AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳ ಬಳಿಕ ಮತ್ತೆ 10 ಓವರ್​ಗಳಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ

India vs Australia ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಶುರುವಾಗಿದೆ. ಪರ್ತ್​​ನಲ್ಲಿ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ 11.5 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 3 ವಿಕೆಟ್ ಕಳೆದುಕೊಂಡು ಕೇವಲ 37 ರನ್​ ಮಾತ್ರ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Oct 19, 2025 | 10:55 AM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ನೀರಸ ಆರಂಭ ಪಡೆದುಕೊಂಡಿದೆ. ಪರ್ತ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ನೀರಸ ಆರಂಭ ಪಡೆದುಕೊಂಡಿದೆ. ಪರ್ತ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಅನುಭವಿ ದಾಂಡಿಗ ರೋಹಿತ್ ಶರ್ಮಾ ಕೇವಲ 8 ರನ್​ಗಳಿಗೆ ಬಲಗೈ ವೇಗಿ ಜೋಶ್ ಹೇಝಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಅನುಭವಿ ದಾಂಡಿಗ ರೋಹಿತ್ ಶರ್ಮಾ ಕೇವಲ 8 ರನ್​ಗಳಿಗೆ ಬಲಗೈ ವೇಗಿ ಜೋಶ್ ಹೇಝಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.

2 / 6
ಹಿಟ್​ಮ್ಯಾನ್ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ವಿರಾಟ್ ಕೊಹ್ಲಿ 8 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಿಲ್ಲ. ಅಲ್ಲದೆ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಕೂಪರ್ ಕೊನೊಲಿಗೆ ಕ್ಯಾಚ್ ನೀಡಿ ಶೂನ್ಯದೊಂದಿಗೆ ಹಿಂತಿರುಗಿದರು.

ಹಿಟ್​ಮ್ಯಾನ್ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ವಿರಾಟ್ ಕೊಹ್ಲಿ 8 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಿಲ್ಲ. ಅಲ್ಲದೆ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಕೂಪರ್ ಕೊನೊಲಿಗೆ ಕ್ಯಾಚ್ ನೀಡಿ ಶೂನ್ಯದೊಂದಿಗೆ ಹಿಂತಿರುಗಿದರು.

3 / 6
ವಿರಾಟ್ ಕೊಹ್ಲಿಯ ನಿರ್ಗಮನದ ಬೆನ್ನಲ್ಲೇ ನಾಯಕ ಶುಭ್​​ಮನ್ ಗಿಲ್ (10) ವೇಗಿ ನಾಥನ್ ಎಲ್ಲಿಸ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಪರಿಣಾಮ ಟೀಮ್ ಇಂಡಿಯಾ 8.1 ಓವರ್​ಗಳಲ್ಲಿ ಕೇವಲ 25 ರನ್​ಗಳಿಸಿ 3 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಮೊದಲ 10 ಓವರ್​ಗಳಲ್ಲಿ ಗಳಿಸಿದ್ದು ಕೇವಲ 27 ರನ್​​ಗಳು ಮಾತ್ರ.

ವಿರಾಟ್ ಕೊಹ್ಲಿಯ ನಿರ್ಗಮನದ ಬೆನ್ನಲ್ಲೇ ನಾಯಕ ಶುಭ್​​ಮನ್ ಗಿಲ್ (10) ವೇಗಿ ನಾಥನ್ ಎಲ್ಲಿಸ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಪರಿಣಾಮ ಟೀಮ್ ಇಂಡಿಯಾ 8.1 ಓವರ್​ಗಳಲ್ಲಿ ಕೇವಲ 25 ರನ್​ಗಳಿಸಿ 3 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಮೊದಲ 10 ಓವರ್​ಗಳಲ್ಲಿ ಗಳಿಸಿದ್ದು ಕೇವಲ 27 ರನ್​​ಗಳು ಮಾತ್ರ.

4 / 6
ಅಂದರೆ 2023ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಇದಕ್ಕೂ ಮುನ್ನ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪವರ್​ಪ್ಲೇನಲ್ಲಿ 27 ರನ್​ಗಳಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾ ವಿರುದ್ಧವೇ 10 ಓವರ್​ಗಳಲ್ಲಿ ಕೇವಲ 27 ರನ್​ಗಳಿಸಿ ಕಳಪೆ ಆರಂಭ ಪಡೆದುಕೊಂಡಿದೆ.

ಅಂದರೆ 2023ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಇದಕ್ಕೂ ಮುನ್ನ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪವರ್​ಪ್ಲೇನಲ್ಲಿ 27 ರನ್​ಗಳಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾ ವಿರುದ್ಧವೇ 10 ಓವರ್​ಗಳಲ್ಲಿ ಕೇವಲ 27 ರನ್​ಗಳಿಸಿ ಕಳಪೆ ಆರಂಭ ಪಡೆದುಕೊಂಡಿದೆ.

5 / 6
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ್ದು ಶ್ರೀಲಂಕಾ ವಿರುದ್ಧ. 2017 ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಪವರ್​ಪ್ಲೇನಲ್ಲಿ ಕೇವಲ 17 ರನ್​ಗಳಿಸಿ ಅತ್ಯಂತ ಕಳಪೆ ದಾಖಲೆ ಬರೆದಿತ್ತು. ಇದೀಗ ಆಸ್ಟ್ರೇಲಿಯಾ ಪಿಚ್​ನಲ್ಲೂ ಟೀಮ್ ಇಂಡಿಯಾ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಗಿದೆ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ್ದು ಶ್ರೀಲಂಕಾ ವಿರುದ್ಧ. 2017 ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಪವರ್​ಪ್ಲೇನಲ್ಲಿ ಕೇವಲ 17 ರನ್​ಗಳಿಸಿ ಅತ್ಯಂತ ಕಳಪೆ ದಾಖಲೆ ಬರೆದಿತ್ತು. ಇದೀಗ ಆಸ್ಟ್ರೇಲಿಯಾ ಪಿಚ್​ನಲ್ಲೂ ಟೀಮ್ ಇಂಡಿಯಾ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಗಿದೆ.

6 / 6
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ