AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

LSG New Jersey: LSG ಮಾಸ್ಟರ್ ​ಪ್ಲ್ಯಾನ್: ಹೊಸ ಜೆರ್ಸಿ ಅನಾವರಣ

IPL 2023 Kannada: ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ.

TV9 Web
| Edited By: |

Updated on: May 19, 2023 | 12:23 AM

Share
IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

IPL 2023: ಇಂಡಿಯನ್ ಪ್ರೀಮಿಯರ್ ಲೀಗ್​ನ 16ನೇ ಆವೃತ್ತಿಯ ಲೀಗ್ ಹಂತದ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಇನ್ನು ಎಲ್ಲಾ ತಂಡಗಳಿಗೆ ಉಳಿದಿರುವುದು ಕೇವಲ ಒಂದೊಂದು ಪಂದ್ಯ ಮಾತ್ರ. ಆದರೆ ಈ ಪಂದ್ಯಕ್ಕಾಗಿ ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಜೆರ್ಸಿಯನ್ನು ಬದಲಿಸಿದೆ.

1 / 7
ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

ಈ ಹಿಂದೆ 13 ಪಂದ್ಯಗಳಲ್ಲಿ ಗಾಢ ನೀಲಿ ಬಣ್ಣದ ಜೆರ್ಸಿಯಲ್ಲಿ ಕಣಕ್ಕಿಳಿದಿದ್ದ ಲಕ್ನೋ ಸೂಪರ್ ಜೈಂಟ್ಸ್ ತಂಡವು ಮುಂದಿನ ಪಂದ್ಯದಲ್ಲಿ ಮರೂನ್ ಬಣ್ಣದ ಸಮವಸ್ತ್ರದಲ್ಲಿ ಕಣಕ್ಕಿಳಿಯಲಿದೆ. ಹೀಗೆ ದಿಢೀರ್ ಜೆರ್ಸಿ ಬದಲಿಸಲು ಕಾರಣ ಕೂಡ ಇದೆ.

2 / 7
ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

ಲಕ್ನೋ ಸೂಪರ್ ಜೈಂಟ್ಸ್ ತಂಡವು ತನ್ನ ಕೊನೆಯ ಪಂದ್ಯವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಆಡಲಿದೆ. ಕೊಲ್ಕತ್ತಾದ ಈಡನ್ ಗಾರ್ಡನ್ಸ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಲಕ್ನೋ ಜೆರ್ಸಿ ಬಣ್ಣ ಬದಲಿಸಿದೆ. ಇದಕ್ಕೆ ಮುಖ್ಯ ಕಾರಣ ಕೆಕೆಆರ್ ತಂಡದ ತವರು ಮೈದಾನದಲ್ಲಿ ಈ ಪಂದ್ಯ ನಡೆಯುತ್ತಿರುವುದು.

3 / 7
ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

ಅಂದರೆ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಲಕ್ನೋಗಿಂತ ಕೆಕೆಆರ್ ತಂಡಕ್ಕೆ ಹೆಚ್ಚಿನ ಪ್ರೇಕ್ಷಕರ ಬೆಂಬಲ ದೊರೆಯಲಿದೆ. ಆದರೆ ಈ ಬೆಂಬಲಕ್ಕೆ ಮಾಸ್ಟರ್ ಸ್ಟ್ರೋಕ್ ನೀಡಲು ಲಕ್ನೋ ಸೂಪರ್ ಜೈಂಟ್ಸ್ ತಂಡದ ಮಾಲೀಕ ಸಂಜೀವ್ ಗೋಯೆಂಕಾ ಪ್ಲ್ಯಾನ್ ರೂಪಿಸಿದ್ದಾರೆ.

4 / 7
ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

ಅದಕ್ಕಾಗಿ ಆಯ್ಕೆ ಮಾಡಿಕೊಂಡಿದ್ದೇ ಲಕ್ನೋ ತಂಡದ ಜೆರ್ಸಿ ಬದಲಾವಣೆ. ಅಂದರೆ ಪಶ್ಚಿಮ ಬಂಗಾಳದ ಜನರು ಕ್ರಿಕೆಟ್​ ಅನ್ನು ಎಷ್ಟು ಪ್ರೀತಿಸುತ್ತಾರೋ, ಅಷ್ಟೇ ಫುಟ್​​ಬಾಲ್​ ಅನ್ನು ಪ್ರೀತಿಸುತ್ತಾರೆ. ಅದರಲ್ಲೂ ಬಂಗಾಳದ ಪ್ರತಷ್ಠಿತ ಫುಟ್​ಬಾಲ್​ ಕ್ಲಬ್ ATK​ ಮೋಹನ್ ಬಗಾನ್​ಗೆ ಅಪಾರ ಅಭಿಮಾನಿಗಳಿದ್ದಾರೆ.

5 / 7
ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

ಇತ್ತ ಮೋಹನ್ ಬಗಾನ್ ಕ್ಲಬ್​ನ ಮಾಲೀಕರು ಕೂಡ ಸಂಜೀವ್ ಗೋಯೆಂಕಾ. ಅಂದರೆ ಇಂಡಿಯನ್ ಸೂಪರ್ ಲೀಗ್ (ಫುಟ್​ಬಾಲ್) ಹಾಗೂ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಗೋಯೆಂಕಾ ತಂಡಗಳನ್ನು ಹೊಂದಿದ್ದು, ಇದೀಗ ಇದನ್ನೇ ಮಾಸ್ಟರ್ ಸ್ಟ್ರೋಕ್ ಆಗಿ ಬಳಸಿ ಕೊಲ್ಕತ್ತಾ ಅಭಿಮಾನಿಗಳ ಮನಗೆಲ್ಲಲು ಪ್ಲ್ಯಾನ್ ರೂಪಿಸಿದ್ದಾರೆ.

6 / 7
ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

ಅದರಂತೆ ಕೆಕೆಆರ್ ವಿರುದ್ಧದ ಪಂದ್ಯದಲ್ಲಿ ​ಲಕ್ನೋ ಸೂಪರ್ ಜೈಂಟ್ಸ್ ತಂಡ ಆಟಗಾರರು ಮೋಹನ್ ಬಗಾನ್ ಕ್ಲಬ್​ನ ಜೆರ್ಸಿಯನ್ನು ಪ್ರತಿನಿಧಿಸುವ ಹಸಿರು-ಮರೂನ್ ಜೆರ್ಸಿಯಲ್ಲಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಕಣಕ್ಕಿಳಿಯಲಿದ್ದಾರೆ.

7 / 7
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ