AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ವರ್ಷಗಳ ಬಳಿಕ ಮತ್ತೆ 10 ಓವರ್​ಗಳಲ್ಲಿ ಮುಗ್ಗರಿಸಿದ ಟೀಮ್ ಇಂಡಿಯಾ

India vs Australia ODI: ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಸರಣಿ ಶುರುವಾಗಿದೆ. ಪರ್ತ್​​ನಲ್ಲಿ ನಡೆಯುತ್ತಿರುವ ಪ್ರಥಮ ಏಕದಿನ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಗಿದೆ. ಅಲ್ಲದೆ 11.5 ಓವರ್​ಗಳ ಮುಕ್ತಾಯದ ವೇಳೆಗೆ ಭಾರತ ತಂಡವು 3 ವಿಕೆಟ್ ಕಳೆದುಕೊಂಡು ಕೇವಲ 37 ರನ್​ ಮಾತ್ರ ಕಲೆಹಾಕಿದೆ.

ಝಾಹಿರ್ ಯೂಸುಫ್
|

Updated on: Oct 19, 2025 | 10:55 AM

Share
ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ನೀರಸ ಆರಂಭ ಪಡೆದುಕೊಂಡಿದೆ. ಪರ್ತ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ನೀರಸ ಆರಂಭ ಪಡೆದುಕೊಂಡಿದೆ. ಪರ್ತ್​ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಟೀಮ್ ಇಂಡಿಯಾವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದ್ದರು.

1 / 6
ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಅನುಭವಿ ದಾಂಡಿಗ ರೋಹಿತ್ ಶರ್ಮಾ ಕೇವಲ 8 ರನ್​ಗಳಿಗೆ ಬಲಗೈ ವೇಗಿ ಜೋಶ್ ಹೇಝಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆಯುವಲ್ಲಿ ವಿಫಲವಾಯಿತು. ಆರಂಭಿಕನಾಗಿ ಕಣಕ್ಕಿಳಿದ ಅನುಭವಿ ದಾಂಡಿಗ ರೋಹಿತ್ ಶರ್ಮಾ ಕೇವಲ 8 ರನ್​ಗಳಿಗೆ ಬಲಗೈ ವೇಗಿ ಜೋಶ್ ಹೇಝಲ್​ವುಡ್​ಗೆ ವಿಕೆಟ್ ಒಪ್ಪಿಸಿದರು.

2 / 6
ಹಿಟ್​ಮ್ಯಾನ್ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ವಿರಾಟ್ ಕೊಹ್ಲಿ 8 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಿಲ್ಲ. ಅಲ್ಲದೆ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಕೂಪರ್ ಕೊನೊಲಿಗೆ ಕ್ಯಾಚ್ ನೀಡಿ ಶೂನ್ಯದೊಂದಿಗೆ ಹಿಂತಿರುಗಿದರು.

ಹಿಟ್​ಮ್ಯಾನ್ ನಿರ್ಗಮನದ ಬಳಿಕ ಕ್ರೀಸ್​ಗೆ ಆಗಮಿಸಿದ ವಿರಾಟ್ ಕೊಹ್ಲಿ 8 ಎಸೆತಗಳನ್ನು ಎದುರಿಸಿದರೂ ಒಂದೇ ಒಂದು ರನ್​ಗಳಿಸಲು ಸಾಧ್ಯವಾಗಿಲ್ಲ. ಅಲ್ಲದೆ ಮಿಚೆಲ್ ಸ್ಟಾರ್ಕ್​​ ಎಸೆತದಲ್ಲಿ ಕೂಪರ್ ಕೊನೊಲಿಗೆ ಕ್ಯಾಚ್ ನೀಡಿ ಶೂನ್ಯದೊಂದಿಗೆ ಹಿಂತಿರುಗಿದರು.

3 / 6
ವಿರಾಟ್ ಕೊಹ್ಲಿಯ ನಿರ್ಗಮನದ ಬೆನ್ನಲ್ಲೇ ನಾಯಕ ಶುಭ್​​ಮನ್ ಗಿಲ್ (10) ವೇಗಿ ನಾಥನ್ ಎಲ್ಲಿಸ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಪರಿಣಾಮ ಟೀಮ್ ಇಂಡಿಯಾ 8.1 ಓವರ್​ಗಳಲ್ಲಿ ಕೇವಲ 25 ರನ್​ಗಳಿಸಿ 3 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಮೊದಲ 10 ಓವರ್​ಗಳಲ್ಲಿ ಗಳಿಸಿದ್ದು ಕೇವಲ 27 ರನ್​​ಗಳು ಮಾತ್ರ.

ವಿರಾಟ್ ಕೊಹ್ಲಿಯ ನಿರ್ಗಮನದ ಬೆನ್ನಲ್ಲೇ ನಾಯಕ ಶುಭ್​​ಮನ್ ಗಿಲ್ (10) ವೇಗಿ ನಾಥನ್ ಎಲ್ಲಿಸ್ ಎಸೆತದಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿದರು. ಪರಿಣಾಮ ಟೀಮ್ ಇಂಡಿಯಾ 8.1 ಓವರ್​ಗಳಲ್ಲಿ ಕೇವಲ 25 ರನ್​ಗಳಿಸಿ 3 ವಿಕೆಟ್ ಕಳೆದುಕೊಂಡಿತು. ಅಲ್ಲದೆ ಮೊದಲ 10 ಓವರ್​ಗಳಲ್ಲಿ ಗಳಿಸಿದ್ದು ಕೇವಲ 27 ರನ್​​ಗಳು ಮಾತ್ರ.

4 / 6
ಅಂದರೆ 2023ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಇದಕ್ಕೂ ಮುನ್ನ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪವರ್​ಪ್ಲೇನಲ್ಲಿ 27 ರನ್​ಗಳಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾ ವಿರುದ್ಧವೇ 10 ಓವರ್​ಗಳಲ್ಲಿ ಕೇವಲ 27 ರನ್​ಗಳಿಸಿ ಕಳಪೆ ಆರಂಭ ಪಡೆದುಕೊಂಡಿದೆ.

ಅಂದರೆ 2023ರ ಬಳಿಕ ಟೀಮ್ ಇಂಡಿಯಾ ಇದೇ ಮೊದಲ ಬಾರಿಗೆ ಅತ್ಯಂತ ಕಳಪೆ ಆರಂಭ ಪಡೆದುಕೊಂಡಿದೆ. ಇದಕ್ಕೂ ಮುನ್ನ 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಪವರ್​ಪ್ಲೇನಲ್ಲಿ 27 ರನ್​ಗಳಿಸಿ ಕಳಪೆ ಪ್ರದರ್ಶನ ನೀಡಿತ್ತು. ಇದೀಗ ಮತ್ತೊಮ್ಮೆ ಆಸ್ಟ್ರೇಲಿಯಾ ವಿರುದ್ಧವೇ 10 ಓವರ್​ಗಳಲ್ಲಿ ಕೇವಲ 27 ರನ್​ಗಳಿಸಿ ಕಳಪೆ ಆರಂಭ ಪಡೆದುಕೊಂಡಿದೆ.

5 / 6
ಇನ್ನು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ್ದು ಶ್ರೀಲಂಕಾ ವಿರುದ್ಧ. 2017 ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಪವರ್​ಪ್ಲೇನಲ್ಲಿ ಕೇವಲ 17 ರನ್​ಗಳಿಸಿ ಅತ್ಯಂತ ಕಳಪೆ ದಾಖಲೆ ಬರೆದಿತ್ತು. ಇದೀಗ ಆಸ್ಟ್ರೇಲಿಯಾ ಪಿಚ್​ನಲ್ಲೂ ಟೀಮ್ ಇಂಡಿಯಾ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಗಿದೆ.

ಇನ್ನು ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಮೊದಲ 10 ಓವರ್​ಗಳಲ್ಲಿ ಅತೀ ಕಡಿಮೆ ರನ್ ಕಲೆಹಾಕಿದ್ದು ಶ್ರೀಲಂಕಾ ವಿರುದ್ಧ. 2017 ರಲ್ಲಿ ನಡೆದ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡವು ಪವರ್​ಪ್ಲೇನಲ್ಲಿ ಕೇವಲ 17 ರನ್​ಗಳಿಸಿ ಅತ್ಯಂತ ಕಳಪೆ ದಾಖಲೆ ಬರೆದಿತ್ತು. ಇದೀಗ ಆಸ್ಟ್ರೇಲಿಯಾ ಪಿಚ್​ನಲ್ಲೂ ಟೀಮ್ ಇಂಡಿಯಾ ಬಿರುಸಿನ ಆರಂಭ ಪಡೆಯುವಲ್ಲಿ ವಿಫಲವಾಗಿದೆ.

6 / 6
‘ಮಹಾನಟಿ’ ಶೋಗೆ ಫಿನಾಲೆ; ಪರ್ಫಾರ್ಮೆನ್ಸ್ ನೋಡಿ ಜಡ್ಜ್​​ಗಳು ಫಿದಾ
‘ಮಹಾನಟಿ’ ಶೋಗೆ ಫಿನಾಲೆ; ಪರ್ಫಾರ್ಮೆನ್ಸ್ ನೋಡಿ ಜಡ್ಜ್​​ಗಳು ಫಿದಾ
GBIT ಯೋಜನೆಗೆ ವಿರೋಧ: ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ
GBIT ಯೋಜನೆಗೆ ವಿರೋಧ: ಶಾಸಕ ಬಾಲಕೃಷ್ಣ ಎದುರು ಮಹಿಳೆಯರ ರೋಶಾವೇಷ
ಸಿಎಂ ಸಿದ್ದರಾಮಯ್ಯಗೆ ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್​ ಏನು?
ಸಿಎಂ ಸಿದ್ದರಾಮಯ್ಯಗೆ ರಾಜಣ್ಣ ಆತಿಥ್ಯ: ಮಾಜಿ ಸಚಿವರ ಪ್ಲ್ಯಾನ್​ ಏನು?
ಊರ ತುಂಬೆಲ್ಲ ಕುಂಕುಮ-ನಿಂಬೆಹಣ್ಣು, ಜಾನುವಾರುಗಳ ಆಕಸ್ಮಿಕ ಸಾವು!
ಊರ ತುಂಬೆಲ್ಲ ಕುಂಕುಮ-ನಿಂಬೆಹಣ್ಣು, ಜಾನುವಾರುಗಳ ಆಕಸ್ಮಿಕ ಸಾವು!
ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬ
ದೆಹಲಿ ವಿಮಾನ ನಿಲ್ದಾಣದಲ್ಲಿ 100ಕ್ಕೂ ಅಧಿಕ ವಿಮಾನಗಳು ವಿಳಂಬ
ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಾಗಲಕೋಟೆಯಲ್ಲಿ ಹೆದ್ದಾರಿ ಬಂದ್
ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ: ಬಾಗಲಕೋಟೆಯಲ್ಲಿ ಹೆದ್ದಾರಿ ಬಂದ್
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಕ್ರಾಂತಿ ಚರ್ಚೆ ಮಧ್ಯೆ ರಾಜಣ್ಣ ನಿವಾಸದಲ್ಲಿಂದು ಡಿನ್ನರ್, ಸಿಎಂ ಭಾಗಿ
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ಗಿಲ್ಲಿ ನಟನ ಮೇಲೆ ಏಕಾಏಕಿ ದಾಳಿಗೆ ಇಳಿದ ಅಶ್ವಿನಿ, ಧ್ರುವಂತ್
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ದೇವಸ್ಥಾನಕ್ಕೆ ಜೋಡಿ ತೆಂಗಿನಕಾಯಿಯನ್ನೇ ತೆಗೆದುಕೊಂಡು ಹೋಗಬೇಕು ಯಾಕೆ?
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ರೋಹಿಣಿ ನಕ್ಷತ್ರದಲ್ಲಿ ಚಂದ್ರ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ