AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳ ಬಳಿಕ ಮತ್ತೆ 10 ಓವರ್​ಗಳಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ

India vs Australia ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಶುರುವಾಗಿದೆ. ಪರ್ತ್​​ನಲ್ಲಿ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ 11.5 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 3 ವಿಕೆಟ್ ಕಳೆದುಕೊಂಡು ಕೇವಲ 37 ರನ್​ ಮಾತ್ರ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Oct 19, 2025 | 10:55 AM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ನೀರಸ ಆರಂಭ ಪಡೆದುಕೊಂಡಿದೆ. ಪರ್ತ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ನೀರಸ ಆರಂಭ ಪಡೆದುಕೊಂಡಿದೆ. ಪರ್ತ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಅನುಭವಿ ದಾಂಡಿಗ ರೋಹಿತ್ ಶರ್ಮಾ ಕೇವಲ 8 ರನ್​ಗಳಿಗೆ ಬಲಗೈ ವೇಗಿ ಜೋಶ್ ಹೇಝಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಅನುಭವಿ ದಾಂಡಿಗ ರೋಹಿತ್ ಶರ್ಮಾ ಕೇವಲ 8 ರನ್​ಗಳಿಗೆ ಬಲಗೈ ವೇಗಿ ಜೋಶ್ ಹೇಝಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.

2 / 6
ಹಿಟ್​ಮ್ಯಾನ್ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ವಿರಾಟ್ ಕೊಹ್ಲಿ 8 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಿಲ್ಲ. ಅಲ್ಲದೆ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಕೂಪರ್ ಕೊನೊಲಿಗೆ ಕ್ಯಾಚ್ ನೀಡಿ ಶೂನ್ಯದೊಂದಿಗೆ ಹಿಂತಿರುಗಿದರು.

ಹಿಟ್​ಮ್ಯಾನ್ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ವಿರಾಟ್ ಕೊಹ್ಲಿ 8 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಿಲ್ಲ. ಅಲ್ಲದೆ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಕೂಪರ್ ಕೊನೊಲಿಗೆ ಕ್ಯಾಚ್ ನೀಡಿ ಶೂನ್ಯದೊಂದಿಗೆ ಹಿಂತಿರುಗಿದರು.

3 / 6
ವಿರಾಟ್ ಕೊಹ್ಲಿಯ ನಿರ್ಗಮನದ ಬೆನ್ನಲ್ಲೇ ನಾಯಕ ಶುಭ್​​ಮನ್ ಗಿಲ್ (10) ವೇಗಿ ನಾಥನ್ ಎಲ್ಲಿಸ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಪರಿಣಾಮ ಟೀಮ್ ಇಂಡಿಯಾ 8.1 ಓವರ್​ಗಳಲ್ಲಿ ಕೇವಲ 25 ರನ್​ಗಳಿಸಿ 3 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಮೊದಲ 10 ಓವರ್​ಗಳಲ್ಲಿ ಗಳಿಸಿದ್ದು ಕೇವಲ 27 ರನ್​​ಗಳು ಮಾತ್ರ.

ವಿರಾಟ್ ಕೊಹ್ಲಿಯ ನಿರ್ಗಮನದ ಬೆನ್ನಲ್ಲೇ ನಾಯಕ ಶುಭ್​​ಮನ್ ಗಿಲ್ (10) ವೇಗಿ ನಾಥನ್ ಎಲ್ಲಿಸ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಪರಿಣಾಮ ಟೀಮ್ ಇಂಡಿಯಾ 8.1 ಓವರ್​ಗಳಲ್ಲಿ ಕೇವಲ 25 ರನ್​ಗಳಿಸಿ 3 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಮೊದಲ 10 ಓವರ್​ಗಳಲ್ಲಿ ಗಳಿಸಿದ್ದು ಕೇವಲ 27 ರನ್​​ಗಳು ಮಾತ್ರ.

4 / 6
ಅಂದರೆ 2023ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಇದಕ್ಕೂ ಮುನ್ನ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪವರ್​ಪ್ಲೇನಲ್ಲಿ 27 ರನ್​ಗಳಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾ ವಿರುದ್ಧವೇ 10 ಓವರ್​ಗಳಲ್ಲಿ ಕೇವಲ 27 ರನ್​ಗಳಿಸಿ ಕಳಪೆ ಆರಂಭ ಪಡೆದುಕೊಂಡಿದೆ.

ಅಂದರೆ 2023ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಇದಕ್ಕೂ ಮುನ್ನ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪವರ್​ಪ್ಲೇನಲ್ಲಿ 27 ರನ್​ಗಳಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾ ವಿರುದ್ಧವೇ 10 ಓವರ್​ಗಳಲ್ಲಿ ಕೇವಲ 27 ರನ್​ಗಳಿಸಿ ಕಳಪೆ ಆರಂಭ ಪಡೆದುಕೊಂಡಿದೆ.

5 / 6
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ್ದು ಶ್ರೀಲಂಕಾ ವಿರುದ್ಧ. 2017 ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಪವರ್​ಪ್ಲೇನಲ್ಲಿ ಕೇವಲ 17 ರನ್​ಗಳಿಸಿ ಅತ್ಯಂತ ಕಳಪೆ ದಾಖಲೆ ಬರೆದಿತ್ತು. ಇದೀಗ ಆಸ್ಟ್ರೇಲಿಯಾ ಪಿಚ್​ನಲ್ಲೂ ಟೀಮ್ ಇಂಡಿಯಾ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಗಿದೆ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ್ದು ಶ್ರೀಲಂಕಾ ವಿರುದ್ಧ. 2017 ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಪವರ್​ಪ್ಲೇನಲ್ಲಿ ಕೇವಲ 17 ರನ್​ಗಳಿಸಿ ಅತ್ಯಂತ ಕಳಪೆ ದಾಖಲೆ ಬರೆದಿತ್ತು. ಇದೀಗ ಆಸ್ಟ್ರೇಲಿಯಾ ಪಿಚ್​ನಲ್ಲೂ ಟೀಮ್ ಇಂಡಿಯಾ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಗಿದೆ.

6 / 6
Follow Us
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ರವಿ ಕರ್ಕಾಟಕ, ಚಂದ್ರ ಕುಂಭರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಪರಪ್ಪನ ಅಗ್ರಹಾರ ಜೈಲಿನಿಂದ ನಗುನಗುತ್ತಲೇ ಹೊರ ಬಂದ ವಿನಯ್ ಕುಲಕರ್ಣಿ
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ಆಂಧ್ರದಲ್ಲಿ ಮೋದಿ ಸ್ವಾಗತಕ್ಕೆ ಸಜ್ಜು;ವಿದ್ಯಾರ್ಥಿಗಳಿಂದ ನೃತ್ಯ ತಾಲೀಮು
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ವಿನಯ್ ಕುಲಕರ್ಣಿಗೆ ಜಾಮೀನು: ಅಚ್ಚರಿ ಮೂಡಿಸಿದ ಯೋಗೇಶ್ ಗೌಡ ಪತ್ನಿ ನಿರ್ಧಾರ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಸಂಸತ್ ಆವರಣದಲ್ಲಿ ಡ್ರಾಮಾ; ಸನ್ಯಾಸಿಯ ವೇಷ ಧರಿಸಿ ಪಪ್ಪು ಯಾದವ್ ಪ್ರತಿಭಟನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಜೈಲಿನಲ್ಲಿ ದರ್ಶನ್ ಜೊತೆ 1 ಗಂಟೆಗೂ ಹೆಚ್ಚು ಕಾಲ ವಿಜಯಲಕ್ಷ್ಮಿ ಸಮಾಲೋಚನೆ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ಊರ್ವಶಿ ಚಿತ್ರಮಂದಿರದಿಂದ ‘ಜನ ನಾಯಗನ್’ ಎತ್ತಂಗಡಿ: ವಿಡಿಯೋ ನೋಡಿ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ರೈತ ದಂಪತಿ ಸಾವು: ಕುಟುಂಬಕ್ಕೆ ಹೆಚ್.ಡಿ. ಕುಮಾರಸ್ವಾಮಿ ಸಾಂತ್ವನ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ
ಹಿಂಗಾರು ಮಳೆ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ಹವಾಮಾನ ಇಲಾಖೆ ನಿರ್ದೇಶಕ