AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maharaja Trophy 2024: ಸಿಕ್ಸ್ ಸಿಡಿಸಿಯೇ ಹೊಸ ದಾಖಲೆ ಬರೆದ ಎಲ್​ಆರ್ ಚೇತನ್

Maharaja Trophy 2024: ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಕರ್ನಾಟಕದ ಯುವ ದಾಂಡಿಗ ಚೇತನ್ ರೇವಣ್ಣ ಅವರ ಸಿಡಿಲಬ್ಬರ ಮುಂದುವರೆದಿದೆ. ಕೇವಲ ಮೂರು ಸೀಸನ್​ಗಳ ಮೂಲಕವೇ ಎಲ್​ಆರ್​ಸಿ 50 ಸಿಕ್ಸ್​ಗಳನ್ನು ಸಿಡಿಸಿ ಕರ್ನಾಟಕ ಟಿ20 ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಈ ಬಾರಿಯ ಐಪಿಎಲ್​ಗೂ ಎಂಟ್ರಿ ಕೊಡುವ ವಿಶ್ವಾಸದಲ್ಲಿದ್ದಾರೆ.

ಝಾಹಿರ್ ಯೂಸುಫ್
|

Updated on: Aug 18, 2024 | 1:31 PM

Share
ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಸಿಕ್ಸ್ ಸಿಡಿಸಿಯೇ ಯುವ ಸ್ಟೋಟಕ ದಾಂಡಿಗ ಎಲ್​ಆರ್ ಚೇತನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 24 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಂದರೆ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಚೇತನ್ ಪಾಲಾಗಿದೆ.

ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ ಸಿಕ್ಸ್ ಸಿಡಿಸಿಯೇ ಯುವ ಸ್ಟೋಟಕ ದಾಂಡಿಗ ಎಲ್​ಆರ್ ಚೇತನ್ ಹೊಸ ದಾಖಲೆ ನಿರ್ಮಿಸಿದ್ದಾರೆ. ಅದು ಸಹ 24 ಪಂದ್ಯಗಳ ಮೂಲಕ ಎಂಬುದು ವಿಶೇಷ. ಅಂದರೆ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆ ಚೇತನ್ ಪಾಲಾಗಿದೆ.

1 / 5
ಗುಲ್ಬರ್ಗ ಮಿಸ್ಟಿಕ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ಪರ ಒಟ್ಟು 24 ಪಂದ್ಯಗಳನ್ನಾಡಿರುವ ಎಲ್​ಆರ್ ಚೇತನ್ ಈವರೆಗೆ 50 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಕರ್ನಾಟಕ ಟಿ20 ಲೀಗ್​ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆರಂಭಿಕ ದಾಂಡಿಗ ಅಗ್ರಸ್ಥಾನ ಅಲಂಕರಿಸಿದ್ದಾರೆ.

ಗುಲ್ಬರ್ಗ ಮಿಸ್ಟಿಕ್ಸ್ ಹಾಗೂ ಬೆಂಗಳೂರು ಬ್ಲಾಸ್ಟರ್ಸ್ ಪರ ಒಟ್ಟು 24 ಪಂದ್ಯಗಳನ್ನಾಡಿರುವ ಎಲ್​ಆರ್ ಚೇತನ್ ಈವರೆಗೆ 50 ಸಿಕ್ಸ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ ಕರ್ನಾಟಕ ಟಿ20 ಲೀಗ್​ನ ಸಿಕ್ಸರ್ ಸರದಾರರ ಪಟ್ಟಿಯಲ್ಲಿ ಬೆಂಗಳೂರು ಬ್ಲಾಸ್ಟರ್ಸ್ ತಂಡದ ಆರಂಭಿಕ ದಾಂಡಿಗ ಅಗ್ರಸ್ಥಾನ ಅಲಂಕರಿಸಿದ್ದಾರೆ.

2 / 5
ಮಹಾರಾಜ ಟಿ20 ಟೂರ್ನಿಯ ಸೀಸನ್-1 ರಲ್ಲಿ ಒಟ್ಟು 26 ಸಿಕ್ಸ್​ಗಳನ್ನು ಬಾರಿಸಿದ್ದ ಎಲ್​ಆರ್ ಚೇತನ್, 2023 ರಲ್ಲಿ 19 ಸಿಕ್ಸ್​ಗಳನ್ನು ಸಿಡಿಸಿದ್ದರು. ಇನ್ನು ಬಾರಿಯ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲೇ 5 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಮಹಾರಾಜ ಟಿ20 ಟೂರ್ನಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

ಮಹಾರಾಜ ಟಿ20 ಟೂರ್ನಿಯ ಸೀಸನ್-1 ರಲ್ಲಿ ಒಟ್ಟು 26 ಸಿಕ್ಸ್​ಗಳನ್ನು ಬಾರಿಸಿದ್ದ ಎಲ್​ಆರ್ ಚೇತನ್, 2023 ರಲ್ಲಿ 19 ಸಿಕ್ಸ್​ಗಳನ್ನು ಸಿಡಿಸಿದ್ದರು. ಇನ್ನು ಬಾರಿಯ ಟೂರ್ನಿಯ ಮೊದಲೆರಡು ಪಂದ್ಯಗಳಲ್ಲೇ 5 ಸಿಕ್ಸ್​ಗಳನ್ನು ಸಿಡಿಸಿ ಅಬ್ಬರಿಸಿದ್ದಾರೆ. ಈ ಮೂಲಕ ಮಹಾರಾಜ ಟಿ20 ಟೂರ್ನಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

3 / 5
ಹಾಗೆಯೇ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 700+ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಯುವ ದಾಂಡಿಗ ಕಾಣಿಸಿಕೊಂಡಿದ್ದಾರೆ. 2022 ರ ಸೀಸನ್​ನಲ್ಲಿ 11 ಪಂದ್ಯಗಳಿಂದ ಚೇತನ್ ಒಟ್ಟು 447 ರನ್ ಕಲೆಹಾಕಿದ್ದರು. ಇನ್ನು 2023ರ ಸೀಸನ್​ನಲ್ಲಿ 11 ಪಂದ್ಯಗಳಿಂದ 309	ರನ್ ಬಾರಿಸಿದ್ದಾರೆ. ಹಾಗೆಯೇ ಈ ಬಾರಿ ಬೆಂಗಳೂರು ಬ್ಲಾಸ್ಟರ್ಸ್ ಪರ ಆಡುತ್ತಿರುವ ಚೇತನ್ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

ಹಾಗೆಯೇ ಮಹಾರಾಜ ಟ್ರೋಫಿ ಟಿ20 ಟೂರ್ನಿಯಲ್ಲಿ 700+ ರನ್ ಕಲೆಹಾಕಿದ ಬ್ಯಾಟರ್​ಗಳ ಪಟ್ಟಿಯಲ್ಲೂ ಯುವ ದಾಂಡಿಗ ಕಾಣಿಸಿಕೊಂಡಿದ್ದಾರೆ. 2022 ರ ಸೀಸನ್​ನಲ್ಲಿ 11 ಪಂದ್ಯಗಳಿಂದ ಚೇತನ್ ಒಟ್ಟು 447 ರನ್ ಕಲೆಹಾಕಿದ್ದರು. ಇನ್ನು 2023ರ ಸೀಸನ್​ನಲ್ಲಿ 11 ಪಂದ್ಯಗಳಿಂದ 309 ರನ್ ಬಾರಿಸಿದ್ದಾರೆ. ಹಾಗೆಯೇ ಈ ಬಾರಿ ಬೆಂಗಳೂರು ಬ್ಲಾಸ್ಟರ್ಸ್ ಪರ ಆಡುತ್ತಿರುವ ಚೇತನ್ ಸ್ಪೋಟಕ ಬ್ಯಾಟಿಂಗ್ ಮೂಲಕ ಗಮನ ಸೆಳೆದಿದ್ದಾರೆ.

4 / 5
ದೇಶೀಯ ಅಂಗಳದಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿರುವ 24 ವರ್ಷದ ಎಲ್​ಆರ್​ ಚೇತನ್ ಅವರಿಗೆ ಈವರೆಗೆ ಐಪಿಎಲ್​​ನಲ್ಲಿ ಚಾನ್ಸ್ ಸಿಕ್ಕಿಲ್ಲ ಎಂಬುದೇ ಅಚ್ಚರಿ. ಅದರಲ್ಲೂ ಕಳೆದ ಎರಡು ಸೀಸನ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಯುವ ದಾಂಡಿಗನ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಿರಲಿಲ್ಲ. ಇದೀಗ ಸಿಕ್ಸರ್​ಗಳ ಮೂಲಕವೇ ಗಮನ ಸೆಳೆದಿರುವ ಎಲ್​​ಆರ್​ ಚೇತನ್ ಈ ಬಾರಿಯ ಮೆಗಾ ಹರಾಜಿನ ಮೂಲಕ ಐಪಿಎಲ್​ಗೆ ಎಂಟ್ರಿ ಕೊಡುವ ವಿಶ್ವಾಸದಲ್ಲಿದ್ದಾರೆ.

ದೇಶೀಯ ಅಂಗಳದಲ್ಲಿ ಸ್ಪೋಟಕ ಬ್ಯಾಟಿಂಗ್​ನೊಂದಿಗೆ ಸಂಚಲನ ಸೃಷ್ಟಿಸಿರುವ 24 ವರ್ಷದ ಎಲ್​ಆರ್​ ಚೇತನ್ ಅವರಿಗೆ ಈವರೆಗೆ ಐಪಿಎಲ್​​ನಲ್ಲಿ ಚಾನ್ಸ್ ಸಿಕ್ಕಿಲ್ಲ ಎಂಬುದೇ ಅಚ್ಚರಿ. ಅದರಲ್ಲೂ ಕಳೆದ ಎರಡು ಸೀಸನ್​ಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರೂ ಯುವ ದಾಂಡಿಗನ ಖರೀದಿಗೆ ಆರ್​ಸಿಬಿ ಆಸಕ್ತಿವಹಿಸಿರಲಿಲ್ಲ. ಇದೀಗ ಸಿಕ್ಸರ್​ಗಳ ಮೂಲಕವೇ ಗಮನ ಸೆಳೆದಿರುವ ಎಲ್​​ಆರ್​ ಚೇತನ್ ಈ ಬಾರಿಯ ಮೆಗಾ ಹರಾಜಿನ ಮೂಲಕ ಐಪಿಎಲ್​ಗೆ ಎಂಟ್ರಿ ಕೊಡುವ ವಿಶ್ವಾಸದಲ್ಲಿದ್ದಾರೆ.

5 / 5
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?