಆರ್​ಸಿಬಿ ತಂಡದ ಬ್ಯಾಟಿಂಗ್ ವಿಭಾಗದಲ್ಲೂ ಒಂದು ಬದಲಾವಣೆ ನಿರೀಕ್ಷಿಸಲಾಗಿದೆ. ಕಳೆದ ಇಂಗ್ಲೆಂಡ್ ಟೆಸ್ಟ್ ಸರಣಿಯಿಂದಲೂ ಕಳಪೆ ಫಾರ್ಮ್​ನಿಂದ ಕಂಗೆಟ್ಟಿರುವ ರಜತ್ ಪಾಟಿದರ್​ಗೆ ಇಂದು ಅವಕಾಶ ಸಿಗುವುದು ಅನುಮಾನ. ಇವರ ಜಾಗಕ್ಕೆ ಸುಯೇಶ್ ಪ್ರಭುದೇಸಾಯಿ ಅಥವಾ ಮಹಿಪಾಲ್ ಲುಮ್ರೂರ್ ಬರುವ ಸಾಧ್ಯತೆ ಇದೆ.

5 / 6
ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI:  ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ , ಸುಯೇಶ್ ಪ್ರಭುದೇಸಾಯಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯಕ್ಕೆ ಆರ್​ಸಿಬಿ ಸಂಭಾವ್ಯ ಪ್ಲೇಯಿಂಗ್ XI: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ , ಸುಯೇಶ್ ಪ್ರಭುದೇಸಾಯಿ, ಗ್ಲೆನ್ ಮ್ಯಾಕ್ಸ್‌ವೆಲ್, ಕ್ಯಾಮೆರಾನ್ ಗ್ರೀನ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಕರ್ಣ್ ಶರ್ಮಾ, ಲಾಕಿ ಫರ್ಗುಸನ್, ಮಯಾಂಕ್ ದಾಗರ್, ಮೊಹಮ್ಮದ್ ಸಿರಾಜ್.

6 / 6
Follow us
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಪರಿಹಾರ ಮೊತ್ತ ಹೆಚ್ಚಿಸುವಂತೆ ಸರ್ಕಾರವನ್ನೂ ಆಗ್ರಹಿಸುತ್ತೇನೆ: ಹೆಬ್ಬಾಳ್ಕರ್
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಆರ್​ಸಿಬಿ ಕೊಡುವ ₹10 ಲಕ್ಷ ಭಿಕ್ಷೆ ಬೇಕಿಲ್ಲ, ಒಂದೊಂದು ಕೋಟಿ ಕೊಡಲಿ:ಬಿವಿವೈ
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸಿಎಂ ಹಿಂದೆ ಸದಾ ಗೋವಿಂದ ಭಜನೆ ಮಾಡೋ ಆತನಿಂದಲೇ ಎಲ್ಲವೂ ಆಯ್ತು: HDK
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸತ್ತವರ ಮೇಲೆ ರಾಜಕೀಯ ಮಾಡಿಕೊಂಡೇ ಕುಮಾರಸ್ವಾಮಿ ಬೆಳೆದಿದ್ದು: ಸುರೇಶ್
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಸಸ್ಪೆನ್ಷನ್ ಒಂದು ನಾಟಕ ಅಂತ ಪೊಲೀಸ್ ಅಧಿಕಾರಿಗಳಿಗೂ ಗೊತ್ತು: ಕುಮಾರಸ್ವಾಮಿ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಪೊಲೀಸ್ ಅಧಿಕಾರಿಗಳು ತಪ್ಪಿತಸ್ಥರೆಂದು ಮೇಲ್ನೋಟಕ್ಕೆ ಗೊತ್ತಾಗಿತ್ತು: ಸಿಎಂ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ಕ್ರೆಡಿಟ್​​ ತೆಗೆದುಕೊಳ್ಳುವ ಚಟ ನಿಮಗೆ: ಡಿಕೆಶಿ​​ ವಿರುದ್ಧ ಜೋಶಿ ಕಿಡಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆಯ ಕಣ್ತುಂಬಿಕೊಂಡ ಮೋದಿ
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್
ನನಗಿಂತ ಮುಂಚಿನ ಕಮೀಷನರ್​ಗಳೆಲ್ಲ ಉತ್ತಮ ಕೆಲಸ ಮಾಡಿದ್ದಾರೆ: ಸೀಮಂತ್ ಸಿಂಗ್