AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LPL 2024: ಸ್ಟೋಟಕ ಸೆಂಚುರಿ ಸಿಡಿಸಿ ಬಾಬರ್ ದಾಖಲೆ ಮುರಿದ ಕುಸಾಲ್ ಪೆರೇರಾ

LPL 2024: ಲಂಕಾ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಜಾಫ್ನಾ ಕಿಂಗ್ಸ್ ತಂಡವು ರೋಚಕ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಂಬುಲ್ಲಾ ಸಿಕ್ಸರ್ಸ್ ಪರ ಕುಸಾಲ್ ಪೆರೇರಾ ಭರ್ಜರಿ ಶತಕ ಸಿಡಿಸಿದ್ದರು. ಈ ಶತಕದ ನೆರವಿನಿಂದ ದಂಬುಲ್ಲಾ ಸಿಕ್ಸರ್ಸ್ 191 ರನ್ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಿದ ಜಾಫ್ನಾ ಕಿಂಗ್ಸ್ ತಂಡವು ಕೊನೆಯ ಎಸೆತದಲ್ಲಿ ಸಿಕ್ಸ್​ ಸಿಡಿಸಿ ಜಯ ಸಾಧಿಸಿತು.

ಝಾಹಿರ್ ಯೂಸುಫ್
|

Updated on: Jul 04, 2024 | 8:54 AM

Share
ಲಂಕಾ ಪ್ರೀಮಿಯರ್ ಲೀಗ್​ನಲ್ಲಿ (LPL 2024) ಸ್ಪೋಟಕ ಶತಕ ಬಾರಿಸಿದ ಕುಸಾಲ್ ಪೆರೇರಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬಾಬರ್ ಆಝಂ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಪಲ್ಲೆಕೆಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ದಂಬುಲ್ಲಾ ಸಿಕ್ಸರ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಜಾಫ್ನಾ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು.

ಲಂಕಾ ಪ್ರೀಮಿಯರ್ ಲೀಗ್​ನಲ್ಲಿ (LPL 2024) ಸ್ಪೋಟಕ ಶತಕ ಬಾರಿಸಿದ ಕುಸಾಲ್ ಪೆರೇರಾ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಕೂಡ ಬಾಬರ್ ಆಝಂ ಹೆಸರಿನಲ್ಲಿದ್ದ ದಾಖಲೆಯನ್ನು ಮುರಿಯುವ ಮೂಲಕ ಎಂಬುದು ವಿಶೇಷ. ಪಲ್ಲೆಕೆಲೆ ಇಂಟರ್​ನ್ಯಾಷನಲ್​ ಸ್ಟೇಡಿಯಂನಲ್ಲಿ ನಡೆದ ದಂಬುಲ್ಲಾ ಸಿಕ್ಸರ್ಸ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದ ಜಾಫ್ನಾ ಕಿಂಗ್ಸ್ ತಂಡವು ಬೌಲಿಂಗ್ ಆಯ್ದುಕೊಂಡಿತು.

1 / 5
ಅದರಂತೆ ಮೊದಲು ಬ್ಯಾಟ್ ಮಾಡಿದ ದಂಬುಲ್ಲಾ ಸಿಕ್ಸರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಕುಸಾಲ್ ಪೆರೇರಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಪೆರೇರಾ ಜಾಫ್ನಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 50 ಎಸೆತಗಳಲ್ಲಿ ಶತಕ ಮೂಡಿಬಂತು. ಇದರೊಂದಿಗೆ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕುಸಾಲ್ ಪೆರೇರಾ ಪಾಲಾಯಿತು.

ಅದರಂತೆ ಮೊದಲು ಬ್ಯಾಟ್ ಮಾಡಿದ ದಂಬುಲ್ಲಾ ಸಿಕ್ಸರ್ಸ್ ಪರ ಆರಂಭಿಕನಾಗಿ ಕಣಕ್ಕಿಳಿದ ಕುಸಾಲ್ ಪೆರೇರಾ ವಿಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದರು. ಮೊದಲ ಓವರ್​ನಿಂದಲೇ ಬಿರುಸಿನ ಬ್ಯಾಟಿಂಗ್​ಗೆ ಒತ್ತು ನೀಡಿದ ಪೆರೇರಾ ಜಾಫ್ನಾ ಬೌಲರ್​ಗಳ ಬೆಂಡೆತ್ತಿದರು. ಪರಿಣಾಮ ಕೇವಲ 50 ಎಸೆತಗಳಲ್ಲಿ ಶತಕ ಮೂಡಿಬಂತು. ಇದರೊಂದಿಗೆ ಲಂಕಾ ಪ್ರೀಮಿಯರ್ ಲೀಗ್​ನಲ್ಲಿ ಅತೀ ವೇಗದ ಶತಕ ಸಿಡಿಸಿದ ದಾಖಲೆ ಕುಸಾಲ್ ಪೆರೇರಾ ಪಾಲಾಯಿತು.

2 / 5
ಇದಕ್ಕೂ ಮುನ್ನ ಈ ದಾಖಲೆ ಬಾಬರ್ ಆಝಂ ಹೆಸರಿನಲ್ಲಿತ್ತು. 2023 ರ ಎಲ್​ಪಿಎಲ್​ನಲ್ಲಿ ಕೊಲಂಬೊ ಸ್ಟ್ರಕರ್ಸ್ ಪರ ಕಣಕ್ಕಿಳಿದಿದ್ದ ಬಾಬರ್ 57 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ಕುಸಾಲ್ ಪೆರೇರಾ ಮುರಿದಿದ್ದಾರೆ.

ಇದಕ್ಕೂ ಮುನ್ನ ಈ ದಾಖಲೆ ಬಾಬರ್ ಆಝಂ ಹೆಸರಿನಲ್ಲಿತ್ತು. 2023 ರ ಎಲ್​ಪಿಎಲ್​ನಲ್ಲಿ ಕೊಲಂಬೊ ಸ್ಟ್ರಕರ್ಸ್ ಪರ ಕಣಕ್ಕಿಳಿದಿದ್ದ ಬಾಬರ್ 57 ಎಸೆತಗಳಲ್ಲಿ ಶತಕ ಸಿಡಿಸಿದ್ದರು. ಇದೀಗ ಈ ದಾಖಲೆಯನ್ನು ಕುಸಾಲ್ ಪೆರೇರಾ ಮುರಿದಿದ್ದಾರೆ.

3 / 5
ಇನ್ನು ಈ ಪಂದ್ಯದಲ್ಲಿ 52 ಎಸೆತಗಳನ್ನು ಎದುರಿಸಿದ ಕುಸಾಲ್ ಪೆರೇರಾ 5 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 102 ರನ್ ಬಾರಿಸಿದರು. ಈ ಶತಕದ ನೆರವಿನಿಂದ ದಂಬುಲ್ಲಾ ಸಿಕ್ಸರ್ಸ್ ತಂಡವು 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿತು.

ಇನ್ನು ಈ ಪಂದ್ಯದಲ್ಲಿ 52 ಎಸೆತಗಳನ್ನು ಎದುರಿಸಿದ ಕುಸಾಲ್ ಪೆರೇರಾ 5 ಭರ್ಜರಿ ಸಿಕ್ಸ್ ಹಾಗೂ 10 ಫೋರ್​ಗಳೊಂದಿಗೆ ಅಜೇಯ 102 ರನ್ ಬಾರಿಸಿದರು. ಈ ಶತಕದ ನೆರವಿನಿಂದ ದಂಬುಲ್ಲಾ ಸಿಕ್ಸರ್ಸ್ ತಂಡವು 20 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 191 ರನ್ ಕಲೆಹಾಕಿತು.

4 / 5
192 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಜಾಫ್ನಾ ಕಿಂಗ್ಸ್ ಪರ ಅವಿಷ್ಕಾ ಫೆರ್ನಾಂಡೋ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅವಿಷ್ಕಾ 34 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 80 ರನ್ ಚಚ್ಚಿದರೆ, ಚರಿತ್ ಅಸಲಂಕಾ 36 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಜಾಫ್ನಾ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 197 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು.

192 ರನ್​ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಜಾಫ್ನಾ ಕಿಂಗ್ಸ್ ಪರ ಅವಿಷ್ಕಾ ಫೆರ್ನಾಂಡೋ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದರು. ಅವಿಷ್ಕಾ 34 ಎಸೆತಗಳಲ್ಲಿ 6 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ 80 ರನ್ ಚಚ್ಚಿದರೆ, ಚರಿತ್ ಅಸಲಂಕಾ 36 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಈ ಮೂಲಕ ಜಾಫ್ನಾ ಕಿಂಗ್ಸ್ ತಂಡವು 20 ಓವರ್​ಗಳಲ್ಲಿ 6 ವಿಕೆಟ್ ಕಳೆದುಕೊಂಡು 197 ರನ್ ಬಾರಿಸಿ ಭರ್ಜರಿ ಜಯ ಸಾಧಿಸಿತು.

5 / 5
Follow Us
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ