AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2026: ಆರ್​​ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಲಕ್ನೋ ತಂಡಕ್ಕೆ ಡೇಂಜರಸ್ ಬ್ಯಾಟರ್​​ ಆಗಮನ

LSG IPL 2026: ಐಪಿಎಲ್ 2026ರಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಕಳಪೆ ಪ್ರದರ್ಶನದಿಂದ ಪ್ಲೇಆಫ್ ಕನಸು ಮಸುಕಾಗಿದೆ. ಈ ಸಂದರ್ಭದಲ್ಲಿ ಆಸ್ಟ್ರೇಲಿಯಾದ ಸ್ಫೋಟಕ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ತಂಡ ಸೇರಿಕೊಂಡಿದ್ದಾರೆ. 8.60 ಕೋಟಿಗೆ ಖರೀದಿಸಲ್ಪಟ್ಟ ಇಂಗ್ಲಿಸ್, ಮೇ 4 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ಕಣಕ್ಕಿಳಿಯಲಿದ್ದಾರೆ. ಇವರ ಆಗಮನ ತಂಡಕ್ಕೆ ಹೊಸ ಹುರುಪು ನೀಡಿ, ಉಳಿದ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಹಕಾರಿಯಾಗಲಿದೆಯೇ ಎಂದು ಕಾದುನೋಡಬೇಕಿದೆ.

ಪೃಥ್ವಿಶಂಕರ
|

Updated on: May 01, 2026 | 8:04 PM

Share
2026 ರ ಐಪಿಎಲ್‌ನಲ್ಲಿ ಲಕ್ನೋ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿದೆ. ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆದ್ದು 6 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪ್ರಸ್ತುತ ಲಕ್ನೋ ತಂಡದ ಪ್ರದರ್ಶನ ನೋಡಿದರೆ ಅದು ಪ್ಲೇಆಫ್​ಗೆ ತಲುಪುವುದು ಕಷ್ಟಕರವಾಗಿದೆ. ಈ ನಡುವೆ ಲಕ್ನೋ ತಂಡಕ್ಕೆ ಸ್ಫೋಟಕ ದಾಂಡಿಗನ ಆಗಮನವಾಗಿದೆ.

2026 ರ ಐಪಿಎಲ್‌ನಲ್ಲಿ ಲಕ್ನೋ ತಂಡದ ಪ್ರದರ್ಶನ ಅತ್ಯಂತ ಕಳಪೆಯಾಗಿದೆ. ಆಡಿರುವ 8 ಪಂದ್ಯಗಳಲ್ಲಿ ಕೇವಲ 2 ಪಂದ್ಯಗಳನ್ನು ಗೆದ್ದು 6 ಪಂದ್ಯಗಳಲ್ಲಿ ಸೋತಿದೆ. ಈ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿದೆ. ಪ್ರಸ್ತುತ ಲಕ್ನೋ ತಂಡದ ಪ್ರದರ್ಶನ ನೋಡಿದರೆ ಅದು ಪ್ಲೇಆಫ್​ಗೆ ತಲುಪುವುದು ಕಷ್ಟಕರವಾಗಿದೆ. ಈ ನಡುವೆ ಲಕ್ನೋ ತಂಡಕ್ಕೆ ಸ್ಫೋಟಕ ದಾಂಡಿಗನ ಆಗಮನವಾಗಿದೆ.

1 / 5
ವಾಸ್ತವವಾಗಿ ಆಸ್ಟ್ರೇಲಿಯಾದ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲಿಸ್ ಐಪಿಎಲ್ ಹರಾಜಿಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಹೀಗಾಗಿ ಅವರು ಐಪಿಎಲ್​ಗೆ ತಮ್ಮ ಲಭ್ಯತೆಯ ಬಗ್ಗೆ ಮೊದಲೇ ತಿಳಿಸಿದ್ದರು. ಅದರಂತೆ ಇಂಗ್ಲಿಸ್ ಈಗ ಲಕ್ನೋ ತಂಡವನ್ನು ಸೇರಿಕೊಂಡಿದ್ದು, ಮೇ 4 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

ವಾಸ್ತವವಾಗಿ ಆಸ್ಟ್ರೇಲಿಯಾದ ಸ್ಫೋಟಕ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಜೋಶ್ ಇಂಗ್ಲಿಸ್ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೇರಿಕೊಂಡಿದ್ದಾರೆ. ವಾಸ್ತವವಾಗಿ ಇಂಗ್ಲಿಸ್ ಐಪಿಎಲ್ ಹರಾಜಿಗೂ ಮುನ್ನ ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು. ಹೀಗಾಗಿ ಅವರು ಐಪಿಎಲ್​ಗೆ ತಮ್ಮ ಲಭ್ಯತೆಯ ಬಗ್ಗೆ ಮೊದಲೇ ತಿಳಿಸಿದ್ದರು. ಅದರಂತೆ ಇಂಗ್ಲಿಸ್ ಈಗ ಲಕ್ನೋ ತಂಡವನ್ನು ಸೇರಿಕೊಂಡಿದ್ದು, ಮೇ 4 ರಂದು ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.

2 / 5
ವಾಸ್ತವವಾಗಿ ಹರಾಜಿಗೂ ಮುನ್ನ ಜೋಶ್ ಇಂಗ್ಲಿಸ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತಂಡದಿಂದ ಬಿಡುಗಡೆ ಮಾಡಿತ್ತು. ಇದಾದ ನಂತರ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 8.60 ಕೋಟಿ ನೀಡಿ ಅವರನ್ನು ಖರೀದಿ ಮಾಡಿತ್ತು. ಇದೀಗ ಉಳಿದಿರುವ ಪಂದ್ಯಗಳಲ್ಲಿ ಇಂಗ್ಲಿಸ್‌ ಲಕ್ನೋ ತಂಡಕ್ಕೆ ಯಾವ ರೀತಿಯ ಸಹಕಾರಿಯಾಗಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

ವಾಸ್ತವವಾಗಿ ಹರಾಜಿಗೂ ಮುನ್ನ ಜೋಶ್ ಇಂಗ್ಲಿಸ್ ಅವರನ್ನು ಪಂಜಾಬ್ ಕಿಂಗ್ಸ್ ಫ್ರಾಂಚೈಸಿ ತಂಡದಿಂದ ಬಿಡುಗಡೆ ಮಾಡಿತ್ತು. ಇದಾದ ನಂತರ ಹರಾಜಿನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಬರೋಬ್ಬರಿ 8.60 ಕೋಟಿ ನೀಡಿ ಅವರನ್ನು ಖರೀದಿ ಮಾಡಿತ್ತು. ಇದೀಗ ಉಳಿದಿರುವ ಪಂದ್ಯಗಳಲ್ಲಿ ಇಂಗ್ಲಿಸ್‌ ಲಕ್ನೋ ತಂಡಕ್ಕೆ ಯಾವ ರೀತಿಯ ಸಹಕಾರಿಯಾಗಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.

3 / 5
ಪಂಜಾಬ್ ಕಿಂಗ್ಸ್ ಪರ ಇಂಗ್ಲಿಸ್ 11 ಇನ್ನಿಂಗ್ಸ್‌ಗಳಲ್ಲಿ 30.88 ಸರಾಸರಿ ಮತ್ತು 162.57 ಸ್ಟ್ರೈಕ್-ರೇಟ್‌ನಲ್ಲಿ 278 ರನ್ ಗಳಿಸಿದ್ದಾರೆ. ಇಂಗ್ಲಿಸ್ ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದೊಂದಿಗೆ ತರಬೇತಿಯನ್ನು ಪ್ರಾರಂಭಿಸಿದ್ದಾರೆ. ಹೀಗಾಗಿ ಅವರು ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಡುವುದು ಖಚಿತ.

ಪಂಜಾಬ್ ಕಿಂಗ್ಸ್ ಪರ ಇಂಗ್ಲಿಸ್ 11 ಇನ್ನಿಂಗ್ಸ್‌ಗಳಲ್ಲಿ 30.88 ಸರಾಸರಿ ಮತ್ತು 162.57 ಸ್ಟ್ರೈಕ್-ರೇಟ್‌ನಲ್ಲಿ 278 ರನ್ ಗಳಿಸಿದ್ದಾರೆ. ಇಂಗ್ಲಿಸ್ ಈಗಾಗಲೇ ಲಕ್ನೋ ಸೂಪರ್ ಜೈಂಟ್ಸ್ ತಂಡದೊಂದಿಗೆ ತರಬೇತಿಯನ್ನು ಪ್ರಾರಂಭಿಸಿದ್ದಾರೆ. ಹೀಗಾಗಿ ಅವರು ಸೋಮವಾರ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಆಡುವುದು ಖಚಿತ.

4 / 5
 ಈ ಆವೃತ್ತಿಯಲ್ಲಿ ಎರಡೂ ತಂಡಗಳ ಒಂಬತ್ತನೇ ಪಂದ್ಯ ಇದಾಗಿದೆ. ಈ ಪಂದ್ಯವು ಪಾಯಿಂಟ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿರುವ ಎರಡೂ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ನಿಕೋಲಸ್ ಪೂರನ್ ಬದಲಿಗೆ ಇಂಗ್ಲಿಸ್ ಆಡಬಹುದು. ಮುಂಬೈ ವಿರುದ್ಧದ ಪಂದ್ಯದ ಬಳಿಕ ಲಕ್ನೋ, ಆರ್​ಸಿಬಿ ವಿರುದ್ಧ ಪಂದ್ಯವನ್ನಾಡಲಿದೆ.

ಈ ಆವೃತ್ತಿಯಲ್ಲಿ ಎರಡೂ ತಂಡಗಳ ಒಂಬತ್ತನೇ ಪಂದ್ಯ ಇದಾಗಿದೆ. ಈ ಪಂದ್ಯವು ಪಾಯಿಂಟ್ ಟೇಬಲ್‌ನಲ್ಲಿ ಕೊನೆಯ ಸ್ಥಾನದಲ್ಲಿರುವ ಎರಡೂ ತಂಡಗಳ ನಡುವೆ ನಡೆಯಲಿದೆ. ಈ ಪಂದ್ಯದಲ್ಲಿ ನಿಕೋಲಸ್ ಪೂರನ್ ಬದಲಿಗೆ ಇಂಗ್ಲಿಸ್ ಆಡಬಹುದು. ಮುಂಬೈ ವಿರುದ್ಧದ ಪಂದ್ಯದ ಬಳಿಕ ಲಕ್ನೋ, ಆರ್​ಸಿಬಿ ವಿರುದ್ಧ ಪಂದ್ಯವನ್ನಾಡಲಿದೆ.

5 / 5
Follow Us
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
ಅಜ್ಜನಾದ ಡಿಕೆ ಶಿವಕುಮಾರ್, ಮೊಮ್ಮಗಳನ್ನ ನೋಡಲು ಆಸ್ಪತ್ರೆಗೆ ದೌಡು
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ