AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಸಿಕ್ಸ್ ಸಿಡಿಸಿಯೇ ಹೊಸ ದಾಖಲೆ ಬರೆದ ಎಲ್​ಆರ್ ಚೇತನ್

Maharaja Trophy 2024: ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕರ್ನಾಟಕದ ಯುವ ದಾಂಡಿಗ ಚೇತನ್ ರೇವಣ್ಣ ಅವರ ಸಿಡಿಲಬ್ಬರ ಮುಂದುವರೆದಿದೆ. ಕೇವಲ ಮೂರು ಸೀಸನ್​ಗಳ ಮೂಲಕವೇ ಎಲ್​ಆರ್​ಸಿ 50 ಸಿಕ್ಸ್​ಗಳನ್ನು ಸಿಡಿಸಿ ಕರ್ನಾಟಕ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ಗೂ ಎಂಟ್ರಿ ಕೊಡುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 18, 2024 | 1:31 PM

Share
ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಸಿಕ್ಸ್ ಸಿಡಿಸಿಯೇ ಯುವ ಸ್ಟೋಟಕ ದಾಂಡಿಗ ಎಲ್​ಆರ್ ಚೇತನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 24 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಂದರೆ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಚೇತನ್ ಪಾಲಾಗಿದೆ.

ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಸಿಕ್ಸ್ ಸಿಡಿಸಿಯೇ ಯುವ ಸ್ಟೋಟಕ ದಾಂಡಿಗ ಎಲ್​ಆರ್ ಚೇತನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 24 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಂದರೆ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಚೇತನ್ ಪಾಲಾಗಿದೆ.

1 / 5
ಗುಲ್ಬರ್ಗ ಮಿಸ್ಟಿಕ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ಪರ ಒಟ್ಟು 24 ಪಂದ್ಯಗಳನ್ನಾಡಿರುವ ಎಲ್​ಆರ್ ಚೇತನ್ ಈವರೆಗೆ 50 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಕರ್ನಾಟಕ ಟಿ20 ಲೀಗ್​ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆರಂಭಿಕ ದಾಂಡಿಗ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಗುಲ್ಬರ್ಗ ಮಿಸ್ಟಿಕ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ಪರ ಒಟ್ಟು 24 ಪಂದ್ಯಗಳನ್ನಾಡಿರುವ ಎಲ್​ಆರ್ ಚೇತನ್ ಈವರೆಗೆ 50 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಕರ್ನಾಟಕ ಟಿ20 ಲೀಗ್​ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆರಂಭಿಕ ದಾಂಡಿಗ ಅಗ್ರಸ್ಥಾನ ಅಲಂಕರಿಸಿದ್ದಾರೆ.

2 / 5
ಮಹಾರಾಜ ಟಿ20 ಟೂರ್ನಿಯ ಸೀಸನ್-1 ರಲ್ಲಿ ಒಟ್ಟು 26 ಸಿಕ್ಸ್​ಗಳನ್ನು ಬಾರಿಸಿದ್ದ ಎಲ್​ಆರ್ ಚೇತನ್, 2023 ರಲ್ಲಿ 19 ಸಿಕ್ಸ್​ಗಳನ್ನು ಸಿಡಿಸಿದ್ದರು. ಇನ್ನು ಬಾರಿಯ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲೇ 5 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಮಹಾರಾಜ ಟಿ20 ಟೂರ್ನಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

ಮಹಾರಾಜ ಟಿ20 ಟೂರ್ನಿಯ ಸೀಸನ್-1 ರಲ್ಲಿ ಒಟ್ಟು 26 ಸಿಕ್ಸ್​ಗಳನ್ನು ಬಾರಿಸಿದ್ದ ಎಲ್​ಆರ್ ಚೇತನ್, 2023 ರಲ್ಲಿ 19 ಸಿಕ್ಸ್​ಗಳನ್ನು ಸಿಡಿಸಿದ್ದರು. ಇನ್ನು ಬಾರಿಯ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲೇ 5 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಮಹಾರಾಜ ಟಿ20 ಟೂರ್ನಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

3 / 5
ಹಾಗೆಯೇ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 700+ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಯುವ ದಾಂಡಿಗ ಕಾಣಿಸಿಕೊಂಡಿದ್ದಾರೆ. 2022 ರ ಸೀಸನ್​ನಲ್ಲಿ 11 ಪಂದ್ಯಗಳಿಂದ ಚೇತನ್ ಒಟ್ಟು 447 ರನ್ ಕಲೆಹಾಕಿದ್ದರು. ಇನ್ನು 2023ರ ಸೀಸನ್​ನಲ್ಲಿ 11 ಪಂದ್ಯಗಳಿಂದ 309	ರನ್ ಬಾರಿಸಿದ್ದಾರೆ. ಹಾಗೆಯೇ ಈ ಬಾರಿ ಬೆಂಗಳೂರು ಬ್ಲಾಸ್ಟರ್ಸ್ ಪರ ಆಡುತ್ತಿರುವ ಚೇತನ್ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

ಹಾಗೆಯೇ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 700+ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಯುವ ದಾಂಡಿಗ ಕಾಣಿಸಿಕೊಂಡಿದ್ದಾರೆ. 2022 ರ ಸೀಸನ್​ನಲ್ಲಿ 11 ಪಂದ್ಯಗಳಿಂದ ಚೇತನ್ ಒಟ್ಟು 447 ರನ್ ಕಲೆಹಾಕಿದ್ದರು. ಇನ್ನು 2023ರ ಸೀಸನ್​ನಲ್ಲಿ 11 ಪಂದ್ಯಗಳಿಂದ 309 ರನ್ ಬಾರಿಸಿದ್ದಾರೆ. ಹಾಗೆಯೇ ಈ ಬಾರಿ ಬೆಂಗಳೂರು ಬ್ಲಾಸ್ಟರ್ಸ್ ಪರ ಆಡುತ್ತಿರುವ ಚೇತನ್ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

4 / 5
ದೇಶೀಯ ಅಂಗಳದಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿರುವ 24 ವರ್ಷದ ಎಲ್​ಆರ್​ ಚೇತನ್ ಅವರಿಗೆ ಈವರೆಗೆ ಐಪಿಎಲ್​​ನಲ್ಲಿ ಚಾನ್ಸ್ ಸಿಕ್ಕಿಲ್ಲ ಎಂಬುದೇ ಅಚ್ಚರಿ. ಅದರಲ್ಲೂ ಕಳೆದ ಎರಡು ಸೀಸನ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಯುವ ದಾಂಡಿಗನ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಿರಲಿಲ್ಲ. ಇದೀಗ ಸಿಕ್ಸರ್​ಗಳ ಮೂಲಕವೇ ಗಮನ ಸೆಳೆದಿರುವ ಎಲ್​​ಆರ್​ ಚೇತನ್ ಈ ಬಾರಿಯ ಮೆಗಾ ಹರಾಜಿನ ಮೂಲಕ ಐಪಿಎಲ್​ಗೆ ಎಂಟ್ರಿ ಕೊಡುವ ವಿಶ್ವಾಸದಲ್ಲಿದ್ದಾರೆ.

ದೇಶೀಯ ಅಂಗಳದಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿರುವ 24 ವರ್ಷದ ಎಲ್​ಆರ್​ ಚೇತನ್ ಅವರಿಗೆ ಈವರೆಗೆ ಐಪಿಎಲ್​​ನಲ್ಲಿ ಚಾನ್ಸ್ ಸಿಕ್ಕಿಲ್ಲ ಎಂಬುದೇ ಅಚ್ಚರಿ. ಅದರಲ್ಲೂ ಕಳೆದ ಎರಡು ಸೀಸನ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಯುವ ದಾಂಡಿಗನ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಿರಲಿಲ್ಲ. ಇದೀಗ ಸಿಕ್ಸರ್​ಗಳ ಮೂಲಕವೇ ಗಮನ ಸೆಳೆದಿರುವ ಎಲ್​​ಆರ್​ ಚೇತನ್ ಈ ಬಾರಿಯ ಮೆಗಾ ಹರಾಜಿನ ಮೂಲಕ ಐಪಿಎಲ್​ಗೆ ಎಂಟ್ರಿ ಕೊಡುವ ವಿಶ್ವಾಸದಲ್ಲಿದ್ದಾರೆ.

5 / 5
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್